Homeಮುಖಪುಟಬಯಲುಸೀಮೆ ಅಭಿವೃದ್ಧಿ ಕಡೆಗಣನೆ : ಬಹುತೇಕ ಬಜೆಟ್ ಬೆಂಗಳೂರಿಗೆ ಮೀಸಲು

ಬಯಲುಸೀಮೆ ಅಭಿವೃದ್ಧಿ ಕಡೆಗಣನೆ : ಬಹುತೇಕ ಬಜೆಟ್ ಬೆಂಗಳೂರಿಗೆ ಮೀಸಲು

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಆಯ್ಕೆಯಾದ ಶಾಸಕ ಡಾ.ಸುಧಾಕರ್ ಮುಖ್ಯಮಂತ್ರಿಯನ್ನು ಕರೆತಂದು ಜನರಿಗೆ ಕೆಲವು ಭರವಸೆ ನೀಡಿದ್ದರು. ನೂತನ ಶಾಸಕರು ಸಲ್ಲಿಸಿದ ಬೇಡಿಕೆಗಳಿಗೂ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿಲ್ಲ. 

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದ ಬಜೆಟ್ ಬಯಲುಸೀಮೆ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಿಗೆ ಬಜೆಟ್ ನಲ್ಲಿ ಅಭಿವೃದ್ದಿಗೆ ಪೂರಕ ಯೋಜನೆಗಳನ್ನು ಘೋಷಿಸಿಲ್ಲ. ನೀರಾವರಿ, ಕೈಗಾರಿಕೆ ಕ್ಷೇತ್ರದಲ್ಲಿ ತೀವ್ರ ಹಿಂದುಳಿದಿರುವ ಈ ಜಿಲ್ಲೆಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಪ್ರಸಕ್ತ ಬಜೆಟ್ ವಿಫಲವಾಗಿದೆ.

ಕುಡಿಯುವ ನೀರು ಯೋಜನೆಗಳಿಗೆ ಒತ್ತು ನೀಡುವ ಯಾವ ಕ್ರಮಗಳನ್ನು ಕೈಗೊಂಡಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಬಜೆಟ್ ನಲ್ಲಿ ಬಯಲು ಪ್ರದೇಶದ ಅಭಿವೃದ್ಧಿಗೆ, ಏನಾದರೂ ಕೊಡಬಹುದು ಎಂಬ ಜನರ ನಂಬಿಕೆಗೆ ಪೆಟ್ಟು ಬಿದ್ದಿದೆ.

ಬಯಲುಸೀಮೆಯಲ್ಲಿ ಬಹುವಾಗಿ ಕಾಡುತ್ತಿರುವ ಕುಡಿಯುವ ನೀರು ಪೂರೈಕೆ ಮತ್ತು ನೀರಾವರಿಗೆ ಸಂಬಂಧಪಟ್ಟಂತೆ ಬಜೆಟ್ ಮೌನ ವಹಿಸಿದೆ. ಕುಡಿಯುವ ನೀರು ಪೂರೈಕೆ ಯೋಜನೆಗಳು ಕುಂಟುತ್ತಾ ಸಾಗಿವೆ. ಭದ್ರ ಮೇಲ್ದಂಡೆ ಮತ್ತು ಎತ್ತಿಹೊಳೆ ಯೋಜನೆಗಳ ಕಾಮಗಾರಿ ಚುರುಕುಗೊಳಿಸುವ ಬಗ್ಗೆ ಬಜೆಟ್‌ನಲ್ಲಿ ಅಷ್ಟಾಗಿ ಗಮನಹರಿಸಿದಂತೆ ಕಾಣುತ್ತಿಲ್ಲ. ಬಯಲುಸೀಮೆ ಪ್ರದೇಶಗಳಿಗೆ ಶುದ್ದ ಕುಡಿಯುವ ನೀರು ಒದಗಿಸುವುದು ಪ್ರಮುಖ ಮತ್ತು ಆದ್ಯತೆಯ ವಿಷಯವಾಗಬೇಕಿತ್ತು. ಆದರೆ ಬಜೆಟ್ ಶಾಶ್ವತ ನೀರಾವರಿ ಮತ್ತು ಕುಡಿಯುವ ನೀರಿಗೆ ಅಷ್ಟೊಂದು ಪ್ರಾಮುಖ್ಯತೆ ಕೊಟ್ಟಿಲ್ಲ.

ಬಯಲುಸೀಮೆಯಲ್ಲಿ 10ಕ್ಕೂ ಹೆಚ್ಚು ಜಿಲ್ಲೆಗಳು ಬರುತ್ತವೆ. ಈ ಜಿಲ್ಲೆಗಳು ಯಾವುದೇ ಕ್ಷೇತ್ರದಲ್ಲೂ ಸಮರ್ಪಕ ಅಭಿವೃದ್ಧಿ ಕಂಡಿಲ್ಲ. ಆದ್ದರಿಂದ ರೈಲ್ವೆ, ಹೆದ್ದಾರಿ, ಕೈಗಾರಿಕಾ ಕಾರಿಡಾರ್ ಹೀಗೆ ಯಾವುದೇ  ಕ್ಷೇತ್ರಕ್ಕೂ ಸಿಎಂ ಯಡಿಯೂರಪ್ಪ ಆದ್ಯತೆ ನೀಡದೇ ಇರುವುದು ಈ ಭಾಗದ ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಸರ್ಕಾರ ಅಧ್ಯತೆಯ ವಿಷಯವಾದ ಮತ್ತು ಬಹುದಿನಗಳ ಬೇಡಿಕೆಗೆ ಸ್ಪಂದಿಸಿಲ್ಲ. ಇದರಿಂದ ನೀರಾವರಿ ಹೋರಾಟ ಗಾರರು ಆಕ್ರೋಶಗೊಂಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿರುವ ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್‌.ಆಂಜನೇಯರೆಡ್ಡಿ “ಬಜೆಟ್ ಬಯಲುಸೀಮೆ ಪಾಲಿಗೆ ಶಾಶ್ವತ ನೀರಾವರಿ ಯೋಜನೆಯನ್ನು ಕಡೆಗಣಿಸಿದೆ ನೀರಾವರಿ ತಜ್ಞ ಜಿ.ಎಸ್.ಪರಮಶಿವಯ್ಯ ವರದಿ ಆಧಾರಿತ ಪಶ್ಚಿಮವಾಹಿನಿ ನದಿಗಳಿಂದ ನೀರನ್ನು ಬಯಲು ಸೀಮೆಗೆ ಹರಿಸುವ ಕಾರ್ಯಯೋಜನೆಗೆ ಹಣ ಮೀಸಲಿಡದೇ ಇರುವುದು ನಿರಾಸೆ ತಂದಿದೆ. ಬಯಲುಸೀಮೆ ರೈತರಿಗೆ ರಾಡರ್ ಆಧಾರಿತ ವ್ಯವಸ್ಥೆಗೆ ಹವಾಮಾನ ಮುನ್ಸೂಚನೆ ಕೇಂದ್ರ ತೆರೆದಿದ್ದರೆ, ನೀರಿನ ನಿರ್ವಹಣೆ, ಬರ ನಿರ್ವಹಣೆ ಮತ್ತು ರೋಗ ನಿರ್ವಹಣೆಗೆ ಅನುಕೂಲವಾಗುತ್ತಿತ್ತು” ಎಂದು ಹೇಳಿದ್ದಾರೆ.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಆಯ್ಕೆಯಾದ ಶಾಸಕ ಡಾ.ಸುಧಾಕರ್ ಮುಖ್ಯಮಂತ್ರಿಯನ್ನು ಕರೆತಂದು ಜನರಿಗೆ ಕೆಲವು ಭರವಸೆ ನೀಡಿದ್ದರು. ನೂತನ ಶಾಸಕರು ಸಲ್ಲಿಸಿದ ಬೇಡಿಕೆಗಳಿಗೂ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿಲ್ಲ.

ತುಮಕೂರು ಜಿಲ್ಲೆಗೆ ತಿಪಟೂರಿನಲ್ಲಿ ತೆಂಗು ಆಧಾರಿತ ಕೈಗಾರಿಕಾ ಪಾರ್ಕ್ ಮತ್ತು ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಸ್ಥಾಪಿಸುವ ಘೋಷಣೆ ಮಾಡಿರುವುದನ್ನು ಬಿಟ್ಟರೆ ಬೇರೆ ಯಾವುದೇ ಜನೋಪಯೋಗಿ ಯೋಜನೆಗಳನ್ನು ಪ್ರಕಟಿಸಿಲ್ಲ. ತುಮಕೂರು ಸ್ಮಾರ್ಟ್ ಸಿಟಿಯಾಗಿ ಅಭಿವೃದ್ಧಿ ಹೊಂದುತ್ತಿದೆ. ಬಜೆಟ್‌ನಲ್ಲಿ ಸ್ಮಾರ್ಟ್ ಸಿಟಿ ಯೋಜನೆಗಳಿಗೆ ಹಣವನ್ನು ಮೀಸಲಿಟ್ಟಿಲ್ಲ. ತುಮಕೂರು ಬೆಂಗಳೂರಿನ ಉಪನಗರವಾಗಿ ಅಭಿವೃದ್ಧಿಪಡಿಸುವುದಾಗಿ ಹೇಳುತ್ತಲೇ ಬರುತ್ತಿದ್ದರೂ, ಹಲವು ಕೈಗಾರಿಕಾ ಕಾರಿಡಾರ್‌ಗಳ ನಗರವಾಗಿ ಹೊರ ಹೊಮ್ಮುತ್ತಿರುವ ತುಮಕೂರು ಜಿಲ್ಲೆಯ ಅಭಿವೃದ್ಧಿಗೆ ಕ್ರಮ ವಹಿಸಿಲ್ಲ.

ಒನಕೆ ಓಬವ್ವ ಮತ್ತು ಮದಕರಿ ನಾಯಕನನ್ನು ನೆನಪಿಸುವ ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಬಜೆಟ್ ನಲ್ಲಿ ಹೇಳಿದ್ದರೂ ಶಾಶ್ವತ ನೀರಾವರಿ ಮತ್ತು ಶುದ್ಧ ಕುಡಿಯುವ ನೀರಿನ ಯೋಜನೆಗಳಿಗೆ ಸಂಬಂಧಿಸಿದಂತೆ ಬಜೆಟ್ ಮಾತನಾಡಿಲ್ಲ. ಆದರೆ ಚಿತ್ರದುರ್ಗದ ಮುರುಘಾಮಠಧ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಪ್ರಮಥರ ಗಣಮೇಳವನ್ನು ಆಯೋಜಿಸಿದ್ದಕ್ಕಾಗಿ ಮುರುಘಾಶರಣರ ಋಣ ತೀರಿಸುವ ಹಿನ್ನೆಲೆಯಲ್ಲಿ 325 ಅಡಿ ಜಗಜ್ಯೋತಿ ಬಸವೇಶ್ವರರ ಕಂಚಿನ ಪುತ್ಥಳಿ ನಿರ್ಮಾಣಕ್ಕೆ 20 ಕೋಟಿ ಹಣ ಮೀಸಲಿಡಲಾಗಿದೆ. ಇದನ್ನು ಬಿಟ್ಟರೆ ಚಿತ್ರದುರ್ಗದ ಮೂಲಸಮಸ್ಯೆಗಳ ನಿವಾರಣೆಗೆ ಒತ್ತು ನೀಡಿಲ್ಲ.

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬೆಂಗಳೂರು ನಗರದ ಬಗ್ಗೆ ವಿಶೇಷ ಪ್ರೀತಿ ಇರುವುದು ಈ ಬಜೆಟ್ ನಲ್ಲಿ ವ್ಯಕ್ತವಾಗಿದೆ. ಮೆಟ್ರೋ ವಿಸ್ತರಣೆ, ಕಲಾಕ್ಷೇತ್ರಗಳ ನಿರ್ಮಾಣ, ಫಿಲಂ ಸಿಟಿ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕೆಲಸಗಳಿಗೆ ಸುಮಾರು ಹತ್ತಿರ ಹತ್ತಿರ 700 ಕೋಟಿ ರೂಪಾಯಿ ಹಣ ಮೀಸಲಿಟ್ಟಿದ್ದಾರೆ. ಬೆಂಗಳೂರು ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿದ್ದಾರೆ. ತಮಗೆ ಬೇಕಾದ ಸಚಿವರ ಕ್ಷೇತ್ರಗಳಿಗೆ ಕೆಲವೊಂದು ಯೋಜನೆಗಳನ್ನು ಘೋಷಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೂ ಸಮರ್ಪಕ ಹಣವನ್ನು ಮೀಸಲಿಟ್ಟಿಲ್ಲ. ಗ್ರಾಮೀಣ ಭಾಗದ ಯುವಕ-ಯುವತಿಯರು ನಗರ ಪ್ರದೇಶಗಳಿಗೆ ವಲಸೆ ಬರುವುದನ್ನು ತಪ್ಪಿಸುವಂತಹ ಯಾವುದೇ ಯೋಜನೆಗಳನ್ನು ರೂಪಿಸಿಲ್ಲ.

ಕೇವಲ ಬೆಂಗಳೂರು ನಗರವನ್ನು ಕೇಂದ್ರೀಕರಿಸಿರುವ ಬಜೆಟ್ ಬಯಸಲು ಸೀಮೆಯ ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ವಿಫಲವಾಗಿರುವುದು ಎದ್ದುಕಾಣುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...