Homeಮುಖಪುಟಬಯಲುಸೀಮೆ ಅಭಿವೃದ್ಧಿ ಕಡೆಗಣನೆ : ಬಹುತೇಕ ಬಜೆಟ್ ಬೆಂಗಳೂರಿಗೆ ಮೀಸಲು

ಬಯಲುಸೀಮೆ ಅಭಿವೃದ್ಧಿ ಕಡೆಗಣನೆ : ಬಹುತೇಕ ಬಜೆಟ್ ಬೆಂಗಳೂರಿಗೆ ಮೀಸಲು

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಆಯ್ಕೆಯಾದ ಶಾಸಕ ಡಾ.ಸುಧಾಕರ್ ಮುಖ್ಯಮಂತ್ರಿಯನ್ನು ಕರೆತಂದು ಜನರಿಗೆ ಕೆಲವು ಭರವಸೆ ನೀಡಿದ್ದರು. ನೂತನ ಶಾಸಕರು ಸಲ್ಲಿಸಿದ ಬೇಡಿಕೆಗಳಿಗೂ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿಲ್ಲ. 

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದ ಬಜೆಟ್ ಬಯಲುಸೀಮೆ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಿಗೆ ಬಜೆಟ್ ನಲ್ಲಿ ಅಭಿವೃದ್ದಿಗೆ ಪೂರಕ ಯೋಜನೆಗಳನ್ನು ಘೋಷಿಸಿಲ್ಲ. ನೀರಾವರಿ, ಕೈಗಾರಿಕೆ ಕ್ಷೇತ್ರದಲ್ಲಿ ತೀವ್ರ ಹಿಂದುಳಿದಿರುವ ಈ ಜಿಲ್ಲೆಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಪ್ರಸಕ್ತ ಬಜೆಟ್ ವಿಫಲವಾಗಿದೆ.

ಕುಡಿಯುವ ನೀರು ಯೋಜನೆಗಳಿಗೆ ಒತ್ತು ನೀಡುವ ಯಾವ ಕ್ರಮಗಳನ್ನು ಕೈಗೊಂಡಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಬಜೆಟ್ ನಲ್ಲಿ ಬಯಲು ಪ್ರದೇಶದ ಅಭಿವೃದ್ಧಿಗೆ, ಏನಾದರೂ ಕೊಡಬಹುದು ಎಂಬ ಜನರ ನಂಬಿಕೆಗೆ ಪೆಟ್ಟು ಬಿದ್ದಿದೆ.

ಬಯಲುಸೀಮೆಯಲ್ಲಿ ಬಹುವಾಗಿ ಕಾಡುತ್ತಿರುವ ಕುಡಿಯುವ ನೀರು ಪೂರೈಕೆ ಮತ್ತು ನೀರಾವರಿಗೆ ಸಂಬಂಧಪಟ್ಟಂತೆ ಬಜೆಟ್ ಮೌನ ವಹಿಸಿದೆ. ಕುಡಿಯುವ ನೀರು ಪೂರೈಕೆ ಯೋಜನೆಗಳು ಕುಂಟುತ್ತಾ ಸಾಗಿವೆ. ಭದ್ರ ಮೇಲ್ದಂಡೆ ಮತ್ತು ಎತ್ತಿಹೊಳೆ ಯೋಜನೆಗಳ ಕಾಮಗಾರಿ ಚುರುಕುಗೊಳಿಸುವ ಬಗ್ಗೆ ಬಜೆಟ್‌ನಲ್ಲಿ ಅಷ್ಟಾಗಿ ಗಮನಹರಿಸಿದಂತೆ ಕಾಣುತ್ತಿಲ್ಲ. ಬಯಲುಸೀಮೆ ಪ್ರದೇಶಗಳಿಗೆ ಶುದ್ದ ಕುಡಿಯುವ ನೀರು ಒದಗಿಸುವುದು ಪ್ರಮುಖ ಮತ್ತು ಆದ್ಯತೆಯ ವಿಷಯವಾಗಬೇಕಿತ್ತು. ಆದರೆ ಬಜೆಟ್ ಶಾಶ್ವತ ನೀರಾವರಿ ಮತ್ತು ಕುಡಿಯುವ ನೀರಿಗೆ ಅಷ್ಟೊಂದು ಪ್ರಾಮುಖ್ಯತೆ ಕೊಟ್ಟಿಲ್ಲ.

ಬಯಲುಸೀಮೆಯಲ್ಲಿ 10ಕ್ಕೂ ಹೆಚ್ಚು ಜಿಲ್ಲೆಗಳು ಬರುತ್ತವೆ. ಈ ಜಿಲ್ಲೆಗಳು ಯಾವುದೇ ಕ್ಷೇತ್ರದಲ್ಲೂ ಸಮರ್ಪಕ ಅಭಿವೃದ್ಧಿ ಕಂಡಿಲ್ಲ. ಆದ್ದರಿಂದ ರೈಲ್ವೆ, ಹೆದ್ದಾರಿ, ಕೈಗಾರಿಕಾ ಕಾರಿಡಾರ್ ಹೀಗೆ ಯಾವುದೇ  ಕ್ಷೇತ್ರಕ್ಕೂ ಸಿಎಂ ಯಡಿಯೂರಪ್ಪ ಆದ್ಯತೆ ನೀಡದೇ ಇರುವುದು ಈ ಭಾಗದ ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಸರ್ಕಾರ ಅಧ್ಯತೆಯ ವಿಷಯವಾದ ಮತ್ತು ಬಹುದಿನಗಳ ಬೇಡಿಕೆಗೆ ಸ್ಪಂದಿಸಿಲ್ಲ. ಇದರಿಂದ ನೀರಾವರಿ ಹೋರಾಟ ಗಾರರು ಆಕ್ರೋಶಗೊಂಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿರುವ ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್‌.ಆಂಜನೇಯರೆಡ್ಡಿ “ಬಜೆಟ್ ಬಯಲುಸೀಮೆ ಪಾಲಿಗೆ ಶಾಶ್ವತ ನೀರಾವರಿ ಯೋಜನೆಯನ್ನು ಕಡೆಗಣಿಸಿದೆ ನೀರಾವರಿ ತಜ್ಞ ಜಿ.ಎಸ್.ಪರಮಶಿವಯ್ಯ ವರದಿ ಆಧಾರಿತ ಪಶ್ಚಿಮವಾಹಿನಿ ನದಿಗಳಿಂದ ನೀರನ್ನು ಬಯಲು ಸೀಮೆಗೆ ಹರಿಸುವ ಕಾರ್ಯಯೋಜನೆಗೆ ಹಣ ಮೀಸಲಿಡದೇ ಇರುವುದು ನಿರಾಸೆ ತಂದಿದೆ. ಬಯಲುಸೀಮೆ ರೈತರಿಗೆ ರಾಡರ್ ಆಧಾರಿತ ವ್ಯವಸ್ಥೆಗೆ ಹವಾಮಾನ ಮುನ್ಸೂಚನೆ ಕೇಂದ್ರ ತೆರೆದಿದ್ದರೆ, ನೀರಿನ ನಿರ್ವಹಣೆ, ಬರ ನಿರ್ವಹಣೆ ಮತ್ತು ರೋಗ ನಿರ್ವಹಣೆಗೆ ಅನುಕೂಲವಾಗುತ್ತಿತ್ತು” ಎಂದು ಹೇಳಿದ್ದಾರೆ.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಆಯ್ಕೆಯಾದ ಶಾಸಕ ಡಾ.ಸುಧಾಕರ್ ಮುಖ್ಯಮಂತ್ರಿಯನ್ನು ಕರೆತಂದು ಜನರಿಗೆ ಕೆಲವು ಭರವಸೆ ನೀಡಿದ್ದರು. ನೂತನ ಶಾಸಕರು ಸಲ್ಲಿಸಿದ ಬೇಡಿಕೆಗಳಿಗೂ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿಲ್ಲ.

ತುಮಕೂರು ಜಿಲ್ಲೆಗೆ ತಿಪಟೂರಿನಲ್ಲಿ ತೆಂಗು ಆಧಾರಿತ ಕೈಗಾರಿಕಾ ಪಾರ್ಕ್ ಮತ್ತು ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಸ್ಥಾಪಿಸುವ ಘೋಷಣೆ ಮಾಡಿರುವುದನ್ನು ಬಿಟ್ಟರೆ ಬೇರೆ ಯಾವುದೇ ಜನೋಪಯೋಗಿ ಯೋಜನೆಗಳನ್ನು ಪ್ರಕಟಿಸಿಲ್ಲ. ತುಮಕೂರು ಸ್ಮಾರ್ಟ್ ಸಿಟಿಯಾಗಿ ಅಭಿವೃದ್ಧಿ ಹೊಂದುತ್ತಿದೆ. ಬಜೆಟ್‌ನಲ್ಲಿ ಸ್ಮಾರ್ಟ್ ಸಿಟಿ ಯೋಜನೆಗಳಿಗೆ ಹಣವನ್ನು ಮೀಸಲಿಟ್ಟಿಲ್ಲ. ತುಮಕೂರು ಬೆಂಗಳೂರಿನ ಉಪನಗರವಾಗಿ ಅಭಿವೃದ್ಧಿಪಡಿಸುವುದಾಗಿ ಹೇಳುತ್ತಲೇ ಬರುತ್ತಿದ್ದರೂ, ಹಲವು ಕೈಗಾರಿಕಾ ಕಾರಿಡಾರ್‌ಗಳ ನಗರವಾಗಿ ಹೊರ ಹೊಮ್ಮುತ್ತಿರುವ ತುಮಕೂರು ಜಿಲ್ಲೆಯ ಅಭಿವೃದ್ಧಿಗೆ ಕ್ರಮ ವಹಿಸಿಲ್ಲ.

ಒನಕೆ ಓಬವ್ವ ಮತ್ತು ಮದಕರಿ ನಾಯಕನನ್ನು ನೆನಪಿಸುವ ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಬಜೆಟ್ ನಲ್ಲಿ ಹೇಳಿದ್ದರೂ ಶಾಶ್ವತ ನೀರಾವರಿ ಮತ್ತು ಶುದ್ಧ ಕುಡಿಯುವ ನೀರಿನ ಯೋಜನೆಗಳಿಗೆ ಸಂಬಂಧಿಸಿದಂತೆ ಬಜೆಟ್ ಮಾತನಾಡಿಲ್ಲ. ಆದರೆ ಚಿತ್ರದುರ್ಗದ ಮುರುಘಾಮಠಧ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಪ್ರಮಥರ ಗಣಮೇಳವನ್ನು ಆಯೋಜಿಸಿದ್ದಕ್ಕಾಗಿ ಮುರುಘಾಶರಣರ ಋಣ ತೀರಿಸುವ ಹಿನ್ನೆಲೆಯಲ್ಲಿ 325 ಅಡಿ ಜಗಜ್ಯೋತಿ ಬಸವೇಶ್ವರರ ಕಂಚಿನ ಪುತ್ಥಳಿ ನಿರ್ಮಾಣಕ್ಕೆ 20 ಕೋಟಿ ಹಣ ಮೀಸಲಿಡಲಾಗಿದೆ. ಇದನ್ನು ಬಿಟ್ಟರೆ ಚಿತ್ರದುರ್ಗದ ಮೂಲಸಮಸ್ಯೆಗಳ ನಿವಾರಣೆಗೆ ಒತ್ತು ನೀಡಿಲ್ಲ.

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬೆಂಗಳೂರು ನಗರದ ಬಗ್ಗೆ ವಿಶೇಷ ಪ್ರೀತಿ ಇರುವುದು ಈ ಬಜೆಟ್ ನಲ್ಲಿ ವ್ಯಕ್ತವಾಗಿದೆ. ಮೆಟ್ರೋ ವಿಸ್ತರಣೆ, ಕಲಾಕ್ಷೇತ್ರಗಳ ನಿರ್ಮಾಣ, ಫಿಲಂ ಸಿಟಿ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕೆಲಸಗಳಿಗೆ ಸುಮಾರು ಹತ್ತಿರ ಹತ್ತಿರ 700 ಕೋಟಿ ರೂಪಾಯಿ ಹಣ ಮೀಸಲಿಟ್ಟಿದ್ದಾರೆ. ಬೆಂಗಳೂರು ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿದ್ದಾರೆ. ತಮಗೆ ಬೇಕಾದ ಸಚಿವರ ಕ್ಷೇತ್ರಗಳಿಗೆ ಕೆಲವೊಂದು ಯೋಜನೆಗಳನ್ನು ಘೋಷಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೂ ಸಮರ್ಪಕ ಹಣವನ್ನು ಮೀಸಲಿಟ್ಟಿಲ್ಲ. ಗ್ರಾಮೀಣ ಭಾಗದ ಯುವಕ-ಯುವತಿಯರು ನಗರ ಪ್ರದೇಶಗಳಿಗೆ ವಲಸೆ ಬರುವುದನ್ನು ತಪ್ಪಿಸುವಂತಹ ಯಾವುದೇ ಯೋಜನೆಗಳನ್ನು ರೂಪಿಸಿಲ್ಲ.

ಕೇವಲ ಬೆಂಗಳೂರು ನಗರವನ್ನು ಕೇಂದ್ರೀಕರಿಸಿರುವ ಬಜೆಟ್ ಬಯಸಲು ಸೀಮೆಯ ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ವಿಫಲವಾಗಿರುವುದು ಎದ್ದುಕಾಣುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...