Homeಮುಖಪುಟಬಯಲುಸೀಮೆ ಅಭಿವೃದ್ಧಿ ಕಡೆಗಣನೆ : ಬಹುತೇಕ ಬಜೆಟ್ ಬೆಂಗಳೂರಿಗೆ ಮೀಸಲು

ಬಯಲುಸೀಮೆ ಅಭಿವೃದ್ಧಿ ಕಡೆಗಣನೆ : ಬಹುತೇಕ ಬಜೆಟ್ ಬೆಂಗಳೂರಿಗೆ ಮೀಸಲು

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಆಯ್ಕೆಯಾದ ಶಾಸಕ ಡಾ.ಸುಧಾಕರ್ ಮುಖ್ಯಮಂತ್ರಿಯನ್ನು ಕರೆತಂದು ಜನರಿಗೆ ಕೆಲವು ಭರವಸೆ ನೀಡಿದ್ದರು. ನೂತನ ಶಾಸಕರು ಸಲ್ಲಿಸಿದ ಬೇಡಿಕೆಗಳಿಗೂ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿಲ್ಲ. 

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದ ಬಜೆಟ್ ಬಯಲುಸೀಮೆ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಿಗೆ ಬಜೆಟ್ ನಲ್ಲಿ ಅಭಿವೃದ್ದಿಗೆ ಪೂರಕ ಯೋಜನೆಗಳನ್ನು ಘೋಷಿಸಿಲ್ಲ. ನೀರಾವರಿ, ಕೈಗಾರಿಕೆ ಕ್ಷೇತ್ರದಲ್ಲಿ ತೀವ್ರ ಹಿಂದುಳಿದಿರುವ ಈ ಜಿಲ್ಲೆಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಪ್ರಸಕ್ತ ಬಜೆಟ್ ವಿಫಲವಾಗಿದೆ.

ಕುಡಿಯುವ ನೀರು ಯೋಜನೆಗಳಿಗೆ ಒತ್ತು ನೀಡುವ ಯಾವ ಕ್ರಮಗಳನ್ನು ಕೈಗೊಂಡಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಬಜೆಟ್ ನಲ್ಲಿ ಬಯಲು ಪ್ರದೇಶದ ಅಭಿವೃದ್ಧಿಗೆ, ಏನಾದರೂ ಕೊಡಬಹುದು ಎಂಬ ಜನರ ನಂಬಿಕೆಗೆ ಪೆಟ್ಟು ಬಿದ್ದಿದೆ.

ಬಯಲುಸೀಮೆಯಲ್ಲಿ ಬಹುವಾಗಿ ಕಾಡುತ್ತಿರುವ ಕುಡಿಯುವ ನೀರು ಪೂರೈಕೆ ಮತ್ತು ನೀರಾವರಿಗೆ ಸಂಬಂಧಪಟ್ಟಂತೆ ಬಜೆಟ್ ಮೌನ ವಹಿಸಿದೆ. ಕುಡಿಯುವ ನೀರು ಪೂರೈಕೆ ಯೋಜನೆಗಳು ಕುಂಟುತ್ತಾ ಸಾಗಿವೆ. ಭದ್ರ ಮೇಲ್ದಂಡೆ ಮತ್ತು ಎತ್ತಿಹೊಳೆ ಯೋಜನೆಗಳ ಕಾಮಗಾರಿ ಚುರುಕುಗೊಳಿಸುವ ಬಗ್ಗೆ ಬಜೆಟ್‌ನಲ್ಲಿ ಅಷ್ಟಾಗಿ ಗಮನಹರಿಸಿದಂತೆ ಕಾಣುತ್ತಿಲ್ಲ. ಬಯಲುಸೀಮೆ ಪ್ರದೇಶಗಳಿಗೆ ಶುದ್ದ ಕುಡಿಯುವ ನೀರು ಒದಗಿಸುವುದು ಪ್ರಮುಖ ಮತ್ತು ಆದ್ಯತೆಯ ವಿಷಯವಾಗಬೇಕಿತ್ತು. ಆದರೆ ಬಜೆಟ್ ಶಾಶ್ವತ ನೀರಾವರಿ ಮತ್ತು ಕುಡಿಯುವ ನೀರಿಗೆ ಅಷ್ಟೊಂದು ಪ್ರಾಮುಖ್ಯತೆ ಕೊಟ್ಟಿಲ್ಲ.

ಬಯಲುಸೀಮೆಯಲ್ಲಿ 10ಕ್ಕೂ ಹೆಚ್ಚು ಜಿಲ್ಲೆಗಳು ಬರುತ್ತವೆ. ಈ ಜಿಲ್ಲೆಗಳು ಯಾವುದೇ ಕ್ಷೇತ್ರದಲ್ಲೂ ಸಮರ್ಪಕ ಅಭಿವೃದ್ಧಿ ಕಂಡಿಲ್ಲ. ಆದ್ದರಿಂದ ರೈಲ್ವೆ, ಹೆದ್ದಾರಿ, ಕೈಗಾರಿಕಾ ಕಾರಿಡಾರ್ ಹೀಗೆ ಯಾವುದೇ  ಕ್ಷೇತ್ರಕ್ಕೂ ಸಿಎಂ ಯಡಿಯೂರಪ್ಪ ಆದ್ಯತೆ ನೀಡದೇ ಇರುವುದು ಈ ಭಾಗದ ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಸರ್ಕಾರ ಅಧ್ಯತೆಯ ವಿಷಯವಾದ ಮತ್ತು ಬಹುದಿನಗಳ ಬೇಡಿಕೆಗೆ ಸ್ಪಂದಿಸಿಲ್ಲ. ಇದರಿಂದ ನೀರಾವರಿ ಹೋರಾಟ ಗಾರರು ಆಕ್ರೋಶಗೊಂಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿರುವ ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್‌.ಆಂಜನೇಯರೆಡ್ಡಿ “ಬಜೆಟ್ ಬಯಲುಸೀಮೆ ಪಾಲಿಗೆ ಶಾಶ್ವತ ನೀರಾವರಿ ಯೋಜನೆಯನ್ನು ಕಡೆಗಣಿಸಿದೆ ನೀರಾವರಿ ತಜ್ಞ ಜಿ.ಎಸ್.ಪರಮಶಿವಯ್ಯ ವರದಿ ಆಧಾರಿತ ಪಶ್ಚಿಮವಾಹಿನಿ ನದಿಗಳಿಂದ ನೀರನ್ನು ಬಯಲು ಸೀಮೆಗೆ ಹರಿಸುವ ಕಾರ್ಯಯೋಜನೆಗೆ ಹಣ ಮೀಸಲಿಡದೇ ಇರುವುದು ನಿರಾಸೆ ತಂದಿದೆ. ಬಯಲುಸೀಮೆ ರೈತರಿಗೆ ರಾಡರ್ ಆಧಾರಿತ ವ್ಯವಸ್ಥೆಗೆ ಹವಾಮಾನ ಮುನ್ಸೂಚನೆ ಕೇಂದ್ರ ತೆರೆದಿದ್ದರೆ, ನೀರಿನ ನಿರ್ವಹಣೆ, ಬರ ನಿರ್ವಹಣೆ ಮತ್ತು ರೋಗ ನಿರ್ವಹಣೆಗೆ ಅನುಕೂಲವಾಗುತ್ತಿತ್ತು” ಎಂದು ಹೇಳಿದ್ದಾರೆ.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಆಯ್ಕೆಯಾದ ಶಾಸಕ ಡಾ.ಸುಧಾಕರ್ ಮುಖ್ಯಮಂತ್ರಿಯನ್ನು ಕರೆತಂದು ಜನರಿಗೆ ಕೆಲವು ಭರವಸೆ ನೀಡಿದ್ದರು. ನೂತನ ಶಾಸಕರು ಸಲ್ಲಿಸಿದ ಬೇಡಿಕೆಗಳಿಗೂ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿಲ್ಲ.

ತುಮಕೂರು ಜಿಲ್ಲೆಗೆ ತಿಪಟೂರಿನಲ್ಲಿ ತೆಂಗು ಆಧಾರಿತ ಕೈಗಾರಿಕಾ ಪಾರ್ಕ್ ಮತ್ತು ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಸ್ಥಾಪಿಸುವ ಘೋಷಣೆ ಮಾಡಿರುವುದನ್ನು ಬಿಟ್ಟರೆ ಬೇರೆ ಯಾವುದೇ ಜನೋಪಯೋಗಿ ಯೋಜನೆಗಳನ್ನು ಪ್ರಕಟಿಸಿಲ್ಲ. ತುಮಕೂರು ಸ್ಮಾರ್ಟ್ ಸಿಟಿಯಾಗಿ ಅಭಿವೃದ್ಧಿ ಹೊಂದುತ್ತಿದೆ. ಬಜೆಟ್‌ನಲ್ಲಿ ಸ್ಮಾರ್ಟ್ ಸಿಟಿ ಯೋಜನೆಗಳಿಗೆ ಹಣವನ್ನು ಮೀಸಲಿಟ್ಟಿಲ್ಲ. ತುಮಕೂರು ಬೆಂಗಳೂರಿನ ಉಪನಗರವಾಗಿ ಅಭಿವೃದ್ಧಿಪಡಿಸುವುದಾಗಿ ಹೇಳುತ್ತಲೇ ಬರುತ್ತಿದ್ದರೂ, ಹಲವು ಕೈಗಾರಿಕಾ ಕಾರಿಡಾರ್‌ಗಳ ನಗರವಾಗಿ ಹೊರ ಹೊಮ್ಮುತ್ತಿರುವ ತುಮಕೂರು ಜಿಲ್ಲೆಯ ಅಭಿವೃದ್ಧಿಗೆ ಕ್ರಮ ವಹಿಸಿಲ್ಲ.

ಒನಕೆ ಓಬವ್ವ ಮತ್ತು ಮದಕರಿ ನಾಯಕನನ್ನು ನೆನಪಿಸುವ ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಬಜೆಟ್ ನಲ್ಲಿ ಹೇಳಿದ್ದರೂ ಶಾಶ್ವತ ನೀರಾವರಿ ಮತ್ತು ಶುದ್ಧ ಕುಡಿಯುವ ನೀರಿನ ಯೋಜನೆಗಳಿಗೆ ಸಂಬಂಧಿಸಿದಂತೆ ಬಜೆಟ್ ಮಾತನಾಡಿಲ್ಲ. ಆದರೆ ಚಿತ್ರದುರ್ಗದ ಮುರುಘಾಮಠಧ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಪ್ರಮಥರ ಗಣಮೇಳವನ್ನು ಆಯೋಜಿಸಿದ್ದಕ್ಕಾಗಿ ಮುರುಘಾಶರಣರ ಋಣ ತೀರಿಸುವ ಹಿನ್ನೆಲೆಯಲ್ಲಿ 325 ಅಡಿ ಜಗಜ್ಯೋತಿ ಬಸವೇಶ್ವರರ ಕಂಚಿನ ಪುತ್ಥಳಿ ನಿರ್ಮಾಣಕ್ಕೆ 20 ಕೋಟಿ ಹಣ ಮೀಸಲಿಡಲಾಗಿದೆ. ಇದನ್ನು ಬಿಟ್ಟರೆ ಚಿತ್ರದುರ್ಗದ ಮೂಲಸಮಸ್ಯೆಗಳ ನಿವಾರಣೆಗೆ ಒತ್ತು ನೀಡಿಲ್ಲ.

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬೆಂಗಳೂರು ನಗರದ ಬಗ್ಗೆ ವಿಶೇಷ ಪ್ರೀತಿ ಇರುವುದು ಈ ಬಜೆಟ್ ನಲ್ಲಿ ವ್ಯಕ್ತವಾಗಿದೆ. ಮೆಟ್ರೋ ವಿಸ್ತರಣೆ, ಕಲಾಕ್ಷೇತ್ರಗಳ ನಿರ್ಮಾಣ, ಫಿಲಂ ಸಿಟಿ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕೆಲಸಗಳಿಗೆ ಸುಮಾರು ಹತ್ತಿರ ಹತ್ತಿರ 700 ಕೋಟಿ ರೂಪಾಯಿ ಹಣ ಮೀಸಲಿಟ್ಟಿದ್ದಾರೆ. ಬೆಂಗಳೂರು ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿದ್ದಾರೆ. ತಮಗೆ ಬೇಕಾದ ಸಚಿವರ ಕ್ಷೇತ್ರಗಳಿಗೆ ಕೆಲವೊಂದು ಯೋಜನೆಗಳನ್ನು ಘೋಷಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೂ ಸಮರ್ಪಕ ಹಣವನ್ನು ಮೀಸಲಿಟ್ಟಿಲ್ಲ. ಗ್ರಾಮೀಣ ಭಾಗದ ಯುವಕ-ಯುವತಿಯರು ನಗರ ಪ್ರದೇಶಗಳಿಗೆ ವಲಸೆ ಬರುವುದನ್ನು ತಪ್ಪಿಸುವಂತಹ ಯಾವುದೇ ಯೋಜನೆಗಳನ್ನು ರೂಪಿಸಿಲ್ಲ.

ಕೇವಲ ಬೆಂಗಳೂರು ನಗರವನ್ನು ಕೇಂದ್ರೀಕರಿಸಿರುವ ಬಜೆಟ್ ಬಯಸಲು ಸೀಮೆಯ ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ವಿಫಲವಾಗಿರುವುದು ಎದ್ದುಕಾಣುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...