Homeಮುಖಪುಟಬಯಲುಸೀಮೆ ಅಭಿವೃದ್ಧಿ ಕಡೆಗಣನೆ : ಬಹುತೇಕ ಬಜೆಟ್ ಬೆಂಗಳೂರಿಗೆ ಮೀಸಲು

ಬಯಲುಸೀಮೆ ಅಭಿವೃದ್ಧಿ ಕಡೆಗಣನೆ : ಬಹುತೇಕ ಬಜೆಟ್ ಬೆಂಗಳೂರಿಗೆ ಮೀಸಲು

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಆಯ್ಕೆಯಾದ ಶಾಸಕ ಡಾ.ಸುಧಾಕರ್ ಮುಖ್ಯಮಂತ್ರಿಯನ್ನು ಕರೆತಂದು ಜನರಿಗೆ ಕೆಲವು ಭರವಸೆ ನೀಡಿದ್ದರು. ನೂತನ ಶಾಸಕರು ಸಲ್ಲಿಸಿದ ಬೇಡಿಕೆಗಳಿಗೂ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿಲ್ಲ. 

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದ ಬಜೆಟ್ ಬಯಲುಸೀಮೆ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಿಗೆ ಬಜೆಟ್ ನಲ್ಲಿ ಅಭಿವೃದ್ದಿಗೆ ಪೂರಕ ಯೋಜನೆಗಳನ್ನು ಘೋಷಿಸಿಲ್ಲ. ನೀರಾವರಿ, ಕೈಗಾರಿಕೆ ಕ್ಷೇತ್ರದಲ್ಲಿ ತೀವ್ರ ಹಿಂದುಳಿದಿರುವ ಈ ಜಿಲ್ಲೆಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಪ್ರಸಕ್ತ ಬಜೆಟ್ ವಿಫಲವಾಗಿದೆ.

ಕುಡಿಯುವ ನೀರು ಯೋಜನೆಗಳಿಗೆ ಒತ್ತು ನೀಡುವ ಯಾವ ಕ್ರಮಗಳನ್ನು ಕೈಗೊಂಡಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಬಜೆಟ್ ನಲ್ಲಿ ಬಯಲು ಪ್ರದೇಶದ ಅಭಿವೃದ್ಧಿಗೆ, ಏನಾದರೂ ಕೊಡಬಹುದು ಎಂಬ ಜನರ ನಂಬಿಕೆಗೆ ಪೆಟ್ಟು ಬಿದ್ದಿದೆ.

ಬಯಲುಸೀಮೆಯಲ್ಲಿ ಬಹುವಾಗಿ ಕಾಡುತ್ತಿರುವ ಕುಡಿಯುವ ನೀರು ಪೂರೈಕೆ ಮತ್ತು ನೀರಾವರಿಗೆ ಸಂಬಂಧಪಟ್ಟಂತೆ ಬಜೆಟ್ ಮೌನ ವಹಿಸಿದೆ. ಕುಡಿಯುವ ನೀರು ಪೂರೈಕೆ ಯೋಜನೆಗಳು ಕುಂಟುತ್ತಾ ಸಾಗಿವೆ. ಭದ್ರ ಮೇಲ್ದಂಡೆ ಮತ್ತು ಎತ್ತಿಹೊಳೆ ಯೋಜನೆಗಳ ಕಾಮಗಾರಿ ಚುರುಕುಗೊಳಿಸುವ ಬಗ್ಗೆ ಬಜೆಟ್‌ನಲ್ಲಿ ಅಷ್ಟಾಗಿ ಗಮನಹರಿಸಿದಂತೆ ಕಾಣುತ್ತಿಲ್ಲ. ಬಯಲುಸೀಮೆ ಪ್ರದೇಶಗಳಿಗೆ ಶುದ್ದ ಕುಡಿಯುವ ನೀರು ಒದಗಿಸುವುದು ಪ್ರಮುಖ ಮತ್ತು ಆದ್ಯತೆಯ ವಿಷಯವಾಗಬೇಕಿತ್ತು. ಆದರೆ ಬಜೆಟ್ ಶಾಶ್ವತ ನೀರಾವರಿ ಮತ್ತು ಕುಡಿಯುವ ನೀರಿಗೆ ಅಷ್ಟೊಂದು ಪ್ರಾಮುಖ್ಯತೆ ಕೊಟ್ಟಿಲ್ಲ.

ಬಯಲುಸೀಮೆಯಲ್ಲಿ 10ಕ್ಕೂ ಹೆಚ್ಚು ಜಿಲ್ಲೆಗಳು ಬರುತ್ತವೆ. ಈ ಜಿಲ್ಲೆಗಳು ಯಾವುದೇ ಕ್ಷೇತ್ರದಲ್ಲೂ ಸಮರ್ಪಕ ಅಭಿವೃದ್ಧಿ ಕಂಡಿಲ್ಲ. ಆದ್ದರಿಂದ ರೈಲ್ವೆ, ಹೆದ್ದಾರಿ, ಕೈಗಾರಿಕಾ ಕಾರಿಡಾರ್ ಹೀಗೆ ಯಾವುದೇ  ಕ್ಷೇತ್ರಕ್ಕೂ ಸಿಎಂ ಯಡಿಯೂರಪ್ಪ ಆದ್ಯತೆ ನೀಡದೇ ಇರುವುದು ಈ ಭಾಗದ ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಸರ್ಕಾರ ಅಧ್ಯತೆಯ ವಿಷಯವಾದ ಮತ್ತು ಬಹುದಿನಗಳ ಬೇಡಿಕೆಗೆ ಸ್ಪಂದಿಸಿಲ್ಲ. ಇದರಿಂದ ನೀರಾವರಿ ಹೋರಾಟ ಗಾರರು ಆಕ್ರೋಶಗೊಂಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿರುವ ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್‌.ಆಂಜನೇಯರೆಡ್ಡಿ “ಬಜೆಟ್ ಬಯಲುಸೀಮೆ ಪಾಲಿಗೆ ಶಾಶ್ವತ ನೀರಾವರಿ ಯೋಜನೆಯನ್ನು ಕಡೆಗಣಿಸಿದೆ ನೀರಾವರಿ ತಜ್ಞ ಜಿ.ಎಸ್.ಪರಮಶಿವಯ್ಯ ವರದಿ ಆಧಾರಿತ ಪಶ್ಚಿಮವಾಹಿನಿ ನದಿಗಳಿಂದ ನೀರನ್ನು ಬಯಲು ಸೀಮೆಗೆ ಹರಿಸುವ ಕಾರ್ಯಯೋಜನೆಗೆ ಹಣ ಮೀಸಲಿಡದೇ ಇರುವುದು ನಿರಾಸೆ ತಂದಿದೆ. ಬಯಲುಸೀಮೆ ರೈತರಿಗೆ ರಾಡರ್ ಆಧಾರಿತ ವ್ಯವಸ್ಥೆಗೆ ಹವಾಮಾನ ಮುನ್ಸೂಚನೆ ಕೇಂದ್ರ ತೆರೆದಿದ್ದರೆ, ನೀರಿನ ನಿರ್ವಹಣೆ, ಬರ ನಿರ್ವಹಣೆ ಮತ್ತು ರೋಗ ನಿರ್ವಹಣೆಗೆ ಅನುಕೂಲವಾಗುತ್ತಿತ್ತು” ಎಂದು ಹೇಳಿದ್ದಾರೆ.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಆಯ್ಕೆಯಾದ ಶಾಸಕ ಡಾ.ಸುಧಾಕರ್ ಮುಖ್ಯಮಂತ್ರಿಯನ್ನು ಕರೆತಂದು ಜನರಿಗೆ ಕೆಲವು ಭರವಸೆ ನೀಡಿದ್ದರು. ನೂತನ ಶಾಸಕರು ಸಲ್ಲಿಸಿದ ಬೇಡಿಕೆಗಳಿಗೂ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿಲ್ಲ.

ತುಮಕೂರು ಜಿಲ್ಲೆಗೆ ತಿಪಟೂರಿನಲ್ಲಿ ತೆಂಗು ಆಧಾರಿತ ಕೈಗಾರಿಕಾ ಪಾರ್ಕ್ ಮತ್ತು ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಸ್ಥಾಪಿಸುವ ಘೋಷಣೆ ಮಾಡಿರುವುದನ್ನು ಬಿಟ್ಟರೆ ಬೇರೆ ಯಾವುದೇ ಜನೋಪಯೋಗಿ ಯೋಜನೆಗಳನ್ನು ಪ್ರಕಟಿಸಿಲ್ಲ. ತುಮಕೂರು ಸ್ಮಾರ್ಟ್ ಸಿಟಿಯಾಗಿ ಅಭಿವೃದ್ಧಿ ಹೊಂದುತ್ತಿದೆ. ಬಜೆಟ್‌ನಲ್ಲಿ ಸ್ಮಾರ್ಟ್ ಸಿಟಿ ಯೋಜನೆಗಳಿಗೆ ಹಣವನ್ನು ಮೀಸಲಿಟ್ಟಿಲ್ಲ. ತುಮಕೂರು ಬೆಂಗಳೂರಿನ ಉಪನಗರವಾಗಿ ಅಭಿವೃದ್ಧಿಪಡಿಸುವುದಾಗಿ ಹೇಳುತ್ತಲೇ ಬರುತ್ತಿದ್ದರೂ, ಹಲವು ಕೈಗಾರಿಕಾ ಕಾರಿಡಾರ್‌ಗಳ ನಗರವಾಗಿ ಹೊರ ಹೊಮ್ಮುತ್ತಿರುವ ತುಮಕೂರು ಜಿಲ್ಲೆಯ ಅಭಿವೃದ್ಧಿಗೆ ಕ್ರಮ ವಹಿಸಿಲ್ಲ.

ಒನಕೆ ಓಬವ್ವ ಮತ್ತು ಮದಕರಿ ನಾಯಕನನ್ನು ನೆನಪಿಸುವ ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಬಜೆಟ್ ನಲ್ಲಿ ಹೇಳಿದ್ದರೂ ಶಾಶ್ವತ ನೀರಾವರಿ ಮತ್ತು ಶುದ್ಧ ಕುಡಿಯುವ ನೀರಿನ ಯೋಜನೆಗಳಿಗೆ ಸಂಬಂಧಿಸಿದಂತೆ ಬಜೆಟ್ ಮಾತನಾಡಿಲ್ಲ. ಆದರೆ ಚಿತ್ರದುರ್ಗದ ಮುರುಘಾಮಠಧ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಪ್ರಮಥರ ಗಣಮೇಳವನ್ನು ಆಯೋಜಿಸಿದ್ದಕ್ಕಾಗಿ ಮುರುಘಾಶರಣರ ಋಣ ತೀರಿಸುವ ಹಿನ್ನೆಲೆಯಲ್ಲಿ 325 ಅಡಿ ಜಗಜ್ಯೋತಿ ಬಸವೇಶ್ವರರ ಕಂಚಿನ ಪುತ್ಥಳಿ ನಿರ್ಮಾಣಕ್ಕೆ 20 ಕೋಟಿ ಹಣ ಮೀಸಲಿಡಲಾಗಿದೆ. ಇದನ್ನು ಬಿಟ್ಟರೆ ಚಿತ್ರದುರ್ಗದ ಮೂಲಸಮಸ್ಯೆಗಳ ನಿವಾರಣೆಗೆ ಒತ್ತು ನೀಡಿಲ್ಲ.

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬೆಂಗಳೂರು ನಗರದ ಬಗ್ಗೆ ವಿಶೇಷ ಪ್ರೀತಿ ಇರುವುದು ಈ ಬಜೆಟ್ ನಲ್ಲಿ ವ್ಯಕ್ತವಾಗಿದೆ. ಮೆಟ್ರೋ ವಿಸ್ತರಣೆ, ಕಲಾಕ್ಷೇತ್ರಗಳ ನಿರ್ಮಾಣ, ಫಿಲಂ ಸಿಟಿ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕೆಲಸಗಳಿಗೆ ಸುಮಾರು ಹತ್ತಿರ ಹತ್ತಿರ 700 ಕೋಟಿ ರೂಪಾಯಿ ಹಣ ಮೀಸಲಿಟ್ಟಿದ್ದಾರೆ. ಬೆಂಗಳೂರು ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿದ್ದಾರೆ. ತಮಗೆ ಬೇಕಾದ ಸಚಿವರ ಕ್ಷೇತ್ರಗಳಿಗೆ ಕೆಲವೊಂದು ಯೋಜನೆಗಳನ್ನು ಘೋಷಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೂ ಸಮರ್ಪಕ ಹಣವನ್ನು ಮೀಸಲಿಟ್ಟಿಲ್ಲ. ಗ್ರಾಮೀಣ ಭಾಗದ ಯುವಕ-ಯುವತಿಯರು ನಗರ ಪ್ರದೇಶಗಳಿಗೆ ವಲಸೆ ಬರುವುದನ್ನು ತಪ್ಪಿಸುವಂತಹ ಯಾವುದೇ ಯೋಜನೆಗಳನ್ನು ರೂಪಿಸಿಲ್ಲ.

ಕೇವಲ ಬೆಂಗಳೂರು ನಗರವನ್ನು ಕೇಂದ್ರೀಕರಿಸಿರುವ ಬಜೆಟ್ ಬಯಸಲು ಸೀಮೆಯ ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ವಿಫಲವಾಗಿರುವುದು ಎದ್ದುಕಾಣುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...