Homeಮುಖಪುಟಬಯಲುಸೀಮೆ ಅಭಿವೃದ್ಧಿ ಕಡೆಗಣನೆ : ಬಹುತೇಕ ಬಜೆಟ್ ಬೆಂಗಳೂರಿಗೆ ಮೀಸಲು

ಬಯಲುಸೀಮೆ ಅಭಿವೃದ್ಧಿ ಕಡೆಗಣನೆ : ಬಹುತೇಕ ಬಜೆಟ್ ಬೆಂಗಳೂರಿಗೆ ಮೀಸಲು

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಆಯ್ಕೆಯಾದ ಶಾಸಕ ಡಾ.ಸುಧಾಕರ್ ಮುಖ್ಯಮಂತ್ರಿಯನ್ನು ಕರೆತಂದು ಜನರಿಗೆ ಕೆಲವು ಭರವಸೆ ನೀಡಿದ್ದರು. ನೂತನ ಶಾಸಕರು ಸಲ್ಲಿಸಿದ ಬೇಡಿಕೆಗಳಿಗೂ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿಲ್ಲ. 

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದ ಬಜೆಟ್ ಬಯಲುಸೀಮೆ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಿಗೆ ಬಜೆಟ್ ನಲ್ಲಿ ಅಭಿವೃದ್ದಿಗೆ ಪೂರಕ ಯೋಜನೆಗಳನ್ನು ಘೋಷಿಸಿಲ್ಲ. ನೀರಾವರಿ, ಕೈಗಾರಿಕೆ ಕ್ಷೇತ್ರದಲ್ಲಿ ತೀವ್ರ ಹಿಂದುಳಿದಿರುವ ಈ ಜಿಲ್ಲೆಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಪ್ರಸಕ್ತ ಬಜೆಟ್ ವಿಫಲವಾಗಿದೆ.

ಕುಡಿಯುವ ನೀರು ಯೋಜನೆಗಳಿಗೆ ಒತ್ತು ನೀಡುವ ಯಾವ ಕ್ರಮಗಳನ್ನು ಕೈಗೊಂಡಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಬಜೆಟ್ ನಲ್ಲಿ ಬಯಲು ಪ್ರದೇಶದ ಅಭಿವೃದ್ಧಿಗೆ, ಏನಾದರೂ ಕೊಡಬಹುದು ಎಂಬ ಜನರ ನಂಬಿಕೆಗೆ ಪೆಟ್ಟು ಬಿದ್ದಿದೆ.

ಬಯಲುಸೀಮೆಯಲ್ಲಿ ಬಹುವಾಗಿ ಕಾಡುತ್ತಿರುವ ಕುಡಿಯುವ ನೀರು ಪೂರೈಕೆ ಮತ್ತು ನೀರಾವರಿಗೆ ಸಂಬಂಧಪಟ್ಟಂತೆ ಬಜೆಟ್ ಮೌನ ವಹಿಸಿದೆ. ಕುಡಿಯುವ ನೀರು ಪೂರೈಕೆ ಯೋಜನೆಗಳು ಕುಂಟುತ್ತಾ ಸಾಗಿವೆ. ಭದ್ರ ಮೇಲ್ದಂಡೆ ಮತ್ತು ಎತ್ತಿಹೊಳೆ ಯೋಜನೆಗಳ ಕಾಮಗಾರಿ ಚುರುಕುಗೊಳಿಸುವ ಬಗ್ಗೆ ಬಜೆಟ್‌ನಲ್ಲಿ ಅಷ್ಟಾಗಿ ಗಮನಹರಿಸಿದಂತೆ ಕಾಣುತ್ತಿಲ್ಲ. ಬಯಲುಸೀಮೆ ಪ್ರದೇಶಗಳಿಗೆ ಶುದ್ದ ಕುಡಿಯುವ ನೀರು ಒದಗಿಸುವುದು ಪ್ರಮುಖ ಮತ್ತು ಆದ್ಯತೆಯ ವಿಷಯವಾಗಬೇಕಿತ್ತು. ಆದರೆ ಬಜೆಟ್ ಶಾಶ್ವತ ನೀರಾವರಿ ಮತ್ತು ಕುಡಿಯುವ ನೀರಿಗೆ ಅಷ್ಟೊಂದು ಪ್ರಾಮುಖ್ಯತೆ ಕೊಟ್ಟಿಲ್ಲ.

ಬಯಲುಸೀಮೆಯಲ್ಲಿ 10ಕ್ಕೂ ಹೆಚ್ಚು ಜಿಲ್ಲೆಗಳು ಬರುತ್ತವೆ. ಈ ಜಿಲ್ಲೆಗಳು ಯಾವುದೇ ಕ್ಷೇತ್ರದಲ್ಲೂ ಸಮರ್ಪಕ ಅಭಿವೃದ್ಧಿ ಕಂಡಿಲ್ಲ. ಆದ್ದರಿಂದ ರೈಲ್ವೆ, ಹೆದ್ದಾರಿ, ಕೈಗಾರಿಕಾ ಕಾರಿಡಾರ್ ಹೀಗೆ ಯಾವುದೇ  ಕ್ಷೇತ್ರಕ್ಕೂ ಸಿಎಂ ಯಡಿಯೂರಪ್ಪ ಆದ್ಯತೆ ನೀಡದೇ ಇರುವುದು ಈ ಭಾಗದ ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಸರ್ಕಾರ ಅಧ್ಯತೆಯ ವಿಷಯವಾದ ಮತ್ತು ಬಹುದಿನಗಳ ಬೇಡಿಕೆಗೆ ಸ್ಪಂದಿಸಿಲ್ಲ. ಇದರಿಂದ ನೀರಾವರಿ ಹೋರಾಟ ಗಾರರು ಆಕ್ರೋಶಗೊಂಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿರುವ ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್‌.ಆಂಜನೇಯರೆಡ್ಡಿ “ಬಜೆಟ್ ಬಯಲುಸೀಮೆ ಪಾಲಿಗೆ ಶಾಶ್ವತ ನೀರಾವರಿ ಯೋಜನೆಯನ್ನು ಕಡೆಗಣಿಸಿದೆ ನೀರಾವರಿ ತಜ್ಞ ಜಿ.ಎಸ್.ಪರಮಶಿವಯ್ಯ ವರದಿ ಆಧಾರಿತ ಪಶ್ಚಿಮವಾಹಿನಿ ನದಿಗಳಿಂದ ನೀರನ್ನು ಬಯಲು ಸೀಮೆಗೆ ಹರಿಸುವ ಕಾರ್ಯಯೋಜನೆಗೆ ಹಣ ಮೀಸಲಿಡದೇ ಇರುವುದು ನಿರಾಸೆ ತಂದಿದೆ. ಬಯಲುಸೀಮೆ ರೈತರಿಗೆ ರಾಡರ್ ಆಧಾರಿತ ವ್ಯವಸ್ಥೆಗೆ ಹವಾಮಾನ ಮುನ್ಸೂಚನೆ ಕೇಂದ್ರ ತೆರೆದಿದ್ದರೆ, ನೀರಿನ ನಿರ್ವಹಣೆ, ಬರ ನಿರ್ವಹಣೆ ಮತ್ತು ರೋಗ ನಿರ್ವಹಣೆಗೆ ಅನುಕೂಲವಾಗುತ್ತಿತ್ತು” ಎಂದು ಹೇಳಿದ್ದಾರೆ.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಆಯ್ಕೆಯಾದ ಶಾಸಕ ಡಾ.ಸುಧಾಕರ್ ಮುಖ್ಯಮಂತ್ರಿಯನ್ನು ಕರೆತಂದು ಜನರಿಗೆ ಕೆಲವು ಭರವಸೆ ನೀಡಿದ್ದರು. ನೂತನ ಶಾಸಕರು ಸಲ್ಲಿಸಿದ ಬೇಡಿಕೆಗಳಿಗೂ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿಲ್ಲ.

ತುಮಕೂರು ಜಿಲ್ಲೆಗೆ ತಿಪಟೂರಿನಲ್ಲಿ ತೆಂಗು ಆಧಾರಿತ ಕೈಗಾರಿಕಾ ಪಾರ್ಕ್ ಮತ್ತು ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಸ್ಥಾಪಿಸುವ ಘೋಷಣೆ ಮಾಡಿರುವುದನ್ನು ಬಿಟ್ಟರೆ ಬೇರೆ ಯಾವುದೇ ಜನೋಪಯೋಗಿ ಯೋಜನೆಗಳನ್ನು ಪ್ರಕಟಿಸಿಲ್ಲ. ತುಮಕೂರು ಸ್ಮಾರ್ಟ್ ಸಿಟಿಯಾಗಿ ಅಭಿವೃದ್ಧಿ ಹೊಂದುತ್ತಿದೆ. ಬಜೆಟ್‌ನಲ್ಲಿ ಸ್ಮಾರ್ಟ್ ಸಿಟಿ ಯೋಜನೆಗಳಿಗೆ ಹಣವನ್ನು ಮೀಸಲಿಟ್ಟಿಲ್ಲ. ತುಮಕೂರು ಬೆಂಗಳೂರಿನ ಉಪನಗರವಾಗಿ ಅಭಿವೃದ್ಧಿಪಡಿಸುವುದಾಗಿ ಹೇಳುತ್ತಲೇ ಬರುತ್ತಿದ್ದರೂ, ಹಲವು ಕೈಗಾರಿಕಾ ಕಾರಿಡಾರ್‌ಗಳ ನಗರವಾಗಿ ಹೊರ ಹೊಮ್ಮುತ್ತಿರುವ ತುಮಕೂರು ಜಿಲ್ಲೆಯ ಅಭಿವೃದ್ಧಿಗೆ ಕ್ರಮ ವಹಿಸಿಲ್ಲ.

ಒನಕೆ ಓಬವ್ವ ಮತ್ತು ಮದಕರಿ ನಾಯಕನನ್ನು ನೆನಪಿಸುವ ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಬಜೆಟ್ ನಲ್ಲಿ ಹೇಳಿದ್ದರೂ ಶಾಶ್ವತ ನೀರಾವರಿ ಮತ್ತು ಶುದ್ಧ ಕುಡಿಯುವ ನೀರಿನ ಯೋಜನೆಗಳಿಗೆ ಸಂಬಂಧಿಸಿದಂತೆ ಬಜೆಟ್ ಮಾತನಾಡಿಲ್ಲ. ಆದರೆ ಚಿತ್ರದುರ್ಗದ ಮುರುಘಾಮಠಧ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಪ್ರಮಥರ ಗಣಮೇಳವನ್ನು ಆಯೋಜಿಸಿದ್ದಕ್ಕಾಗಿ ಮುರುಘಾಶರಣರ ಋಣ ತೀರಿಸುವ ಹಿನ್ನೆಲೆಯಲ್ಲಿ 325 ಅಡಿ ಜಗಜ್ಯೋತಿ ಬಸವೇಶ್ವರರ ಕಂಚಿನ ಪುತ್ಥಳಿ ನಿರ್ಮಾಣಕ್ಕೆ 20 ಕೋಟಿ ಹಣ ಮೀಸಲಿಡಲಾಗಿದೆ. ಇದನ್ನು ಬಿಟ್ಟರೆ ಚಿತ್ರದುರ್ಗದ ಮೂಲಸಮಸ್ಯೆಗಳ ನಿವಾರಣೆಗೆ ಒತ್ತು ನೀಡಿಲ್ಲ.

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬೆಂಗಳೂರು ನಗರದ ಬಗ್ಗೆ ವಿಶೇಷ ಪ್ರೀತಿ ಇರುವುದು ಈ ಬಜೆಟ್ ನಲ್ಲಿ ವ್ಯಕ್ತವಾಗಿದೆ. ಮೆಟ್ರೋ ವಿಸ್ತರಣೆ, ಕಲಾಕ್ಷೇತ್ರಗಳ ನಿರ್ಮಾಣ, ಫಿಲಂ ಸಿಟಿ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕೆಲಸಗಳಿಗೆ ಸುಮಾರು ಹತ್ತಿರ ಹತ್ತಿರ 700 ಕೋಟಿ ರೂಪಾಯಿ ಹಣ ಮೀಸಲಿಟ್ಟಿದ್ದಾರೆ. ಬೆಂಗಳೂರು ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿದ್ದಾರೆ. ತಮಗೆ ಬೇಕಾದ ಸಚಿವರ ಕ್ಷೇತ್ರಗಳಿಗೆ ಕೆಲವೊಂದು ಯೋಜನೆಗಳನ್ನು ಘೋಷಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೂ ಸಮರ್ಪಕ ಹಣವನ್ನು ಮೀಸಲಿಟ್ಟಿಲ್ಲ. ಗ್ರಾಮೀಣ ಭಾಗದ ಯುವಕ-ಯುವತಿಯರು ನಗರ ಪ್ರದೇಶಗಳಿಗೆ ವಲಸೆ ಬರುವುದನ್ನು ತಪ್ಪಿಸುವಂತಹ ಯಾವುದೇ ಯೋಜನೆಗಳನ್ನು ರೂಪಿಸಿಲ್ಲ.

ಕೇವಲ ಬೆಂಗಳೂರು ನಗರವನ್ನು ಕೇಂದ್ರೀಕರಿಸಿರುವ ಬಜೆಟ್ ಬಯಸಲು ಸೀಮೆಯ ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ವಿಫಲವಾಗಿರುವುದು ಎದ್ದುಕಾಣುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...