HomeಮುಖಪುಟIIFA 2025 | ವಿವಿಧ ವಿಭಾಗಗಳಲ್ಲಿ 'ಲಾಪತಾ ಲೇಡಿಸ್' ಚಿತ್ರಕ್ಕೆ ಪ್ರಶಸ್ತಿ

IIFA 2025 | ವಿವಿಧ ವಿಭಾಗಗಳಲ್ಲಿ ‘ಲಾಪತಾ ಲೇಡಿಸ್’ ಚಿತ್ರಕ್ಕೆ ಪ್ರಶಸ್ತಿ

- Advertisement -
- Advertisement -

ಪ್ರೇಕ್ಷಕರ ಮತ್ತು ವಿಮರ್ಶಕರ ಮೆಚ್ಚುಗೆ ಪಡೆದ ಕಿರಣ್ ರಾವ್ ನಿರ್ದೇಶನದ ಚಲನಚಿತ್ರ ‘ಲಾಪತಾ ಲೇಡೀಸ್’ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿ (ಐಐಎಫ್‌ಎ-ಐಫಾ) 2025ರಲ್ಲಿ ಹಲವು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಭಾನುವಾರ (ಮಾ.9) ಜೈಪುರದಲ್ಲಿ ನಡೆದ ಸಮಾರಂಭದಲ್ಲಿ ‘ಅತ್ಯುತ್ತಮ ಚಿತ್ರ’ ಮತ್ತು ‘ಅತ್ಯುತ್ತಮ ನಿರ್ದೇಶನ’ ಸೇರಿದಂತೆ 10 ಪ್ರಶಸ್ತಿಗಳನ್ನು ಲಾಪತಾ ಲೇಡಿಸ್ ತಂಡ ಗೆದ್ದುಕೊಂಡಿದೆ.

ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಗೆ ಭಾರತದಿಂದ ಅಧಿಕೃತ ಪ್ರವೇಶ ಪಡೆದಿದ್ದ ಲಾಪತಾ ಲೇಡಿಸ್ ಐಫಾದ ಎಲ್ಲಾ ಪ್ರಮುಖ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ‘ಕಿರಣ್ ರಾವ್ ಅತ್ಯುತ್ತಮ ನಿರ್ದೇಶಕಿ’ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದು, ಚಿತ್ರದಲ್ಲಿ ಕಳೆದುಹೋದ ವಧುವಿನ ಪಾತ್ರ ಮಾಡಿರುವ ನಿತಾಂಶಿ ಗೋಯೆಲ್ ಪ್ರಮುಖ ಪಾತ್ರದಲ್ಲಿ (ಮಹಿಳೆ) ಅತ್ಯುತ್ತಮ ಅಭಿನಯಕ್ಕಾಗಿ ಪ್ರಶಸ್ತಿಯನ್ನು ಪಡೆದಿದ್ದಾರೆ.

ಪ್ರಶಸ್ತಿಯೊಂದಿಗೆ ‘ಲಾಪತಾ ಲೇಡಿಸ್’ ಚಿತ್ರ ತಂಡ  PC : x.com/IIFA

“ಲಾಪತಾ ಲೇಡೀಸ್’ ನಂತಹ ಚಿತ್ರಕ್ಕಾಗಿ ಪ್ರಶಸ್ತಿ ಗೆಲ್ಲುವುದು ಅಪರೂಪದ ಸೌಭಾಗ್ಯ. ಈ ರೀತಿಯ ಚಿತ್ರವನ್ನು ನಿರ್ಮಿಸುವುದೇ ಒಂದು ಅಪರೂಪದ ಸೌಭಾಗ್ಯ. ಈ ರಾತ್ರಿ ಸ್ಮರಣೀಯವಾದದ್ದು” ಎಂದು ಭಾನುವಾರ ರಾತ್ರಿ ಪ್ರಶಸ್ತಿಯನ್ನು ಸ್ವೀಕರಿಸಿದ ಬಳಿಕ ಕಿರಣ್ ರಾವ್ ಹೇಳಿದ್ದಾರೆ.

“ನಿಮ್ಮ ಚಿತ್ರವನ್ನು ನಾವು ಒಮ್ಮೆ ಅಲ್ಲ, ಹಲವು ಬಾರಿ ನೋಡಿದ್ದೇವೆ ಎಂದು ಹೇಳುವ ಜನರ ಪ್ರೀತಿಗೆ ಸರಿಸಾಟಿ ಯಾವುದೂ ಇಲ್ಲ. ಒಬ್ಬರು ಚಲನಚಿತ್ರ ನಿರ್ಮಾಪಕರು ಬದುಕುವುದೇ ಇದಕ್ಕಾಗಿಯೇ. ಆದ್ದರಿಂದ ನಮ್ಮ ಚಲನಚಿತ್ರಗಳನ್ನು ನೋಡಿದ್ದಕ್ಕಾಗಿ ಧನ್ಯವಾದಗಳು” ಎಂದಿದ್ದಾರೆ.

‘ಲಾಪತಾ ಲೇಡಿಸ್’ ಚಿತ್ರದ ನಿರ್ದೇಶಕಿ ಕಿರಣ್ ರಾವ್   PC : x.com/IIFA

ಬಾಲಿವುಡ್ ಸ್ಟಾರ್ ನಟ ಕಾರ್ತಿಕ್ ಆರ್ಯನ್ ಅವರು ‘ಭೂಲ್ ಭುಲೈಯಾ 3′ ಚಿತ್ರಕ್ಕಾಗಿ ಪ್ರಮುಖ ಪಾತ್ರದಲ್ಲಿ (ಪುರುಷ) ಅತ್ಯುತ್ತಮ ಅಭಿನಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಕರಣ್ ಜೋಹರ್ ಅವರೊಂದಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಿದ್ದ ನಟ ಆರ್ಯನ್, “ಸೂಪರ್‌ಸ್ಟಾರ್ ಅಕ್ಷಯ್ ಕುಮಾರ್ ಅವರಿಂದ ಫ್ರಾಂಚೈಸಿಯನ್ನು ವಹಿಸಿಕೊಂಡಾಗ ಜನರು ತನ್ನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು” ಎಂದು ಪ್ರಶಸ್ತಿ ಸ್ವೀಕರಿಸಿದ ಬಳಿಕ ಹೇಳಿದ್ದಾರೆ.

“ಭೂಲ್ ಭುಲೈಯಾ’ ಚಿತ್ರದ ನಟನೆಯು ಸವಾಲುಗಳಿಂದ ಕೂಡಿದ್ದ ಪ್ರಯಾಣವಾಗಿತ್ತು. ಆರಂಭದಿಂದಲೂ, ನಾನು ‘ಭೂಲ್ ಭುಲೈಯಾ 2’ಗೆ ಆಯ್ಕೆಯಾದಾಗ, ಈ ಚಿತ್ರವನ್ನು ಮುಂದುವರೆಸಲು ಸಾಧ್ಯವಾಗುತ್ತದೆಯೇ? ಎಂಬ ಹಲವು ಪ್ರಶ್ನೆಗಳು ನನ್ನಲ್ಲಿ ಎದ್ದಿತ್ತು. ಭೂಲ್ ಭುಲೈಯಾ 3ರ ಚಿತ್ರೀಕರಣದ ಸಮಯದಲ್ಲಿಯೂ ಇದೇ ರೀತಿಯ ಪ್ರಶ್ನೆಗಳು ನನ್ನಲ್ಲಿ ಮೂಡಿದ್ದವು” ಎಂದಿದ್ದಾರೆ.

ಅತ್ಯುತ್ತಮ ನಟ ಪ್ರಶಸ್ತಿ ಪಡೆದ ಕಾರ್ತಿಕ್ ಆರ್ಯನ್  PC : x.com/IIFA

“ಬಾಲ್ಯದಲ್ಲಿ ದೂರದರ್ಶನದಲ್ಲಿ ಐಫಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನೋಡುತ್ತಿದ್ದೆ. ಆದರೆ, ನಾನೇ ಹೋಗಿ ವೇದಿಕೆಯ ಮೇಲೆ ಪ್ರಶಸ್ತಿ ಸ್ವೀಕರಿಸುತ್ತೇನೆ ಎಂದು ಎಂದಿಗೂ ಊಹಿಸಿರಲಿಲ್ಲ” ಎಂದು ನಟಿ ನಿತಾಂಶಿ ಗೋಯೆಲ್ ಭಾವುಕರಾದರು.

“ಆಮಿರ್ ಖಾನ್ ಪ್ರೊಡಕ್ಷನ್ಸ್ ನಿರ್ಮಿಸುವ ಚಿತ್ರದ ಭಾಗವಾಗುವುದು ಯಾರಿಗಾದರೂ ಒಂದು ಕನಸಾಗಿರುತ್ತದೆ. ನನಗೆ ಲಾಪತಾ ಲೇಡಿಸ್‌ನಲ್ಲಿ ನಟಿಸಲು ಅವಕಾಶ ಸಿಕ್ಕಿರುವುದು ದೊಡ್ಡ ಗೌರವ. ಜನರು ನನ್ನ ಮೇಲೆ ಇಟ್ಟಿರುವ ಪ್ರೀತಿ ಹಿಗೆಯೇ ಇರಲಿ” ಎಂದು ಹೇಳಿದ್ದಾರೆ.

ಪ್ರಶಸ್ತಿಯೊಂದಿಗೆ ‘ಲಾಪತಾ ಲೇಡಿಸ್’ ನಟಿ ನಿತಾಂಶಿ ಗೋಯೆಲ್   PC x.com/IIFA

ನಿತಾಂಶಿ ಗೋಯೆಲ್ ಅವರ ಸಹ ನಟರಾದ ರವಿ ಕಿಶನ್ ಮತ್ತು ಪ್ರತಿಭಾ ರಂತ ಕ್ರಮವಾಗಿ ಅತ್ಯುತ್ತಮ ಪೋಷಕ ಪಾತ್ರ (ಪುರುಷ) ಮತ್ತು ಅತ್ಯುತ್ತಮ ಆರಂಭ (ಮಹಿಳೆ) ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಲಾಪತಾ ಲೇಡೀಸ್ ತಾಂತ್ರಿಕ ವಿಭಾಗಗಳಲ್ಲಿ ಹಲವಾರು ಪ್ರಶಸ್ತಿಗಳನ್ನು ಗೆದ್ದಿದೆ, ಅವುಗಳಲ್ಲಿ ಬಿಪ್ಲಬ್ ಗೋಸ್ವಾಮಿಗೆ ಅತ್ಯುತ್ತಮ ಕಥೆ (ಮೂಲ), ಸ್ನೇಹಾ ದೇಸಾಯಿಗೆ ಅತ್ಯುತ್ತಮ ಚಿತ್ರಕಥೆ ಮತ್ತು ಜಬೀನ್ ಮರ್ಚೆಂಟ್‌ಗೆ ಅತ್ಯುತ್ತಮ ಸಂಕಲನ ಪ್ರಶಸ್ತಿಗಳು ಸೇರಿವೆ.

‘ಸಜ್ನಿ’ ಹಾಡಿಗೆ ಪ್ರಶಾಂತ್ ಪಾಂಡೆ ಅತ್ಯುತ್ತಮ ಸಾಹಿತ್ಯ ಮತ್ತು ರಾಮ್ ಸಂಪತ್ ಅತ್ಯುತ್ತಮ ಸಂಗೀತ ಪ್ರಶಸ್ತಿಯನ್ನು ಪಡೆದ್ದಾರೆ. ‘ಶೈತಾನ್’ ಚಿತ್ರದ ಅಭಿನಯಕ್ಕಾಗಿ ನಟಿ ಜಾನಕಿ ಬೋಡಿವಾಲಾ ಅತ್ಯುತ್ತಮ ಪೋಷಕ ಪಾತ್ರ (ಮಹಿಳೆ) ಪ್ರಶಸ್ತಿಯನ್ನು ಪಡೆದಿದ್ದು, ‘ಕಿಲ್’ ಚಿತ್ರದ ಪಾತ್ರಕ್ಕಾಗಿ ರಾಘವ್ ಜುಯಾಲ್ ಅತ್ಯುತ್ತಮ ನಕಾರಾತ್ಮಕ ಪಾತ್ರದ (Negative Role ) ಅಭಿನಯ ಪ್ರಶಸ್ತಿಯನ್ನು ಗಳಿಸಿದ್ದಾರೆ.

ಚೊಚ್ಚಲ (ಡೆಬ್ಯೂ) ವಿಭಾಗಗಳಲ್ಲಿ, ಮಡ್ಗಾಂವ್ ಎಕ್ಸ್‌ಪ್ರೆಸ್‌ಗಾಗಿ ಕುನಾಲ್ ಕೆಮ್ಮು ಅತ್ಯುತ್ತಮ ಚೊಚ್ಚಲ ನಿರ್ದೇಶನ ಪ್ರಶಸ್ತಿಯನ್ನು ಗೆದ್ದರೆ, ಕಿಲ್ ಚಿತ್ರದ ಪಾತ್ರಕ್ಕಾಗಿ ಲಕ್ಷ್ಯ ಲಾಲ್ವಾನಿ ಅತ್ಯುತ್ತಮ ಚೊಚ್ಚಲ (ಪುರುಷ) ಪ್ರಶಸ್ತಿಯನ್ನು ಪಡೆದಿದ್ದಾರೆ.

‘ಅಡಾಪ್ಟೇಶನ್’ ಚಿತ್ರಕ್ಕಾಗಿ ಶ್ರೀರಾಮ್ ರಾಘವನ್, ಅರಿಜಿತ್ ಬಿಸ್ವಾಸ್, ಪೂಜಾ ಲಧಾ ಸೂರ್ತಿ, ಮತ್ತು ಅನುಕೃತಿ ಪಾಂಡೆಯ ಮೇರಿ ಕ್ರಿಸ್ಮಸ್ ತಂಡಕ್ಕೆ ಅತ್ಯುತ್ತಮ ಕಥೆ ದೊರೆತಿದೆ. ತಾಂತ್ರಿಕ ವಿಭಾಗಗಳಲ್ಲಿ ಕಿಲ್ ಚಿತ್ರಕ್ಕಾಗಿ ರಫೇ ಮಹಮೂದ್ ಅವರಿಗೆ ಅತ್ಯುತ್ತಮ ಛಾಯಾಗ್ರಹಣ ಮತ್ತು ಸುಭಾಷ್ ಸಾಹೂ, ಬೊಲೊಯ್ ಕುಮಾರ್ ಡೊಲೊಯ್ ಹಾಗೂ ರಾಹುಲ್ ಕಾರ್ಪೆ ಅವರಿಗೆ ಅತ್ಯುತ್ತಮ ಧ್ವನಿ ವಿನ್ಯಾಸ ಪ್ರಶಸ್ತಿ ಸಿಕ್ಕಿದೆ.

ಪ್ರಶಸ್ತಿಯೊಂದಿಗೆ ‘ಕಿಲ್’ ಚಿತ್ರದ ನಟ ರಾಘವ್ ಜುಯಾಲ್  PC x.com/IIFA

ಆರ್ಟಿಕಲ್ 370 ಚಿತ್ರಕ್ಕಾಗಿ ಅರ್ಜುನ್ ಧವನ್, ಆದಿತ್ಯ ಧರ್, ಆದಿತ್ಯ ಸುಹಾಸ್ ಜಂಭಾಲೆ ಮತ್ತು ಮೋನಾಲ್ ಥಾಕರ್ ಅವರಿಗೆ ಅತ್ಯುತ್ತಮ ಸಂಭಾಷಣೆ ಪ್ರಶಸ್ತಿ ದೊರೆತಿದೆ.

ವಿಕಿ ಕೌಶಲ್ ಅಭಿನಯದ ‘ಬ್ಯಾಡ್ ನ್ಯೂಝ್’ ಚಿತ್ರದ ‘ತೌಬಾ ತೌಬಾ’ ಹಾಡಿಗಾಗಿ ಬಾಸ್ಕೋ-ಸೀಸರ್ ಅತ್ಯುತ್ತಮ ನೃತ್ಯ ಸಂಯೋಜನೆ ಮತ್ತು ‘ಭೂಲ್ ಭುಲೈಯಾ 3’ ಚಿತ್ರದ ‘ರೆಡ್ ಚಿಲ್ಲೀಸ್’ ವಿಎಫ್ಎಕ್ಸ್ ಅತ್ಯುತ್ತಮ ವಿಎಫ್ಎಕ್ಸ್ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಸಂಗೀತ ವಿಭಾಗಗಳಲ್ಲಿ, ‘ಆರ್ಟಿಕಲ್ 370ರ’ ‘ದುವಾ’ ಹಾಡಿಗಾಗಿ ಜುಬಿನ್ ನೌಟಿಯಾಲ್ ಅತ್ಯುತ್ತಮ ಗಾಯಕ (ಪುರುಷ) ಪ್ರಶಸ್ತಿಯನ್ನು ಪಡೆದಿದ್ದು, ‘ಭೂಲ್ ಭುಲೈಯಾ 3 ರ’ ‘ಅಮಿ ಜೆ ತೋಮರ್ 3.0’ ಹಾಡಿಗಾಗಿ ಶ್ರೇಯಾ ಘೋಷಾಲ್ ಅತ್ಯುತ್ತಮ ಗಾಯಕಿ (ಮಹಿಳೆ) ಪ್ರಶಸ್ತಿಯನ್ನು ಪಡೆದಿದ್ದಾರೆ.

ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ, ಹಿರಿಯ ಚಲನಚಿತ್ರ ನಿರ್ಮಾಪಕ ರಾಕೇಶ್ ರೋಷನ್ ಅವರಿಗೆ ಭಾರತೀಯ ಸಿನಿಮಾದಲ್ಲಿ ಅತ್ಯುತ್ತಮ ಸಾಧನೆಗಾಗಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಅವರನ್ನು ಹಿರಿಯ ನಟಿ ರೇಖಾ ಸನ್ಮಾನಿಸಿದ್ದಾರೆ.

ಬೆಂಗಳೂರು ಚಲನಚಿತ್ರೋತ್ಸವ | ಹಿರಿಯ ನಟಿ ಶಬಾನಾ ಅಝ್ಮಿಗೆ ‘ಜೀವಮಾನ ಸಾಧನೆ ಪ್ರಶಸ್ತಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...