HomeಮುಖಪುಟIIFA 2025 | ವಿವಿಧ ವಿಭಾಗಗಳಲ್ಲಿ 'ಲಾಪತಾ ಲೇಡಿಸ್' ಚಿತ್ರಕ್ಕೆ ಪ್ರಶಸ್ತಿ

IIFA 2025 | ವಿವಿಧ ವಿಭಾಗಗಳಲ್ಲಿ ‘ಲಾಪತಾ ಲೇಡಿಸ್’ ಚಿತ್ರಕ್ಕೆ ಪ್ರಶಸ್ತಿ

- Advertisement -
- Advertisement -

ಪ್ರೇಕ್ಷಕರ ಮತ್ತು ವಿಮರ್ಶಕರ ಮೆಚ್ಚುಗೆ ಪಡೆದ ಕಿರಣ್ ರಾವ್ ನಿರ್ದೇಶನದ ಚಲನಚಿತ್ರ ‘ಲಾಪತಾ ಲೇಡೀಸ್’ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿ (ಐಐಎಫ್‌ಎ-ಐಫಾ) 2025ರಲ್ಲಿ ಹಲವು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಭಾನುವಾರ (ಮಾ.9) ಜೈಪುರದಲ್ಲಿ ನಡೆದ ಸಮಾರಂಭದಲ್ಲಿ ‘ಅತ್ಯುತ್ತಮ ಚಿತ್ರ’ ಮತ್ತು ‘ಅತ್ಯುತ್ತಮ ನಿರ್ದೇಶನ’ ಸೇರಿದಂತೆ 10 ಪ್ರಶಸ್ತಿಗಳನ್ನು ಲಾಪತಾ ಲೇಡಿಸ್ ತಂಡ ಗೆದ್ದುಕೊಂಡಿದೆ.

ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಗೆ ಭಾರತದಿಂದ ಅಧಿಕೃತ ಪ್ರವೇಶ ಪಡೆದಿದ್ದ ಲಾಪತಾ ಲೇಡಿಸ್ ಐಫಾದ ಎಲ್ಲಾ ಪ್ರಮುಖ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ‘ಕಿರಣ್ ರಾವ್ ಅತ್ಯುತ್ತಮ ನಿರ್ದೇಶಕಿ’ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದು, ಚಿತ್ರದಲ್ಲಿ ಕಳೆದುಹೋದ ವಧುವಿನ ಪಾತ್ರ ಮಾಡಿರುವ ನಿತಾಂಶಿ ಗೋಯೆಲ್ ಪ್ರಮುಖ ಪಾತ್ರದಲ್ಲಿ (ಮಹಿಳೆ) ಅತ್ಯುತ್ತಮ ಅಭಿನಯಕ್ಕಾಗಿ ಪ್ರಶಸ್ತಿಯನ್ನು ಪಡೆದಿದ್ದಾರೆ.

ಪ್ರಶಸ್ತಿಯೊಂದಿಗೆ ‘ಲಾಪತಾ ಲೇಡಿಸ್’ ಚಿತ್ರ ತಂಡ  PC : x.com/IIFA

“ಲಾಪತಾ ಲೇಡೀಸ್’ ನಂತಹ ಚಿತ್ರಕ್ಕಾಗಿ ಪ್ರಶಸ್ತಿ ಗೆಲ್ಲುವುದು ಅಪರೂಪದ ಸೌಭಾಗ್ಯ. ಈ ರೀತಿಯ ಚಿತ್ರವನ್ನು ನಿರ್ಮಿಸುವುದೇ ಒಂದು ಅಪರೂಪದ ಸೌಭಾಗ್ಯ. ಈ ರಾತ್ರಿ ಸ್ಮರಣೀಯವಾದದ್ದು” ಎಂದು ಭಾನುವಾರ ರಾತ್ರಿ ಪ್ರಶಸ್ತಿಯನ್ನು ಸ್ವೀಕರಿಸಿದ ಬಳಿಕ ಕಿರಣ್ ರಾವ್ ಹೇಳಿದ್ದಾರೆ.

“ನಿಮ್ಮ ಚಿತ್ರವನ್ನು ನಾವು ಒಮ್ಮೆ ಅಲ್ಲ, ಹಲವು ಬಾರಿ ನೋಡಿದ್ದೇವೆ ಎಂದು ಹೇಳುವ ಜನರ ಪ್ರೀತಿಗೆ ಸರಿಸಾಟಿ ಯಾವುದೂ ಇಲ್ಲ. ಒಬ್ಬರು ಚಲನಚಿತ್ರ ನಿರ್ಮಾಪಕರು ಬದುಕುವುದೇ ಇದಕ್ಕಾಗಿಯೇ. ಆದ್ದರಿಂದ ನಮ್ಮ ಚಲನಚಿತ್ರಗಳನ್ನು ನೋಡಿದ್ದಕ್ಕಾಗಿ ಧನ್ಯವಾದಗಳು” ಎಂದಿದ್ದಾರೆ.

‘ಲಾಪತಾ ಲೇಡಿಸ್’ ಚಿತ್ರದ ನಿರ್ದೇಶಕಿ ಕಿರಣ್ ರಾವ್   PC : x.com/IIFA

ಬಾಲಿವುಡ್ ಸ್ಟಾರ್ ನಟ ಕಾರ್ತಿಕ್ ಆರ್ಯನ್ ಅವರು ‘ಭೂಲ್ ಭುಲೈಯಾ 3′ ಚಿತ್ರಕ್ಕಾಗಿ ಪ್ರಮುಖ ಪಾತ್ರದಲ್ಲಿ (ಪುರುಷ) ಅತ್ಯುತ್ತಮ ಅಭಿನಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಕರಣ್ ಜೋಹರ್ ಅವರೊಂದಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಿದ್ದ ನಟ ಆರ್ಯನ್, “ಸೂಪರ್‌ಸ್ಟಾರ್ ಅಕ್ಷಯ್ ಕುಮಾರ್ ಅವರಿಂದ ಫ್ರಾಂಚೈಸಿಯನ್ನು ವಹಿಸಿಕೊಂಡಾಗ ಜನರು ತನ್ನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು” ಎಂದು ಪ್ರಶಸ್ತಿ ಸ್ವೀಕರಿಸಿದ ಬಳಿಕ ಹೇಳಿದ್ದಾರೆ.

“ಭೂಲ್ ಭುಲೈಯಾ’ ಚಿತ್ರದ ನಟನೆಯು ಸವಾಲುಗಳಿಂದ ಕೂಡಿದ್ದ ಪ್ರಯಾಣವಾಗಿತ್ತು. ಆರಂಭದಿಂದಲೂ, ನಾನು ‘ಭೂಲ್ ಭುಲೈಯಾ 2’ಗೆ ಆಯ್ಕೆಯಾದಾಗ, ಈ ಚಿತ್ರವನ್ನು ಮುಂದುವರೆಸಲು ಸಾಧ್ಯವಾಗುತ್ತದೆಯೇ? ಎಂಬ ಹಲವು ಪ್ರಶ್ನೆಗಳು ನನ್ನಲ್ಲಿ ಎದ್ದಿತ್ತು. ಭೂಲ್ ಭುಲೈಯಾ 3ರ ಚಿತ್ರೀಕರಣದ ಸಮಯದಲ್ಲಿಯೂ ಇದೇ ರೀತಿಯ ಪ್ರಶ್ನೆಗಳು ನನ್ನಲ್ಲಿ ಮೂಡಿದ್ದವು” ಎಂದಿದ್ದಾರೆ.

ಅತ್ಯುತ್ತಮ ನಟ ಪ್ರಶಸ್ತಿ ಪಡೆದ ಕಾರ್ತಿಕ್ ಆರ್ಯನ್  PC : x.com/IIFA

“ಬಾಲ್ಯದಲ್ಲಿ ದೂರದರ್ಶನದಲ್ಲಿ ಐಫಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನೋಡುತ್ತಿದ್ದೆ. ಆದರೆ, ನಾನೇ ಹೋಗಿ ವೇದಿಕೆಯ ಮೇಲೆ ಪ್ರಶಸ್ತಿ ಸ್ವೀಕರಿಸುತ್ತೇನೆ ಎಂದು ಎಂದಿಗೂ ಊಹಿಸಿರಲಿಲ್ಲ” ಎಂದು ನಟಿ ನಿತಾಂಶಿ ಗೋಯೆಲ್ ಭಾವುಕರಾದರು.

“ಆಮಿರ್ ಖಾನ್ ಪ್ರೊಡಕ್ಷನ್ಸ್ ನಿರ್ಮಿಸುವ ಚಿತ್ರದ ಭಾಗವಾಗುವುದು ಯಾರಿಗಾದರೂ ಒಂದು ಕನಸಾಗಿರುತ್ತದೆ. ನನಗೆ ಲಾಪತಾ ಲೇಡಿಸ್‌ನಲ್ಲಿ ನಟಿಸಲು ಅವಕಾಶ ಸಿಕ್ಕಿರುವುದು ದೊಡ್ಡ ಗೌರವ. ಜನರು ನನ್ನ ಮೇಲೆ ಇಟ್ಟಿರುವ ಪ್ರೀತಿ ಹಿಗೆಯೇ ಇರಲಿ” ಎಂದು ಹೇಳಿದ್ದಾರೆ.

ಪ್ರಶಸ್ತಿಯೊಂದಿಗೆ ‘ಲಾಪತಾ ಲೇಡಿಸ್’ ನಟಿ ನಿತಾಂಶಿ ಗೋಯೆಲ್   PC x.com/IIFA

ನಿತಾಂಶಿ ಗೋಯೆಲ್ ಅವರ ಸಹ ನಟರಾದ ರವಿ ಕಿಶನ್ ಮತ್ತು ಪ್ರತಿಭಾ ರಂತ ಕ್ರಮವಾಗಿ ಅತ್ಯುತ್ತಮ ಪೋಷಕ ಪಾತ್ರ (ಪುರುಷ) ಮತ್ತು ಅತ್ಯುತ್ತಮ ಆರಂಭ (ಮಹಿಳೆ) ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಲಾಪತಾ ಲೇಡೀಸ್ ತಾಂತ್ರಿಕ ವಿಭಾಗಗಳಲ್ಲಿ ಹಲವಾರು ಪ್ರಶಸ್ತಿಗಳನ್ನು ಗೆದ್ದಿದೆ, ಅವುಗಳಲ್ಲಿ ಬಿಪ್ಲಬ್ ಗೋಸ್ವಾಮಿಗೆ ಅತ್ಯುತ್ತಮ ಕಥೆ (ಮೂಲ), ಸ್ನೇಹಾ ದೇಸಾಯಿಗೆ ಅತ್ಯುತ್ತಮ ಚಿತ್ರಕಥೆ ಮತ್ತು ಜಬೀನ್ ಮರ್ಚೆಂಟ್‌ಗೆ ಅತ್ಯುತ್ತಮ ಸಂಕಲನ ಪ್ರಶಸ್ತಿಗಳು ಸೇರಿವೆ.

‘ಸಜ್ನಿ’ ಹಾಡಿಗೆ ಪ್ರಶಾಂತ್ ಪಾಂಡೆ ಅತ್ಯುತ್ತಮ ಸಾಹಿತ್ಯ ಮತ್ತು ರಾಮ್ ಸಂಪತ್ ಅತ್ಯುತ್ತಮ ಸಂಗೀತ ಪ್ರಶಸ್ತಿಯನ್ನು ಪಡೆದ್ದಾರೆ. ‘ಶೈತಾನ್’ ಚಿತ್ರದ ಅಭಿನಯಕ್ಕಾಗಿ ನಟಿ ಜಾನಕಿ ಬೋಡಿವಾಲಾ ಅತ್ಯುತ್ತಮ ಪೋಷಕ ಪಾತ್ರ (ಮಹಿಳೆ) ಪ್ರಶಸ್ತಿಯನ್ನು ಪಡೆದಿದ್ದು, ‘ಕಿಲ್’ ಚಿತ್ರದ ಪಾತ್ರಕ್ಕಾಗಿ ರಾಘವ್ ಜುಯಾಲ್ ಅತ್ಯುತ್ತಮ ನಕಾರಾತ್ಮಕ ಪಾತ್ರದ (Negative Role ) ಅಭಿನಯ ಪ್ರಶಸ್ತಿಯನ್ನು ಗಳಿಸಿದ್ದಾರೆ.

ಚೊಚ್ಚಲ (ಡೆಬ್ಯೂ) ವಿಭಾಗಗಳಲ್ಲಿ, ಮಡ್ಗಾಂವ್ ಎಕ್ಸ್‌ಪ್ರೆಸ್‌ಗಾಗಿ ಕುನಾಲ್ ಕೆಮ್ಮು ಅತ್ಯುತ್ತಮ ಚೊಚ್ಚಲ ನಿರ್ದೇಶನ ಪ್ರಶಸ್ತಿಯನ್ನು ಗೆದ್ದರೆ, ಕಿಲ್ ಚಿತ್ರದ ಪಾತ್ರಕ್ಕಾಗಿ ಲಕ್ಷ್ಯ ಲಾಲ್ವಾನಿ ಅತ್ಯುತ್ತಮ ಚೊಚ್ಚಲ (ಪುರುಷ) ಪ್ರಶಸ್ತಿಯನ್ನು ಪಡೆದಿದ್ದಾರೆ.

‘ಅಡಾಪ್ಟೇಶನ್’ ಚಿತ್ರಕ್ಕಾಗಿ ಶ್ರೀರಾಮ್ ರಾಘವನ್, ಅರಿಜಿತ್ ಬಿಸ್ವಾಸ್, ಪೂಜಾ ಲಧಾ ಸೂರ್ತಿ, ಮತ್ತು ಅನುಕೃತಿ ಪಾಂಡೆಯ ಮೇರಿ ಕ್ರಿಸ್ಮಸ್ ತಂಡಕ್ಕೆ ಅತ್ಯುತ್ತಮ ಕಥೆ ದೊರೆತಿದೆ. ತಾಂತ್ರಿಕ ವಿಭಾಗಗಳಲ್ಲಿ ಕಿಲ್ ಚಿತ್ರಕ್ಕಾಗಿ ರಫೇ ಮಹಮೂದ್ ಅವರಿಗೆ ಅತ್ಯುತ್ತಮ ಛಾಯಾಗ್ರಹಣ ಮತ್ತು ಸುಭಾಷ್ ಸಾಹೂ, ಬೊಲೊಯ್ ಕುಮಾರ್ ಡೊಲೊಯ್ ಹಾಗೂ ರಾಹುಲ್ ಕಾರ್ಪೆ ಅವರಿಗೆ ಅತ್ಯುತ್ತಮ ಧ್ವನಿ ವಿನ್ಯಾಸ ಪ್ರಶಸ್ತಿ ಸಿಕ್ಕಿದೆ.

ಪ್ರಶಸ್ತಿಯೊಂದಿಗೆ ‘ಕಿಲ್’ ಚಿತ್ರದ ನಟ ರಾಘವ್ ಜುಯಾಲ್  PC x.com/IIFA

ಆರ್ಟಿಕಲ್ 370 ಚಿತ್ರಕ್ಕಾಗಿ ಅರ್ಜುನ್ ಧವನ್, ಆದಿತ್ಯ ಧರ್, ಆದಿತ್ಯ ಸುಹಾಸ್ ಜಂಭಾಲೆ ಮತ್ತು ಮೋನಾಲ್ ಥಾಕರ್ ಅವರಿಗೆ ಅತ್ಯುತ್ತಮ ಸಂಭಾಷಣೆ ಪ್ರಶಸ್ತಿ ದೊರೆತಿದೆ.

ವಿಕಿ ಕೌಶಲ್ ಅಭಿನಯದ ‘ಬ್ಯಾಡ್ ನ್ಯೂಝ್’ ಚಿತ್ರದ ‘ತೌಬಾ ತೌಬಾ’ ಹಾಡಿಗಾಗಿ ಬಾಸ್ಕೋ-ಸೀಸರ್ ಅತ್ಯುತ್ತಮ ನೃತ್ಯ ಸಂಯೋಜನೆ ಮತ್ತು ‘ಭೂಲ್ ಭುಲೈಯಾ 3’ ಚಿತ್ರದ ‘ರೆಡ್ ಚಿಲ್ಲೀಸ್’ ವಿಎಫ್ಎಕ್ಸ್ ಅತ್ಯುತ್ತಮ ವಿಎಫ್ಎಕ್ಸ್ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಸಂಗೀತ ವಿಭಾಗಗಳಲ್ಲಿ, ‘ಆರ್ಟಿಕಲ್ 370ರ’ ‘ದುವಾ’ ಹಾಡಿಗಾಗಿ ಜುಬಿನ್ ನೌಟಿಯಾಲ್ ಅತ್ಯುತ್ತಮ ಗಾಯಕ (ಪುರುಷ) ಪ್ರಶಸ್ತಿಯನ್ನು ಪಡೆದಿದ್ದು, ‘ಭೂಲ್ ಭುಲೈಯಾ 3 ರ’ ‘ಅಮಿ ಜೆ ತೋಮರ್ 3.0’ ಹಾಡಿಗಾಗಿ ಶ್ರೇಯಾ ಘೋಷಾಲ್ ಅತ್ಯುತ್ತಮ ಗಾಯಕಿ (ಮಹಿಳೆ) ಪ್ರಶಸ್ತಿಯನ್ನು ಪಡೆದಿದ್ದಾರೆ.

ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ, ಹಿರಿಯ ಚಲನಚಿತ್ರ ನಿರ್ಮಾಪಕ ರಾಕೇಶ್ ರೋಷನ್ ಅವರಿಗೆ ಭಾರತೀಯ ಸಿನಿಮಾದಲ್ಲಿ ಅತ್ಯುತ್ತಮ ಸಾಧನೆಗಾಗಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಅವರನ್ನು ಹಿರಿಯ ನಟಿ ರೇಖಾ ಸನ್ಮಾನಿಸಿದ್ದಾರೆ.

ಬೆಂಗಳೂರು ಚಲನಚಿತ್ರೋತ್ಸವ | ಹಿರಿಯ ನಟಿ ಶಬಾನಾ ಅಝ್ಮಿಗೆ ‘ಜೀವಮಾನ ಸಾಧನೆ ಪ್ರಶಸ್ತಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...