HomeಮುಖಪುಟIIFA 2025 | ವಿವಿಧ ವಿಭಾಗಗಳಲ್ಲಿ 'ಲಾಪತಾ ಲೇಡಿಸ್' ಚಿತ್ರಕ್ಕೆ ಪ್ರಶಸ್ತಿ

IIFA 2025 | ವಿವಿಧ ವಿಭಾಗಗಳಲ್ಲಿ ‘ಲಾಪತಾ ಲೇಡಿಸ್’ ಚಿತ್ರಕ್ಕೆ ಪ್ರಶಸ್ತಿ

- Advertisement -
- Advertisement -

ಪ್ರೇಕ್ಷಕರ ಮತ್ತು ವಿಮರ್ಶಕರ ಮೆಚ್ಚುಗೆ ಪಡೆದ ಕಿರಣ್ ರಾವ್ ನಿರ್ದೇಶನದ ಚಲನಚಿತ್ರ ‘ಲಾಪತಾ ಲೇಡೀಸ್’ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿ (ಐಐಎಫ್‌ಎ-ಐಫಾ) 2025ರಲ್ಲಿ ಹಲವು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಭಾನುವಾರ (ಮಾ.9) ಜೈಪುರದಲ್ಲಿ ನಡೆದ ಸಮಾರಂಭದಲ್ಲಿ ‘ಅತ್ಯುತ್ತಮ ಚಿತ್ರ’ ಮತ್ತು ‘ಅತ್ಯುತ್ತಮ ನಿರ್ದೇಶನ’ ಸೇರಿದಂತೆ 10 ಪ್ರಶಸ್ತಿಗಳನ್ನು ಲಾಪತಾ ಲೇಡಿಸ್ ತಂಡ ಗೆದ್ದುಕೊಂಡಿದೆ.

ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಗೆ ಭಾರತದಿಂದ ಅಧಿಕೃತ ಪ್ರವೇಶ ಪಡೆದಿದ್ದ ಲಾಪತಾ ಲೇಡಿಸ್ ಐಫಾದ ಎಲ್ಲಾ ಪ್ರಮುಖ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ‘ಕಿರಣ್ ರಾವ್ ಅತ್ಯುತ್ತಮ ನಿರ್ದೇಶಕಿ’ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದು, ಚಿತ್ರದಲ್ಲಿ ಕಳೆದುಹೋದ ವಧುವಿನ ಪಾತ್ರ ಮಾಡಿರುವ ನಿತಾಂಶಿ ಗೋಯೆಲ್ ಪ್ರಮುಖ ಪಾತ್ರದಲ್ಲಿ (ಮಹಿಳೆ) ಅತ್ಯುತ್ತಮ ಅಭಿನಯಕ್ಕಾಗಿ ಪ್ರಶಸ್ತಿಯನ್ನು ಪಡೆದಿದ್ದಾರೆ.

ಪ್ರಶಸ್ತಿಯೊಂದಿಗೆ ‘ಲಾಪತಾ ಲೇಡಿಸ್’ ಚಿತ್ರ ತಂಡ  PC : x.com/IIFA

“ಲಾಪತಾ ಲೇಡೀಸ್’ ನಂತಹ ಚಿತ್ರಕ್ಕಾಗಿ ಪ್ರಶಸ್ತಿ ಗೆಲ್ಲುವುದು ಅಪರೂಪದ ಸೌಭಾಗ್ಯ. ಈ ರೀತಿಯ ಚಿತ್ರವನ್ನು ನಿರ್ಮಿಸುವುದೇ ಒಂದು ಅಪರೂಪದ ಸೌಭಾಗ್ಯ. ಈ ರಾತ್ರಿ ಸ್ಮರಣೀಯವಾದದ್ದು” ಎಂದು ಭಾನುವಾರ ರಾತ್ರಿ ಪ್ರಶಸ್ತಿಯನ್ನು ಸ್ವೀಕರಿಸಿದ ಬಳಿಕ ಕಿರಣ್ ರಾವ್ ಹೇಳಿದ್ದಾರೆ.

“ನಿಮ್ಮ ಚಿತ್ರವನ್ನು ನಾವು ಒಮ್ಮೆ ಅಲ್ಲ, ಹಲವು ಬಾರಿ ನೋಡಿದ್ದೇವೆ ಎಂದು ಹೇಳುವ ಜನರ ಪ್ರೀತಿಗೆ ಸರಿಸಾಟಿ ಯಾವುದೂ ಇಲ್ಲ. ಒಬ್ಬರು ಚಲನಚಿತ್ರ ನಿರ್ಮಾಪಕರು ಬದುಕುವುದೇ ಇದಕ್ಕಾಗಿಯೇ. ಆದ್ದರಿಂದ ನಮ್ಮ ಚಲನಚಿತ್ರಗಳನ್ನು ನೋಡಿದ್ದಕ್ಕಾಗಿ ಧನ್ಯವಾದಗಳು” ಎಂದಿದ್ದಾರೆ.

‘ಲಾಪತಾ ಲೇಡಿಸ್’ ಚಿತ್ರದ ನಿರ್ದೇಶಕಿ ಕಿರಣ್ ರಾವ್   PC : x.com/IIFA

ಬಾಲಿವುಡ್ ಸ್ಟಾರ್ ನಟ ಕಾರ್ತಿಕ್ ಆರ್ಯನ್ ಅವರು ‘ಭೂಲ್ ಭುಲೈಯಾ 3′ ಚಿತ್ರಕ್ಕಾಗಿ ಪ್ರಮುಖ ಪಾತ್ರದಲ್ಲಿ (ಪುರುಷ) ಅತ್ಯುತ್ತಮ ಅಭಿನಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಕರಣ್ ಜೋಹರ್ ಅವರೊಂದಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಿದ್ದ ನಟ ಆರ್ಯನ್, “ಸೂಪರ್‌ಸ್ಟಾರ್ ಅಕ್ಷಯ್ ಕುಮಾರ್ ಅವರಿಂದ ಫ್ರಾಂಚೈಸಿಯನ್ನು ವಹಿಸಿಕೊಂಡಾಗ ಜನರು ತನ್ನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು” ಎಂದು ಪ್ರಶಸ್ತಿ ಸ್ವೀಕರಿಸಿದ ಬಳಿಕ ಹೇಳಿದ್ದಾರೆ.

“ಭೂಲ್ ಭುಲೈಯಾ’ ಚಿತ್ರದ ನಟನೆಯು ಸವಾಲುಗಳಿಂದ ಕೂಡಿದ್ದ ಪ್ರಯಾಣವಾಗಿತ್ತು. ಆರಂಭದಿಂದಲೂ, ನಾನು ‘ಭೂಲ್ ಭುಲೈಯಾ 2’ಗೆ ಆಯ್ಕೆಯಾದಾಗ, ಈ ಚಿತ್ರವನ್ನು ಮುಂದುವರೆಸಲು ಸಾಧ್ಯವಾಗುತ್ತದೆಯೇ? ಎಂಬ ಹಲವು ಪ್ರಶ್ನೆಗಳು ನನ್ನಲ್ಲಿ ಎದ್ದಿತ್ತು. ಭೂಲ್ ಭುಲೈಯಾ 3ರ ಚಿತ್ರೀಕರಣದ ಸಮಯದಲ್ಲಿಯೂ ಇದೇ ರೀತಿಯ ಪ್ರಶ್ನೆಗಳು ನನ್ನಲ್ಲಿ ಮೂಡಿದ್ದವು” ಎಂದಿದ್ದಾರೆ.

ಅತ್ಯುತ್ತಮ ನಟ ಪ್ರಶಸ್ತಿ ಪಡೆದ ಕಾರ್ತಿಕ್ ಆರ್ಯನ್  PC : x.com/IIFA

“ಬಾಲ್ಯದಲ್ಲಿ ದೂರದರ್ಶನದಲ್ಲಿ ಐಫಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನೋಡುತ್ತಿದ್ದೆ. ಆದರೆ, ನಾನೇ ಹೋಗಿ ವೇದಿಕೆಯ ಮೇಲೆ ಪ್ರಶಸ್ತಿ ಸ್ವೀಕರಿಸುತ್ತೇನೆ ಎಂದು ಎಂದಿಗೂ ಊಹಿಸಿರಲಿಲ್ಲ” ಎಂದು ನಟಿ ನಿತಾಂಶಿ ಗೋಯೆಲ್ ಭಾವುಕರಾದರು.

“ಆಮಿರ್ ಖಾನ್ ಪ್ರೊಡಕ್ಷನ್ಸ್ ನಿರ್ಮಿಸುವ ಚಿತ್ರದ ಭಾಗವಾಗುವುದು ಯಾರಿಗಾದರೂ ಒಂದು ಕನಸಾಗಿರುತ್ತದೆ. ನನಗೆ ಲಾಪತಾ ಲೇಡಿಸ್‌ನಲ್ಲಿ ನಟಿಸಲು ಅವಕಾಶ ಸಿಕ್ಕಿರುವುದು ದೊಡ್ಡ ಗೌರವ. ಜನರು ನನ್ನ ಮೇಲೆ ಇಟ್ಟಿರುವ ಪ್ರೀತಿ ಹಿಗೆಯೇ ಇರಲಿ” ಎಂದು ಹೇಳಿದ್ದಾರೆ.

ಪ್ರಶಸ್ತಿಯೊಂದಿಗೆ ‘ಲಾಪತಾ ಲೇಡಿಸ್’ ನಟಿ ನಿತಾಂಶಿ ಗೋಯೆಲ್   PC x.com/IIFA

ನಿತಾಂಶಿ ಗೋಯೆಲ್ ಅವರ ಸಹ ನಟರಾದ ರವಿ ಕಿಶನ್ ಮತ್ತು ಪ್ರತಿಭಾ ರಂತ ಕ್ರಮವಾಗಿ ಅತ್ಯುತ್ತಮ ಪೋಷಕ ಪಾತ್ರ (ಪುರುಷ) ಮತ್ತು ಅತ್ಯುತ್ತಮ ಆರಂಭ (ಮಹಿಳೆ) ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಲಾಪತಾ ಲೇಡೀಸ್ ತಾಂತ್ರಿಕ ವಿಭಾಗಗಳಲ್ಲಿ ಹಲವಾರು ಪ್ರಶಸ್ತಿಗಳನ್ನು ಗೆದ್ದಿದೆ, ಅವುಗಳಲ್ಲಿ ಬಿಪ್ಲಬ್ ಗೋಸ್ವಾಮಿಗೆ ಅತ್ಯುತ್ತಮ ಕಥೆ (ಮೂಲ), ಸ್ನೇಹಾ ದೇಸಾಯಿಗೆ ಅತ್ಯುತ್ತಮ ಚಿತ್ರಕಥೆ ಮತ್ತು ಜಬೀನ್ ಮರ್ಚೆಂಟ್‌ಗೆ ಅತ್ಯುತ್ತಮ ಸಂಕಲನ ಪ್ರಶಸ್ತಿಗಳು ಸೇರಿವೆ.

‘ಸಜ್ನಿ’ ಹಾಡಿಗೆ ಪ್ರಶಾಂತ್ ಪಾಂಡೆ ಅತ್ಯುತ್ತಮ ಸಾಹಿತ್ಯ ಮತ್ತು ರಾಮ್ ಸಂಪತ್ ಅತ್ಯುತ್ತಮ ಸಂಗೀತ ಪ್ರಶಸ್ತಿಯನ್ನು ಪಡೆದ್ದಾರೆ. ‘ಶೈತಾನ್’ ಚಿತ್ರದ ಅಭಿನಯಕ್ಕಾಗಿ ನಟಿ ಜಾನಕಿ ಬೋಡಿವಾಲಾ ಅತ್ಯುತ್ತಮ ಪೋಷಕ ಪಾತ್ರ (ಮಹಿಳೆ) ಪ್ರಶಸ್ತಿಯನ್ನು ಪಡೆದಿದ್ದು, ‘ಕಿಲ್’ ಚಿತ್ರದ ಪಾತ್ರಕ್ಕಾಗಿ ರಾಘವ್ ಜುಯಾಲ್ ಅತ್ಯುತ್ತಮ ನಕಾರಾತ್ಮಕ ಪಾತ್ರದ (Negative Role ) ಅಭಿನಯ ಪ್ರಶಸ್ತಿಯನ್ನು ಗಳಿಸಿದ್ದಾರೆ.

ಚೊಚ್ಚಲ (ಡೆಬ್ಯೂ) ವಿಭಾಗಗಳಲ್ಲಿ, ಮಡ್ಗಾಂವ್ ಎಕ್ಸ್‌ಪ್ರೆಸ್‌ಗಾಗಿ ಕುನಾಲ್ ಕೆಮ್ಮು ಅತ್ಯುತ್ತಮ ಚೊಚ್ಚಲ ನಿರ್ದೇಶನ ಪ್ರಶಸ್ತಿಯನ್ನು ಗೆದ್ದರೆ, ಕಿಲ್ ಚಿತ್ರದ ಪಾತ್ರಕ್ಕಾಗಿ ಲಕ್ಷ್ಯ ಲಾಲ್ವಾನಿ ಅತ್ಯುತ್ತಮ ಚೊಚ್ಚಲ (ಪುರುಷ) ಪ್ರಶಸ್ತಿಯನ್ನು ಪಡೆದಿದ್ದಾರೆ.

‘ಅಡಾಪ್ಟೇಶನ್’ ಚಿತ್ರಕ್ಕಾಗಿ ಶ್ರೀರಾಮ್ ರಾಘವನ್, ಅರಿಜಿತ್ ಬಿಸ್ವಾಸ್, ಪೂಜಾ ಲಧಾ ಸೂರ್ತಿ, ಮತ್ತು ಅನುಕೃತಿ ಪಾಂಡೆಯ ಮೇರಿ ಕ್ರಿಸ್ಮಸ್ ತಂಡಕ್ಕೆ ಅತ್ಯುತ್ತಮ ಕಥೆ ದೊರೆತಿದೆ. ತಾಂತ್ರಿಕ ವಿಭಾಗಗಳಲ್ಲಿ ಕಿಲ್ ಚಿತ್ರಕ್ಕಾಗಿ ರಫೇ ಮಹಮೂದ್ ಅವರಿಗೆ ಅತ್ಯುತ್ತಮ ಛಾಯಾಗ್ರಹಣ ಮತ್ತು ಸುಭಾಷ್ ಸಾಹೂ, ಬೊಲೊಯ್ ಕುಮಾರ್ ಡೊಲೊಯ್ ಹಾಗೂ ರಾಹುಲ್ ಕಾರ್ಪೆ ಅವರಿಗೆ ಅತ್ಯುತ್ತಮ ಧ್ವನಿ ವಿನ್ಯಾಸ ಪ್ರಶಸ್ತಿ ಸಿಕ್ಕಿದೆ.

ಪ್ರಶಸ್ತಿಯೊಂದಿಗೆ ‘ಕಿಲ್’ ಚಿತ್ರದ ನಟ ರಾಘವ್ ಜುಯಾಲ್  PC x.com/IIFA

ಆರ್ಟಿಕಲ್ 370 ಚಿತ್ರಕ್ಕಾಗಿ ಅರ್ಜುನ್ ಧವನ್, ಆದಿತ್ಯ ಧರ್, ಆದಿತ್ಯ ಸುಹಾಸ್ ಜಂಭಾಲೆ ಮತ್ತು ಮೋನಾಲ್ ಥಾಕರ್ ಅವರಿಗೆ ಅತ್ಯುತ್ತಮ ಸಂಭಾಷಣೆ ಪ್ರಶಸ್ತಿ ದೊರೆತಿದೆ.

ವಿಕಿ ಕೌಶಲ್ ಅಭಿನಯದ ‘ಬ್ಯಾಡ್ ನ್ಯೂಝ್’ ಚಿತ್ರದ ‘ತೌಬಾ ತೌಬಾ’ ಹಾಡಿಗಾಗಿ ಬಾಸ್ಕೋ-ಸೀಸರ್ ಅತ್ಯುತ್ತಮ ನೃತ್ಯ ಸಂಯೋಜನೆ ಮತ್ತು ‘ಭೂಲ್ ಭುಲೈಯಾ 3’ ಚಿತ್ರದ ‘ರೆಡ್ ಚಿಲ್ಲೀಸ್’ ವಿಎಫ್ಎಕ್ಸ್ ಅತ್ಯುತ್ತಮ ವಿಎಫ್ಎಕ್ಸ್ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಸಂಗೀತ ವಿಭಾಗಗಳಲ್ಲಿ, ‘ಆರ್ಟಿಕಲ್ 370ರ’ ‘ದುವಾ’ ಹಾಡಿಗಾಗಿ ಜುಬಿನ್ ನೌಟಿಯಾಲ್ ಅತ್ಯುತ್ತಮ ಗಾಯಕ (ಪುರುಷ) ಪ್ರಶಸ್ತಿಯನ್ನು ಪಡೆದಿದ್ದು, ‘ಭೂಲ್ ಭುಲೈಯಾ 3 ರ’ ‘ಅಮಿ ಜೆ ತೋಮರ್ 3.0’ ಹಾಡಿಗಾಗಿ ಶ್ರೇಯಾ ಘೋಷಾಲ್ ಅತ್ಯುತ್ತಮ ಗಾಯಕಿ (ಮಹಿಳೆ) ಪ್ರಶಸ್ತಿಯನ್ನು ಪಡೆದಿದ್ದಾರೆ.

ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ, ಹಿರಿಯ ಚಲನಚಿತ್ರ ನಿರ್ಮಾಪಕ ರಾಕೇಶ್ ರೋಷನ್ ಅವರಿಗೆ ಭಾರತೀಯ ಸಿನಿಮಾದಲ್ಲಿ ಅತ್ಯುತ್ತಮ ಸಾಧನೆಗಾಗಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಅವರನ್ನು ಹಿರಿಯ ನಟಿ ರೇಖಾ ಸನ್ಮಾನಿಸಿದ್ದಾರೆ.

ಬೆಂಗಳೂರು ಚಲನಚಿತ್ರೋತ್ಸವ | ಹಿರಿಯ ನಟಿ ಶಬಾನಾ ಅಝ್ಮಿಗೆ ‘ಜೀವಮಾನ ಸಾಧನೆ ಪ್ರಶಸ್ತಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...