HomeಮುಖಪುಟIIFA 2025 | ವಿವಿಧ ವಿಭಾಗಗಳಲ್ಲಿ 'ಲಾಪತಾ ಲೇಡಿಸ್' ಚಿತ್ರಕ್ಕೆ ಪ್ರಶಸ್ತಿ

IIFA 2025 | ವಿವಿಧ ವಿಭಾಗಗಳಲ್ಲಿ ‘ಲಾಪತಾ ಲೇಡಿಸ್’ ಚಿತ್ರಕ್ಕೆ ಪ್ರಶಸ್ತಿ

- Advertisement -
- Advertisement -

ಪ್ರೇಕ್ಷಕರ ಮತ್ತು ವಿಮರ್ಶಕರ ಮೆಚ್ಚುಗೆ ಪಡೆದ ಕಿರಣ್ ರಾವ್ ನಿರ್ದೇಶನದ ಚಲನಚಿತ್ರ ‘ಲಾಪತಾ ಲೇಡೀಸ್’ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿ (ಐಐಎಫ್‌ಎ-ಐಫಾ) 2025ರಲ್ಲಿ ಹಲವು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಭಾನುವಾರ (ಮಾ.9) ಜೈಪುರದಲ್ಲಿ ನಡೆದ ಸಮಾರಂಭದಲ್ಲಿ ‘ಅತ್ಯುತ್ತಮ ಚಿತ್ರ’ ಮತ್ತು ‘ಅತ್ಯುತ್ತಮ ನಿರ್ದೇಶನ’ ಸೇರಿದಂತೆ 10 ಪ್ರಶಸ್ತಿಗಳನ್ನು ಲಾಪತಾ ಲೇಡಿಸ್ ತಂಡ ಗೆದ್ದುಕೊಂಡಿದೆ.

ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಗೆ ಭಾರತದಿಂದ ಅಧಿಕೃತ ಪ್ರವೇಶ ಪಡೆದಿದ್ದ ಲಾಪತಾ ಲೇಡಿಸ್ ಐಫಾದ ಎಲ್ಲಾ ಪ್ರಮುಖ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ‘ಕಿರಣ್ ರಾವ್ ಅತ್ಯುತ್ತಮ ನಿರ್ದೇಶಕಿ’ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದು, ಚಿತ್ರದಲ್ಲಿ ಕಳೆದುಹೋದ ವಧುವಿನ ಪಾತ್ರ ಮಾಡಿರುವ ನಿತಾಂಶಿ ಗೋಯೆಲ್ ಪ್ರಮುಖ ಪಾತ್ರದಲ್ಲಿ (ಮಹಿಳೆ) ಅತ್ಯುತ್ತಮ ಅಭಿನಯಕ್ಕಾಗಿ ಪ್ರಶಸ್ತಿಯನ್ನು ಪಡೆದಿದ್ದಾರೆ.

ಪ್ರಶಸ್ತಿಯೊಂದಿಗೆ ‘ಲಾಪತಾ ಲೇಡಿಸ್’ ಚಿತ್ರ ತಂಡ  PC : x.com/IIFA

“ಲಾಪತಾ ಲೇಡೀಸ್’ ನಂತಹ ಚಿತ್ರಕ್ಕಾಗಿ ಪ್ರಶಸ್ತಿ ಗೆಲ್ಲುವುದು ಅಪರೂಪದ ಸೌಭಾಗ್ಯ. ಈ ರೀತಿಯ ಚಿತ್ರವನ್ನು ನಿರ್ಮಿಸುವುದೇ ಒಂದು ಅಪರೂಪದ ಸೌಭಾಗ್ಯ. ಈ ರಾತ್ರಿ ಸ್ಮರಣೀಯವಾದದ್ದು” ಎಂದು ಭಾನುವಾರ ರಾತ್ರಿ ಪ್ರಶಸ್ತಿಯನ್ನು ಸ್ವೀಕರಿಸಿದ ಬಳಿಕ ಕಿರಣ್ ರಾವ್ ಹೇಳಿದ್ದಾರೆ.

“ನಿಮ್ಮ ಚಿತ್ರವನ್ನು ನಾವು ಒಮ್ಮೆ ಅಲ್ಲ, ಹಲವು ಬಾರಿ ನೋಡಿದ್ದೇವೆ ಎಂದು ಹೇಳುವ ಜನರ ಪ್ರೀತಿಗೆ ಸರಿಸಾಟಿ ಯಾವುದೂ ಇಲ್ಲ. ಒಬ್ಬರು ಚಲನಚಿತ್ರ ನಿರ್ಮಾಪಕರು ಬದುಕುವುದೇ ಇದಕ್ಕಾಗಿಯೇ. ಆದ್ದರಿಂದ ನಮ್ಮ ಚಲನಚಿತ್ರಗಳನ್ನು ನೋಡಿದ್ದಕ್ಕಾಗಿ ಧನ್ಯವಾದಗಳು” ಎಂದಿದ್ದಾರೆ.

‘ಲಾಪತಾ ಲೇಡಿಸ್’ ಚಿತ್ರದ ನಿರ್ದೇಶಕಿ ಕಿರಣ್ ರಾವ್   PC : x.com/IIFA

ಬಾಲಿವುಡ್ ಸ್ಟಾರ್ ನಟ ಕಾರ್ತಿಕ್ ಆರ್ಯನ್ ಅವರು ‘ಭೂಲ್ ಭುಲೈಯಾ 3′ ಚಿತ್ರಕ್ಕಾಗಿ ಪ್ರಮುಖ ಪಾತ್ರದಲ್ಲಿ (ಪುರುಷ) ಅತ್ಯುತ್ತಮ ಅಭಿನಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಕರಣ್ ಜೋಹರ್ ಅವರೊಂದಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಿದ್ದ ನಟ ಆರ್ಯನ್, “ಸೂಪರ್‌ಸ್ಟಾರ್ ಅಕ್ಷಯ್ ಕುಮಾರ್ ಅವರಿಂದ ಫ್ರಾಂಚೈಸಿಯನ್ನು ವಹಿಸಿಕೊಂಡಾಗ ಜನರು ತನ್ನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು” ಎಂದು ಪ್ರಶಸ್ತಿ ಸ್ವೀಕರಿಸಿದ ಬಳಿಕ ಹೇಳಿದ್ದಾರೆ.

“ಭೂಲ್ ಭುಲೈಯಾ’ ಚಿತ್ರದ ನಟನೆಯು ಸವಾಲುಗಳಿಂದ ಕೂಡಿದ್ದ ಪ್ರಯಾಣವಾಗಿತ್ತು. ಆರಂಭದಿಂದಲೂ, ನಾನು ‘ಭೂಲ್ ಭುಲೈಯಾ 2’ಗೆ ಆಯ್ಕೆಯಾದಾಗ, ಈ ಚಿತ್ರವನ್ನು ಮುಂದುವರೆಸಲು ಸಾಧ್ಯವಾಗುತ್ತದೆಯೇ? ಎಂಬ ಹಲವು ಪ್ರಶ್ನೆಗಳು ನನ್ನಲ್ಲಿ ಎದ್ದಿತ್ತು. ಭೂಲ್ ಭುಲೈಯಾ 3ರ ಚಿತ್ರೀಕರಣದ ಸಮಯದಲ್ಲಿಯೂ ಇದೇ ರೀತಿಯ ಪ್ರಶ್ನೆಗಳು ನನ್ನಲ್ಲಿ ಮೂಡಿದ್ದವು” ಎಂದಿದ್ದಾರೆ.

ಅತ್ಯುತ್ತಮ ನಟ ಪ್ರಶಸ್ತಿ ಪಡೆದ ಕಾರ್ತಿಕ್ ಆರ್ಯನ್  PC : x.com/IIFA

“ಬಾಲ್ಯದಲ್ಲಿ ದೂರದರ್ಶನದಲ್ಲಿ ಐಫಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನೋಡುತ್ತಿದ್ದೆ. ಆದರೆ, ನಾನೇ ಹೋಗಿ ವೇದಿಕೆಯ ಮೇಲೆ ಪ್ರಶಸ್ತಿ ಸ್ವೀಕರಿಸುತ್ತೇನೆ ಎಂದು ಎಂದಿಗೂ ಊಹಿಸಿರಲಿಲ್ಲ” ಎಂದು ನಟಿ ನಿತಾಂಶಿ ಗೋಯೆಲ್ ಭಾವುಕರಾದರು.

“ಆಮಿರ್ ಖಾನ್ ಪ್ರೊಡಕ್ಷನ್ಸ್ ನಿರ್ಮಿಸುವ ಚಿತ್ರದ ಭಾಗವಾಗುವುದು ಯಾರಿಗಾದರೂ ಒಂದು ಕನಸಾಗಿರುತ್ತದೆ. ನನಗೆ ಲಾಪತಾ ಲೇಡಿಸ್‌ನಲ್ಲಿ ನಟಿಸಲು ಅವಕಾಶ ಸಿಕ್ಕಿರುವುದು ದೊಡ್ಡ ಗೌರವ. ಜನರು ನನ್ನ ಮೇಲೆ ಇಟ್ಟಿರುವ ಪ್ರೀತಿ ಹಿಗೆಯೇ ಇರಲಿ” ಎಂದು ಹೇಳಿದ್ದಾರೆ.

ಪ್ರಶಸ್ತಿಯೊಂದಿಗೆ ‘ಲಾಪತಾ ಲೇಡಿಸ್’ ನಟಿ ನಿತಾಂಶಿ ಗೋಯೆಲ್   PC x.com/IIFA

ನಿತಾಂಶಿ ಗೋಯೆಲ್ ಅವರ ಸಹ ನಟರಾದ ರವಿ ಕಿಶನ್ ಮತ್ತು ಪ್ರತಿಭಾ ರಂತ ಕ್ರಮವಾಗಿ ಅತ್ಯುತ್ತಮ ಪೋಷಕ ಪಾತ್ರ (ಪುರುಷ) ಮತ್ತು ಅತ್ಯುತ್ತಮ ಆರಂಭ (ಮಹಿಳೆ) ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಲಾಪತಾ ಲೇಡೀಸ್ ತಾಂತ್ರಿಕ ವಿಭಾಗಗಳಲ್ಲಿ ಹಲವಾರು ಪ್ರಶಸ್ತಿಗಳನ್ನು ಗೆದ್ದಿದೆ, ಅವುಗಳಲ್ಲಿ ಬಿಪ್ಲಬ್ ಗೋಸ್ವಾಮಿಗೆ ಅತ್ಯುತ್ತಮ ಕಥೆ (ಮೂಲ), ಸ್ನೇಹಾ ದೇಸಾಯಿಗೆ ಅತ್ಯುತ್ತಮ ಚಿತ್ರಕಥೆ ಮತ್ತು ಜಬೀನ್ ಮರ್ಚೆಂಟ್‌ಗೆ ಅತ್ಯುತ್ತಮ ಸಂಕಲನ ಪ್ರಶಸ್ತಿಗಳು ಸೇರಿವೆ.

‘ಸಜ್ನಿ’ ಹಾಡಿಗೆ ಪ್ರಶಾಂತ್ ಪಾಂಡೆ ಅತ್ಯುತ್ತಮ ಸಾಹಿತ್ಯ ಮತ್ತು ರಾಮ್ ಸಂಪತ್ ಅತ್ಯುತ್ತಮ ಸಂಗೀತ ಪ್ರಶಸ್ತಿಯನ್ನು ಪಡೆದ್ದಾರೆ. ‘ಶೈತಾನ್’ ಚಿತ್ರದ ಅಭಿನಯಕ್ಕಾಗಿ ನಟಿ ಜಾನಕಿ ಬೋಡಿವಾಲಾ ಅತ್ಯುತ್ತಮ ಪೋಷಕ ಪಾತ್ರ (ಮಹಿಳೆ) ಪ್ರಶಸ್ತಿಯನ್ನು ಪಡೆದಿದ್ದು, ‘ಕಿಲ್’ ಚಿತ್ರದ ಪಾತ್ರಕ್ಕಾಗಿ ರಾಘವ್ ಜುಯಾಲ್ ಅತ್ಯುತ್ತಮ ನಕಾರಾತ್ಮಕ ಪಾತ್ರದ (Negative Role ) ಅಭಿನಯ ಪ್ರಶಸ್ತಿಯನ್ನು ಗಳಿಸಿದ್ದಾರೆ.

ಚೊಚ್ಚಲ (ಡೆಬ್ಯೂ) ವಿಭಾಗಗಳಲ್ಲಿ, ಮಡ್ಗಾಂವ್ ಎಕ್ಸ್‌ಪ್ರೆಸ್‌ಗಾಗಿ ಕುನಾಲ್ ಕೆಮ್ಮು ಅತ್ಯುತ್ತಮ ಚೊಚ್ಚಲ ನಿರ್ದೇಶನ ಪ್ರಶಸ್ತಿಯನ್ನು ಗೆದ್ದರೆ, ಕಿಲ್ ಚಿತ್ರದ ಪಾತ್ರಕ್ಕಾಗಿ ಲಕ್ಷ್ಯ ಲಾಲ್ವಾನಿ ಅತ್ಯುತ್ತಮ ಚೊಚ್ಚಲ (ಪುರುಷ) ಪ್ರಶಸ್ತಿಯನ್ನು ಪಡೆದಿದ್ದಾರೆ.

‘ಅಡಾಪ್ಟೇಶನ್’ ಚಿತ್ರಕ್ಕಾಗಿ ಶ್ರೀರಾಮ್ ರಾಘವನ್, ಅರಿಜಿತ್ ಬಿಸ್ವಾಸ್, ಪೂಜಾ ಲಧಾ ಸೂರ್ತಿ, ಮತ್ತು ಅನುಕೃತಿ ಪಾಂಡೆಯ ಮೇರಿ ಕ್ರಿಸ್ಮಸ್ ತಂಡಕ್ಕೆ ಅತ್ಯುತ್ತಮ ಕಥೆ ದೊರೆತಿದೆ. ತಾಂತ್ರಿಕ ವಿಭಾಗಗಳಲ್ಲಿ ಕಿಲ್ ಚಿತ್ರಕ್ಕಾಗಿ ರಫೇ ಮಹಮೂದ್ ಅವರಿಗೆ ಅತ್ಯುತ್ತಮ ಛಾಯಾಗ್ರಹಣ ಮತ್ತು ಸುಭಾಷ್ ಸಾಹೂ, ಬೊಲೊಯ್ ಕುಮಾರ್ ಡೊಲೊಯ್ ಹಾಗೂ ರಾಹುಲ್ ಕಾರ್ಪೆ ಅವರಿಗೆ ಅತ್ಯುತ್ತಮ ಧ್ವನಿ ವಿನ್ಯಾಸ ಪ್ರಶಸ್ತಿ ಸಿಕ್ಕಿದೆ.

ಪ್ರಶಸ್ತಿಯೊಂದಿಗೆ ‘ಕಿಲ್’ ಚಿತ್ರದ ನಟ ರಾಘವ್ ಜುಯಾಲ್  PC x.com/IIFA

ಆರ್ಟಿಕಲ್ 370 ಚಿತ್ರಕ್ಕಾಗಿ ಅರ್ಜುನ್ ಧವನ್, ಆದಿತ್ಯ ಧರ್, ಆದಿತ್ಯ ಸುಹಾಸ್ ಜಂಭಾಲೆ ಮತ್ತು ಮೋನಾಲ್ ಥಾಕರ್ ಅವರಿಗೆ ಅತ್ಯುತ್ತಮ ಸಂಭಾಷಣೆ ಪ್ರಶಸ್ತಿ ದೊರೆತಿದೆ.

ವಿಕಿ ಕೌಶಲ್ ಅಭಿನಯದ ‘ಬ್ಯಾಡ್ ನ್ಯೂಝ್’ ಚಿತ್ರದ ‘ತೌಬಾ ತೌಬಾ’ ಹಾಡಿಗಾಗಿ ಬಾಸ್ಕೋ-ಸೀಸರ್ ಅತ್ಯುತ್ತಮ ನೃತ್ಯ ಸಂಯೋಜನೆ ಮತ್ತು ‘ಭೂಲ್ ಭುಲೈಯಾ 3’ ಚಿತ್ರದ ‘ರೆಡ್ ಚಿಲ್ಲೀಸ್’ ವಿಎಫ್ಎಕ್ಸ್ ಅತ್ಯುತ್ತಮ ವಿಎಫ್ಎಕ್ಸ್ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಸಂಗೀತ ವಿಭಾಗಗಳಲ್ಲಿ, ‘ಆರ್ಟಿಕಲ್ 370ರ’ ‘ದುವಾ’ ಹಾಡಿಗಾಗಿ ಜುಬಿನ್ ನೌಟಿಯಾಲ್ ಅತ್ಯುತ್ತಮ ಗಾಯಕ (ಪುರುಷ) ಪ್ರಶಸ್ತಿಯನ್ನು ಪಡೆದಿದ್ದು, ‘ಭೂಲ್ ಭುಲೈಯಾ 3 ರ’ ‘ಅಮಿ ಜೆ ತೋಮರ್ 3.0’ ಹಾಡಿಗಾಗಿ ಶ್ರೇಯಾ ಘೋಷಾಲ್ ಅತ್ಯುತ್ತಮ ಗಾಯಕಿ (ಮಹಿಳೆ) ಪ್ರಶಸ್ತಿಯನ್ನು ಪಡೆದಿದ್ದಾರೆ.

ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ, ಹಿರಿಯ ಚಲನಚಿತ್ರ ನಿರ್ಮಾಪಕ ರಾಕೇಶ್ ರೋಷನ್ ಅವರಿಗೆ ಭಾರತೀಯ ಸಿನಿಮಾದಲ್ಲಿ ಅತ್ಯುತ್ತಮ ಸಾಧನೆಗಾಗಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಅವರನ್ನು ಹಿರಿಯ ನಟಿ ರೇಖಾ ಸನ್ಮಾನಿಸಿದ್ದಾರೆ.

ಬೆಂಗಳೂರು ಚಲನಚಿತ್ರೋತ್ಸವ | ಹಿರಿಯ ನಟಿ ಶಬಾನಾ ಅಝ್ಮಿಗೆ ‘ಜೀವಮಾನ ಸಾಧನೆ ಪ್ರಶಸ್ತಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...