Homeಕರ್ನಾಟಕಐಐಎಂ ಬೆಂಗಳೂರು | ಜಾತಿ ಆಧಾರಿತ ತಾರತಮ್ಯದ ವಿರುದ್ಧ ಪ್ರತಿಭಟನೆ

ಐಐಎಂ ಬೆಂಗಳೂರು | ಜಾತಿ ಆಧಾರಿತ ತಾರತಮ್ಯದ ವಿರುದ್ಧ ಪ್ರತಿಭಟನೆ

- Advertisement -
- Advertisement -

ಪ್ರತಿಷ್ಠಿತ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು(IIM-B)ನಲ್ಲಿ ಜಾತಿ ಆಧಾರಿತ ತಾರತಮ್ಯದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಗಿದೆ. ಸಂಸ್ಥೆಯ ನಿರ್ದೇಶಕರ ರಾಜೀನಾಮೆಗೆ ಒತ್ತಾಯಿಸಿದ ಪ್ರತಿಭಟನಾಕಾರರು, ಸಂಸ್ಥೆಯು ಇಕ್ವಿಟಿ ಮತ್ತು ಸೇರ್ಪಡೆಯ ಸಾಂವಿಧಾನಿಕ ಆದೇಶಗಳನ್ನು ಎತ್ತಿಹಿಡಿಯಲು ವಿಫಲವಾಗಿದೆ ಎಂದು ಅವರು ಆರೋಪಿಸಿದ್ದಾರೆ. ಐಐಎಂ ಬೆಂಗಳೂರು

ಅಖಿಲ ಭಾರತ OBC ಸ್ಟೂಡೆಂಟ್ಸ್ ಅಸೋಸಿಯೇಷನ್ ​​(AIOBCSA), ಡಾ ಬಿಆರ್ ಅಂಬೇಡ್ಕರ್ ಅಸೋಸಿಯೇಷನ್ ​​ಆಫ್ ಇಂಜಿನಿಯರ್ಸ್ (BANAE), ಮತ್ತು OBC ಫೆಡರೇಶನ್ ಆಫ್ ಇಂಡಿಯಾದಿಂದ ಆಯೋಜಿಸಲಾದ ಪ್ರತಿಭಟನೆಯು ತಳಮಟ್ಟದ ಸಮುದಾಯಗಳು ಮತ್ತು ಪ್ರಗತಿಪರ ಸಂಘಟನೆಗಳ ಪ್ರತಿನಿಧಿಗಳನ್ನು ಒಟ್ಟುಗೂಡಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಭಾರತದ ಉನ್ನತ ಶೈಕ್ಷಣಿಕ ಸಂಸ್ಥೆಗಳಲ್ಲಿ ದಲಿತ ಮತ್ತು ಹಿಂದುಳಿದ ವರ್ಗದವರನ್ನು ವ್ಯವಸ್ಥಿತವಾದ ಹೊರಗಿಡಲಾಗುತ್ತಿದೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು, ಶಿಕ್ಷಣ ಕೇಂದ್ರದಲ್ಲಿ ರಚನಾತ್ಮಕ ಸುಧಾರಣೆಗಳನ್ನು ತರಬೇಕು ಎಂದು ಆಗ್ರಹಿಸಿದ್ದಾರೆ.

ಐಐಎಂ ಬೆಂಗಳೂರು ನಿರ್ದೇಶಕ ರಿಷಿಕೇಶ ಟಿ ಕೃಷ್ಣನ್ ಅವರು ಮೀಸಲಾತಿ ನೀತಿಗಳನ್ನು ಉಲ್ಲಂಘಿಸಿದ್ದಾರೆ ಮತ್ತು ಕ್ಯಾಂಪಸ್‌ನಲ್ಲಿ ವೈವಿಧ್ಯತೆ ಮತ್ತು ದಾಖಲಾತಿ ಸಮಸ್ಯೆಗಳನ್ನು ಪರಿಹರಿಸಲು ವಿಫಲರಾಗಿದ್ದಾರೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ. IIM-B ನಿರಂತರವಾಗಿ ಮೀಸಲಾತಿಯ ಸಾಂವಿಧಾನಿಕ ಆದೇಶಗಳನ್ನು ಕಡೆಗಣಿಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಐಐಎಂ ಬೆಂಗಳೂರಿನಲ್ಲಿ ಮಂಜೂರಾದ 120 ಹುದ್ದೆಗಳಿಗೆ ಭರ್ತಿಯಾಗಿರುವ 110 ಅಧ್ಯಾಪಕರ ಹುದ್ದೆಗಳಲ್ಲಿ ಕೇವಲ 16 ಮಂದಿ ಮಾತ್ರ ಹಿಂದುಳಿದ ಸಮುದಾಯಗಳ ಜನರು ಇದ್ದಾರೆ ಎಂದು ಆರ್‌ಟಿಐ ಮಾಹಿತಿ ಬಹಿರಂಗಪಡಿಸಿದ್ದಾರೆ. ಇದರಲ್ಲಿ ಐದು ಜನರು ಪರಿಶಿಷ್ಟ ಜಾತಿಯಿಂದ (ಎಸ್‌ಸಿ), ಒಬ್ಬರು ಪರಿಶಿಷ್ಟ ಪಂಗಡದಿಂದ (ಎಸ್‌ಟಿ) ಮತ್ತು ಹತ್ತು ಜನರು ಇತರ ಹಿಂದುಳಿದ ವರ್ಗ (ಒಬಿಸಿ) ಸಮುದಾಯಕ್ಕೆ ಸೇರಿದವರಾಗಿದ್ದಾರೆ ಎಂದು ಆರ್‌ಟಿಐ ಮಾಹಿತಿ ಹೇಳಿದೆ.

ಉನ್ನತ ಶಿಕ್ಷಣದಲ್ಲಿ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಸಾಂವಿಧಾನಿಕ ಆದೇಶಗಳನ್ನು ಎತ್ತಿಹಿಡಿಯುವಲ್ಲಿ ಸಂಸ್ಥೆಯು ವಿಫಲವಾಗಿದ್ದು, ತಳಸಮುದಾಯಕ್ಕೆ ಕಡಿಮೆ ಪ್ರಾತಿನಿಧ್ಯವನ್ನು ನೀಡಲಾಗಿದೆ ಎಂದು ಪ್ರತಿಭಟನಾಕಾರರು ಎತ್ತಿ ತೋರಿಸಿದ್ದಾರೆ. ಎಲ್ಲಾ ಅಧ್ಯಾಪಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿ ವರ್ಗಗಳಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಮೀಸಲಾತಿ ನೀತಿಗಳನ್ನು ತಕ್ಷಣವೇ ಜಾರಿಗೆ ತರಬೇಕೆಂದು ಅವರು ಒತ್ತಾಯಿಸಿದ್ದಾರೆ.

ಎಐಒಬಿಸಿಎಸ್‌ಎ ರಾಷ್ಟ್ರೀಯ ಅಧ್ಯಕ್ಷ ಕಿರಣ್ ಕುಮಾರ್ ಗೌಡ ಮಾತನಾಡಿ, ವೈವಿಧ್ಯತೆ ಮತ್ತು ಒಳಗೊಳ್ಳುವಿಕೆ ಇರಬೇಕು ಎಂದು ಪ್ರತಿಪಾದಿಸುವ ಅಧ್ಯಾಪಕರು ಆಡಳಿತದಿಂದ ಕಿರುಕುಳವನ್ನು ಎದುರಿಸುತ್ತಿದ್ದಾರೆ. ಅಂತಹ ನಿದರ್ಶನಗಳು, ಹಿಂದುಳಿದ ಸಮುದಾಯಗಳಿಗೆ ಪ್ರತಿಕೂಲ ವಾತಾವರಣವನ್ನು ಸೃಷ್ಟಿಸುತ್ತವೆ. ಜೊತೆಗೆ ಅದು ಅವರ ಹೊರಗಿಡುವಿಕೆ ಮತ್ತು ತಾರತಮ್ಯವನ್ನು ಮತ್ತಷ್ಟು ಶಾಶ್ವತಗೊಳಿಸುತ್ತವೆ ಎಂದು ಅವರು ಹೇಳಿದ್ದಾರೆ.

ಅಷ್ಟೆ ಅಲ್ಲದೆ, ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಅನೇಕ ಅಧ್ಯಾಪಕರು ಸಂಸ್ಥೆಯಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. “ಆದರೆ ಅವರು ಗುರಿಯಾಗುವ ಭಯದಿಂದ ಮುಂದೆ ಬರಲು ಹಿಂಜರಿಯುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ, ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡುವಂತೆ ಪ್ರಧಾನಿ ಮೋದಿಗೆ ಐಐಎಂ ವಿದ್ಯಾರ್ಥಿಗಳು, ಅಧ್ಯಾಪಕರ ಪತ್ರ

ದ್ವೇಷ ಭಾಷಣ, ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡುವಂತೆ ಪ್ರಧಾನಿ ಮೋದಿಗೆ ಐಐಎಂ ವಿದ್ಯಾರ್ಥಿಗಳು, ಅಧ್ಯಾಪಕರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...