Homeಕರ್ನಾಟಕಐಐಎಂಬಿ ಜಾತಿ ದೌರ್ಜನ್ಯ - ಅಧ್ಯಾಪಕರ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

ಐಐಎಂಬಿ ಜಾತಿ ದೌರ್ಜನ್ಯ – ಅಧ್ಯಾಪಕರ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

- Advertisement -
- Advertisement -

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್-ಬೆಂಗಳೂರಿನ (ಐಐಎಂಬಿ) ಡೀನ್, ನಿರ್ದೇಶಕ ಮತ್ತು ಅಧ್ಯಾಪಕರ ವಿರುದ್ಧ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಆರಂಭಿಸಿದ ವಿಚಾರಣಾ ಪ್ರಕ್ರಿಯೆಗಳಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ ಎಂದು TNIE ವರದಿ ಮಾಡಿದೆ. ಐಐಎಂಬಿಯ ಮಾರ್ಕೆಟಿಂಗ್‌ನ ಸಹ ಪ್ರಾಧ್ಯಾಪಕ ಡಾ.ಗೋಪಾಲ್ ದಾಸ್ ಅವರಿಗೆ ಜಾತಿ ಆಧಾರಿತ ಅವಮಾನ ಮಾಡಲಾಗಿದೆ ಮತ್ತು ದೌರ್ಜನ್ಯ ಎಸಲಾಗಿದೆ ಎಂಬ ಆರೋಪದ ಬಗ್ಗೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ ವಿಚಾರಣೆ ಪ್ರಾರಂಭಿಸಿತ್ತು. ಐಐಎಂಬಿ ಜಾತಿ ದೌರ್ಜನ್ಯ

ನಿರ್ದೇಶಕ ಪ್ರೊ. ಋಷಿಕೇಶ ಟಿ.ಕೃಷ್ಣನ್‌, ಡೀನ್‌ ಪ್ರಾಧ್ಯಾಪಕ ಪ್ರೊ.ದಿನೇಶ್ ಕುಮಾರ್ ಮತ್ತು ಇತರ ಅಧ್ಯಾಪಕರಾದ ಪ್ರೊ. ಶ್ರೀಲತಾ ಜೊನ್ನಲಗೆದ್ದ, ಪ್ರೊ. ರಾಹುಲ್ ಡಿ, ಪ್ರೊ. ಆಶಿಸ್ ಮಿಶ್ರಾ ಮತ್ತು ಪ್ರೊ. ಚೇತನ್ ಸುಬ್ರಮಣಿಯನ್ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಈ ಆದೇಶ ನೀಡಲಾಗಿದೆ. ಮತ್ತೊಬ್ಬ ಅರ್ಜಿದಾರರಾದ ಐಐಎಂಬಿಯ ಆಡಳಿತ ಮಂಡಳಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಅವರ ವಿಚಾರಣೆಗೆ ಜುಲೈ 18ರಂದು ತಡೆಯಾಜ್ಞೆ ನೀಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಎಲ್ಲಾ ಅರ್ಜಿದಾರರು ಗೋಪಾಲ್ ದಾಸ್ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ಡಿಸಿಆರ್‌ಇ ಪ್ರಾರಂಭಿಸಿದ ಸಂಪೂರ್ಣ ಪ್ರಕ್ರಿಯೆಗಳನ್ನು ಪ್ರಶ್ನಿಸಿದ್ದಾರೆ. ಮುಂದಿನ ವಿಚಾರಣೆಯನ್ನು ಜನವರಿ 2025 ರ ಎರಡನೇ ವಾರಕ್ಕೆ ಕೋರ್ಟ್ ಮುಂದೂಡಿದೆ. ಏತನ್ಮಧ್ಯೆ, ಇದೇ ವಿಷಯಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್‌ಐಆರ್‌ ಪ್ರಶ್ನಿಸಿ  ನಿರ್ದೇಶಕರು ಮತ್ತು ಇತರರು ಇತ್ತೀಚೆಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ಇನ್ನಷ್ಟೇ ನಡೆಯಬೇಕಿದೆ. ಐಐಎಂಬಿ ಜಾತಿ ದೌರ್ಜನ್ಯ

ಏನಿದು ಪ್ರಕರಣ?

ಜಾಗತಿಕವಾಗಿ ಗುರುತಿಸಲ್ಪಟ್ಟಿರುವ ದಲಿತ ವಿದ್ವಾಂಸರಾದ ಅಸೋಸಿಯೇಟ್ ಪ್ರೊಫೆಸರ್ ಗೋಪಾಲ್ ದಾಸ್ ಅವರು ಐಐಎಂ ಬೆಂಗಳೂರಿನಲ್ಲಿ ನಡೆಯುತ್ತಿರುವ ಜಾತಿ ಆಧಾರಿತ ದೌರ್ಜನ್ಯದ ಕುರಿತು
2024ರ ಜನವರಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದರು.

ಪತ್ರದಲ್ಲಿ ಅವರು ಆರೋಪಗಳನ್ನು ಮಾಡಿದ್ದು, ಮುಖ್ಯವಾಗಿ, ಸಾಂಸ್ಥಿಕ ಚಟುವಟಿಕೆಗಳಿಂದ ಹೊರಗಿಡುವುದು, ಸಂಪನ್ಮೂಲಗಳನ್ನು ಪಡೆಯಲು ತಡೆ ಒಡ್ಡುವುದು ಸೇರಿದಂತೆ ಐಐಎಂಬಿಯಲ್ಲಿ ನಡೆಯುತ್ತಿರುವ ಜಾತಿ ಆಧಾರಿತ ದೌರ್ಜನ್ಯಗಳ ಕುರಿತು ಪ್ರೊಫೆಸರ್ ಗೋಪಾಲ್ ದಾಸ್ ಅವರು ತನ್ನ ಪತ್ರದಲ್ಲಿ ರಾಷ್ಟ್ರಪತಿಗೆ ವಿವರಿಸಿದ್ದರು. ಬಳಿಕ ರಾಷ್ಟ್ರಪತಿ ಕಚೇರಿಯ ನಿರ್ದೇಶನದ ಮೇರೆಗೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಮಾರ್ಚ್‌ನಲ್ಲಿ ಜಾತಿ ದೌರ್ಜನ್ಯದ ಕುರಿತು ತನಿಖೆ ಕೈಗೊಂಡಿತ್ತು.

ಮೇ ತಿಂಗಳಲ್ಲಿ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್ ಅವರಿಗೆ ದೂರು ಸಲ್ಲಿಸಿದ್ದ ಗೋಪಾಲ್ ದಾಸ್ ಅವರು, ಡಿಸಿಆರ್‌ಇ ತನಿಖೆ ಪ್ರಾರಂಭಿಸಿದ ನಂತರ ಕಿರುಕುಳ ಹೆಚ್ಚಾಗಿದೆ ಎಂದು ಆರೋಪಿಸಿದ್ದರು.

ಈ ನಡುವೆ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅರುಣ್ ಚಕ್ರವರ್ತಿ ನೇತೃತ್ವದ ಡಿಸಿಆರ್‌ಇ ತನಿಖೆಯು ನವೆಂಬರ್‌ನಲ್ಲಿ ಮುಕ್ತಾಯಗೊಂಡಿತ್ತು. ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಿದ್ದ ತನಿಖಾ ವರದಿಯಲ್ಲಿ ಗೋಪಾಲ್ ದಾಸ್ ಅವರ ಮೇಲಿನ ಜಾತಿ ಆಧಾರಿತ ದೌರ್ಜನ್ಯ ಮತ್ತು ಅವರನ್ನು ಕೆಲಸದ ಸ್ಥಳದಿಂದ ಹೊರಗಿಡಲು ಪ್ರಯತ್ನಿಸಿದರ ಕುರಿತು ಮಹತ್ವದ ಸಾಕ್ಷ್ಯವನ್ನು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಸಂಸ್ಥೆಯೊಳಗೆ ಹರಿದಾಡಿದ ಸಾಮೂಹಿಕ ಈ-ಮೇಲ್‌ನಲ್ಲಿ ನಿರ್ದೇಶಕ ರಿಷಿಕೇಶ್ ಕೃಷ್ಣನ್ ಅವರು ಗೋಪಾಲ್ ದಾಸ್ ಅವರ ಜಾತಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ್ದಾರೆ ಎಂದು ವರದಿ ಆರೋಪಿಸಿತ್ತು. ರಿಷಿಕೇಶ್ ಮತ್ತು ಡೀನ್ ದಿನೇಶ್ ಕುಮಾರ್ ಅವರು ವೃತ್ತಿಪರ ಚಟುವಟಿಕೆಗಳಲ್ಲಿ ಗೋಪಾಲ್ ದಾಸ್ ಅವರಿಗೆ ಸಮಾನ ಅವಕಾಶಗಳನ್ನು ನಿರಾಕರಿಸಿದ್ದಾರೆ ಎಂದು ವರದಿ ಹೇಳಿತ್ತು. ಅಲ್ಲದೆ, ಎಸ್‌ಸಿ ಮತ್ತು ಎಸ್‌ಟಿ ಉದ್ಯೋಗಿಗಳ ಕುಂದುಕೊರತೆಗಳನ್ನು ಪರಿಹರಿಸಲು ಸಾಂಸ್ಥಿಕ ಕಾರ್ಯವಿಧಾನವನ್ನು ಸ್ಥಾಪಿಸುವ ಶಾಸನಬದ್ಧ ಜವಾಬ್ದಾರಿಗಳನ್ನು ಅನುಸರಿಸಲು ಐಐಎಂ-ಬಿ ವಿಫಲವಾಗಿದೆ ಎಂದು ವರದಿಯು ಎತ್ತಿ ತೋರಿಸಿತ್ತು.

ವರದಿ ಆಧರಿಸಿ, ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ಡಿಸೆಂಬರ್ 9ರಂದು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಐಐಎಂ-ಬಿ ಅಧಿಕಾರಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿತ್ತು.

ಇದರ ನಂತರ, ಐಐಎಂ-ಬಿಯ ನಿರ್ದೇಶಕ ರಿಷಿಕೇಶ್ ಟಿ ಕೃಷ್ಣನ್, ಹಿರಿಯ ಅಧ್ಯಾಪಕ ಹಾಗೂ ಡೀನ್ ಡಾ.ದಿನೇಶ್ ಕುಮಾರ್, ಪ್ರಾಧ್ಯಾಪಕರಾದ ಸೈನೇಶ್ ಜಿ, ಶ್ರೀನಿವಾಸ್ ಪ್ರಕಾ, ಚೇತನ್ ಸುಬ್ರಮಣಿಯನ್, ಆಶಿಶ್ ಮಿಶ್ರಾ, ಶ್ರೀಲತಾ ಜೋನಲಗೇಡು ಮತ್ತು ರಾಹುಲ್ ದೆ ವಿರುದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(1)(ಆರ್) (ಎಸ್‌ಸಿ/ಎಸ್‌ಟಿ ವ್ಯಕ್ತಿಯನ್ನು ಅವಮಾನಿಸುವುದು ಅಥವಾ ಬೆದರಿಸುವುದು) ಮತ್ತು 3(1)(ಎಸ್‌) (ಎಸ್‌ಸಿ/ಎಸ್‌ಟಿ ವ್ಯಕ್ತಿಯನ್ನು ಜಾತಿ ಹೆಸರಿನಿಂದ ನಿಂದಿಸುವುದು) ಅಡಿಯಲ್ಲಿ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ಇದನ್ನೂ ಓದಿ: ಬೆಂಗಳೂರು ಐಐಎಂನಲ್ಲಿ ಜಾತಿ ದೌರ್ಜನ್ಯ : ನಿರ್ದೇಶಕ, 7 ಪ್ರಾಧ್ಯಾಪಕರ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು ಐಐಎಂನಲ್ಲಿ ಜಾತಿ ದೌರ್ಜನ್ಯ : ನಿರ್ದೇಶಕ, 7 ಪ್ರಾಧ್ಯಾಪಕರ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...