Homeಕರ್ನಾಟಕಐಐಎಂಬಿ ಜಾತಿ ದೌರ್ಜನ್ಯ - ಅಧ್ಯಾಪಕರ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

ಐಐಎಂಬಿ ಜಾತಿ ದೌರ್ಜನ್ಯ – ಅಧ್ಯಾಪಕರ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

- Advertisement -
- Advertisement -

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್-ಬೆಂಗಳೂರಿನ (ಐಐಎಂಬಿ) ಡೀನ್, ನಿರ್ದೇಶಕ ಮತ್ತು ಅಧ್ಯಾಪಕರ ವಿರುದ್ಧ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಆರಂಭಿಸಿದ ವಿಚಾರಣಾ ಪ್ರಕ್ರಿಯೆಗಳಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ ಎಂದು TNIE ವರದಿ ಮಾಡಿದೆ. ಐಐಎಂಬಿಯ ಮಾರ್ಕೆಟಿಂಗ್‌ನ ಸಹ ಪ್ರಾಧ್ಯಾಪಕ ಡಾ.ಗೋಪಾಲ್ ದಾಸ್ ಅವರಿಗೆ ಜಾತಿ ಆಧಾರಿತ ಅವಮಾನ ಮಾಡಲಾಗಿದೆ ಮತ್ತು ದೌರ್ಜನ್ಯ ಎಸಲಾಗಿದೆ ಎಂಬ ಆರೋಪದ ಬಗ್ಗೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ ವಿಚಾರಣೆ ಪ್ರಾರಂಭಿಸಿತ್ತು. ಐಐಎಂಬಿ ಜಾತಿ ದೌರ್ಜನ್ಯ

ನಿರ್ದೇಶಕ ಪ್ರೊ. ಋಷಿಕೇಶ ಟಿ.ಕೃಷ್ಣನ್‌, ಡೀನ್‌ ಪ್ರಾಧ್ಯಾಪಕ ಪ್ರೊ.ದಿನೇಶ್ ಕುಮಾರ್ ಮತ್ತು ಇತರ ಅಧ್ಯಾಪಕರಾದ ಪ್ರೊ. ಶ್ರೀಲತಾ ಜೊನ್ನಲಗೆದ್ದ, ಪ್ರೊ. ರಾಹುಲ್ ಡಿ, ಪ್ರೊ. ಆಶಿಸ್ ಮಿಶ್ರಾ ಮತ್ತು ಪ್ರೊ. ಚೇತನ್ ಸುಬ್ರಮಣಿಯನ್ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಈ ಆದೇಶ ನೀಡಲಾಗಿದೆ. ಮತ್ತೊಬ್ಬ ಅರ್ಜಿದಾರರಾದ ಐಐಎಂಬಿಯ ಆಡಳಿತ ಮಂಡಳಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಅವರ ವಿಚಾರಣೆಗೆ ಜುಲೈ 18ರಂದು ತಡೆಯಾಜ್ಞೆ ನೀಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಎಲ್ಲಾ ಅರ್ಜಿದಾರರು ಗೋಪಾಲ್ ದಾಸ್ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ಡಿಸಿಆರ್‌ಇ ಪ್ರಾರಂಭಿಸಿದ ಸಂಪೂರ್ಣ ಪ್ರಕ್ರಿಯೆಗಳನ್ನು ಪ್ರಶ್ನಿಸಿದ್ದಾರೆ. ಮುಂದಿನ ವಿಚಾರಣೆಯನ್ನು ಜನವರಿ 2025 ರ ಎರಡನೇ ವಾರಕ್ಕೆ ಕೋರ್ಟ್ ಮುಂದೂಡಿದೆ. ಏತನ್ಮಧ್ಯೆ, ಇದೇ ವಿಷಯಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್‌ಐಆರ್‌ ಪ್ರಶ್ನಿಸಿ  ನಿರ್ದೇಶಕರು ಮತ್ತು ಇತರರು ಇತ್ತೀಚೆಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ಇನ್ನಷ್ಟೇ ನಡೆಯಬೇಕಿದೆ. ಐಐಎಂಬಿ ಜಾತಿ ದೌರ್ಜನ್ಯ

ಏನಿದು ಪ್ರಕರಣ?

ಜಾಗತಿಕವಾಗಿ ಗುರುತಿಸಲ್ಪಟ್ಟಿರುವ ದಲಿತ ವಿದ್ವಾಂಸರಾದ ಅಸೋಸಿಯೇಟ್ ಪ್ರೊಫೆಸರ್ ಗೋಪಾಲ್ ದಾಸ್ ಅವರು ಐಐಎಂ ಬೆಂಗಳೂರಿನಲ್ಲಿ ನಡೆಯುತ್ತಿರುವ ಜಾತಿ ಆಧಾರಿತ ದೌರ್ಜನ್ಯದ ಕುರಿತು
2024ರ ಜನವರಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದರು.

ಪತ್ರದಲ್ಲಿ ಅವರು ಆರೋಪಗಳನ್ನು ಮಾಡಿದ್ದು, ಮುಖ್ಯವಾಗಿ, ಸಾಂಸ್ಥಿಕ ಚಟುವಟಿಕೆಗಳಿಂದ ಹೊರಗಿಡುವುದು, ಸಂಪನ್ಮೂಲಗಳನ್ನು ಪಡೆಯಲು ತಡೆ ಒಡ್ಡುವುದು ಸೇರಿದಂತೆ ಐಐಎಂಬಿಯಲ್ಲಿ ನಡೆಯುತ್ತಿರುವ ಜಾತಿ ಆಧಾರಿತ ದೌರ್ಜನ್ಯಗಳ ಕುರಿತು ಪ್ರೊಫೆಸರ್ ಗೋಪಾಲ್ ದಾಸ್ ಅವರು ತನ್ನ ಪತ್ರದಲ್ಲಿ ರಾಷ್ಟ್ರಪತಿಗೆ ವಿವರಿಸಿದ್ದರು. ಬಳಿಕ ರಾಷ್ಟ್ರಪತಿ ಕಚೇರಿಯ ನಿರ್ದೇಶನದ ಮೇರೆಗೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಮಾರ್ಚ್‌ನಲ್ಲಿ ಜಾತಿ ದೌರ್ಜನ್ಯದ ಕುರಿತು ತನಿಖೆ ಕೈಗೊಂಡಿತ್ತು.

ಮೇ ತಿಂಗಳಲ್ಲಿ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್ ಅವರಿಗೆ ದೂರು ಸಲ್ಲಿಸಿದ್ದ ಗೋಪಾಲ್ ದಾಸ್ ಅವರು, ಡಿಸಿಆರ್‌ಇ ತನಿಖೆ ಪ್ರಾರಂಭಿಸಿದ ನಂತರ ಕಿರುಕುಳ ಹೆಚ್ಚಾಗಿದೆ ಎಂದು ಆರೋಪಿಸಿದ್ದರು.

ಈ ನಡುವೆ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅರುಣ್ ಚಕ್ರವರ್ತಿ ನೇತೃತ್ವದ ಡಿಸಿಆರ್‌ಇ ತನಿಖೆಯು ನವೆಂಬರ್‌ನಲ್ಲಿ ಮುಕ್ತಾಯಗೊಂಡಿತ್ತು. ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಿದ್ದ ತನಿಖಾ ವರದಿಯಲ್ಲಿ ಗೋಪಾಲ್ ದಾಸ್ ಅವರ ಮೇಲಿನ ಜಾತಿ ಆಧಾರಿತ ದೌರ್ಜನ್ಯ ಮತ್ತು ಅವರನ್ನು ಕೆಲಸದ ಸ್ಥಳದಿಂದ ಹೊರಗಿಡಲು ಪ್ರಯತ್ನಿಸಿದರ ಕುರಿತು ಮಹತ್ವದ ಸಾಕ್ಷ್ಯವನ್ನು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಸಂಸ್ಥೆಯೊಳಗೆ ಹರಿದಾಡಿದ ಸಾಮೂಹಿಕ ಈ-ಮೇಲ್‌ನಲ್ಲಿ ನಿರ್ದೇಶಕ ರಿಷಿಕೇಶ್ ಕೃಷ್ಣನ್ ಅವರು ಗೋಪಾಲ್ ದಾಸ್ ಅವರ ಜಾತಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ್ದಾರೆ ಎಂದು ವರದಿ ಆರೋಪಿಸಿತ್ತು. ರಿಷಿಕೇಶ್ ಮತ್ತು ಡೀನ್ ದಿನೇಶ್ ಕುಮಾರ್ ಅವರು ವೃತ್ತಿಪರ ಚಟುವಟಿಕೆಗಳಲ್ಲಿ ಗೋಪಾಲ್ ದಾಸ್ ಅವರಿಗೆ ಸಮಾನ ಅವಕಾಶಗಳನ್ನು ನಿರಾಕರಿಸಿದ್ದಾರೆ ಎಂದು ವರದಿ ಹೇಳಿತ್ತು. ಅಲ್ಲದೆ, ಎಸ್‌ಸಿ ಮತ್ತು ಎಸ್‌ಟಿ ಉದ್ಯೋಗಿಗಳ ಕುಂದುಕೊರತೆಗಳನ್ನು ಪರಿಹರಿಸಲು ಸಾಂಸ್ಥಿಕ ಕಾರ್ಯವಿಧಾನವನ್ನು ಸ್ಥಾಪಿಸುವ ಶಾಸನಬದ್ಧ ಜವಾಬ್ದಾರಿಗಳನ್ನು ಅನುಸರಿಸಲು ಐಐಎಂ-ಬಿ ವಿಫಲವಾಗಿದೆ ಎಂದು ವರದಿಯು ಎತ್ತಿ ತೋರಿಸಿತ್ತು.

ವರದಿ ಆಧರಿಸಿ, ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ಡಿಸೆಂಬರ್ 9ರಂದು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಐಐಎಂ-ಬಿ ಅಧಿಕಾರಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿತ್ತು.

ಇದರ ನಂತರ, ಐಐಎಂ-ಬಿಯ ನಿರ್ದೇಶಕ ರಿಷಿಕೇಶ್ ಟಿ ಕೃಷ್ಣನ್, ಹಿರಿಯ ಅಧ್ಯಾಪಕ ಹಾಗೂ ಡೀನ್ ಡಾ.ದಿನೇಶ್ ಕುಮಾರ್, ಪ್ರಾಧ್ಯಾಪಕರಾದ ಸೈನೇಶ್ ಜಿ, ಶ್ರೀನಿವಾಸ್ ಪ್ರಕಾ, ಚೇತನ್ ಸುಬ್ರಮಣಿಯನ್, ಆಶಿಶ್ ಮಿಶ್ರಾ, ಶ್ರೀಲತಾ ಜೋನಲಗೇಡು ಮತ್ತು ರಾಹುಲ್ ದೆ ವಿರುದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(1)(ಆರ್) (ಎಸ್‌ಸಿ/ಎಸ್‌ಟಿ ವ್ಯಕ್ತಿಯನ್ನು ಅವಮಾನಿಸುವುದು ಅಥವಾ ಬೆದರಿಸುವುದು) ಮತ್ತು 3(1)(ಎಸ್‌) (ಎಸ್‌ಸಿ/ಎಸ್‌ಟಿ ವ್ಯಕ್ತಿಯನ್ನು ಜಾತಿ ಹೆಸರಿನಿಂದ ನಿಂದಿಸುವುದು) ಅಡಿಯಲ್ಲಿ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ಇದನ್ನೂ ಓದಿ: ಬೆಂಗಳೂರು ಐಐಎಂನಲ್ಲಿ ಜಾತಿ ದೌರ್ಜನ್ಯ : ನಿರ್ದೇಶಕ, 7 ಪ್ರಾಧ್ಯಾಪಕರ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು ಐಐಎಂನಲ್ಲಿ ಜಾತಿ ದೌರ್ಜನ್ಯ : ನಿರ್ದೇಶಕ, 7 ಪ್ರಾಧ್ಯಾಪಕರ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...