Homeಕರ್ನಾಟಕಐಐಎಂಬಿ ಜಾತಿ ದೌರ್ಜನ್ಯ - ಅಧ್ಯಾಪಕರ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

ಐಐಎಂಬಿ ಜಾತಿ ದೌರ್ಜನ್ಯ – ಅಧ್ಯಾಪಕರ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

- Advertisement -
- Advertisement -

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್-ಬೆಂಗಳೂರಿನ (ಐಐಎಂಬಿ) ಡೀನ್, ನಿರ್ದೇಶಕ ಮತ್ತು ಅಧ್ಯಾಪಕರ ವಿರುದ್ಧ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಆರಂಭಿಸಿದ ವಿಚಾರಣಾ ಪ್ರಕ್ರಿಯೆಗಳಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ ಎಂದು TNIE ವರದಿ ಮಾಡಿದೆ. ಐಐಎಂಬಿಯ ಮಾರ್ಕೆಟಿಂಗ್‌ನ ಸಹ ಪ್ರಾಧ್ಯಾಪಕ ಡಾ.ಗೋಪಾಲ್ ದಾಸ್ ಅವರಿಗೆ ಜಾತಿ ಆಧಾರಿತ ಅವಮಾನ ಮಾಡಲಾಗಿದೆ ಮತ್ತು ದೌರ್ಜನ್ಯ ಎಸಲಾಗಿದೆ ಎಂಬ ಆರೋಪದ ಬಗ್ಗೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ ವಿಚಾರಣೆ ಪ್ರಾರಂಭಿಸಿತ್ತು. ಐಐಎಂಬಿ ಜಾತಿ ದೌರ್ಜನ್ಯ

ನಿರ್ದೇಶಕ ಪ್ರೊ. ಋಷಿಕೇಶ ಟಿ.ಕೃಷ್ಣನ್‌, ಡೀನ್‌ ಪ್ರಾಧ್ಯಾಪಕ ಪ್ರೊ.ದಿನೇಶ್ ಕುಮಾರ್ ಮತ್ತು ಇತರ ಅಧ್ಯಾಪಕರಾದ ಪ್ರೊ. ಶ್ರೀಲತಾ ಜೊನ್ನಲಗೆದ್ದ, ಪ್ರೊ. ರಾಹುಲ್ ಡಿ, ಪ್ರೊ. ಆಶಿಸ್ ಮಿಶ್ರಾ ಮತ್ತು ಪ್ರೊ. ಚೇತನ್ ಸುಬ್ರಮಣಿಯನ್ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಈ ಆದೇಶ ನೀಡಲಾಗಿದೆ. ಮತ್ತೊಬ್ಬ ಅರ್ಜಿದಾರರಾದ ಐಐಎಂಬಿಯ ಆಡಳಿತ ಮಂಡಳಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಅವರ ವಿಚಾರಣೆಗೆ ಜುಲೈ 18ರಂದು ತಡೆಯಾಜ್ಞೆ ನೀಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಎಲ್ಲಾ ಅರ್ಜಿದಾರರು ಗೋಪಾಲ್ ದಾಸ್ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ಡಿಸಿಆರ್‌ಇ ಪ್ರಾರಂಭಿಸಿದ ಸಂಪೂರ್ಣ ಪ್ರಕ್ರಿಯೆಗಳನ್ನು ಪ್ರಶ್ನಿಸಿದ್ದಾರೆ. ಮುಂದಿನ ವಿಚಾರಣೆಯನ್ನು ಜನವರಿ 2025 ರ ಎರಡನೇ ವಾರಕ್ಕೆ ಕೋರ್ಟ್ ಮುಂದೂಡಿದೆ. ಏತನ್ಮಧ್ಯೆ, ಇದೇ ವಿಷಯಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್‌ಐಆರ್‌ ಪ್ರಶ್ನಿಸಿ  ನಿರ್ದೇಶಕರು ಮತ್ತು ಇತರರು ಇತ್ತೀಚೆಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ಇನ್ನಷ್ಟೇ ನಡೆಯಬೇಕಿದೆ. ಐಐಎಂಬಿ ಜಾತಿ ದೌರ್ಜನ್ಯ

ಏನಿದು ಪ್ರಕರಣ?

ಜಾಗತಿಕವಾಗಿ ಗುರುತಿಸಲ್ಪಟ್ಟಿರುವ ದಲಿತ ವಿದ್ವಾಂಸರಾದ ಅಸೋಸಿಯೇಟ್ ಪ್ರೊಫೆಸರ್ ಗೋಪಾಲ್ ದಾಸ್ ಅವರು ಐಐಎಂ ಬೆಂಗಳೂರಿನಲ್ಲಿ ನಡೆಯುತ್ತಿರುವ ಜಾತಿ ಆಧಾರಿತ ದೌರ್ಜನ್ಯದ ಕುರಿತು
2024ರ ಜನವರಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದರು.

ಪತ್ರದಲ್ಲಿ ಅವರು ಆರೋಪಗಳನ್ನು ಮಾಡಿದ್ದು, ಮುಖ್ಯವಾಗಿ, ಸಾಂಸ್ಥಿಕ ಚಟುವಟಿಕೆಗಳಿಂದ ಹೊರಗಿಡುವುದು, ಸಂಪನ್ಮೂಲಗಳನ್ನು ಪಡೆಯಲು ತಡೆ ಒಡ್ಡುವುದು ಸೇರಿದಂತೆ ಐಐಎಂಬಿಯಲ್ಲಿ ನಡೆಯುತ್ತಿರುವ ಜಾತಿ ಆಧಾರಿತ ದೌರ್ಜನ್ಯಗಳ ಕುರಿತು ಪ್ರೊಫೆಸರ್ ಗೋಪಾಲ್ ದಾಸ್ ಅವರು ತನ್ನ ಪತ್ರದಲ್ಲಿ ರಾಷ್ಟ್ರಪತಿಗೆ ವಿವರಿಸಿದ್ದರು. ಬಳಿಕ ರಾಷ್ಟ್ರಪತಿ ಕಚೇರಿಯ ನಿರ್ದೇಶನದ ಮೇರೆಗೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಮಾರ್ಚ್‌ನಲ್ಲಿ ಜಾತಿ ದೌರ್ಜನ್ಯದ ಕುರಿತು ತನಿಖೆ ಕೈಗೊಂಡಿತ್ತು.

ಮೇ ತಿಂಗಳಲ್ಲಿ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್ ಅವರಿಗೆ ದೂರು ಸಲ್ಲಿಸಿದ್ದ ಗೋಪಾಲ್ ದಾಸ್ ಅವರು, ಡಿಸಿಆರ್‌ಇ ತನಿಖೆ ಪ್ರಾರಂಭಿಸಿದ ನಂತರ ಕಿರುಕುಳ ಹೆಚ್ಚಾಗಿದೆ ಎಂದು ಆರೋಪಿಸಿದ್ದರು.

ಈ ನಡುವೆ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅರುಣ್ ಚಕ್ರವರ್ತಿ ನೇತೃತ್ವದ ಡಿಸಿಆರ್‌ಇ ತನಿಖೆಯು ನವೆಂಬರ್‌ನಲ್ಲಿ ಮುಕ್ತಾಯಗೊಂಡಿತ್ತು. ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಿದ್ದ ತನಿಖಾ ವರದಿಯಲ್ಲಿ ಗೋಪಾಲ್ ದಾಸ್ ಅವರ ಮೇಲಿನ ಜಾತಿ ಆಧಾರಿತ ದೌರ್ಜನ್ಯ ಮತ್ತು ಅವರನ್ನು ಕೆಲಸದ ಸ್ಥಳದಿಂದ ಹೊರಗಿಡಲು ಪ್ರಯತ್ನಿಸಿದರ ಕುರಿತು ಮಹತ್ವದ ಸಾಕ್ಷ್ಯವನ್ನು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಸಂಸ್ಥೆಯೊಳಗೆ ಹರಿದಾಡಿದ ಸಾಮೂಹಿಕ ಈ-ಮೇಲ್‌ನಲ್ಲಿ ನಿರ್ದೇಶಕ ರಿಷಿಕೇಶ್ ಕೃಷ್ಣನ್ ಅವರು ಗೋಪಾಲ್ ದಾಸ್ ಅವರ ಜಾತಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ್ದಾರೆ ಎಂದು ವರದಿ ಆರೋಪಿಸಿತ್ತು. ರಿಷಿಕೇಶ್ ಮತ್ತು ಡೀನ್ ದಿನೇಶ್ ಕುಮಾರ್ ಅವರು ವೃತ್ತಿಪರ ಚಟುವಟಿಕೆಗಳಲ್ಲಿ ಗೋಪಾಲ್ ದಾಸ್ ಅವರಿಗೆ ಸಮಾನ ಅವಕಾಶಗಳನ್ನು ನಿರಾಕರಿಸಿದ್ದಾರೆ ಎಂದು ವರದಿ ಹೇಳಿತ್ತು. ಅಲ್ಲದೆ, ಎಸ್‌ಸಿ ಮತ್ತು ಎಸ್‌ಟಿ ಉದ್ಯೋಗಿಗಳ ಕುಂದುಕೊರತೆಗಳನ್ನು ಪರಿಹರಿಸಲು ಸಾಂಸ್ಥಿಕ ಕಾರ್ಯವಿಧಾನವನ್ನು ಸ್ಥಾಪಿಸುವ ಶಾಸನಬದ್ಧ ಜವಾಬ್ದಾರಿಗಳನ್ನು ಅನುಸರಿಸಲು ಐಐಎಂ-ಬಿ ವಿಫಲವಾಗಿದೆ ಎಂದು ವರದಿಯು ಎತ್ತಿ ತೋರಿಸಿತ್ತು.

ವರದಿ ಆಧರಿಸಿ, ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ಡಿಸೆಂಬರ್ 9ರಂದು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಐಐಎಂ-ಬಿ ಅಧಿಕಾರಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿತ್ತು.

ಇದರ ನಂತರ, ಐಐಎಂ-ಬಿಯ ನಿರ್ದೇಶಕ ರಿಷಿಕೇಶ್ ಟಿ ಕೃಷ್ಣನ್, ಹಿರಿಯ ಅಧ್ಯಾಪಕ ಹಾಗೂ ಡೀನ್ ಡಾ.ದಿನೇಶ್ ಕುಮಾರ್, ಪ್ರಾಧ್ಯಾಪಕರಾದ ಸೈನೇಶ್ ಜಿ, ಶ್ರೀನಿವಾಸ್ ಪ್ರಕಾ, ಚೇತನ್ ಸುಬ್ರಮಣಿಯನ್, ಆಶಿಶ್ ಮಿಶ್ರಾ, ಶ್ರೀಲತಾ ಜೋನಲಗೇಡು ಮತ್ತು ರಾಹುಲ್ ದೆ ವಿರುದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(1)(ಆರ್) (ಎಸ್‌ಸಿ/ಎಸ್‌ಟಿ ವ್ಯಕ್ತಿಯನ್ನು ಅವಮಾನಿಸುವುದು ಅಥವಾ ಬೆದರಿಸುವುದು) ಮತ್ತು 3(1)(ಎಸ್‌) (ಎಸ್‌ಸಿ/ಎಸ್‌ಟಿ ವ್ಯಕ್ತಿಯನ್ನು ಜಾತಿ ಹೆಸರಿನಿಂದ ನಿಂದಿಸುವುದು) ಅಡಿಯಲ್ಲಿ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ಇದನ್ನೂ ಓದಿ: ಬೆಂಗಳೂರು ಐಐಎಂನಲ್ಲಿ ಜಾತಿ ದೌರ್ಜನ್ಯ : ನಿರ್ದೇಶಕ, 7 ಪ್ರಾಧ್ಯಾಪಕರ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು ಐಐಎಂನಲ್ಲಿ ಜಾತಿ ದೌರ್ಜನ್ಯ : ನಿರ್ದೇಶಕ, 7 ಪ್ರಾಧ್ಯಾಪಕರ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...