Homeಕರ್ನಾಟಕಐಐಎಂಬಿ ಜಾತಿ ದೌರ್ಜನ್ಯ - ಅಧ್ಯಾಪಕರ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

ಐಐಎಂಬಿ ಜಾತಿ ದೌರ್ಜನ್ಯ – ಅಧ್ಯಾಪಕರ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

- Advertisement -
- Advertisement -

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್-ಬೆಂಗಳೂರಿನ (ಐಐಎಂಬಿ) ಡೀನ್, ನಿರ್ದೇಶಕ ಮತ್ತು ಅಧ್ಯಾಪಕರ ವಿರುದ್ಧ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಆರಂಭಿಸಿದ ವಿಚಾರಣಾ ಪ್ರಕ್ರಿಯೆಗಳಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ ಎಂದು TNIE ವರದಿ ಮಾಡಿದೆ. ಐಐಎಂಬಿಯ ಮಾರ್ಕೆಟಿಂಗ್‌ನ ಸಹ ಪ್ರಾಧ್ಯಾಪಕ ಡಾ.ಗೋಪಾಲ್ ದಾಸ್ ಅವರಿಗೆ ಜಾತಿ ಆಧಾರಿತ ಅವಮಾನ ಮಾಡಲಾಗಿದೆ ಮತ್ತು ದೌರ್ಜನ್ಯ ಎಸಲಾಗಿದೆ ಎಂಬ ಆರೋಪದ ಬಗ್ಗೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ ವಿಚಾರಣೆ ಪ್ರಾರಂಭಿಸಿತ್ತು. ಐಐಎಂಬಿ ಜಾತಿ ದೌರ್ಜನ್ಯ

ನಿರ್ದೇಶಕ ಪ್ರೊ. ಋಷಿಕೇಶ ಟಿ.ಕೃಷ್ಣನ್‌, ಡೀನ್‌ ಪ್ರಾಧ್ಯಾಪಕ ಪ್ರೊ.ದಿನೇಶ್ ಕುಮಾರ್ ಮತ್ತು ಇತರ ಅಧ್ಯಾಪಕರಾದ ಪ್ರೊ. ಶ್ರೀಲತಾ ಜೊನ್ನಲಗೆದ್ದ, ಪ್ರೊ. ರಾಹುಲ್ ಡಿ, ಪ್ರೊ. ಆಶಿಸ್ ಮಿಶ್ರಾ ಮತ್ತು ಪ್ರೊ. ಚೇತನ್ ಸುಬ್ರಮಣಿಯನ್ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಈ ಆದೇಶ ನೀಡಲಾಗಿದೆ. ಮತ್ತೊಬ್ಬ ಅರ್ಜಿದಾರರಾದ ಐಐಎಂಬಿಯ ಆಡಳಿತ ಮಂಡಳಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಅವರ ವಿಚಾರಣೆಗೆ ಜುಲೈ 18ರಂದು ತಡೆಯಾಜ್ಞೆ ನೀಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಎಲ್ಲಾ ಅರ್ಜಿದಾರರು ಗೋಪಾಲ್ ದಾಸ್ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ಡಿಸಿಆರ್‌ಇ ಪ್ರಾರಂಭಿಸಿದ ಸಂಪೂರ್ಣ ಪ್ರಕ್ರಿಯೆಗಳನ್ನು ಪ್ರಶ್ನಿಸಿದ್ದಾರೆ. ಮುಂದಿನ ವಿಚಾರಣೆಯನ್ನು ಜನವರಿ 2025 ರ ಎರಡನೇ ವಾರಕ್ಕೆ ಕೋರ್ಟ್ ಮುಂದೂಡಿದೆ. ಏತನ್ಮಧ್ಯೆ, ಇದೇ ವಿಷಯಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್‌ಐಆರ್‌ ಪ್ರಶ್ನಿಸಿ  ನಿರ್ದೇಶಕರು ಮತ್ತು ಇತರರು ಇತ್ತೀಚೆಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ಇನ್ನಷ್ಟೇ ನಡೆಯಬೇಕಿದೆ. ಐಐಎಂಬಿ ಜಾತಿ ದೌರ್ಜನ್ಯ

ಏನಿದು ಪ್ರಕರಣ?

ಜಾಗತಿಕವಾಗಿ ಗುರುತಿಸಲ್ಪಟ್ಟಿರುವ ದಲಿತ ವಿದ್ವಾಂಸರಾದ ಅಸೋಸಿಯೇಟ್ ಪ್ರೊಫೆಸರ್ ಗೋಪಾಲ್ ದಾಸ್ ಅವರು ಐಐಎಂ ಬೆಂಗಳೂರಿನಲ್ಲಿ ನಡೆಯುತ್ತಿರುವ ಜಾತಿ ಆಧಾರಿತ ದೌರ್ಜನ್ಯದ ಕುರಿತು
2024ರ ಜನವರಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದರು.

ಪತ್ರದಲ್ಲಿ ಅವರು ಆರೋಪಗಳನ್ನು ಮಾಡಿದ್ದು, ಮುಖ್ಯವಾಗಿ, ಸಾಂಸ್ಥಿಕ ಚಟುವಟಿಕೆಗಳಿಂದ ಹೊರಗಿಡುವುದು, ಸಂಪನ್ಮೂಲಗಳನ್ನು ಪಡೆಯಲು ತಡೆ ಒಡ್ಡುವುದು ಸೇರಿದಂತೆ ಐಐಎಂಬಿಯಲ್ಲಿ ನಡೆಯುತ್ತಿರುವ ಜಾತಿ ಆಧಾರಿತ ದೌರ್ಜನ್ಯಗಳ ಕುರಿತು ಪ್ರೊಫೆಸರ್ ಗೋಪಾಲ್ ದಾಸ್ ಅವರು ತನ್ನ ಪತ್ರದಲ್ಲಿ ರಾಷ್ಟ್ರಪತಿಗೆ ವಿವರಿಸಿದ್ದರು. ಬಳಿಕ ರಾಷ್ಟ್ರಪತಿ ಕಚೇರಿಯ ನಿರ್ದೇಶನದ ಮೇರೆಗೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಮಾರ್ಚ್‌ನಲ್ಲಿ ಜಾತಿ ದೌರ್ಜನ್ಯದ ಕುರಿತು ತನಿಖೆ ಕೈಗೊಂಡಿತ್ತು.

ಮೇ ತಿಂಗಳಲ್ಲಿ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್ ಅವರಿಗೆ ದೂರು ಸಲ್ಲಿಸಿದ್ದ ಗೋಪಾಲ್ ದಾಸ್ ಅವರು, ಡಿಸಿಆರ್‌ಇ ತನಿಖೆ ಪ್ರಾರಂಭಿಸಿದ ನಂತರ ಕಿರುಕುಳ ಹೆಚ್ಚಾಗಿದೆ ಎಂದು ಆರೋಪಿಸಿದ್ದರು.

ಈ ನಡುವೆ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅರುಣ್ ಚಕ್ರವರ್ತಿ ನೇತೃತ್ವದ ಡಿಸಿಆರ್‌ಇ ತನಿಖೆಯು ನವೆಂಬರ್‌ನಲ್ಲಿ ಮುಕ್ತಾಯಗೊಂಡಿತ್ತು. ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಿದ್ದ ತನಿಖಾ ವರದಿಯಲ್ಲಿ ಗೋಪಾಲ್ ದಾಸ್ ಅವರ ಮೇಲಿನ ಜಾತಿ ಆಧಾರಿತ ದೌರ್ಜನ್ಯ ಮತ್ತು ಅವರನ್ನು ಕೆಲಸದ ಸ್ಥಳದಿಂದ ಹೊರಗಿಡಲು ಪ್ರಯತ್ನಿಸಿದರ ಕುರಿತು ಮಹತ್ವದ ಸಾಕ್ಷ್ಯವನ್ನು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಸಂಸ್ಥೆಯೊಳಗೆ ಹರಿದಾಡಿದ ಸಾಮೂಹಿಕ ಈ-ಮೇಲ್‌ನಲ್ಲಿ ನಿರ್ದೇಶಕ ರಿಷಿಕೇಶ್ ಕೃಷ್ಣನ್ ಅವರು ಗೋಪಾಲ್ ದಾಸ್ ಅವರ ಜಾತಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ್ದಾರೆ ಎಂದು ವರದಿ ಆರೋಪಿಸಿತ್ತು. ರಿಷಿಕೇಶ್ ಮತ್ತು ಡೀನ್ ದಿನೇಶ್ ಕುಮಾರ್ ಅವರು ವೃತ್ತಿಪರ ಚಟುವಟಿಕೆಗಳಲ್ಲಿ ಗೋಪಾಲ್ ದಾಸ್ ಅವರಿಗೆ ಸಮಾನ ಅವಕಾಶಗಳನ್ನು ನಿರಾಕರಿಸಿದ್ದಾರೆ ಎಂದು ವರದಿ ಹೇಳಿತ್ತು. ಅಲ್ಲದೆ, ಎಸ್‌ಸಿ ಮತ್ತು ಎಸ್‌ಟಿ ಉದ್ಯೋಗಿಗಳ ಕುಂದುಕೊರತೆಗಳನ್ನು ಪರಿಹರಿಸಲು ಸಾಂಸ್ಥಿಕ ಕಾರ್ಯವಿಧಾನವನ್ನು ಸ್ಥಾಪಿಸುವ ಶಾಸನಬದ್ಧ ಜವಾಬ್ದಾರಿಗಳನ್ನು ಅನುಸರಿಸಲು ಐಐಎಂ-ಬಿ ವಿಫಲವಾಗಿದೆ ಎಂದು ವರದಿಯು ಎತ್ತಿ ತೋರಿಸಿತ್ತು.

ವರದಿ ಆಧರಿಸಿ, ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ಡಿಸೆಂಬರ್ 9ರಂದು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಐಐಎಂ-ಬಿ ಅಧಿಕಾರಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿತ್ತು.

ಇದರ ನಂತರ, ಐಐಎಂ-ಬಿಯ ನಿರ್ದೇಶಕ ರಿಷಿಕೇಶ್ ಟಿ ಕೃಷ್ಣನ್, ಹಿರಿಯ ಅಧ್ಯಾಪಕ ಹಾಗೂ ಡೀನ್ ಡಾ.ದಿನೇಶ್ ಕುಮಾರ್, ಪ್ರಾಧ್ಯಾಪಕರಾದ ಸೈನೇಶ್ ಜಿ, ಶ್ರೀನಿವಾಸ್ ಪ್ರಕಾ, ಚೇತನ್ ಸುಬ್ರಮಣಿಯನ್, ಆಶಿಶ್ ಮಿಶ್ರಾ, ಶ್ರೀಲತಾ ಜೋನಲಗೇಡು ಮತ್ತು ರಾಹುಲ್ ದೆ ವಿರುದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(1)(ಆರ್) (ಎಸ್‌ಸಿ/ಎಸ್‌ಟಿ ವ್ಯಕ್ತಿಯನ್ನು ಅವಮಾನಿಸುವುದು ಅಥವಾ ಬೆದರಿಸುವುದು) ಮತ್ತು 3(1)(ಎಸ್‌) (ಎಸ್‌ಸಿ/ಎಸ್‌ಟಿ ವ್ಯಕ್ತಿಯನ್ನು ಜಾತಿ ಹೆಸರಿನಿಂದ ನಿಂದಿಸುವುದು) ಅಡಿಯಲ್ಲಿ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ಇದನ್ನೂ ಓದಿ: ಬೆಂಗಳೂರು ಐಐಎಂನಲ್ಲಿ ಜಾತಿ ದೌರ್ಜನ್ಯ : ನಿರ್ದೇಶಕ, 7 ಪ್ರಾಧ್ಯಾಪಕರ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು ಐಐಎಂನಲ್ಲಿ ಜಾತಿ ದೌರ್ಜನ್ಯ : ನಿರ್ದೇಶಕ, 7 ಪ್ರಾಧ್ಯಾಪಕರ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...