Homeಮುಖಪುಟಐಐಟಿ ಬಾಂಬೆ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ಸಹಪಾಠಿಯ ಬಂಧನ

ಐಐಟಿ ಬಾಂಬೆ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ಸಹಪಾಠಿಯ ಬಂಧನ

- Advertisement -
- Advertisement -

ಐಐಟಿ ಬಾಂಬೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ದಲಿತ ವಿದ್ಯಾರ್ಥಿ ದರ್ಶನ್ ಸೋಲಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಸಹಪಾಠಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ದರ್ಶನ್ ಸೋಲಂಕಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ 19 ವರ್ಷದ ಅರ್ಮಾನ್ ಖತ್ರಿಯನ್ನು ಬಂಧಿಸಲಾಗಿದೆ.

ಐಐಟಿ ಬಾಂಬೆಯಲ್ಲಿ ದರ್ಶನ್‌ ಸೋಲಂಕಿ ಬ್ಯಾಚುಲರ್ ಇನ್ ಟೆಕ್ನಾಲಜಿ (ಕೆಮಿಕಲ್) ಕೋರ್ಸ್‌ನಲ್ಲಿ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದರು. ಇಲ್ಲಿ ದರ್ಶನ್‌ ಜಾತಿ ತಾರತಮ್ಯ ಎದುರಿಸಿದ್ದರು ಎಂದು ಅವರ ಕುಟುಂಬದವರು ಹೇಳಿಕೊಂಡಿದ್ದರು. ಆದಾಗ್ಯೂ, ಐಐಟಿ-ಬಾಂಬೆ ರಚಿಸಿದ ತನಿಖಾ ಸಮಿತಿಯು ಇದನ್ನು ನಿರಾಕರಿಸಿತ್ತು. ಸೋಲಂಕಿ ಅವರ ಸಾವಿಗೆ ಕಾರಣ ‘ಶೈಕ್ಷಣಿಕ ಹಿಂದುಳಿದಿರುವಿಕೆ’ ಎಂದು ಹೇಳಿಕೊಂಡಿತ್ತು.

ಸೋಲಂಕಿ ಅವರ ಕೊಠಡಿಯಲ್ಲಿ ಪತ್ತೆಯಾಗಿದ್ದ ಸೂಸೈಡ್ ನೋಟ್‌ನಲ್ಲಿ ‘ಅರ್ಮಾನ್‌ ಖತ್ರಿ’ ಹೆಸರು ಉಲ್ಲೇಖಗೊಂಡಿದೆ. ಈ ಟಿಪ್ಪಣಿಯನ್ನು ಸೋಲಂಕಿ ಅವರೇ ಬರೆದಿದ್ದಾರೆ ಎಂಬುದು ಕೈಬರಹದ ವಿಶ್ಲೇಷಣೆಯಿಂದ ದೃಢಪಟ್ಟ ನಂತರ ಖತ್ರಿಯನ್ನು ಬಂಧಿಸಲಾಗಿದೆ.

“ಕೋಮುವಾದಿ ಆಯಾಮದ ಕೆಲವು ಟೀಕೆಗಳನ್ನು ದರ್ಶನ್‌ ಮಾಡಿದ ನಂತರ ಖತ್ರಿ, ಆತನಿಗೆ ಕಟರ್‌ನಿಂದ ಬೆದರಿಕೆ ಹಾಕಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

“ಅಂದಿನಿಂದ, ಸೋಲಂಕಿ ಭಯಭೀತರಾಗಿದ್ದರು, ಒಂದೆರಡು ಸಂದರ್ಭಗಳಲ್ಲಿ ಖತ್ರಿಯಲ್ಲಿ ಕ್ಷಮೆಯಾಚಿಸಿದ್ದನು ಮತ್ತು ಇಬ್ಬರೂ ತಬ್ಬಿಕೊಂಡಿದ್ದರು. ಆದಾಗ್ಯೂ, ಸೋಲಂಕಿ ಹೆದರುತ್ತಲೇ ಇದ್ದಂತೆ ತೋರುತ್ತಿದೆ” ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ಖತ್ರಿ ಮತ್ತು ಸೋಲಂಕಿ ನಡುವಿನ ಜಗಳಕ್ಕೆ ಕಾರಣವೇನು ಎಂದು ಕೇಳಿದಾಗ ಖತ್ರಿ ಸಹಕರಿಸುತ್ತಿಲ್ಲ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. “ನಾವು ಅವನನ್ನು ಬಂಧಿಸಿದ್ದೇವೆ. ಆದ್ದರಿಂದ ನಾವು ಆತನನ್ನು ಪ್ರಶ್ನಿಸಬಹುದು ಮತ್ತು ಘಟನೆಗಳ ನಿಖರವಾದ ವಿವರಗಳನ್ನು ಪಡೆಯಬಹುದು” ಎಂದು ಹೇಳಿದ್ದಾರೆ.

ಪ್ರಕರಣದಲ್ಲಿ ಜಾತಿ ತಾರತಮ್ಯದ ಬಗ್ಗೆ ತನಿಖಾಧಿಕಾರಿಗಳಿಗೆ ಇದುವರೆಗೆ ಪುರಾವೆಗಳು ಸಿಕ್ಕಿಲ್ಲ ಎಂದು ಹೆಸರು ಹೇಳಲಿಚ್ಛಿಸದ ಮತ್ತೊಬ್ಬ ಅಧಿಕಾರಿ ಹೇಳಿದ್ದಾರೆ.

ಮೃತ ವಿದ್ಯಾರ್ಥಿಯ ತಂದೆ ರಮೇಶಭಾಯ್ ಸೋಲಂಕಿ ಪ್ರತಿಕ್ರಿಯಿಸಿ, “ಕುಟುಂಬವು ನ್ಯಾಯಯುತವಾದ ವಿಚಾರಣೆಯನ್ನು ಮಾತ್ರ ಬಯಸುತ್ತಿದೆ” ಎಂದು ಹೇಳಿರುವುದಾಗಿ ‘ದಿ ಹಿಂದೂ’ ವರದಿ ಮಾಡಿದೆ.

“ಅರ್ಮಾನ್ ನನ್ನನ್ನು ಕೊಂದಿದ್ದಾನೆ” ಎಂದು ಪಶ್ನೆ ಪತ್ರಿಕೆಯೊಂದರ ಹಿಂಭಾಗದಲ್ಲಿ ಬರೆದಿರುವುದನ್ನು ಪೊಲೀಸರು ನಮಗೆ ತೋರಿಸಿದ್ದಾರೆ ಎಂದು ಸೋಲಂಕಿ ತಂದೆ ತಿಳಿಸಿದ್ದಾರೆ. “ನಾವು ಕೈಬರಹವನ್ನು ಇಟ್ಟುಕೊಳ್ಳಲು ಸಾಧ್ಯವಾಗಲಿಲ್ಲ. ಈಗ ವಿಧಿವಿಜ್ಞಾನ ತಜ್ಞರು ಅದನ್ನು ದೃಢಪಡಿಸಿದ್ದಾರೆ” ಎಂದಿದ್ದಾರೆ.

“ಮುಂಬೈ ನಗರ ಪೊಲೀಸರು ನಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ; ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಲು ನಿರಾಕರಿಸುತ್ತಿದ್ದಾರೆ” ಎಂದು ಕುಟುಂಬ ಇತ್ತೀಚೆಗೆ ಆರೋಪಿಸಿತ್ತು.

18 ವರ್ಷ ವಯಸ್ಸಿನ ದರ್ಶನ್ ಸೋಲಂಕಿಯವರು ಫೆಬ್ರವರಿ 12 ರಂದು ತಮ್ಮ ಹಾಸ್ಟೆಲ್ ಕಟ್ಟಡದ ಏಳನೇ ಮಹಡಿಯಿಂದ ಜಿಗಿದಿದ್ದರು. ಅಹಮದಾಬಾದ್‌ ಮೂಲದವರಾದ ದರ್ಶನ್‌, ಐಐಟಿ-ಬಾಂಬೆಯಲ್ಲಿ ಬ್ಯಾಚುಲರ್ಸ್ ಇನ್ ಟೆಕ್ನಾಲಜಿ (ಕೆಮಿಕಲ್) ಕೋರ್ಸ್‌ನಲ್ಲಿ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಬರೆದ ಪತ್ರದಲ್ಲಿ ದರ್ಶನ್‌ ಸೋಲಂಕಿಯವರ ತಂದೆ ರಮೇಶಭಾಯ್ ಸೋಲಂಕಿ ತಮ್ಮ ಅಳಲು ತೋಡಿಕೊಂಡಿದ್ದರು. “ನಮ್ಮ ಕುಟುಂಬವು ಪೊಲೀಸರು ಮತ್ತು ವಿಶೇಷ ತನಿಖಾ ತಂಡದ ಸದಸ್ಯರ ವರ್ತನೆಯಿಂದ ಸಂಪೂರ್ಣವಾಗಿ ಆಘಾತಕ್ಕೊಳಗಾಗಿದೆ ಮತ್ತು ನಿರಾಶೆಗೊಂಡಿದೆ. ಸುಮಾರು ಎರಡು ವಾರಗಳಿಂದ ಎಫ್‌ಐಆರ್ ದಾಖಲಿಸಲು ನಿರಾಕರಿಸುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದರು.

“ತಾವು ಹೇಳಿದಂತೆ ದೂರಿನಲ್ಲಿ ಬರೆದುಕೊಡಬೇಕೆಂದು ಪೊಲೀಸರು ಮತ್ತು ವಿಶೇಷ ತನಿಖಾ ತಂಡ ಒತ್ತಾಯಿಸುತ್ತಿದೆ” ಎಂದು ರಮೇಶ್‌ಭಾಯ್‌ ಆರೋಪಿಸಿದ್ದರು.

“ಪೊಲೀಸರ ವರ್ತನೆಯು ನಮ್ಮಲ್ಲಿ ಯಾವುದೇ ವಿಶ್ವಾಸವನ್ನು ತರುತ್ತಿಲ್ಲ. ದರ್ಶನ್ ಎದುರಿಸುತ್ತಿದ್ದ ಜಾತಿ ತಾರತಮ್ಯದ ದೃಷ್ಟಿಕೋನದಲ್ಲಿ ತನಿಖೆಯನ್ನು ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಕರಣವನ್ನು ಬೇರೆಡೆಗೆ ತಿರುಗಿಸಲು ಎಸ್‌ಐಟಿ ಪ್ರಯತ್ನಿಸುತ್ತಿದೆ ಎಂದು ನಾವು ಆತಂಕಗೊಂಡಿದ್ದೇವೆ” ಎಂದಿದ್ದರು.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಫನ್ಸಾಲ್ಕರ್ ಅವರಿಗೂ ಪತ್ರ ಬರೆದಿದ್ದರು. “ಸ್ವತಂತ್ರ ತನಿಖೆ ನಡೆಸಬೇಕು; ಸೋಲಂಕಿ ಅವರ ಕುಟುಂಬದವರು ಸಲ್ಲಿಸಿದ ಪ್ರಾಥಮಿಕ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಬೇಕು” ಎಂದು ಕೋರಲಾಗಿದೆ.

“ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಜಾತಿ ತಾರತಮ್ಯದಿಂದ ಅಕಾಲಿಕ ಮರಣ ಹೊಂದಿದ ನಮ್ಮ ಮಗನಿಗೆ ನ್ಯಾಯ ದೊರಕಿಸಿಕೊಡಲು, ಸತ್ಯವನ್ನು ಎತ್ತಿಹಿಡಿಯಲು ದಯವಿಟ್ಟು ಈ ವಿಷಯದಲ್ಲಿ ತುರ್ತಾಗಿ ಕಾರ್ಯನಿರ್ವಹಿಸಿ” ಎಂದು ಪತ್ರದಲ್ಲಿ ಒತ್ತಾಯಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...