Homeಮುಖಪುಟಐಐಟಿ ಬಾಂಬೆ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ಸಹಪಾಠಿಯ ಬಂಧನ

ಐಐಟಿ ಬಾಂಬೆ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ಸಹಪಾಠಿಯ ಬಂಧನ

- Advertisement -
- Advertisement -

ಐಐಟಿ ಬಾಂಬೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ದಲಿತ ವಿದ್ಯಾರ್ಥಿ ದರ್ಶನ್ ಸೋಲಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಸಹಪಾಠಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ದರ್ಶನ್ ಸೋಲಂಕಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ 19 ವರ್ಷದ ಅರ್ಮಾನ್ ಖತ್ರಿಯನ್ನು ಬಂಧಿಸಲಾಗಿದೆ.

ಐಐಟಿ ಬಾಂಬೆಯಲ್ಲಿ ದರ್ಶನ್‌ ಸೋಲಂಕಿ ಬ್ಯಾಚುಲರ್ ಇನ್ ಟೆಕ್ನಾಲಜಿ (ಕೆಮಿಕಲ್) ಕೋರ್ಸ್‌ನಲ್ಲಿ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದರು. ಇಲ್ಲಿ ದರ್ಶನ್‌ ಜಾತಿ ತಾರತಮ್ಯ ಎದುರಿಸಿದ್ದರು ಎಂದು ಅವರ ಕುಟುಂಬದವರು ಹೇಳಿಕೊಂಡಿದ್ದರು. ಆದಾಗ್ಯೂ, ಐಐಟಿ-ಬಾಂಬೆ ರಚಿಸಿದ ತನಿಖಾ ಸಮಿತಿಯು ಇದನ್ನು ನಿರಾಕರಿಸಿತ್ತು. ಸೋಲಂಕಿ ಅವರ ಸಾವಿಗೆ ಕಾರಣ ‘ಶೈಕ್ಷಣಿಕ ಹಿಂದುಳಿದಿರುವಿಕೆ’ ಎಂದು ಹೇಳಿಕೊಂಡಿತ್ತು.

ಸೋಲಂಕಿ ಅವರ ಕೊಠಡಿಯಲ್ಲಿ ಪತ್ತೆಯಾಗಿದ್ದ ಸೂಸೈಡ್ ನೋಟ್‌ನಲ್ಲಿ ‘ಅರ್ಮಾನ್‌ ಖತ್ರಿ’ ಹೆಸರು ಉಲ್ಲೇಖಗೊಂಡಿದೆ. ಈ ಟಿಪ್ಪಣಿಯನ್ನು ಸೋಲಂಕಿ ಅವರೇ ಬರೆದಿದ್ದಾರೆ ಎಂಬುದು ಕೈಬರಹದ ವಿಶ್ಲೇಷಣೆಯಿಂದ ದೃಢಪಟ್ಟ ನಂತರ ಖತ್ರಿಯನ್ನು ಬಂಧಿಸಲಾಗಿದೆ.

“ಕೋಮುವಾದಿ ಆಯಾಮದ ಕೆಲವು ಟೀಕೆಗಳನ್ನು ದರ್ಶನ್‌ ಮಾಡಿದ ನಂತರ ಖತ್ರಿ, ಆತನಿಗೆ ಕಟರ್‌ನಿಂದ ಬೆದರಿಕೆ ಹಾಕಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

“ಅಂದಿನಿಂದ, ಸೋಲಂಕಿ ಭಯಭೀತರಾಗಿದ್ದರು, ಒಂದೆರಡು ಸಂದರ್ಭಗಳಲ್ಲಿ ಖತ್ರಿಯಲ್ಲಿ ಕ್ಷಮೆಯಾಚಿಸಿದ್ದನು ಮತ್ತು ಇಬ್ಬರೂ ತಬ್ಬಿಕೊಂಡಿದ್ದರು. ಆದಾಗ್ಯೂ, ಸೋಲಂಕಿ ಹೆದರುತ್ತಲೇ ಇದ್ದಂತೆ ತೋರುತ್ತಿದೆ” ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ಖತ್ರಿ ಮತ್ತು ಸೋಲಂಕಿ ನಡುವಿನ ಜಗಳಕ್ಕೆ ಕಾರಣವೇನು ಎಂದು ಕೇಳಿದಾಗ ಖತ್ರಿ ಸಹಕರಿಸುತ್ತಿಲ್ಲ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. “ನಾವು ಅವನನ್ನು ಬಂಧಿಸಿದ್ದೇವೆ. ಆದ್ದರಿಂದ ನಾವು ಆತನನ್ನು ಪ್ರಶ್ನಿಸಬಹುದು ಮತ್ತು ಘಟನೆಗಳ ನಿಖರವಾದ ವಿವರಗಳನ್ನು ಪಡೆಯಬಹುದು” ಎಂದು ಹೇಳಿದ್ದಾರೆ.

ಪ್ರಕರಣದಲ್ಲಿ ಜಾತಿ ತಾರತಮ್ಯದ ಬಗ್ಗೆ ತನಿಖಾಧಿಕಾರಿಗಳಿಗೆ ಇದುವರೆಗೆ ಪುರಾವೆಗಳು ಸಿಕ್ಕಿಲ್ಲ ಎಂದು ಹೆಸರು ಹೇಳಲಿಚ್ಛಿಸದ ಮತ್ತೊಬ್ಬ ಅಧಿಕಾರಿ ಹೇಳಿದ್ದಾರೆ.

ಮೃತ ವಿದ್ಯಾರ್ಥಿಯ ತಂದೆ ರಮೇಶಭಾಯ್ ಸೋಲಂಕಿ ಪ್ರತಿಕ್ರಿಯಿಸಿ, “ಕುಟುಂಬವು ನ್ಯಾಯಯುತವಾದ ವಿಚಾರಣೆಯನ್ನು ಮಾತ್ರ ಬಯಸುತ್ತಿದೆ” ಎಂದು ಹೇಳಿರುವುದಾಗಿ ‘ದಿ ಹಿಂದೂ’ ವರದಿ ಮಾಡಿದೆ.

“ಅರ್ಮಾನ್ ನನ್ನನ್ನು ಕೊಂದಿದ್ದಾನೆ” ಎಂದು ಪಶ್ನೆ ಪತ್ರಿಕೆಯೊಂದರ ಹಿಂಭಾಗದಲ್ಲಿ ಬರೆದಿರುವುದನ್ನು ಪೊಲೀಸರು ನಮಗೆ ತೋರಿಸಿದ್ದಾರೆ ಎಂದು ಸೋಲಂಕಿ ತಂದೆ ತಿಳಿಸಿದ್ದಾರೆ. “ನಾವು ಕೈಬರಹವನ್ನು ಇಟ್ಟುಕೊಳ್ಳಲು ಸಾಧ್ಯವಾಗಲಿಲ್ಲ. ಈಗ ವಿಧಿವಿಜ್ಞಾನ ತಜ್ಞರು ಅದನ್ನು ದೃಢಪಡಿಸಿದ್ದಾರೆ” ಎಂದಿದ್ದಾರೆ.

“ಮುಂಬೈ ನಗರ ಪೊಲೀಸರು ನಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ; ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಲು ನಿರಾಕರಿಸುತ್ತಿದ್ದಾರೆ” ಎಂದು ಕುಟುಂಬ ಇತ್ತೀಚೆಗೆ ಆರೋಪಿಸಿತ್ತು.

18 ವರ್ಷ ವಯಸ್ಸಿನ ದರ್ಶನ್ ಸೋಲಂಕಿಯವರು ಫೆಬ್ರವರಿ 12 ರಂದು ತಮ್ಮ ಹಾಸ್ಟೆಲ್ ಕಟ್ಟಡದ ಏಳನೇ ಮಹಡಿಯಿಂದ ಜಿಗಿದಿದ್ದರು. ಅಹಮದಾಬಾದ್‌ ಮೂಲದವರಾದ ದರ್ಶನ್‌, ಐಐಟಿ-ಬಾಂಬೆಯಲ್ಲಿ ಬ್ಯಾಚುಲರ್ಸ್ ಇನ್ ಟೆಕ್ನಾಲಜಿ (ಕೆಮಿಕಲ್) ಕೋರ್ಸ್‌ನಲ್ಲಿ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಬರೆದ ಪತ್ರದಲ್ಲಿ ದರ್ಶನ್‌ ಸೋಲಂಕಿಯವರ ತಂದೆ ರಮೇಶಭಾಯ್ ಸೋಲಂಕಿ ತಮ್ಮ ಅಳಲು ತೋಡಿಕೊಂಡಿದ್ದರು. “ನಮ್ಮ ಕುಟುಂಬವು ಪೊಲೀಸರು ಮತ್ತು ವಿಶೇಷ ತನಿಖಾ ತಂಡದ ಸದಸ್ಯರ ವರ್ತನೆಯಿಂದ ಸಂಪೂರ್ಣವಾಗಿ ಆಘಾತಕ್ಕೊಳಗಾಗಿದೆ ಮತ್ತು ನಿರಾಶೆಗೊಂಡಿದೆ. ಸುಮಾರು ಎರಡು ವಾರಗಳಿಂದ ಎಫ್‌ಐಆರ್ ದಾಖಲಿಸಲು ನಿರಾಕರಿಸುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದರು.

“ತಾವು ಹೇಳಿದಂತೆ ದೂರಿನಲ್ಲಿ ಬರೆದುಕೊಡಬೇಕೆಂದು ಪೊಲೀಸರು ಮತ್ತು ವಿಶೇಷ ತನಿಖಾ ತಂಡ ಒತ್ತಾಯಿಸುತ್ತಿದೆ” ಎಂದು ರಮೇಶ್‌ಭಾಯ್‌ ಆರೋಪಿಸಿದ್ದರು.

“ಪೊಲೀಸರ ವರ್ತನೆಯು ನಮ್ಮಲ್ಲಿ ಯಾವುದೇ ವಿಶ್ವಾಸವನ್ನು ತರುತ್ತಿಲ್ಲ. ದರ್ಶನ್ ಎದುರಿಸುತ್ತಿದ್ದ ಜಾತಿ ತಾರತಮ್ಯದ ದೃಷ್ಟಿಕೋನದಲ್ಲಿ ತನಿಖೆಯನ್ನು ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಕರಣವನ್ನು ಬೇರೆಡೆಗೆ ತಿರುಗಿಸಲು ಎಸ್‌ಐಟಿ ಪ್ರಯತ್ನಿಸುತ್ತಿದೆ ಎಂದು ನಾವು ಆತಂಕಗೊಂಡಿದ್ದೇವೆ” ಎಂದಿದ್ದರು.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಫನ್ಸಾಲ್ಕರ್ ಅವರಿಗೂ ಪತ್ರ ಬರೆದಿದ್ದರು. “ಸ್ವತಂತ್ರ ತನಿಖೆ ನಡೆಸಬೇಕು; ಸೋಲಂಕಿ ಅವರ ಕುಟುಂಬದವರು ಸಲ್ಲಿಸಿದ ಪ್ರಾಥಮಿಕ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಬೇಕು” ಎಂದು ಕೋರಲಾಗಿದೆ.

“ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಜಾತಿ ತಾರತಮ್ಯದಿಂದ ಅಕಾಲಿಕ ಮರಣ ಹೊಂದಿದ ನಮ್ಮ ಮಗನಿಗೆ ನ್ಯಾಯ ದೊರಕಿಸಿಕೊಡಲು, ಸತ್ಯವನ್ನು ಎತ್ತಿಹಿಡಿಯಲು ದಯವಿಟ್ಟು ಈ ವಿಷಯದಲ್ಲಿ ತುರ್ತಾಗಿ ಕಾರ್ಯನಿರ್ವಹಿಸಿ” ಎಂದು ಪತ್ರದಲ್ಲಿ ಒತ್ತಾಯಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...