Homeಮುಖಪುಟಐಐಟಿ ಬಾಂಬೆ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ಸಹಪಾಠಿಯ ಬಂಧನ

ಐಐಟಿ ಬಾಂಬೆ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ಸಹಪಾಠಿಯ ಬಂಧನ

- Advertisement -
- Advertisement -

ಐಐಟಿ ಬಾಂಬೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ದಲಿತ ವಿದ್ಯಾರ್ಥಿ ದರ್ಶನ್ ಸೋಲಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಸಹಪಾಠಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ದರ್ಶನ್ ಸೋಲಂಕಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ 19 ವರ್ಷದ ಅರ್ಮಾನ್ ಖತ್ರಿಯನ್ನು ಬಂಧಿಸಲಾಗಿದೆ.

ಐಐಟಿ ಬಾಂಬೆಯಲ್ಲಿ ದರ್ಶನ್‌ ಸೋಲಂಕಿ ಬ್ಯಾಚುಲರ್ ಇನ್ ಟೆಕ್ನಾಲಜಿ (ಕೆಮಿಕಲ್) ಕೋರ್ಸ್‌ನಲ್ಲಿ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದರು. ಇಲ್ಲಿ ದರ್ಶನ್‌ ಜಾತಿ ತಾರತಮ್ಯ ಎದುರಿಸಿದ್ದರು ಎಂದು ಅವರ ಕುಟುಂಬದವರು ಹೇಳಿಕೊಂಡಿದ್ದರು. ಆದಾಗ್ಯೂ, ಐಐಟಿ-ಬಾಂಬೆ ರಚಿಸಿದ ತನಿಖಾ ಸಮಿತಿಯು ಇದನ್ನು ನಿರಾಕರಿಸಿತ್ತು. ಸೋಲಂಕಿ ಅವರ ಸಾವಿಗೆ ಕಾರಣ ‘ಶೈಕ್ಷಣಿಕ ಹಿಂದುಳಿದಿರುವಿಕೆ’ ಎಂದು ಹೇಳಿಕೊಂಡಿತ್ತು.

ಸೋಲಂಕಿ ಅವರ ಕೊಠಡಿಯಲ್ಲಿ ಪತ್ತೆಯಾಗಿದ್ದ ಸೂಸೈಡ್ ನೋಟ್‌ನಲ್ಲಿ ‘ಅರ್ಮಾನ್‌ ಖತ್ರಿ’ ಹೆಸರು ಉಲ್ಲೇಖಗೊಂಡಿದೆ. ಈ ಟಿಪ್ಪಣಿಯನ್ನು ಸೋಲಂಕಿ ಅವರೇ ಬರೆದಿದ್ದಾರೆ ಎಂಬುದು ಕೈಬರಹದ ವಿಶ್ಲೇಷಣೆಯಿಂದ ದೃಢಪಟ್ಟ ನಂತರ ಖತ್ರಿಯನ್ನು ಬಂಧಿಸಲಾಗಿದೆ.

“ಕೋಮುವಾದಿ ಆಯಾಮದ ಕೆಲವು ಟೀಕೆಗಳನ್ನು ದರ್ಶನ್‌ ಮಾಡಿದ ನಂತರ ಖತ್ರಿ, ಆತನಿಗೆ ಕಟರ್‌ನಿಂದ ಬೆದರಿಕೆ ಹಾಕಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

“ಅಂದಿನಿಂದ, ಸೋಲಂಕಿ ಭಯಭೀತರಾಗಿದ್ದರು, ಒಂದೆರಡು ಸಂದರ್ಭಗಳಲ್ಲಿ ಖತ್ರಿಯಲ್ಲಿ ಕ್ಷಮೆಯಾಚಿಸಿದ್ದನು ಮತ್ತು ಇಬ್ಬರೂ ತಬ್ಬಿಕೊಂಡಿದ್ದರು. ಆದಾಗ್ಯೂ, ಸೋಲಂಕಿ ಹೆದರುತ್ತಲೇ ಇದ್ದಂತೆ ತೋರುತ್ತಿದೆ” ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ಖತ್ರಿ ಮತ್ತು ಸೋಲಂಕಿ ನಡುವಿನ ಜಗಳಕ್ಕೆ ಕಾರಣವೇನು ಎಂದು ಕೇಳಿದಾಗ ಖತ್ರಿ ಸಹಕರಿಸುತ್ತಿಲ್ಲ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. “ನಾವು ಅವನನ್ನು ಬಂಧಿಸಿದ್ದೇವೆ. ಆದ್ದರಿಂದ ನಾವು ಆತನನ್ನು ಪ್ರಶ್ನಿಸಬಹುದು ಮತ್ತು ಘಟನೆಗಳ ನಿಖರವಾದ ವಿವರಗಳನ್ನು ಪಡೆಯಬಹುದು” ಎಂದು ಹೇಳಿದ್ದಾರೆ.

ಪ್ರಕರಣದಲ್ಲಿ ಜಾತಿ ತಾರತಮ್ಯದ ಬಗ್ಗೆ ತನಿಖಾಧಿಕಾರಿಗಳಿಗೆ ಇದುವರೆಗೆ ಪುರಾವೆಗಳು ಸಿಕ್ಕಿಲ್ಲ ಎಂದು ಹೆಸರು ಹೇಳಲಿಚ್ಛಿಸದ ಮತ್ತೊಬ್ಬ ಅಧಿಕಾರಿ ಹೇಳಿದ್ದಾರೆ.

ಮೃತ ವಿದ್ಯಾರ್ಥಿಯ ತಂದೆ ರಮೇಶಭಾಯ್ ಸೋಲಂಕಿ ಪ್ರತಿಕ್ರಿಯಿಸಿ, “ಕುಟುಂಬವು ನ್ಯಾಯಯುತವಾದ ವಿಚಾರಣೆಯನ್ನು ಮಾತ್ರ ಬಯಸುತ್ತಿದೆ” ಎಂದು ಹೇಳಿರುವುದಾಗಿ ‘ದಿ ಹಿಂದೂ’ ವರದಿ ಮಾಡಿದೆ.

“ಅರ್ಮಾನ್ ನನ್ನನ್ನು ಕೊಂದಿದ್ದಾನೆ” ಎಂದು ಪಶ್ನೆ ಪತ್ರಿಕೆಯೊಂದರ ಹಿಂಭಾಗದಲ್ಲಿ ಬರೆದಿರುವುದನ್ನು ಪೊಲೀಸರು ನಮಗೆ ತೋರಿಸಿದ್ದಾರೆ ಎಂದು ಸೋಲಂಕಿ ತಂದೆ ತಿಳಿಸಿದ್ದಾರೆ. “ನಾವು ಕೈಬರಹವನ್ನು ಇಟ್ಟುಕೊಳ್ಳಲು ಸಾಧ್ಯವಾಗಲಿಲ್ಲ. ಈಗ ವಿಧಿವಿಜ್ಞಾನ ತಜ್ಞರು ಅದನ್ನು ದೃಢಪಡಿಸಿದ್ದಾರೆ” ಎಂದಿದ್ದಾರೆ.

“ಮುಂಬೈ ನಗರ ಪೊಲೀಸರು ನಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ; ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಲು ನಿರಾಕರಿಸುತ್ತಿದ್ದಾರೆ” ಎಂದು ಕುಟುಂಬ ಇತ್ತೀಚೆಗೆ ಆರೋಪಿಸಿತ್ತು.

18 ವರ್ಷ ವಯಸ್ಸಿನ ದರ್ಶನ್ ಸೋಲಂಕಿಯವರು ಫೆಬ್ರವರಿ 12 ರಂದು ತಮ್ಮ ಹಾಸ್ಟೆಲ್ ಕಟ್ಟಡದ ಏಳನೇ ಮಹಡಿಯಿಂದ ಜಿಗಿದಿದ್ದರು. ಅಹಮದಾಬಾದ್‌ ಮೂಲದವರಾದ ದರ್ಶನ್‌, ಐಐಟಿ-ಬಾಂಬೆಯಲ್ಲಿ ಬ್ಯಾಚುಲರ್ಸ್ ಇನ್ ಟೆಕ್ನಾಲಜಿ (ಕೆಮಿಕಲ್) ಕೋರ್ಸ್‌ನಲ್ಲಿ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಬರೆದ ಪತ್ರದಲ್ಲಿ ದರ್ಶನ್‌ ಸೋಲಂಕಿಯವರ ತಂದೆ ರಮೇಶಭಾಯ್ ಸೋಲಂಕಿ ತಮ್ಮ ಅಳಲು ತೋಡಿಕೊಂಡಿದ್ದರು. “ನಮ್ಮ ಕುಟುಂಬವು ಪೊಲೀಸರು ಮತ್ತು ವಿಶೇಷ ತನಿಖಾ ತಂಡದ ಸದಸ್ಯರ ವರ್ತನೆಯಿಂದ ಸಂಪೂರ್ಣವಾಗಿ ಆಘಾತಕ್ಕೊಳಗಾಗಿದೆ ಮತ್ತು ನಿರಾಶೆಗೊಂಡಿದೆ. ಸುಮಾರು ಎರಡು ವಾರಗಳಿಂದ ಎಫ್‌ಐಆರ್ ದಾಖಲಿಸಲು ನಿರಾಕರಿಸುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದರು.

“ತಾವು ಹೇಳಿದಂತೆ ದೂರಿನಲ್ಲಿ ಬರೆದುಕೊಡಬೇಕೆಂದು ಪೊಲೀಸರು ಮತ್ತು ವಿಶೇಷ ತನಿಖಾ ತಂಡ ಒತ್ತಾಯಿಸುತ್ತಿದೆ” ಎಂದು ರಮೇಶ್‌ಭಾಯ್‌ ಆರೋಪಿಸಿದ್ದರು.

“ಪೊಲೀಸರ ವರ್ತನೆಯು ನಮ್ಮಲ್ಲಿ ಯಾವುದೇ ವಿಶ್ವಾಸವನ್ನು ತರುತ್ತಿಲ್ಲ. ದರ್ಶನ್ ಎದುರಿಸುತ್ತಿದ್ದ ಜಾತಿ ತಾರತಮ್ಯದ ದೃಷ್ಟಿಕೋನದಲ್ಲಿ ತನಿಖೆಯನ್ನು ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಕರಣವನ್ನು ಬೇರೆಡೆಗೆ ತಿರುಗಿಸಲು ಎಸ್‌ಐಟಿ ಪ್ರಯತ್ನಿಸುತ್ತಿದೆ ಎಂದು ನಾವು ಆತಂಕಗೊಂಡಿದ್ದೇವೆ” ಎಂದಿದ್ದರು.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಫನ್ಸಾಲ್ಕರ್ ಅವರಿಗೂ ಪತ್ರ ಬರೆದಿದ್ದರು. “ಸ್ವತಂತ್ರ ತನಿಖೆ ನಡೆಸಬೇಕು; ಸೋಲಂಕಿ ಅವರ ಕುಟುಂಬದವರು ಸಲ್ಲಿಸಿದ ಪ್ರಾಥಮಿಕ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಬೇಕು” ಎಂದು ಕೋರಲಾಗಿದೆ.

“ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಜಾತಿ ತಾರತಮ್ಯದಿಂದ ಅಕಾಲಿಕ ಮರಣ ಹೊಂದಿದ ನಮ್ಮ ಮಗನಿಗೆ ನ್ಯಾಯ ದೊರಕಿಸಿಕೊಡಲು, ಸತ್ಯವನ್ನು ಎತ್ತಿಹಿಡಿಯಲು ದಯವಿಟ್ಟು ಈ ವಿಷಯದಲ್ಲಿ ತುರ್ತಾಗಿ ಕಾರ್ಯನಿರ್ವಹಿಸಿ” ಎಂದು ಪತ್ರದಲ್ಲಿ ಒತ್ತಾಯಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...