Homeಮುಖಪುಟಐಐಟಿ ಬಾಂಬೆ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ಸಹಪಾಠಿಯ ಬಂಧನ

ಐಐಟಿ ಬಾಂಬೆ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ಸಹಪಾಠಿಯ ಬಂಧನ

- Advertisement -
- Advertisement -

ಐಐಟಿ ಬಾಂಬೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ದಲಿತ ವಿದ್ಯಾರ್ಥಿ ದರ್ಶನ್ ಸೋಲಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಸಹಪಾಠಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ದರ್ಶನ್ ಸೋಲಂಕಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ 19 ವರ್ಷದ ಅರ್ಮಾನ್ ಖತ್ರಿಯನ್ನು ಬಂಧಿಸಲಾಗಿದೆ.

ಐಐಟಿ ಬಾಂಬೆಯಲ್ಲಿ ದರ್ಶನ್‌ ಸೋಲಂಕಿ ಬ್ಯಾಚುಲರ್ ಇನ್ ಟೆಕ್ನಾಲಜಿ (ಕೆಮಿಕಲ್) ಕೋರ್ಸ್‌ನಲ್ಲಿ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದರು. ಇಲ್ಲಿ ದರ್ಶನ್‌ ಜಾತಿ ತಾರತಮ್ಯ ಎದುರಿಸಿದ್ದರು ಎಂದು ಅವರ ಕುಟುಂಬದವರು ಹೇಳಿಕೊಂಡಿದ್ದರು. ಆದಾಗ್ಯೂ, ಐಐಟಿ-ಬಾಂಬೆ ರಚಿಸಿದ ತನಿಖಾ ಸಮಿತಿಯು ಇದನ್ನು ನಿರಾಕರಿಸಿತ್ತು. ಸೋಲಂಕಿ ಅವರ ಸಾವಿಗೆ ಕಾರಣ ‘ಶೈಕ್ಷಣಿಕ ಹಿಂದುಳಿದಿರುವಿಕೆ’ ಎಂದು ಹೇಳಿಕೊಂಡಿತ್ತು.

ಸೋಲಂಕಿ ಅವರ ಕೊಠಡಿಯಲ್ಲಿ ಪತ್ತೆಯಾಗಿದ್ದ ಸೂಸೈಡ್ ನೋಟ್‌ನಲ್ಲಿ ‘ಅರ್ಮಾನ್‌ ಖತ್ರಿ’ ಹೆಸರು ಉಲ್ಲೇಖಗೊಂಡಿದೆ. ಈ ಟಿಪ್ಪಣಿಯನ್ನು ಸೋಲಂಕಿ ಅವರೇ ಬರೆದಿದ್ದಾರೆ ಎಂಬುದು ಕೈಬರಹದ ವಿಶ್ಲೇಷಣೆಯಿಂದ ದೃಢಪಟ್ಟ ನಂತರ ಖತ್ರಿಯನ್ನು ಬಂಧಿಸಲಾಗಿದೆ.

“ಕೋಮುವಾದಿ ಆಯಾಮದ ಕೆಲವು ಟೀಕೆಗಳನ್ನು ದರ್ಶನ್‌ ಮಾಡಿದ ನಂತರ ಖತ್ರಿ, ಆತನಿಗೆ ಕಟರ್‌ನಿಂದ ಬೆದರಿಕೆ ಹಾಕಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

“ಅಂದಿನಿಂದ, ಸೋಲಂಕಿ ಭಯಭೀತರಾಗಿದ್ದರು, ಒಂದೆರಡು ಸಂದರ್ಭಗಳಲ್ಲಿ ಖತ್ರಿಯಲ್ಲಿ ಕ್ಷಮೆಯಾಚಿಸಿದ್ದನು ಮತ್ತು ಇಬ್ಬರೂ ತಬ್ಬಿಕೊಂಡಿದ್ದರು. ಆದಾಗ್ಯೂ, ಸೋಲಂಕಿ ಹೆದರುತ್ತಲೇ ಇದ್ದಂತೆ ತೋರುತ್ತಿದೆ” ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ಖತ್ರಿ ಮತ್ತು ಸೋಲಂಕಿ ನಡುವಿನ ಜಗಳಕ್ಕೆ ಕಾರಣವೇನು ಎಂದು ಕೇಳಿದಾಗ ಖತ್ರಿ ಸಹಕರಿಸುತ್ತಿಲ್ಲ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. “ನಾವು ಅವನನ್ನು ಬಂಧಿಸಿದ್ದೇವೆ. ಆದ್ದರಿಂದ ನಾವು ಆತನನ್ನು ಪ್ರಶ್ನಿಸಬಹುದು ಮತ್ತು ಘಟನೆಗಳ ನಿಖರವಾದ ವಿವರಗಳನ್ನು ಪಡೆಯಬಹುದು” ಎಂದು ಹೇಳಿದ್ದಾರೆ.

ಪ್ರಕರಣದಲ್ಲಿ ಜಾತಿ ತಾರತಮ್ಯದ ಬಗ್ಗೆ ತನಿಖಾಧಿಕಾರಿಗಳಿಗೆ ಇದುವರೆಗೆ ಪುರಾವೆಗಳು ಸಿಕ್ಕಿಲ್ಲ ಎಂದು ಹೆಸರು ಹೇಳಲಿಚ್ಛಿಸದ ಮತ್ತೊಬ್ಬ ಅಧಿಕಾರಿ ಹೇಳಿದ್ದಾರೆ.

ಮೃತ ವಿದ್ಯಾರ್ಥಿಯ ತಂದೆ ರಮೇಶಭಾಯ್ ಸೋಲಂಕಿ ಪ್ರತಿಕ್ರಿಯಿಸಿ, “ಕುಟುಂಬವು ನ್ಯಾಯಯುತವಾದ ವಿಚಾರಣೆಯನ್ನು ಮಾತ್ರ ಬಯಸುತ್ತಿದೆ” ಎಂದು ಹೇಳಿರುವುದಾಗಿ ‘ದಿ ಹಿಂದೂ’ ವರದಿ ಮಾಡಿದೆ.

“ಅರ್ಮಾನ್ ನನ್ನನ್ನು ಕೊಂದಿದ್ದಾನೆ” ಎಂದು ಪಶ್ನೆ ಪತ್ರಿಕೆಯೊಂದರ ಹಿಂಭಾಗದಲ್ಲಿ ಬರೆದಿರುವುದನ್ನು ಪೊಲೀಸರು ನಮಗೆ ತೋರಿಸಿದ್ದಾರೆ ಎಂದು ಸೋಲಂಕಿ ತಂದೆ ತಿಳಿಸಿದ್ದಾರೆ. “ನಾವು ಕೈಬರಹವನ್ನು ಇಟ್ಟುಕೊಳ್ಳಲು ಸಾಧ್ಯವಾಗಲಿಲ್ಲ. ಈಗ ವಿಧಿವಿಜ್ಞಾನ ತಜ್ಞರು ಅದನ್ನು ದೃಢಪಡಿಸಿದ್ದಾರೆ” ಎಂದಿದ್ದಾರೆ.

“ಮುಂಬೈ ನಗರ ಪೊಲೀಸರು ನಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ; ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಲು ನಿರಾಕರಿಸುತ್ತಿದ್ದಾರೆ” ಎಂದು ಕುಟುಂಬ ಇತ್ತೀಚೆಗೆ ಆರೋಪಿಸಿತ್ತು.

18 ವರ್ಷ ವಯಸ್ಸಿನ ದರ್ಶನ್ ಸೋಲಂಕಿಯವರು ಫೆಬ್ರವರಿ 12 ರಂದು ತಮ್ಮ ಹಾಸ್ಟೆಲ್ ಕಟ್ಟಡದ ಏಳನೇ ಮಹಡಿಯಿಂದ ಜಿಗಿದಿದ್ದರು. ಅಹಮದಾಬಾದ್‌ ಮೂಲದವರಾದ ದರ್ಶನ್‌, ಐಐಟಿ-ಬಾಂಬೆಯಲ್ಲಿ ಬ್ಯಾಚುಲರ್ಸ್ ಇನ್ ಟೆಕ್ನಾಲಜಿ (ಕೆಮಿಕಲ್) ಕೋರ್ಸ್‌ನಲ್ಲಿ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಬರೆದ ಪತ್ರದಲ್ಲಿ ದರ್ಶನ್‌ ಸೋಲಂಕಿಯವರ ತಂದೆ ರಮೇಶಭಾಯ್ ಸೋಲಂಕಿ ತಮ್ಮ ಅಳಲು ತೋಡಿಕೊಂಡಿದ್ದರು. “ನಮ್ಮ ಕುಟುಂಬವು ಪೊಲೀಸರು ಮತ್ತು ವಿಶೇಷ ತನಿಖಾ ತಂಡದ ಸದಸ್ಯರ ವರ್ತನೆಯಿಂದ ಸಂಪೂರ್ಣವಾಗಿ ಆಘಾತಕ್ಕೊಳಗಾಗಿದೆ ಮತ್ತು ನಿರಾಶೆಗೊಂಡಿದೆ. ಸುಮಾರು ಎರಡು ವಾರಗಳಿಂದ ಎಫ್‌ಐಆರ್ ದಾಖಲಿಸಲು ನಿರಾಕರಿಸುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದರು.

“ತಾವು ಹೇಳಿದಂತೆ ದೂರಿನಲ್ಲಿ ಬರೆದುಕೊಡಬೇಕೆಂದು ಪೊಲೀಸರು ಮತ್ತು ವಿಶೇಷ ತನಿಖಾ ತಂಡ ಒತ್ತಾಯಿಸುತ್ತಿದೆ” ಎಂದು ರಮೇಶ್‌ಭಾಯ್‌ ಆರೋಪಿಸಿದ್ದರು.

“ಪೊಲೀಸರ ವರ್ತನೆಯು ನಮ್ಮಲ್ಲಿ ಯಾವುದೇ ವಿಶ್ವಾಸವನ್ನು ತರುತ್ತಿಲ್ಲ. ದರ್ಶನ್ ಎದುರಿಸುತ್ತಿದ್ದ ಜಾತಿ ತಾರತಮ್ಯದ ದೃಷ್ಟಿಕೋನದಲ್ಲಿ ತನಿಖೆಯನ್ನು ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಕರಣವನ್ನು ಬೇರೆಡೆಗೆ ತಿರುಗಿಸಲು ಎಸ್‌ಐಟಿ ಪ್ರಯತ್ನಿಸುತ್ತಿದೆ ಎಂದು ನಾವು ಆತಂಕಗೊಂಡಿದ್ದೇವೆ” ಎಂದಿದ್ದರು.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಫನ್ಸಾಲ್ಕರ್ ಅವರಿಗೂ ಪತ್ರ ಬರೆದಿದ್ದರು. “ಸ್ವತಂತ್ರ ತನಿಖೆ ನಡೆಸಬೇಕು; ಸೋಲಂಕಿ ಅವರ ಕುಟುಂಬದವರು ಸಲ್ಲಿಸಿದ ಪ್ರಾಥಮಿಕ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಬೇಕು” ಎಂದು ಕೋರಲಾಗಿದೆ.

“ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಜಾತಿ ತಾರತಮ್ಯದಿಂದ ಅಕಾಲಿಕ ಮರಣ ಹೊಂದಿದ ನಮ್ಮ ಮಗನಿಗೆ ನ್ಯಾಯ ದೊರಕಿಸಿಕೊಡಲು, ಸತ್ಯವನ್ನು ಎತ್ತಿಹಿಡಿಯಲು ದಯವಿಟ್ಟು ಈ ವಿಷಯದಲ್ಲಿ ತುರ್ತಾಗಿ ಕಾರ್ಯನಿರ್ವಹಿಸಿ” ಎಂದು ಪತ್ರದಲ್ಲಿ ಒತ್ತಾಯಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...