Homeಮುಖಪುಟರಾಮನ ಅಪಹಾಸ್ಯ ಆರೋಪದಲ್ಲಿ ವಿದ್ಯಾರ್ಥಿಗಳಿಗೆ 1.2 ಲಕ್ಷ ದಂಡ ವಿಧಿಸಿದ ಬಾಂಬೆ ಐಐಟಿ

ರಾಮನ ಅಪಹಾಸ್ಯ ಆರೋಪದಲ್ಲಿ ವಿದ್ಯಾರ್ಥಿಗಳಿಗೆ 1.2 ಲಕ್ಷ ದಂಡ ವಿಧಿಸಿದ ಬಾಂಬೆ ಐಐಟಿ

- Advertisement -
- Advertisement -

ನಾಟಕದಲ್ಲಿ ರಾಮನನ್ನು ಅಪಹಾಸ್ಯ ಮಾಡಲಾಗಿದೆ ಮತ್ತು ರಾಮಾಯಣವನ್ನು ನಕಾರಾತ್ಮಕವಾಗಿ ಚಿತ್ರಿಸಿ ನಾಟಕ ಪ್ರದರ್ಶಿಸಲಾಗಿದೆ ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ) ಬಾಂಬೆಯು 8 ವಿದ್ಯಾರ್ಥಿಗಳಿಗೆ ತಲಾ 1.2 ಲಕ್ಷದವರೆಗೆ ದಂಡ ವಿಧಿಸಿದೆ.

ಪರ್ಫಾರ್ಮಿಂಗ್ ಆರ್ಟ್ಸ್ ಫೆಸ್ಟಿವಲ್(ಪಿಎಎಫ್) ಅಂಗವಾಗಿ ಮಾರ್ಚ್ 31ರಂದು ‘ರಾಹೋವನ’ ಶೀರ್ಷಿಕೆಯ ನಾಟಕವನ್ನು ಕಲಾ ಉತ್ಸವದಲ್ಲಿ ಪ್ರದರ್ಶಿಸಲಾಗಿತ್ತು. ನಾಟಕದಲ್ಲಿ ಭಗವಾನ್ ರಾಮನನ್ನು ಕೆಟ್ಟದಾಗಿ ಚಿತ್ರಿಸಲಾಗಿತ್ತು ಮತ್ತು ರಾಮಾಯಣವನ್ನು ಅಸಭ್ಯವಾಗಿ ಮತ್ತು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ ಎಂದು ಸಂಸ್ಥೆಯ ಸ್ನಾತಕೋತ್ತರ ವಿದ್ಯಾರ್ಥಿಗಳ ಗುಂಪೊಂದು ಆರೋಪಿಸಿತ್ತು. ನಾಟಕದ ವಿರುದ್ಧ ಆಡಳಿತ ಮಂಡಳಿಗೆ ವಿದ್ಯಾರ್ಥಿಗಳ ಗುಂಪು ದೂರನ್ನು ಕೂಡ ನೀಡಿತ್ತು.

ಐಐಟಿ ಬಾಂಬೆ ಅಂಬೇಡ್ಕರ್ ಪೆರಿಯಾರ್ ಫುಲೆ ಸ್ಟಡಿ ಸರ್ಕಲ್ (APPSC)ಗೆ ಸಂಯೋಜಿತವಾಗಿರುವ ಮತ್ತೋರ್ವ ವಿದ್ಯಾರ್ಥಿ ಕೂಡ ನಾಟಕವನ್ನು ಪ್ರಸ್ತುತಪಡಿಸಿದ್ದಕ್ಕಾಗಿ ವಿದ್ಯಾರ್ಥಿಗಳಿಗೆ ದಂಡ ವಿಧಿಸಲಾಗಿದೆ ಎಂದು ಹೇಳಿದ್ದಾರೆ. ಅಂಬೇಡ್ಕರ್ ಪೆರಿಯಾರ್ ಫುಲೆ ಸ್ಟಡಿ ಸರ್ಕಲ್ ಎಡಪಂಥೀಯ ವಿದ್ಯಾರ್ಥಿಗಳ ಒಕ್ಕೂಟವಾಗಿದೆ.

8 ವಿದ್ಯಾರ್ಥಿಗಳಲ್ಲಿ ತಲಾ 40,000 ರೂ.ನಿಂದ 1,20,000ರೂ.ಗಳವರೆಗೆ ದಂಡವನ್ನು ವಸೂಲಿ ಮಾಡಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಜೂನ್ 4ರಂದು ಐಐಟಿ ಬಾಂಬೆ ರಿಜಿಸ್ಟ್ರಾರ್ ಕಚೇರಿ ಹೊರಡಿಸಿದ ನೋಟಿಸ್‌ನಲ್ಲಿ ವಿದ್ಯಾರ್ಥಿಗಳು ಜುಲೈ 30ರೊಳಗೆ ದಂಡವನ್ನು ಪಾವತಿಸಬೇಕು ಎಂದು ತಿಳಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಲು ಐಐಟಿ ಬಾಂಬೆ ನಿರಾಕರಿಸಿದೆ.

ಈ ಕುರಿತು ಐಐಟಿ ಬಾಂಬೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ರಾಮಾಯಣವನ್ನು ಅವಹೇಳನಕಾರಿಯಾಗಿ ಚಿತ್ರಿಸಿದ ‘ರಾಹೋವನ’ ನಾಟಕದಲ್ಲಿ ಭಾಗಿಯಾಗಿರುವವರ ವಿರುದ್ಧ ಆಡಳಿತವು ಶಿಸ್ತು ಕ್ರಮ ಕೈಗೊಂಡಿರುವುದನ್ನು ನಾವು ಸ್ವಾಗತಿಸುತ್ತೇವೆ. ಈ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಸ್ವಾತಂತ್ರ್ಯವನ್ನು ಭಗವಾನ್ ರಾಮ, ಮಾತಾ ಸೀತೆ ಮತ್ತು ಭಗವಾನ್ ಲಕ್ಷ್ಮಣರನ್ನು ಅಪಹಾಸ್ಯ ಮಾಡಲು ದುರುಪಯೋಗಪಡಿಸಿಕೊಂಡಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಜಾಗತಿಕ ಕ್ಯೂಎಸ್ ರ್ಯಾಂಕಿಂಗ್-2025ರಲ್ಲಿ ಭಾರತದಲ್ಲೇ ಅಗ್ರಸ್ಥಾನದಲ್ಲಿರುವ ಮುಂಬೈ ಐಐಟಿ ಜೂನ್ 4ರಂದು ಈ ರೀತಿ ನೋಟಿಸ್ ನೀಡಿದೆ. ಇದಕ್ಕೂ ಮುನ್ನ ಒಂದು ಶಿಸ್ತುಸಮಿತಿ ಸಭೆಯನ್ನು ಮೇ 8ರಂದು ನಡೆಸಲಾಗಿದ್ದು, ಈ ನಾಟಕದ ಬಗೆಗಿನ ದೂರಿನ ಬಗ್ಗೆ ಪರಿಶೀಲಿಸಲಾಗಿತ್ತು ಎನ್ನಲಾಗಿದೆ.

ಇದನ್ನು ಓದಿ: ಬಿಹಾರ: ಎಸ್ಸಿ, ಎಸ್ಟಿ, ಒಬಿಸಿಗಳ ಮೀಸಲಾತಿಯಲ್ಲಿ 65% ಹೆಚ್ಚಳ ರದ್ದುಗೊಳಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...