Homeಮುಖಪುಟರಾಮನ ಅಪಹಾಸ್ಯ ಆರೋಪದಲ್ಲಿ ವಿದ್ಯಾರ್ಥಿಗಳಿಗೆ 1.2 ಲಕ್ಷ ದಂಡ ವಿಧಿಸಿದ ಬಾಂಬೆ ಐಐಟಿ

ರಾಮನ ಅಪಹಾಸ್ಯ ಆರೋಪದಲ್ಲಿ ವಿದ್ಯಾರ್ಥಿಗಳಿಗೆ 1.2 ಲಕ್ಷ ದಂಡ ವಿಧಿಸಿದ ಬಾಂಬೆ ಐಐಟಿ

- Advertisement -
- Advertisement -

ನಾಟಕದಲ್ಲಿ ರಾಮನನ್ನು ಅಪಹಾಸ್ಯ ಮಾಡಲಾಗಿದೆ ಮತ್ತು ರಾಮಾಯಣವನ್ನು ನಕಾರಾತ್ಮಕವಾಗಿ ಚಿತ್ರಿಸಿ ನಾಟಕ ಪ್ರದರ್ಶಿಸಲಾಗಿದೆ ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ) ಬಾಂಬೆಯು 8 ವಿದ್ಯಾರ್ಥಿಗಳಿಗೆ ತಲಾ 1.2 ಲಕ್ಷದವರೆಗೆ ದಂಡ ವಿಧಿಸಿದೆ.

ಪರ್ಫಾರ್ಮಿಂಗ್ ಆರ್ಟ್ಸ್ ಫೆಸ್ಟಿವಲ್(ಪಿಎಎಫ್) ಅಂಗವಾಗಿ ಮಾರ್ಚ್ 31ರಂದು ‘ರಾಹೋವನ’ ಶೀರ್ಷಿಕೆಯ ನಾಟಕವನ್ನು ಕಲಾ ಉತ್ಸವದಲ್ಲಿ ಪ್ರದರ್ಶಿಸಲಾಗಿತ್ತು. ನಾಟಕದಲ್ಲಿ ಭಗವಾನ್ ರಾಮನನ್ನು ಕೆಟ್ಟದಾಗಿ ಚಿತ್ರಿಸಲಾಗಿತ್ತು ಮತ್ತು ರಾಮಾಯಣವನ್ನು ಅಸಭ್ಯವಾಗಿ ಮತ್ತು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ ಎಂದು ಸಂಸ್ಥೆಯ ಸ್ನಾತಕೋತ್ತರ ವಿದ್ಯಾರ್ಥಿಗಳ ಗುಂಪೊಂದು ಆರೋಪಿಸಿತ್ತು. ನಾಟಕದ ವಿರುದ್ಧ ಆಡಳಿತ ಮಂಡಳಿಗೆ ವಿದ್ಯಾರ್ಥಿಗಳ ಗುಂಪು ದೂರನ್ನು ಕೂಡ ನೀಡಿತ್ತು.

ಐಐಟಿ ಬಾಂಬೆ ಅಂಬೇಡ್ಕರ್ ಪೆರಿಯಾರ್ ಫುಲೆ ಸ್ಟಡಿ ಸರ್ಕಲ್ (APPSC)ಗೆ ಸಂಯೋಜಿತವಾಗಿರುವ ಮತ್ತೋರ್ವ ವಿದ್ಯಾರ್ಥಿ ಕೂಡ ನಾಟಕವನ್ನು ಪ್ರಸ್ತುತಪಡಿಸಿದ್ದಕ್ಕಾಗಿ ವಿದ್ಯಾರ್ಥಿಗಳಿಗೆ ದಂಡ ವಿಧಿಸಲಾಗಿದೆ ಎಂದು ಹೇಳಿದ್ದಾರೆ. ಅಂಬೇಡ್ಕರ್ ಪೆರಿಯಾರ್ ಫುಲೆ ಸ್ಟಡಿ ಸರ್ಕಲ್ ಎಡಪಂಥೀಯ ವಿದ್ಯಾರ್ಥಿಗಳ ಒಕ್ಕೂಟವಾಗಿದೆ.

8 ವಿದ್ಯಾರ್ಥಿಗಳಲ್ಲಿ ತಲಾ 40,000 ರೂ.ನಿಂದ 1,20,000ರೂ.ಗಳವರೆಗೆ ದಂಡವನ್ನು ವಸೂಲಿ ಮಾಡಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಜೂನ್ 4ರಂದು ಐಐಟಿ ಬಾಂಬೆ ರಿಜಿಸ್ಟ್ರಾರ್ ಕಚೇರಿ ಹೊರಡಿಸಿದ ನೋಟಿಸ್‌ನಲ್ಲಿ ವಿದ್ಯಾರ್ಥಿಗಳು ಜುಲೈ 30ರೊಳಗೆ ದಂಡವನ್ನು ಪಾವತಿಸಬೇಕು ಎಂದು ತಿಳಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಲು ಐಐಟಿ ಬಾಂಬೆ ನಿರಾಕರಿಸಿದೆ.

ಈ ಕುರಿತು ಐಐಟಿ ಬಾಂಬೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ರಾಮಾಯಣವನ್ನು ಅವಹೇಳನಕಾರಿಯಾಗಿ ಚಿತ್ರಿಸಿದ ‘ರಾಹೋವನ’ ನಾಟಕದಲ್ಲಿ ಭಾಗಿಯಾಗಿರುವವರ ವಿರುದ್ಧ ಆಡಳಿತವು ಶಿಸ್ತು ಕ್ರಮ ಕೈಗೊಂಡಿರುವುದನ್ನು ನಾವು ಸ್ವಾಗತಿಸುತ್ತೇವೆ. ಈ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಸ್ವಾತಂತ್ರ್ಯವನ್ನು ಭಗವಾನ್ ರಾಮ, ಮಾತಾ ಸೀತೆ ಮತ್ತು ಭಗವಾನ್ ಲಕ್ಷ್ಮಣರನ್ನು ಅಪಹಾಸ್ಯ ಮಾಡಲು ದುರುಪಯೋಗಪಡಿಸಿಕೊಂಡಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಜಾಗತಿಕ ಕ್ಯೂಎಸ್ ರ್ಯಾಂಕಿಂಗ್-2025ರಲ್ಲಿ ಭಾರತದಲ್ಲೇ ಅಗ್ರಸ್ಥಾನದಲ್ಲಿರುವ ಮುಂಬೈ ಐಐಟಿ ಜೂನ್ 4ರಂದು ಈ ರೀತಿ ನೋಟಿಸ್ ನೀಡಿದೆ. ಇದಕ್ಕೂ ಮುನ್ನ ಒಂದು ಶಿಸ್ತುಸಮಿತಿ ಸಭೆಯನ್ನು ಮೇ 8ರಂದು ನಡೆಸಲಾಗಿದ್ದು, ಈ ನಾಟಕದ ಬಗೆಗಿನ ದೂರಿನ ಬಗ್ಗೆ ಪರಿಶೀಲಿಸಲಾಗಿತ್ತು ಎನ್ನಲಾಗಿದೆ.

ಇದನ್ನು ಓದಿ: ಬಿಹಾರ: ಎಸ್ಸಿ, ಎಸ್ಟಿ, ಒಬಿಸಿಗಳ ಮೀಸಲಾತಿಯಲ್ಲಿ 65% ಹೆಚ್ಚಳ ರದ್ದುಗೊಳಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...