Homeಮುಖಪುಟಐಐಟಿ ಜಾತಿ ತಾರತಮ್ಯ ಸರ್ವೆ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ವಾಪಾಸ್ಸು

ಐಐಟಿ ಜಾತಿ ತಾರತಮ್ಯ ಸರ್ವೆ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ವಾಪಾಸ್ಸು

- Advertisement -
- Advertisement -

ದೆಹಲಿಯ ಐಐಟಿಯಲ್ಲಿ ಇಬ್ಬರು ಪರಿಶಿಷ್ಟ ಜಾತಿಯ (SC) ವಿದ್ಯಾರ್ಥಿಗಳ ಆತ್ಮಹತ್ಯೆಯ ನಂತರ ಬೋರ್ಡ್‌ ಫಾರ್‌ ಸ್ಟುಡೆಂಟ್ಸ್‌ ಪಬ್ಲಿಕೇಶನ್ (BSP ) ಜಾತಿ ತಾರತಮ್ಯದ ಕುರಿತು ಸರ್ವೆಯನ್ನು ಪ್ರಕಟಿಸಿದ್ದು, ಅದನ್ನು ಕೆಲವೇ ಗಂಟೆಗಳ ಒಳಗೆ ಹಿಂಪಡೆಯಲಾಗಿದೆ.

ಕ್ಯಾಂಪಸ್‌ನಲ್ಲಿರುವ ಹಲವಾರು ವಿದ್ಯಾರ್ಥಿಗಳು ಸಮೀಕ್ಷೆಯು ಅಪ್ರಸ್ತುತ ಮತ್ತು ಸೂಕ್ಷ್ಮವಲ್ಲದ ಅನಾವಶ್ಯಕ ಪ್ರಶ್ನೆಗಳನ್ನು ಹೊಂದಿದೆ ಎಂದು ಆರೋಪಿಸಿದ್ದರು.

ಈ ಕುರಿತು ವಿದ್ಯಾರ್ಥಿಯೋರ್ವರು ಪ್ರತಿಕ್ರಿಯಿಸಿ, ಸರ್ವೆಯಲ್ಲಿ ಸಂಸ್ಥೆಯ ಮೀಸಲಾತಿ ನೀತಿಯ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗಿತ್ತು. ಅದಕ್ಕೆ ಆಯ್ಕೆಯಾಗಿ ಕೆಳಗೆ,  ಪ್ರಸ್ತುತ  ವಿಧಾನವನ್ನು ಬೆಂಬಲಿಸಿ, ಸಂಪೂರ್ಣವಾಗಿ ಆರ್ಥಿಕ ಪರಿಸ್ಥಿತಿಗಳ ಆಧಾರದ ಮೇಲೆ ಹೊಸ ನೀತಿಯನ್ನು ಬದಲಿಸಿ, ಮೀಸಲಾತಿಯನ್ನು ರದ್ದುಗೊಳಿಸಿ ಕೊನೆಗೆ ಉತ್ತರಿಸದಿರಲು ಆದ್ಯತೆ ನೀಡಿ ಎಂದು ಆಯ್ಕೆ ನೀಡಲಾಗಿದೆ. ಸಮೀಕ್ಷೆಯಲ್ಲಿ ಕೊನೆಯ ಆಯ್ಕೆಯನ್ನು ಏಕೆ ಹಾಕಬೇಕು. ಅದರ ಬಗ್ಗೆ ಮುಕ್ತವಾಗಿರುವುದರಲ್ಲಿ ಸಮಸ್ಯೆ ಏನು? ಎಂದು ವಿದ್ಯಾರ್ಥಿ ಪ್ರಶ್ನಿಸಿದ್ದಾರೆ.

ಪ್ರಶ್ನೆಗಳಲ್ಲಿ ವಿದ್ಯಾರ್ಥಿಗಳ ವಾರ್ಷಿಕ ಕುಟುಂಬದ ಆದಾಯ, ಗ್ರಾಮೀಣ ಅಥವಾ ನಗರ ಹಿನ್ನೆಲೆ, ಪ್ರವೇಶದ ವರ್ಷ, ಲಿಂಗ ಮತ್ತು ಪದವಿ ಕೇಳಲಾಗಿದೆ.

SC/ST ಕೋಶವು ಇದನ್ನು ಪರಿಶೀಲಿಸುತ್ತಿದೆ ಮತ್ತು ಅಧಿಕೃತ ಚಾನಲ್‌ಗಳ ಮೂಲಕ ಶೀಘ್ರದಲ್ಲೇ ಹೊಸ ಸಮೀಕ್ಷೆಯನ್ನು ಬಿಡುಗಡೆ ಮಾಡಲು BSP ಯೊಂದಿಗೆ ಕೆಲಸ ಮಾಡುತ್ತಿದೆ ಎಂದು  IIT-ದೆಹಲಿ SC/ST ಸೆಲ್ ಸಂಪರ್ಕಾಧಿಕಾರಿ ಪ್ರವೀಣ್ ಇಂಗೋಲ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಸರ್ವೆ ಅಧಿಕೃತ ಮಾರ್ಗಗಳ ಮೂಲಕ ನಡೆದಿಲ್ಲ. ಬಿಎಸ್‌ಪಿಯ ಚಟುವಟಿಕೆಗಳನ್ನು ನಿರ್ದೇಶಿಸುವ ಅಧ್ಯಾಪಕರು ಮಂಡಳಿಯ, ಬೋರ್ಡ್‌ನ ಸದಸ್ಯ ವಿದ್ಯಾರ್ಥಿಗಳಿಗೆ ಎಸ್‌ಸಿ/ಎಸ್‌ಟಿ ಕೋಶವನ್ನು ಸಂಪರ್ಕಿಸಲು ಸಲಹೆ ನೀಡಿದ್ದರು. ಅದನ್ನು ಅವರು ಮಾಡಲಿಲ್ಲ. ಸಮೀಕ್ಷೆಯು ಸರಿಯಾಗಿ ನಡೆಯದೆ ಬಿಡುಗಡೆಯಾಗಿದೆ. ನಾವು ಅದನ್ನು ಕಂಡುಕೊಂಡ ತಕ್ಷಣ ಅದನ್ನು ಹಿಂಪಡೆಯಲಾಗಿದೆ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ಹೇಳಿದರು.

ಹೆಸರು ಹೇಳಲಿಚ್ಛಿಸದ ಬಿಎಸ್‌ಪಿ ಬೋರ್ಡ್‌ನ ವಿದ್ಯಾರ್ಥಿ ಮುಖ್ಯಸ್ಥರು ಈ ಬಗ್ಗೆ ಪ್ರತಿಕ್ರಿಯಿಸಿದ್ದು,  ಕ್ಯಾಂಪಸ್‌ನಲ್ಲಿ ಜಾತಿ ಆಧಾರಿತ ತಾರತಮ್ಯದ ಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ನಾವು ಈ ವಾರದ ಆರಂಭದಲ್ಲಿ ಸಮೀಕ್ಷೆಯನ್ನು ನಡೆಸಿದ್ದೇವೆ. ಆದರೆ, ಸಂಸ್ಥೆಯ ಎಸ್‌ಸಿ/ಎಸ್‌ಟಿ ಸೆಲ್‌ನಿಂದ ಕೆಲವು ದೂರುಗಳ ಕಾರಣ ತಾತ್ಕಾಲಿಕವಾಗಿ ಸಮೀಕ್ಷೆ ಹಿಂಪಡೆಯಲಾಗಿದೆ. ಈ ವಿಷಯವನ್ನು ಆಂತರಿಕವಾಗಿ ಪರಿಹರಿಸಲಾಗಿದೆ ಮತ್ತು BSP ಪ್ರಸ್ತುತ SC/ST ಸೆಲ್‌ನೊಂದಿಗೆ ಹೊಸ ಸಮೀಕ್ಷೆಯನ್ನು ನಡೆಸುವಲ್ಲಿ ತೊಡಗಿಸಿಕೊಂಡಿದೆ, ಅದು ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.

ಕೆಲವು ವಾರಗಳ ಹಿಂದೆ ಐಐಟಿಯಲ್ಲಿ ಪರಿಶಿಷ್ಟ ಸಮುದಾಯಕ್ಕೆ ಸೇರಿದ  ವಿದ್ಯಾರ್ಥಿ ಅನಿಲ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಬಿಟೆಕ್ ವ್ಯಾಸಂಗ ಮಾಡಲು ಅವರು 2019ರಲ್ಲಿ ಐಐಟಿಗೆ ಸೇರಿದರು. ಇದಲ್ಲದೆ ಐಐಟಿಯಲ್ಲಿ ಇನ್ನೊಬ್ಬ ಎಸ್‌ಸಿ ವಿದ್ಯಾರ್ಥಿ ಆಯುಷ್ ಅಶ್ನಾ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವೆರಡು ಆತ್ಮಹತ್ಯೆಗಳು ಒಂದು ತಿಂಗಳ ಅಂತರದಲ್ಲಿ ನಡೆದಿದೆ.

ಸಮೀಕ್ಷೆಯನ್ನು ಆತ್ಮಹತ್ಯೆ ವಿಚಾರವನ್ನು ಮುಂದಿಟ್ಟು ಮಾಡಲಾಗಿಲ್ಲ. ಈ ಸಮೀಕ್ಷೆಯು ಐಐಟಿ-ದೆಹಲಿಯಲ್ಲಿ ಇತ್ತೀಚೆಗೆ ನಡೆದ ಆತ್ಮಹತ್ಯೆಗೆ ನೇರವಾಗಿ ಸಂಬಂಧಿಸಿಲ್ಲ ಎಂದು ಬಿಎಸ್‌ಪಿ ವಿದ್ಯಾರ್ಥಿ ಮುಖ್ಯಸ್ಥರು ಹೇಳಿದ್ದಾರೆ.

ಇದನ್ನು ಓದಿ: ಆಂಧ್ರಪ್ರದೇಶ: ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...