Homeಮುಖಪುಟಐಐಟಿ ಜಾತಿ ತಾರತಮ್ಯ ಸರ್ವೆ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ವಾಪಾಸ್ಸು

ಐಐಟಿ ಜಾತಿ ತಾರತಮ್ಯ ಸರ್ವೆ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ವಾಪಾಸ್ಸು

- Advertisement -
- Advertisement -

ದೆಹಲಿಯ ಐಐಟಿಯಲ್ಲಿ ಇಬ್ಬರು ಪರಿಶಿಷ್ಟ ಜಾತಿಯ (SC) ವಿದ್ಯಾರ್ಥಿಗಳ ಆತ್ಮಹತ್ಯೆಯ ನಂತರ ಬೋರ್ಡ್‌ ಫಾರ್‌ ಸ್ಟುಡೆಂಟ್ಸ್‌ ಪಬ್ಲಿಕೇಶನ್ (BSP ) ಜಾತಿ ತಾರತಮ್ಯದ ಕುರಿತು ಸರ್ವೆಯನ್ನು ಪ್ರಕಟಿಸಿದ್ದು, ಅದನ್ನು ಕೆಲವೇ ಗಂಟೆಗಳ ಒಳಗೆ ಹಿಂಪಡೆಯಲಾಗಿದೆ.

ಕ್ಯಾಂಪಸ್‌ನಲ್ಲಿರುವ ಹಲವಾರು ವಿದ್ಯಾರ್ಥಿಗಳು ಸಮೀಕ್ಷೆಯು ಅಪ್ರಸ್ತುತ ಮತ್ತು ಸೂಕ್ಷ್ಮವಲ್ಲದ ಅನಾವಶ್ಯಕ ಪ್ರಶ್ನೆಗಳನ್ನು ಹೊಂದಿದೆ ಎಂದು ಆರೋಪಿಸಿದ್ದರು.

ಈ ಕುರಿತು ವಿದ್ಯಾರ್ಥಿಯೋರ್ವರು ಪ್ರತಿಕ್ರಿಯಿಸಿ, ಸರ್ವೆಯಲ್ಲಿ ಸಂಸ್ಥೆಯ ಮೀಸಲಾತಿ ನೀತಿಯ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗಿತ್ತು. ಅದಕ್ಕೆ ಆಯ್ಕೆಯಾಗಿ ಕೆಳಗೆ,  ಪ್ರಸ್ತುತ  ವಿಧಾನವನ್ನು ಬೆಂಬಲಿಸಿ, ಸಂಪೂರ್ಣವಾಗಿ ಆರ್ಥಿಕ ಪರಿಸ್ಥಿತಿಗಳ ಆಧಾರದ ಮೇಲೆ ಹೊಸ ನೀತಿಯನ್ನು ಬದಲಿಸಿ, ಮೀಸಲಾತಿಯನ್ನು ರದ್ದುಗೊಳಿಸಿ ಕೊನೆಗೆ ಉತ್ತರಿಸದಿರಲು ಆದ್ಯತೆ ನೀಡಿ ಎಂದು ಆಯ್ಕೆ ನೀಡಲಾಗಿದೆ. ಸಮೀಕ್ಷೆಯಲ್ಲಿ ಕೊನೆಯ ಆಯ್ಕೆಯನ್ನು ಏಕೆ ಹಾಕಬೇಕು. ಅದರ ಬಗ್ಗೆ ಮುಕ್ತವಾಗಿರುವುದರಲ್ಲಿ ಸಮಸ್ಯೆ ಏನು? ಎಂದು ವಿದ್ಯಾರ್ಥಿ ಪ್ರಶ್ನಿಸಿದ್ದಾರೆ.

ಪ್ರಶ್ನೆಗಳಲ್ಲಿ ವಿದ್ಯಾರ್ಥಿಗಳ ವಾರ್ಷಿಕ ಕುಟುಂಬದ ಆದಾಯ, ಗ್ರಾಮೀಣ ಅಥವಾ ನಗರ ಹಿನ್ನೆಲೆ, ಪ್ರವೇಶದ ವರ್ಷ, ಲಿಂಗ ಮತ್ತು ಪದವಿ ಕೇಳಲಾಗಿದೆ.

SC/ST ಕೋಶವು ಇದನ್ನು ಪರಿಶೀಲಿಸುತ್ತಿದೆ ಮತ್ತು ಅಧಿಕೃತ ಚಾನಲ್‌ಗಳ ಮೂಲಕ ಶೀಘ್ರದಲ್ಲೇ ಹೊಸ ಸಮೀಕ್ಷೆಯನ್ನು ಬಿಡುಗಡೆ ಮಾಡಲು BSP ಯೊಂದಿಗೆ ಕೆಲಸ ಮಾಡುತ್ತಿದೆ ಎಂದು  IIT-ದೆಹಲಿ SC/ST ಸೆಲ್ ಸಂಪರ್ಕಾಧಿಕಾರಿ ಪ್ರವೀಣ್ ಇಂಗೋಲ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಸರ್ವೆ ಅಧಿಕೃತ ಮಾರ್ಗಗಳ ಮೂಲಕ ನಡೆದಿಲ್ಲ. ಬಿಎಸ್‌ಪಿಯ ಚಟುವಟಿಕೆಗಳನ್ನು ನಿರ್ದೇಶಿಸುವ ಅಧ್ಯಾಪಕರು ಮಂಡಳಿಯ, ಬೋರ್ಡ್‌ನ ಸದಸ್ಯ ವಿದ್ಯಾರ್ಥಿಗಳಿಗೆ ಎಸ್‌ಸಿ/ಎಸ್‌ಟಿ ಕೋಶವನ್ನು ಸಂಪರ್ಕಿಸಲು ಸಲಹೆ ನೀಡಿದ್ದರು. ಅದನ್ನು ಅವರು ಮಾಡಲಿಲ್ಲ. ಸಮೀಕ್ಷೆಯು ಸರಿಯಾಗಿ ನಡೆಯದೆ ಬಿಡುಗಡೆಯಾಗಿದೆ. ನಾವು ಅದನ್ನು ಕಂಡುಕೊಂಡ ತಕ್ಷಣ ಅದನ್ನು ಹಿಂಪಡೆಯಲಾಗಿದೆ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ಹೇಳಿದರು.

ಹೆಸರು ಹೇಳಲಿಚ್ಛಿಸದ ಬಿಎಸ್‌ಪಿ ಬೋರ್ಡ್‌ನ ವಿದ್ಯಾರ್ಥಿ ಮುಖ್ಯಸ್ಥರು ಈ ಬಗ್ಗೆ ಪ್ರತಿಕ್ರಿಯಿಸಿದ್ದು,  ಕ್ಯಾಂಪಸ್‌ನಲ್ಲಿ ಜಾತಿ ಆಧಾರಿತ ತಾರತಮ್ಯದ ಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ನಾವು ಈ ವಾರದ ಆರಂಭದಲ್ಲಿ ಸಮೀಕ್ಷೆಯನ್ನು ನಡೆಸಿದ್ದೇವೆ. ಆದರೆ, ಸಂಸ್ಥೆಯ ಎಸ್‌ಸಿ/ಎಸ್‌ಟಿ ಸೆಲ್‌ನಿಂದ ಕೆಲವು ದೂರುಗಳ ಕಾರಣ ತಾತ್ಕಾಲಿಕವಾಗಿ ಸಮೀಕ್ಷೆ ಹಿಂಪಡೆಯಲಾಗಿದೆ. ಈ ವಿಷಯವನ್ನು ಆಂತರಿಕವಾಗಿ ಪರಿಹರಿಸಲಾಗಿದೆ ಮತ್ತು BSP ಪ್ರಸ್ತುತ SC/ST ಸೆಲ್‌ನೊಂದಿಗೆ ಹೊಸ ಸಮೀಕ್ಷೆಯನ್ನು ನಡೆಸುವಲ್ಲಿ ತೊಡಗಿಸಿಕೊಂಡಿದೆ, ಅದು ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.

ಕೆಲವು ವಾರಗಳ ಹಿಂದೆ ಐಐಟಿಯಲ್ಲಿ ಪರಿಶಿಷ್ಟ ಸಮುದಾಯಕ್ಕೆ ಸೇರಿದ  ವಿದ್ಯಾರ್ಥಿ ಅನಿಲ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಬಿಟೆಕ್ ವ್ಯಾಸಂಗ ಮಾಡಲು ಅವರು 2019ರಲ್ಲಿ ಐಐಟಿಗೆ ಸೇರಿದರು. ಇದಲ್ಲದೆ ಐಐಟಿಯಲ್ಲಿ ಇನ್ನೊಬ್ಬ ಎಸ್‌ಸಿ ವಿದ್ಯಾರ್ಥಿ ಆಯುಷ್ ಅಶ್ನಾ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವೆರಡು ಆತ್ಮಹತ್ಯೆಗಳು ಒಂದು ತಿಂಗಳ ಅಂತರದಲ್ಲಿ ನಡೆದಿದೆ.

ಸಮೀಕ್ಷೆಯನ್ನು ಆತ್ಮಹತ್ಯೆ ವಿಚಾರವನ್ನು ಮುಂದಿಟ್ಟು ಮಾಡಲಾಗಿಲ್ಲ. ಈ ಸಮೀಕ್ಷೆಯು ಐಐಟಿ-ದೆಹಲಿಯಲ್ಲಿ ಇತ್ತೀಚೆಗೆ ನಡೆದ ಆತ್ಮಹತ್ಯೆಗೆ ನೇರವಾಗಿ ಸಂಬಂಧಿಸಿಲ್ಲ ಎಂದು ಬಿಎಸ್‌ಪಿ ವಿದ್ಯಾರ್ಥಿ ಮುಖ್ಯಸ್ಥರು ಹೇಳಿದ್ದಾರೆ.

ಇದನ್ನು ಓದಿ: ಆಂಧ್ರಪ್ರದೇಶ: ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...