Homeಮುಖಪುಟಐಐಟಿ ಜಾತಿ ತಾರತಮ್ಯ ಸರ್ವೆ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ವಾಪಾಸ್ಸು

ಐಐಟಿ ಜಾತಿ ತಾರತಮ್ಯ ಸರ್ವೆ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ವಾಪಾಸ್ಸು

- Advertisement -
- Advertisement -

ದೆಹಲಿಯ ಐಐಟಿಯಲ್ಲಿ ಇಬ್ಬರು ಪರಿಶಿಷ್ಟ ಜಾತಿಯ (SC) ವಿದ್ಯಾರ್ಥಿಗಳ ಆತ್ಮಹತ್ಯೆಯ ನಂತರ ಬೋರ್ಡ್‌ ಫಾರ್‌ ಸ್ಟುಡೆಂಟ್ಸ್‌ ಪಬ್ಲಿಕೇಶನ್ (BSP ) ಜಾತಿ ತಾರತಮ್ಯದ ಕುರಿತು ಸರ್ವೆಯನ್ನು ಪ್ರಕಟಿಸಿದ್ದು, ಅದನ್ನು ಕೆಲವೇ ಗಂಟೆಗಳ ಒಳಗೆ ಹಿಂಪಡೆಯಲಾಗಿದೆ.

ಕ್ಯಾಂಪಸ್‌ನಲ್ಲಿರುವ ಹಲವಾರು ವಿದ್ಯಾರ್ಥಿಗಳು ಸಮೀಕ್ಷೆಯು ಅಪ್ರಸ್ತುತ ಮತ್ತು ಸೂಕ್ಷ್ಮವಲ್ಲದ ಅನಾವಶ್ಯಕ ಪ್ರಶ್ನೆಗಳನ್ನು ಹೊಂದಿದೆ ಎಂದು ಆರೋಪಿಸಿದ್ದರು.

ಈ ಕುರಿತು ವಿದ್ಯಾರ್ಥಿಯೋರ್ವರು ಪ್ರತಿಕ್ರಿಯಿಸಿ, ಸರ್ವೆಯಲ್ಲಿ ಸಂಸ್ಥೆಯ ಮೀಸಲಾತಿ ನೀತಿಯ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗಿತ್ತು. ಅದಕ್ಕೆ ಆಯ್ಕೆಯಾಗಿ ಕೆಳಗೆ,  ಪ್ರಸ್ತುತ  ವಿಧಾನವನ್ನು ಬೆಂಬಲಿಸಿ, ಸಂಪೂರ್ಣವಾಗಿ ಆರ್ಥಿಕ ಪರಿಸ್ಥಿತಿಗಳ ಆಧಾರದ ಮೇಲೆ ಹೊಸ ನೀತಿಯನ್ನು ಬದಲಿಸಿ, ಮೀಸಲಾತಿಯನ್ನು ರದ್ದುಗೊಳಿಸಿ ಕೊನೆಗೆ ಉತ್ತರಿಸದಿರಲು ಆದ್ಯತೆ ನೀಡಿ ಎಂದು ಆಯ್ಕೆ ನೀಡಲಾಗಿದೆ. ಸಮೀಕ್ಷೆಯಲ್ಲಿ ಕೊನೆಯ ಆಯ್ಕೆಯನ್ನು ಏಕೆ ಹಾಕಬೇಕು. ಅದರ ಬಗ್ಗೆ ಮುಕ್ತವಾಗಿರುವುದರಲ್ಲಿ ಸಮಸ್ಯೆ ಏನು? ಎಂದು ವಿದ್ಯಾರ್ಥಿ ಪ್ರಶ್ನಿಸಿದ್ದಾರೆ.

ಪ್ರಶ್ನೆಗಳಲ್ಲಿ ವಿದ್ಯಾರ್ಥಿಗಳ ವಾರ್ಷಿಕ ಕುಟುಂಬದ ಆದಾಯ, ಗ್ರಾಮೀಣ ಅಥವಾ ನಗರ ಹಿನ್ನೆಲೆ, ಪ್ರವೇಶದ ವರ್ಷ, ಲಿಂಗ ಮತ್ತು ಪದವಿ ಕೇಳಲಾಗಿದೆ.

SC/ST ಕೋಶವು ಇದನ್ನು ಪರಿಶೀಲಿಸುತ್ತಿದೆ ಮತ್ತು ಅಧಿಕೃತ ಚಾನಲ್‌ಗಳ ಮೂಲಕ ಶೀಘ್ರದಲ್ಲೇ ಹೊಸ ಸಮೀಕ್ಷೆಯನ್ನು ಬಿಡುಗಡೆ ಮಾಡಲು BSP ಯೊಂದಿಗೆ ಕೆಲಸ ಮಾಡುತ್ತಿದೆ ಎಂದು  IIT-ದೆಹಲಿ SC/ST ಸೆಲ್ ಸಂಪರ್ಕಾಧಿಕಾರಿ ಪ್ರವೀಣ್ ಇಂಗೋಲ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಸರ್ವೆ ಅಧಿಕೃತ ಮಾರ್ಗಗಳ ಮೂಲಕ ನಡೆದಿಲ್ಲ. ಬಿಎಸ್‌ಪಿಯ ಚಟುವಟಿಕೆಗಳನ್ನು ನಿರ್ದೇಶಿಸುವ ಅಧ್ಯಾಪಕರು ಮಂಡಳಿಯ, ಬೋರ್ಡ್‌ನ ಸದಸ್ಯ ವಿದ್ಯಾರ್ಥಿಗಳಿಗೆ ಎಸ್‌ಸಿ/ಎಸ್‌ಟಿ ಕೋಶವನ್ನು ಸಂಪರ್ಕಿಸಲು ಸಲಹೆ ನೀಡಿದ್ದರು. ಅದನ್ನು ಅವರು ಮಾಡಲಿಲ್ಲ. ಸಮೀಕ್ಷೆಯು ಸರಿಯಾಗಿ ನಡೆಯದೆ ಬಿಡುಗಡೆಯಾಗಿದೆ. ನಾವು ಅದನ್ನು ಕಂಡುಕೊಂಡ ತಕ್ಷಣ ಅದನ್ನು ಹಿಂಪಡೆಯಲಾಗಿದೆ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ಹೇಳಿದರು.

ಹೆಸರು ಹೇಳಲಿಚ್ಛಿಸದ ಬಿಎಸ್‌ಪಿ ಬೋರ್ಡ್‌ನ ವಿದ್ಯಾರ್ಥಿ ಮುಖ್ಯಸ್ಥರು ಈ ಬಗ್ಗೆ ಪ್ರತಿಕ್ರಿಯಿಸಿದ್ದು,  ಕ್ಯಾಂಪಸ್‌ನಲ್ಲಿ ಜಾತಿ ಆಧಾರಿತ ತಾರತಮ್ಯದ ಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ನಾವು ಈ ವಾರದ ಆರಂಭದಲ್ಲಿ ಸಮೀಕ್ಷೆಯನ್ನು ನಡೆಸಿದ್ದೇವೆ. ಆದರೆ, ಸಂಸ್ಥೆಯ ಎಸ್‌ಸಿ/ಎಸ್‌ಟಿ ಸೆಲ್‌ನಿಂದ ಕೆಲವು ದೂರುಗಳ ಕಾರಣ ತಾತ್ಕಾಲಿಕವಾಗಿ ಸಮೀಕ್ಷೆ ಹಿಂಪಡೆಯಲಾಗಿದೆ. ಈ ವಿಷಯವನ್ನು ಆಂತರಿಕವಾಗಿ ಪರಿಹರಿಸಲಾಗಿದೆ ಮತ್ತು BSP ಪ್ರಸ್ತುತ SC/ST ಸೆಲ್‌ನೊಂದಿಗೆ ಹೊಸ ಸಮೀಕ್ಷೆಯನ್ನು ನಡೆಸುವಲ್ಲಿ ತೊಡಗಿಸಿಕೊಂಡಿದೆ, ಅದು ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.

ಕೆಲವು ವಾರಗಳ ಹಿಂದೆ ಐಐಟಿಯಲ್ಲಿ ಪರಿಶಿಷ್ಟ ಸಮುದಾಯಕ್ಕೆ ಸೇರಿದ  ವಿದ್ಯಾರ್ಥಿ ಅನಿಲ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಬಿಟೆಕ್ ವ್ಯಾಸಂಗ ಮಾಡಲು ಅವರು 2019ರಲ್ಲಿ ಐಐಟಿಗೆ ಸೇರಿದರು. ಇದಲ್ಲದೆ ಐಐಟಿಯಲ್ಲಿ ಇನ್ನೊಬ್ಬ ಎಸ್‌ಸಿ ವಿದ್ಯಾರ್ಥಿ ಆಯುಷ್ ಅಶ್ನಾ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವೆರಡು ಆತ್ಮಹತ್ಯೆಗಳು ಒಂದು ತಿಂಗಳ ಅಂತರದಲ್ಲಿ ನಡೆದಿದೆ.

ಸಮೀಕ್ಷೆಯನ್ನು ಆತ್ಮಹತ್ಯೆ ವಿಚಾರವನ್ನು ಮುಂದಿಟ್ಟು ಮಾಡಲಾಗಿಲ್ಲ. ಈ ಸಮೀಕ್ಷೆಯು ಐಐಟಿ-ದೆಹಲಿಯಲ್ಲಿ ಇತ್ತೀಚೆಗೆ ನಡೆದ ಆತ್ಮಹತ್ಯೆಗೆ ನೇರವಾಗಿ ಸಂಬಂಧಿಸಿಲ್ಲ ಎಂದು ಬಿಎಸ್‌ಪಿ ವಿದ್ಯಾರ್ಥಿ ಮುಖ್ಯಸ್ಥರು ಹೇಳಿದ್ದಾರೆ.

ಇದನ್ನು ಓದಿ: ಆಂಧ್ರಪ್ರದೇಶ: ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...