Homeಮುಖಪುಟಗೋಮೂತ್ರ ಖಾಯಿಲೆ ಗುಣಪಡಿಸುತ್ತದೆ ಎಂದ ಐಐಟಿ ಮದ್ರಾಸ್ ನಿರ್ದೇಶಕ : ವ್ಯಾಪಕ ಟೀಕೆ

ಗೋಮೂತ್ರ ಖಾಯಿಲೆ ಗುಣಪಡಿಸುತ್ತದೆ ಎಂದ ಐಐಟಿ ಮದ್ರಾಸ್ ನಿರ್ದೇಶಕ : ವ್ಯಾಪಕ ಟೀಕೆ

- Advertisement -
- Advertisement -

ಮದ್ರಾಸ್‌ನ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ-ಎಂ) ನಿರ್ದೇಶಕ ವಿ. ಕಾಮಕೋಟಿ ಅವರು ಗೋಮೂತ್ರ ಬ್ಯಾಕ್ಟೀರಿಯಾ, ಶಿಲೀಂಧ್ರ ವಿರೋಧಿ ಮತ್ತು ಜೀರ್ಣಕಾರಿ ಗುಣಗಳನ್ನು ಹೊಂದಿದ್ದು, ಜ್ವರ ಮತ್ತು ಕರುಳಿಗೆ ಸಂಬಂಧಿಸಿದ ಕಾಯಿಲೆಗಳನ್ನು ಗುಣಪಡಿಸುತ್ತದೆ ಎಂದು ಹೇಳಿಕೆ ನೀಡುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ.

ಜನವರಿ 15ರಂದು ನಡೆದ ‘ಗೋ ಸಂರಕ್ಷಣಾ ಸಾಲ’ ಎಂಬ ಕಾರ್ಯಕ್ರಮದಲ್ಲಿ  ಕಾಮಕೋಟಿ ಅವರು ಈ ಹೇಳಿಕೆಗಳನ್ನು ನೀಡಿದ್ದು, ಜನವರಿ 20ರ ಸೋಮವಾರ ಸಾರ್ವಜನಿಕರ ಗಮನಕ್ಕೆ ಬಂದ ಬಳಿಕ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ತಮ್ಮ ಭಾಷಣದಲ್ಲಿ ಕಾಮಕೋಟಿ ಅವರು ಗೋಮೂತ್ರ ಸೇವಿಸಿದ ನಂತರ ತೀವ್ರ ಜ್ವರದಿಂದ ಚೇತರಿಸಿಕೊಂಡ ಸನ್ಯಾಸಿಯೊಬ್ಬರ ಕಥೆ ಹೇಳಿದ್ದಾರೆ. ಗೋಮೂತ್ರ ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರ ವಿರೋಧಿ ಗುಣಗಳನ್ನು ಹೊಂದಿದೆ ಎನ್ನುವ ಮೂಲಕ ಅದರಲ್ಲಿ ‘ಔಷಧೀಯ ಗುಣವಿದೆ’ ಎಂದು ಪ್ರತಿಪಾದಿಸಿದ್ದಾರೆ.

ಕಾಮಕೋಟಿಯವರ ಹೇಳಿಕೆಗೆ ಅನೇಕರು ‘ಹುಸಿ ವಿಜ್ಞಾನ’ ಎಂದು ಪ್ರತಿಕ್ರಿಯೆ ನೀಡುವ ಮೂಲಕ ವ್ಯಂಗ್ಯವಾಡಿದ್ದಾರೆ. ಇನ್ನೂ ಕೆಲವರು ಐಐಟಿ ನಿರ್ದೇಶಕನ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು, ಕಾಮಕೋಟಿ ಅವರ ಹೇಳಿಕೆಗೆ ವ್ಯಂಗ್ಯವಾಗಿ ಪ್ರತಿಕ್ರಿಯಿಸುವ ಮೂಲಕ ಟೀಕೆ ಮಾಡಿದವರಲ್ಲಿ ಮೊದಲಿಗರು.

ಎಕ್ಸ್‌ನಲ್ಲಿ ಕಾಮಕೋಟಿಯವರ ಹೇಳಿಕೆಯ ಮಾಧ್ಯಮ ವರದಿಗಳನ್ನು ಹಂಚಿಕೊಂಡಿರುವ ಪ್ರಿಯಾಂಕ್ ಖರ್ಗೆ ” ಅದ್ಭುತ ವಿಚಾರ ! ಇದನ್ನು ಪೂರ್ಣ ಪ್ರಮಾಣದ ಸಾಮೂಹಿಕ ಆಂದೋಲನವನ್ನಾಗಿ ಪರಿವರ್ತಿಸೋಣ! ಎಲ್ಲಾ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಾಯಕರು ಮಾದರಿಯಾಗಿ ಮುನ್ನಡೆಯಬೇಕೆಂದು ನಾನು ಹೃತ್ಪೂರ್ವಕವಾಗಿ ಒತ್ತಾಯಿಸುತ್ತೇನೆ. ಸಾರ್ವಜನಿಕವಾಗಿ 250 ಮಿಲಿ (ಅಥವಾ ಕನಿಷ್ಠ 100 ಮಿಲಿ) ಗೋಮೂತ್ರವನ್ನು ಸೇವಿಸಿ ಮತ್ತು ಅದರ ಅದ್ಭುತ ಪ್ರಯೋಜನಗಳನ್ನು ಉತ್ಸಾಹದಿಂದ ತೋರಿಸಬೇಕು” ಎಂದು ಬರೆದುಕೊಂಡಿದ್ದಾರೆ.

“ಎರಡು ಪಟ್ಟು ಆರೋಗ್ಯವನ್ನು ಬಯಸುವವರು ಅಲ್ಲಿಗೇ ಏಕೆ ನಿಲ್ಲಿಸಬೇಕು? ಇದರ ಜೊತೆ ರುಚಿಕರವಾದ ಹಸುವಿನ ಸಗಣಿ ಕೇಕ್ ಅನ್ನೂ ಸೇರಿಸಿ” ಎಂದು ಕಾಲೆಳೆದಿದ್ದಾರೆ.

ಮುಂದುವರಿದು, “ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿರುವ ನಮ್ಮ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಪ್ರಮುಖ ಸಂಶೋಧನಾ ಸಂಸ್ಥೆಗಳು ನಗೆಪಾಟಲಿಗೆ ಈಡಾಗುತ್ತಿರುವುದು ದುರಂತ. ಒಂದು ಕಾಲದಲ್ಲಿ ರಾಷ್ಟ್ರದ ಹೆಮ್ಮೆಯಾಗಿದ್ದ ಈ ಸಂಸ್ಥೆಗಳು, ನಾವೀನ್ಯತೆಗೆ ಮೀಸಲಿಡಬೇಕಾದ ಉತ್ಸಾಹವನ್ನು ‘ಹುಸಿ ವಿಜ್ಞಾನ’ದ ಮೂಲಕ ಕಳೆದುಕೊಳ್ಳುತ್ತಿವೆ. ಈ ದೇಶದ ಬುದ್ಧಿಶಕ್ತಿಗೆ ಎಂತಹ ಅಪಚಾರ” ಎಂದಿದ್ದಾರೆ.

ಡಿಎಂಕೆ ವಕ್ತಾರ ಟಿ.ಕೆ.ಎಸ್ ಎಳಂಗೋವನ್ ಕೂಡ ಐಐಟಿ ನಿರ್ದೇಶಕ ಕಾಮಕೋಟಿ ಅವರ ಹೇಳಿಕೆ ಖಂಡಿಸಿದ್ದು, “ಅವರು (ಕಾಮಕೋಟಿ) ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾಗಲು ಅನರ್ಹರು. ಅವರನ್ನು ಶಿಕ್ಷಣ ವ್ಯವಸ್ಥೆಯಿಂದ ಹೊರಹಾಕಬೇಕು. ಅವರು ದೇವಸ್ಥಾನದಲ್ಲಿ ಪೂಜೆ ಮಾಡಲು ಅರ್ಹ, ಐಐಟಿ-ಎಂ ನಂತಹ ಸಂಸ್ಥೆಯನ್ನು ಮುನ್ನಡೆಸಲು ಅಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಕೀಯ ನಾಯಕರ ಟೀಕೆಯ ನಡುವೆಯೂ, ಕಾಮಕೋಟಿ ಅವರು ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡಿದ್ದು, ತನ್ನ ಹೇಳಿಕೆ ವೈಜ್ಞಾನಿಕ ಪುರಾವೆಗಳಿಂದ ಬೆಂಬಲಿತವಾಗಿವೆ ಎಂದು ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಗೋಮೂತ್ರವು ಬ್ಯಾಕ್ಟೀರಿಯಾ, ಶಿಲೀಂಧ್ರ ವಿರೋಧಿ ಮತ್ತು ಉರಿಯೂತ ನಿವಾರಕ ಗುಣಗಳನ್ನು ಹೊಂದಿದೆ ಎಂದು ಸಾಬೀತುಪಡಿಸುವ ಐದು ವೈಜ್ಞಾನಿಕ ಸಂಶೋಧನಾ ಪ್ರಬಂಧಗಳು ಅಮೆರಿಕನ್ ಶಿಕ್ಷಣ ತಜ್ಞರು ಪ್ರಕಟಿಸಿದ್ದಾರೆ” ಎಂದು ಹೇಳಿದ್ದಾರೆ.

ರಾಜಕೀಯ ನಾಯಕರ ಟೀಕೆಯ ಬಗ್ಗೆ ಪ್ರಶ್ನಿಸಿದಾಗ, ಪ್ರತಿಕ್ರಿಯೆ ನೀಡಲು ಕಾಮಕೋಟಿ ಅವರು ನಿರಾಕರಿಸಿದ್ದಾರೆ. ಆದರೆ, ತನ್ನ ಹೇಳಿಕೆಯನ್ನು ಪುನರುಚ್ಚರಿಸಿದ ಅವರು, ವಿಮರ್ಶಕರು ನನ್ನ ಹೇಳಿಕೆಯನ್ನು ವಿರೋಧಿಸುವ ಮೊದಲು ಸಂಶೋಧನಾ ಪ್ರಬಂಧಗಳನ್ನು ಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.

ಅಮೆರಿಕ ಇನ್ನು ಮುಂದೆ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಿದೆ : ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಟ್ರಂಪ್ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...