Homeಮುಖಪುಟಗೋಮೂತ್ರ ಖಾಯಿಲೆ ಗುಣಪಡಿಸುತ್ತದೆ ಎಂದ ಐಐಟಿ ಮದ್ರಾಸ್ ನಿರ್ದೇಶಕ : ವ್ಯಾಪಕ ಟೀಕೆ

ಗೋಮೂತ್ರ ಖಾಯಿಲೆ ಗುಣಪಡಿಸುತ್ತದೆ ಎಂದ ಐಐಟಿ ಮದ್ರಾಸ್ ನಿರ್ದೇಶಕ : ವ್ಯಾಪಕ ಟೀಕೆ

- Advertisement -
- Advertisement -

ಮದ್ರಾಸ್‌ನ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ-ಎಂ) ನಿರ್ದೇಶಕ ವಿ. ಕಾಮಕೋಟಿ ಅವರು ಗೋಮೂತ್ರ ಬ್ಯಾಕ್ಟೀರಿಯಾ, ಶಿಲೀಂಧ್ರ ವಿರೋಧಿ ಮತ್ತು ಜೀರ್ಣಕಾರಿ ಗುಣಗಳನ್ನು ಹೊಂದಿದ್ದು, ಜ್ವರ ಮತ್ತು ಕರುಳಿಗೆ ಸಂಬಂಧಿಸಿದ ಕಾಯಿಲೆಗಳನ್ನು ಗುಣಪಡಿಸುತ್ತದೆ ಎಂದು ಹೇಳಿಕೆ ನೀಡುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ.

ಜನವರಿ 15ರಂದು ನಡೆದ ‘ಗೋ ಸಂರಕ್ಷಣಾ ಸಾಲ’ ಎಂಬ ಕಾರ್ಯಕ್ರಮದಲ್ಲಿ  ಕಾಮಕೋಟಿ ಅವರು ಈ ಹೇಳಿಕೆಗಳನ್ನು ನೀಡಿದ್ದು, ಜನವರಿ 20ರ ಸೋಮವಾರ ಸಾರ್ವಜನಿಕರ ಗಮನಕ್ಕೆ ಬಂದ ಬಳಿಕ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ತಮ್ಮ ಭಾಷಣದಲ್ಲಿ ಕಾಮಕೋಟಿ ಅವರು ಗೋಮೂತ್ರ ಸೇವಿಸಿದ ನಂತರ ತೀವ್ರ ಜ್ವರದಿಂದ ಚೇತರಿಸಿಕೊಂಡ ಸನ್ಯಾಸಿಯೊಬ್ಬರ ಕಥೆ ಹೇಳಿದ್ದಾರೆ. ಗೋಮೂತ್ರ ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರ ವಿರೋಧಿ ಗುಣಗಳನ್ನು ಹೊಂದಿದೆ ಎನ್ನುವ ಮೂಲಕ ಅದರಲ್ಲಿ ‘ಔಷಧೀಯ ಗುಣವಿದೆ’ ಎಂದು ಪ್ರತಿಪಾದಿಸಿದ್ದಾರೆ.

ಕಾಮಕೋಟಿಯವರ ಹೇಳಿಕೆಗೆ ಅನೇಕರು ‘ಹುಸಿ ವಿಜ್ಞಾನ’ ಎಂದು ಪ್ರತಿಕ್ರಿಯೆ ನೀಡುವ ಮೂಲಕ ವ್ಯಂಗ್ಯವಾಡಿದ್ದಾರೆ. ಇನ್ನೂ ಕೆಲವರು ಐಐಟಿ ನಿರ್ದೇಶಕನ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು, ಕಾಮಕೋಟಿ ಅವರ ಹೇಳಿಕೆಗೆ ವ್ಯಂಗ್ಯವಾಗಿ ಪ್ರತಿಕ್ರಿಯಿಸುವ ಮೂಲಕ ಟೀಕೆ ಮಾಡಿದವರಲ್ಲಿ ಮೊದಲಿಗರು.

ಎಕ್ಸ್‌ನಲ್ಲಿ ಕಾಮಕೋಟಿಯವರ ಹೇಳಿಕೆಯ ಮಾಧ್ಯಮ ವರದಿಗಳನ್ನು ಹಂಚಿಕೊಂಡಿರುವ ಪ್ರಿಯಾಂಕ್ ಖರ್ಗೆ ” ಅದ್ಭುತ ವಿಚಾರ ! ಇದನ್ನು ಪೂರ್ಣ ಪ್ರಮಾಣದ ಸಾಮೂಹಿಕ ಆಂದೋಲನವನ್ನಾಗಿ ಪರಿವರ್ತಿಸೋಣ! ಎಲ್ಲಾ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಾಯಕರು ಮಾದರಿಯಾಗಿ ಮುನ್ನಡೆಯಬೇಕೆಂದು ನಾನು ಹೃತ್ಪೂರ್ವಕವಾಗಿ ಒತ್ತಾಯಿಸುತ್ತೇನೆ. ಸಾರ್ವಜನಿಕವಾಗಿ 250 ಮಿಲಿ (ಅಥವಾ ಕನಿಷ್ಠ 100 ಮಿಲಿ) ಗೋಮೂತ್ರವನ್ನು ಸೇವಿಸಿ ಮತ್ತು ಅದರ ಅದ್ಭುತ ಪ್ರಯೋಜನಗಳನ್ನು ಉತ್ಸಾಹದಿಂದ ತೋರಿಸಬೇಕು” ಎಂದು ಬರೆದುಕೊಂಡಿದ್ದಾರೆ.

“ಎರಡು ಪಟ್ಟು ಆರೋಗ್ಯವನ್ನು ಬಯಸುವವರು ಅಲ್ಲಿಗೇ ಏಕೆ ನಿಲ್ಲಿಸಬೇಕು? ಇದರ ಜೊತೆ ರುಚಿಕರವಾದ ಹಸುವಿನ ಸಗಣಿ ಕೇಕ್ ಅನ್ನೂ ಸೇರಿಸಿ” ಎಂದು ಕಾಲೆಳೆದಿದ್ದಾರೆ.

ಮುಂದುವರಿದು, “ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿರುವ ನಮ್ಮ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಪ್ರಮುಖ ಸಂಶೋಧನಾ ಸಂಸ್ಥೆಗಳು ನಗೆಪಾಟಲಿಗೆ ಈಡಾಗುತ್ತಿರುವುದು ದುರಂತ. ಒಂದು ಕಾಲದಲ್ಲಿ ರಾಷ್ಟ್ರದ ಹೆಮ್ಮೆಯಾಗಿದ್ದ ಈ ಸಂಸ್ಥೆಗಳು, ನಾವೀನ್ಯತೆಗೆ ಮೀಸಲಿಡಬೇಕಾದ ಉತ್ಸಾಹವನ್ನು ‘ಹುಸಿ ವಿಜ್ಞಾನ’ದ ಮೂಲಕ ಕಳೆದುಕೊಳ್ಳುತ್ತಿವೆ. ಈ ದೇಶದ ಬುದ್ಧಿಶಕ್ತಿಗೆ ಎಂತಹ ಅಪಚಾರ” ಎಂದಿದ್ದಾರೆ.

ಡಿಎಂಕೆ ವಕ್ತಾರ ಟಿ.ಕೆ.ಎಸ್ ಎಳಂಗೋವನ್ ಕೂಡ ಐಐಟಿ ನಿರ್ದೇಶಕ ಕಾಮಕೋಟಿ ಅವರ ಹೇಳಿಕೆ ಖಂಡಿಸಿದ್ದು, “ಅವರು (ಕಾಮಕೋಟಿ) ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾಗಲು ಅನರ್ಹರು. ಅವರನ್ನು ಶಿಕ್ಷಣ ವ್ಯವಸ್ಥೆಯಿಂದ ಹೊರಹಾಕಬೇಕು. ಅವರು ದೇವಸ್ಥಾನದಲ್ಲಿ ಪೂಜೆ ಮಾಡಲು ಅರ್ಹ, ಐಐಟಿ-ಎಂ ನಂತಹ ಸಂಸ್ಥೆಯನ್ನು ಮುನ್ನಡೆಸಲು ಅಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಕೀಯ ನಾಯಕರ ಟೀಕೆಯ ನಡುವೆಯೂ, ಕಾಮಕೋಟಿ ಅವರು ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡಿದ್ದು, ತನ್ನ ಹೇಳಿಕೆ ವೈಜ್ಞಾನಿಕ ಪುರಾವೆಗಳಿಂದ ಬೆಂಬಲಿತವಾಗಿವೆ ಎಂದು ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಗೋಮೂತ್ರವು ಬ್ಯಾಕ್ಟೀರಿಯಾ, ಶಿಲೀಂಧ್ರ ವಿರೋಧಿ ಮತ್ತು ಉರಿಯೂತ ನಿವಾರಕ ಗುಣಗಳನ್ನು ಹೊಂದಿದೆ ಎಂದು ಸಾಬೀತುಪಡಿಸುವ ಐದು ವೈಜ್ಞಾನಿಕ ಸಂಶೋಧನಾ ಪ್ರಬಂಧಗಳು ಅಮೆರಿಕನ್ ಶಿಕ್ಷಣ ತಜ್ಞರು ಪ್ರಕಟಿಸಿದ್ದಾರೆ” ಎಂದು ಹೇಳಿದ್ದಾರೆ.

ರಾಜಕೀಯ ನಾಯಕರ ಟೀಕೆಯ ಬಗ್ಗೆ ಪ್ರಶ್ನಿಸಿದಾಗ, ಪ್ರತಿಕ್ರಿಯೆ ನೀಡಲು ಕಾಮಕೋಟಿ ಅವರು ನಿರಾಕರಿಸಿದ್ದಾರೆ. ಆದರೆ, ತನ್ನ ಹೇಳಿಕೆಯನ್ನು ಪುನರುಚ್ಚರಿಸಿದ ಅವರು, ವಿಮರ್ಶಕರು ನನ್ನ ಹೇಳಿಕೆಯನ್ನು ವಿರೋಧಿಸುವ ಮೊದಲು ಸಂಶೋಧನಾ ಪ್ರಬಂಧಗಳನ್ನು ಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.

ಅಮೆರಿಕ ಇನ್ನು ಮುಂದೆ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಿದೆ : ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಟ್ರಂಪ್ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...