Homeಮುಖಪುಟಗೋಮೂತ್ರ ಖಾಯಿಲೆ ಗುಣಪಡಿಸುತ್ತದೆ ಎಂದ ಐಐಟಿ ಮದ್ರಾಸ್ ನಿರ್ದೇಶಕ : ವ್ಯಾಪಕ ಟೀಕೆ

ಗೋಮೂತ್ರ ಖಾಯಿಲೆ ಗುಣಪಡಿಸುತ್ತದೆ ಎಂದ ಐಐಟಿ ಮದ್ರಾಸ್ ನಿರ್ದೇಶಕ : ವ್ಯಾಪಕ ಟೀಕೆ

- Advertisement -
- Advertisement -

ಮದ್ರಾಸ್‌ನ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ-ಎಂ) ನಿರ್ದೇಶಕ ವಿ. ಕಾಮಕೋಟಿ ಅವರು ಗೋಮೂತ್ರ ಬ್ಯಾಕ್ಟೀರಿಯಾ, ಶಿಲೀಂಧ್ರ ವಿರೋಧಿ ಮತ್ತು ಜೀರ್ಣಕಾರಿ ಗುಣಗಳನ್ನು ಹೊಂದಿದ್ದು, ಜ್ವರ ಮತ್ತು ಕರುಳಿಗೆ ಸಂಬಂಧಿಸಿದ ಕಾಯಿಲೆಗಳನ್ನು ಗುಣಪಡಿಸುತ್ತದೆ ಎಂದು ಹೇಳಿಕೆ ನೀಡುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ.

ಜನವರಿ 15ರಂದು ನಡೆದ ‘ಗೋ ಸಂರಕ್ಷಣಾ ಸಾಲ’ ಎಂಬ ಕಾರ್ಯಕ್ರಮದಲ್ಲಿ  ಕಾಮಕೋಟಿ ಅವರು ಈ ಹೇಳಿಕೆಗಳನ್ನು ನೀಡಿದ್ದು, ಜನವರಿ 20ರ ಸೋಮವಾರ ಸಾರ್ವಜನಿಕರ ಗಮನಕ್ಕೆ ಬಂದ ಬಳಿಕ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ತಮ್ಮ ಭಾಷಣದಲ್ಲಿ ಕಾಮಕೋಟಿ ಅವರು ಗೋಮೂತ್ರ ಸೇವಿಸಿದ ನಂತರ ತೀವ್ರ ಜ್ವರದಿಂದ ಚೇತರಿಸಿಕೊಂಡ ಸನ್ಯಾಸಿಯೊಬ್ಬರ ಕಥೆ ಹೇಳಿದ್ದಾರೆ. ಗೋಮೂತ್ರ ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರ ವಿರೋಧಿ ಗುಣಗಳನ್ನು ಹೊಂದಿದೆ ಎನ್ನುವ ಮೂಲಕ ಅದರಲ್ಲಿ ‘ಔಷಧೀಯ ಗುಣವಿದೆ’ ಎಂದು ಪ್ರತಿಪಾದಿಸಿದ್ದಾರೆ.

ಕಾಮಕೋಟಿಯವರ ಹೇಳಿಕೆಗೆ ಅನೇಕರು ‘ಹುಸಿ ವಿಜ್ಞಾನ’ ಎಂದು ಪ್ರತಿಕ್ರಿಯೆ ನೀಡುವ ಮೂಲಕ ವ್ಯಂಗ್ಯವಾಡಿದ್ದಾರೆ. ಇನ್ನೂ ಕೆಲವರು ಐಐಟಿ ನಿರ್ದೇಶಕನ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು, ಕಾಮಕೋಟಿ ಅವರ ಹೇಳಿಕೆಗೆ ವ್ಯಂಗ್ಯವಾಗಿ ಪ್ರತಿಕ್ರಿಯಿಸುವ ಮೂಲಕ ಟೀಕೆ ಮಾಡಿದವರಲ್ಲಿ ಮೊದಲಿಗರು.

ಎಕ್ಸ್‌ನಲ್ಲಿ ಕಾಮಕೋಟಿಯವರ ಹೇಳಿಕೆಯ ಮಾಧ್ಯಮ ವರದಿಗಳನ್ನು ಹಂಚಿಕೊಂಡಿರುವ ಪ್ರಿಯಾಂಕ್ ಖರ್ಗೆ ” ಅದ್ಭುತ ವಿಚಾರ ! ಇದನ್ನು ಪೂರ್ಣ ಪ್ರಮಾಣದ ಸಾಮೂಹಿಕ ಆಂದೋಲನವನ್ನಾಗಿ ಪರಿವರ್ತಿಸೋಣ! ಎಲ್ಲಾ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಾಯಕರು ಮಾದರಿಯಾಗಿ ಮುನ್ನಡೆಯಬೇಕೆಂದು ನಾನು ಹೃತ್ಪೂರ್ವಕವಾಗಿ ಒತ್ತಾಯಿಸುತ್ತೇನೆ. ಸಾರ್ವಜನಿಕವಾಗಿ 250 ಮಿಲಿ (ಅಥವಾ ಕನಿಷ್ಠ 100 ಮಿಲಿ) ಗೋಮೂತ್ರವನ್ನು ಸೇವಿಸಿ ಮತ್ತು ಅದರ ಅದ್ಭುತ ಪ್ರಯೋಜನಗಳನ್ನು ಉತ್ಸಾಹದಿಂದ ತೋರಿಸಬೇಕು” ಎಂದು ಬರೆದುಕೊಂಡಿದ್ದಾರೆ.

“ಎರಡು ಪಟ್ಟು ಆರೋಗ್ಯವನ್ನು ಬಯಸುವವರು ಅಲ್ಲಿಗೇ ಏಕೆ ನಿಲ್ಲಿಸಬೇಕು? ಇದರ ಜೊತೆ ರುಚಿಕರವಾದ ಹಸುವಿನ ಸಗಣಿ ಕೇಕ್ ಅನ್ನೂ ಸೇರಿಸಿ” ಎಂದು ಕಾಲೆಳೆದಿದ್ದಾರೆ.

ಮುಂದುವರಿದು, “ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿರುವ ನಮ್ಮ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಪ್ರಮುಖ ಸಂಶೋಧನಾ ಸಂಸ್ಥೆಗಳು ನಗೆಪಾಟಲಿಗೆ ಈಡಾಗುತ್ತಿರುವುದು ದುರಂತ. ಒಂದು ಕಾಲದಲ್ಲಿ ರಾಷ್ಟ್ರದ ಹೆಮ್ಮೆಯಾಗಿದ್ದ ಈ ಸಂಸ್ಥೆಗಳು, ನಾವೀನ್ಯತೆಗೆ ಮೀಸಲಿಡಬೇಕಾದ ಉತ್ಸಾಹವನ್ನು ‘ಹುಸಿ ವಿಜ್ಞಾನ’ದ ಮೂಲಕ ಕಳೆದುಕೊಳ್ಳುತ್ತಿವೆ. ಈ ದೇಶದ ಬುದ್ಧಿಶಕ್ತಿಗೆ ಎಂತಹ ಅಪಚಾರ” ಎಂದಿದ್ದಾರೆ.

ಡಿಎಂಕೆ ವಕ್ತಾರ ಟಿ.ಕೆ.ಎಸ್ ಎಳಂಗೋವನ್ ಕೂಡ ಐಐಟಿ ನಿರ್ದೇಶಕ ಕಾಮಕೋಟಿ ಅವರ ಹೇಳಿಕೆ ಖಂಡಿಸಿದ್ದು, “ಅವರು (ಕಾಮಕೋಟಿ) ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾಗಲು ಅನರ್ಹರು. ಅವರನ್ನು ಶಿಕ್ಷಣ ವ್ಯವಸ್ಥೆಯಿಂದ ಹೊರಹಾಕಬೇಕು. ಅವರು ದೇವಸ್ಥಾನದಲ್ಲಿ ಪೂಜೆ ಮಾಡಲು ಅರ್ಹ, ಐಐಟಿ-ಎಂ ನಂತಹ ಸಂಸ್ಥೆಯನ್ನು ಮುನ್ನಡೆಸಲು ಅಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಕೀಯ ನಾಯಕರ ಟೀಕೆಯ ನಡುವೆಯೂ, ಕಾಮಕೋಟಿ ಅವರು ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡಿದ್ದು, ತನ್ನ ಹೇಳಿಕೆ ವೈಜ್ಞಾನಿಕ ಪುರಾವೆಗಳಿಂದ ಬೆಂಬಲಿತವಾಗಿವೆ ಎಂದು ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಗೋಮೂತ್ರವು ಬ್ಯಾಕ್ಟೀರಿಯಾ, ಶಿಲೀಂಧ್ರ ವಿರೋಧಿ ಮತ್ತು ಉರಿಯೂತ ನಿವಾರಕ ಗುಣಗಳನ್ನು ಹೊಂದಿದೆ ಎಂದು ಸಾಬೀತುಪಡಿಸುವ ಐದು ವೈಜ್ಞಾನಿಕ ಸಂಶೋಧನಾ ಪ್ರಬಂಧಗಳು ಅಮೆರಿಕನ್ ಶಿಕ್ಷಣ ತಜ್ಞರು ಪ್ರಕಟಿಸಿದ್ದಾರೆ” ಎಂದು ಹೇಳಿದ್ದಾರೆ.

ರಾಜಕೀಯ ನಾಯಕರ ಟೀಕೆಯ ಬಗ್ಗೆ ಪ್ರಶ್ನಿಸಿದಾಗ, ಪ್ರತಿಕ್ರಿಯೆ ನೀಡಲು ಕಾಮಕೋಟಿ ಅವರು ನಿರಾಕರಿಸಿದ್ದಾರೆ. ಆದರೆ, ತನ್ನ ಹೇಳಿಕೆಯನ್ನು ಪುನರುಚ್ಚರಿಸಿದ ಅವರು, ವಿಮರ್ಶಕರು ನನ್ನ ಹೇಳಿಕೆಯನ್ನು ವಿರೋಧಿಸುವ ಮೊದಲು ಸಂಶೋಧನಾ ಪ್ರಬಂಧಗಳನ್ನು ಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.

ಅಮೆರಿಕ ಇನ್ನು ಮುಂದೆ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಿದೆ : ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಟ್ರಂಪ್ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...