Homeಮುಖಪುಟಗೋಮೂತ್ರ ಖಾಯಿಲೆ ಗುಣಪಡಿಸುತ್ತದೆ ಎಂದ ಐಐಟಿ ಮದ್ರಾಸ್ ನಿರ್ದೇಶಕ : ವ್ಯಾಪಕ ಟೀಕೆ

ಗೋಮೂತ್ರ ಖಾಯಿಲೆ ಗುಣಪಡಿಸುತ್ತದೆ ಎಂದ ಐಐಟಿ ಮದ್ರಾಸ್ ನಿರ್ದೇಶಕ : ವ್ಯಾಪಕ ಟೀಕೆ

- Advertisement -
- Advertisement -

ಮದ್ರಾಸ್‌ನ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ-ಎಂ) ನಿರ್ದೇಶಕ ವಿ. ಕಾಮಕೋಟಿ ಅವರು ಗೋಮೂತ್ರ ಬ್ಯಾಕ್ಟೀರಿಯಾ, ಶಿಲೀಂಧ್ರ ವಿರೋಧಿ ಮತ್ತು ಜೀರ್ಣಕಾರಿ ಗುಣಗಳನ್ನು ಹೊಂದಿದ್ದು, ಜ್ವರ ಮತ್ತು ಕರುಳಿಗೆ ಸಂಬಂಧಿಸಿದ ಕಾಯಿಲೆಗಳನ್ನು ಗುಣಪಡಿಸುತ್ತದೆ ಎಂದು ಹೇಳಿಕೆ ನೀಡುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ.

ಜನವರಿ 15ರಂದು ನಡೆದ ‘ಗೋ ಸಂರಕ್ಷಣಾ ಸಾಲ’ ಎಂಬ ಕಾರ್ಯಕ್ರಮದಲ್ಲಿ  ಕಾಮಕೋಟಿ ಅವರು ಈ ಹೇಳಿಕೆಗಳನ್ನು ನೀಡಿದ್ದು, ಜನವರಿ 20ರ ಸೋಮವಾರ ಸಾರ್ವಜನಿಕರ ಗಮನಕ್ಕೆ ಬಂದ ಬಳಿಕ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ತಮ್ಮ ಭಾಷಣದಲ್ಲಿ ಕಾಮಕೋಟಿ ಅವರು ಗೋಮೂತ್ರ ಸೇವಿಸಿದ ನಂತರ ತೀವ್ರ ಜ್ವರದಿಂದ ಚೇತರಿಸಿಕೊಂಡ ಸನ್ಯಾಸಿಯೊಬ್ಬರ ಕಥೆ ಹೇಳಿದ್ದಾರೆ. ಗೋಮೂತ್ರ ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರ ವಿರೋಧಿ ಗುಣಗಳನ್ನು ಹೊಂದಿದೆ ಎನ್ನುವ ಮೂಲಕ ಅದರಲ್ಲಿ ‘ಔಷಧೀಯ ಗುಣವಿದೆ’ ಎಂದು ಪ್ರತಿಪಾದಿಸಿದ್ದಾರೆ.

ಕಾಮಕೋಟಿಯವರ ಹೇಳಿಕೆಗೆ ಅನೇಕರು ‘ಹುಸಿ ವಿಜ್ಞಾನ’ ಎಂದು ಪ್ರತಿಕ್ರಿಯೆ ನೀಡುವ ಮೂಲಕ ವ್ಯಂಗ್ಯವಾಡಿದ್ದಾರೆ. ಇನ್ನೂ ಕೆಲವರು ಐಐಟಿ ನಿರ್ದೇಶಕನ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು, ಕಾಮಕೋಟಿ ಅವರ ಹೇಳಿಕೆಗೆ ವ್ಯಂಗ್ಯವಾಗಿ ಪ್ರತಿಕ್ರಿಯಿಸುವ ಮೂಲಕ ಟೀಕೆ ಮಾಡಿದವರಲ್ಲಿ ಮೊದಲಿಗರು.

ಎಕ್ಸ್‌ನಲ್ಲಿ ಕಾಮಕೋಟಿಯವರ ಹೇಳಿಕೆಯ ಮಾಧ್ಯಮ ವರದಿಗಳನ್ನು ಹಂಚಿಕೊಂಡಿರುವ ಪ್ರಿಯಾಂಕ್ ಖರ್ಗೆ ” ಅದ್ಭುತ ವಿಚಾರ ! ಇದನ್ನು ಪೂರ್ಣ ಪ್ರಮಾಣದ ಸಾಮೂಹಿಕ ಆಂದೋಲನವನ್ನಾಗಿ ಪರಿವರ್ತಿಸೋಣ! ಎಲ್ಲಾ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಾಯಕರು ಮಾದರಿಯಾಗಿ ಮುನ್ನಡೆಯಬೇಕೆಂದು ನಾನು ಹೃತ್ಪೂರ್ವಕವಾಗಿ ಒತ್ತಾಯಿಸುತ್ತೇನೆ. ಸಾರ್ವಜನಿಕವಾಗಿ 250 ಮಿಲಿ (ಅಥವಾ ಕನಿಷ್ಠ 100 ಮಿಲಿ) ಗೋಮೂತ್ರವನ್ನು ಸೇವಿಸಿ ಮತ್ತು ಅದರ ಅದ್ಭುತ ಪ್ರಯೋಜನಗಳನ್ನು ಉತ್ಸಾಹದಿಂದ ತೋರಿಸಬೇಕು” ಎಂದು ಬರೆದುಕೊಂಡಿದ್ದಾರೆ.

“ಎರಡು ಪಟ್ಟು ಆರೋಗ್ಯವನ್ನು ಬಯಸುವವರು ಅಲ್ಲಿಗೇ ಏಕೆ ನಿಲ್ಲಿಸಬೇಕು? ಇದರ ಜೊತೆ ರುಚಿಕರವಾದ ಹಸುವಿನ ಸಗಣಿ ಕೇಕ್ ಅನ್ನೂ ಸೇರಿಸಿ” ಎಂದು ಕಾಲೆಳೆದಿದ್ದಾರೆ.

ಮುಂದುವರಿದು, “ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿರುವ ನಮ್ಮ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಪ್ರಮುಖ ಸಂಶೋಧನಾ ಸಂಸ್ಥೆಗಳು ನಗೆಪಾಟಲಿಗೆ ಈಡಾಗುತ್ತಿರುವುದು ದುರಂತ. ಒಂದು ಕಾಲದಲ್ಲಿ ರಾಷ್ಟ್ರದ ಹೆಮ್ಮೆಯಾಗಿದ್ದ ಈ ಸಂಸ್ಥೆಗಳು, ನಾವೀನ್ಯತೆಗೆ ಮೀಸಲಿಡಬೇಕಾದ ಉತ್ಸಾಹವನ್ನು ‘ಹುಸಿ ವಿಜ್ಞಾನ’ದ ಮೂಲಕ ಕಳೆದುಕೊಳ್ಳುತ್ತಿವೆ. ಈ ದೇಶದ ಬುದ್ಧಿಶಕ್ತಿಗೆ ಎಂತಹ ಅಪಚಾರ” ಎಂದಿದ್ದಾರೆ.

ಡಿಎಂಕೆ ವಕ್ತಾರ ಟಿ.ಕೆ.ಎಸ್ ಎಳಂಗೋವನ್ ಕೂಡ ಐಐಟಿ ನಿರ್ದೇಶಕ ಕಾಮಕೋಟಿ ಅವರ ಹೇಳಿಕೆ ಖಂಡಿಸಿದ್ದು, “ಅವರು (ಕಾಮಕೋಟಿ) ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾಗಲು ಅನರ್ಹರು. ಅವರನ್ನು ಶಿಕ್ಷಣ ವ್ಯವಸ್ಥೆಯಿಂದ ಹೊರಹಾಕಬೇಕು. ಅವರು ದೇವಸ್ಥಾನದಲ್ಲಿ ಪೂಜೆ ಮಾಡಲು ಅರ್ಹ, ಐಐಟಿ-ಎಂ ನಂತಹ ಸಂಸ್ಥೆಯನ್ನು ಮುನ್ನಡೆಸಲು ಅಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಕೀಯ ನಾಯಕರ ಟೀಕೆಯ ನಡುವೆಯೂ, ಕಾಮಕೋಟಿ ಅವರು ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡಿದ್ದು, ತನ್ನ ಹೇಳಿಕೆ ವೈಜ್ಞಾನಿಕ ಪುರಾವೆಗಳಿಂದ ಬೆಂಬಲಿತವಾಗಿವೆ ಎಂದು ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಗೋಮೂತ್ರವು ಬ್ಯಾಕ್ಟೀರಿಯಾ, ಶಿಲೀಂಧ್ರ ವಿರೋಧಿ ಮತ್ತು ಉರಿಯೂತ ನಿವಾರಕ ಗುಣಗಳನ್ನು ಹೊಂದಿದೆ ಎಂದು ಸಾಬೀತುಪಡಿಸುವ ಐದು ವೈಜ್ಞಾನಿಕ ಸಂಶೋಧನಾ ಪ್ರಬಂಧಗಳು ಅಮೆರಿಕನ್ ಶಿಕ್ಷಣ ತಜ್ಞರು ಪ್ರಕಟಿಸಿದ್ದಾರೆ” ಎಂದು ಹೇಳಿದ್ದಾರೆ.

ರಾಜಕೀಯ ನಾಯಕರ ಟೀಕೆಯ ಬಗ್ಗೆ ಪ್ರಶ್ನಿಸಿದಾಗ, ಪ್ರತಿಕ್ರಿಯೆ ನೀಡಲು ಕಾಮಕೋಟಿ ಅವರು ನಿರಾಕರಿಸಿದ್ದಾರೆ. ಆದರೆ, ತನ್ನ ಹೇಳಿಕೆಯನ್ನು ಪುನರುಚ್ಚರಿಸಿದ ಅವರು, ವಿಮರ್ಶಕರು ನನ್ನ ಹೇಳಿಕೆಯನ್ನು ವಿರೋಧಿಸುವ ಮೊದಲು ಸಂಶೋಧನಾ ಪ್ರಬಂಧಗಳನ್ನು ಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.

ಅಮೆರಿಕ ಇನ್ನು ಮುಂದೆ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಿದೆ : ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಟ್ರಂಪ್ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....