Homeಮುಖಪುಟಗೋಮೂತ್ರ ಖಾಯಿಲೆ ಗುಣಪಡಿಸುತ್ತದೆ ಎಂದ ಐಐಟಿ ಮದ್ರಾಸ್ ನಿರ್ದೇಶಕ : ವ್ಯಾಪಕ ಟೀಕೆ

ಗೋಮೂತ್ರ ಖಾಯಿಲೆ ಗುಣಪಡಿಸುತ್ತದೆ ಎಂದ ಐಐಟಿ ಮದ್ರಾಸ್ ನಿರ್ದೇಶಕ : ವ್ಯಾಪಕ ಟೀಕೆ

- Advertisement -
- Advertisement -

ಮದ್ರಾಸ್‌ನ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ-ಎಂ) ನಿರ್ದೇಶಕ ವಿ. ಕಾಮಕೋಟಿ ಅವರು ಗೋಮೂತ್ರ ಬ್ಯಾಕ್ಟೀರಿಯಾ, ಶಿಲೀಂಧ್ರ ವಿರೋಧಿ ಮತ್ತು ಜೀರ್ಣಕಾರಿ ಗುಣಗಳನ್ನು ಹೊಂದಿದ್ದು, ಜ್ವರ ಮತ್ತು ಕರುಳಿಗೆ ಸಂಬಂಧಿಸಿದ ಕಾಯಿಲೆಗಳನ್ನು ಗುಣಪಡಿಸುತ್ತದೆ ಎಂದು ಹೇಳಿಕೆ ನೀಡುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ.

ಜನವರಿ 15ರಂದು ನಡೆದ ‘ಗೋ ಸಂರಕ್ಷಣಾ ಸಾಲ’ ಎಂಬ ಕಾರ್ಯಕ್ರಮದಲ್ಲಿ  ಕಾಮಕೋಟಿ ಅವರು ಈ ಹೇಳಿಕೆಗಳನ್ನು ನೀಡಿದ್ದು, ಜನವರಿ 20ರ ಸೋಮವಾರ ಸಾರ್ವಜನಿಕರ ಗಮನಕ್ಕೆ ಬಂದ ಬಳಿಕ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ತಮ್ಮ ಭಾಷಣದಲ್ಲಿ ಕಾಮಕೋಟಿ ಅವರು ಗೋಮೂತ್ರ ಸೇವಿಸಿದ ನಂತರ ತೀವ್ರ ಜ್ವರದಿಂದ ಚೇತರಿಸಿಕೊಂಡ ಸನ್ಯಾಸಿಯೊಬ್ಬರ ಕಥೆ ಹೇಳಿದ್ದಾರೆ. ಗೋಮೂತ್ರ ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರ ವಿರೋಧಿ ಗುಣಗಳನ್ನು ಹೊಂದಿದೆ ಎನ್ನುವ ಮೂಲಕ ಅದರಲ್ಲಿ ‘ಔಷಧೀಯ ಗುಣವಿದೆ’ ಎಂದು ಪ್ರತಿಪಾದಿಸಿದ್ದಾರೆ.

ಕಾಮಕೋಟಿಯವರ ಹೇಳಿಕೆಗೆ ಅನೇಕರು ‘ಹುಸಿ ವಿಜ್ಞಾನ’ ಎಂದು ಪ್ರತಿಕ್ರಿಯೆ ನೀಡುವ ಮೂಲಕ ವ್ಯಂಗ್ಯವಾಡಿದ್ದಾರೆ. ಇನ್ನೂ ಕೆಲವರು ಐಐಟಿ ನಿರ್ದೇಶಕನ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು, ಕಾಮಕೋಟಿ ಅವರ ಹೇಳಿಕೆಗೆ ವ್ಯಂಗ್ಯವಾಗಿ ಪ್ರತಿಕ್ರಿಯಿಸುವ ಮೂಲಕ ಟೀಕೆ ಮಾಡಿದವರಲ್ಲಿ ಮೊದಲಿಗರು.

ಎಕ್ಸ್‌ನಲ್ಲಿ ಕಾಮಕೋಟಿಯವರ ಹೇಳಿಕೆಯ ಮಾಧ್ಯಮ ವರದಿಗಳನ್ನು ಹಂಚಿಕೊಂಡಿರುವ ಪ್ರಿಯಾಂಕ್ ಖರ್ಗೆ ” ಅದ್ಭುತ ವಿಚಾರ ! ಇದನ್ನು ಪೂರ್ಣ ಪ್ರಮಾಣದ ಸಾಮೂಹಿಕ ಆಂದೋಲನವನ್ನಾಗಿ ಪರಿವರ್ತಿಸೋಣ! ಎಲ್ಲಾ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಾಯಕರು ಮಾದರಿಯಾಗಿ ಮುನ್ನಡೆಯಬೇಕೆಂದು ನಾನು ಹೃತ್ಪೂರ್ವಕವಾಗಿ ಒತ್ತಾಯಿಸುತ್ತೇನೆ. ಸಾರ್ವಜನಿಕವಾಗಿ 250 ಮಿಲಿ (ಅಥವಾ ಕನಿಷ್ಠ 100 ಮಿಲಿ) ಗೋಮೂತ್ರವನ್ನು ಸೇವಿಸಿ ಮತ್ತು ಅದರ ಅದ್ಭುತ ಪ್ರಯೋಜನಗಳನ್ನು ಉತ್ಸಾಹದಿಂದ ತೋರಿಸಬೇಕು” ಎಂದು ಬರೆದುಕೊಂಡಿದ್ದಾರೆ.

“ಎರಡು ಪಟ್ಟು ಆರೋಗ್ಯವನ್ನು ಬಯಸುವವರು ಅಲ್ಲಿಗೇ ಏಕೆ ನಿಲ್ಲಿಸಬೇಕು? ಇದರ ಜೊತೆ ರುಚಿಕರವಾದ ಹಸುವಿನ ಸಗಣಿ ಕೇಕ್ ಅನ್ನೂ ಸೇರಿಸಿ” ಎಂದು ಕಾಲೆಳೆದಿದ್ದಾರೆ.

ಮುಂದುವರಿದು, “ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿರುವ ನಮ್ಮ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಪ್ರಮುಖ ಸಂಶೋಧನಾ ಸಂಸ್ಥೆಗಳು ನಗೆಪಾಟಲಿಗೆ ಈಡಾಗುತ್ತಿರುವುದು ದುರಂತ. ಒಂದು ಕಾಲದಲ್ಲಿ ರಾಷ್ಟ್ರದ ಹೆಮ್ಮೆಯಾಗಿದ್ದ ಈ ಸಂಸ್ಥೆಗಳು, ನಾವೀನ್ಯತೆಗೆ ಮೀಸಲಿಡಬೇಕಾದ ಉತ್ಸಾಹವನ್ನು ‘ಹುಸಿ ವಿಜ್ಞಾನ’ದ ಮೂಲಕ ಕಳೆದುಕೊಳ್ಳುತ್ತಿವೆ. ಈ ದೇಶದ ಬುದ್ಧಿಶಕ್ತಿಗೆ ಎಂತಹ ಅಪಚಾರ” ಎಂದಿದ್ದಾರೆ.

ಡಿಎಂಕೆ ವಕ್ತಾರ ಟಿ.ಕೆ.ಎಸ್ ಎಳಂಗೋವನ್ ಕೂಡ ಐಐಟಿ ನಿರ್ದೇಶಕ ಕಾಮಕೋಟಿ ಅವರ ಹೇಳಿಕೆ ಖಂಡಿಸಿದ್ದು, “ಅವರು (ಕಾಮಕೋಟಿ) ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾಗಲು ಅನರ್ಹರು. ಅವರನ್ನು ಶಿಕ್ಷಣ ವ್ಯವಸ್ಥೆಯಿಂದ ಹೊರಹಾಕಬೇಕು. ಅವರು ದೇವಸ್ಥಾನದಲ್ಲಿ ಪೂಜೆ ಮಾಡಲು ಅರ್ಹ, ಐಐಟಿ-ಎಂ ನಂತಹ ಸಂಸ್ಥೆಯನ್ನು ಮುನ್ನಡೆಸಲು ಅಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಕೀಯ ನಾಯಕರ ಟೀಕೆಯ ನಡುವೆಯೂ, ಕಾಮಕೋಟಿ ಅವರು ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡಿದ್ದು, ತನ್ನ ಹೇಳಿಕೆ ವೈಜ್ಞಾನಿಕ ಪುರಾವೆಗಳಿಂದ ಬೆಂಬಲಿತವಾಗಿವೆ ಎಂದು ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಗೋಮೂತ್ರವು ಬ್ಯಾಕ್ಟೀರಿಯಾ, ಶಿಲೀಂಧ್ರ ವಿರೋಧಿ ಮತ್ತು ಉರಿಯೂತ ನಿವಾರಕ ಗುಣಗಳನ್ನು ಹೊಂದಿದೆ ಎಂದು ಸಾಬೀತುಪಡಿಸುವ ಐದು ವೈಜ್ಞಾನಿಕ ಸಂಶೋಧನಾ ಪ್ರಬಂಧಗಳು ಅಮೆರಿಕನ್ ಶಿಕ್ಷಣ ತಜ್ಞರು ಪ್ರಕಟಿಸಿದ್ದಾರೆ” ಎಂದು ಹೇಳಿದ್ದಾರೆ.

ರಾಜಕೀಯ ನಾಯಕರ ಟೀಕೆಯ ಬಗ್ಗೆ ಪ್ರಶ್ನಿಸಿದಾಗ, ಪ್ರತಿಕ್ರಿಯೆ ನೀಡಲು ಕಾಮಕೋಟಿ ಅವರು ನಿರಾಕರಿಸಿದ್ದಾರೆ. ಆದರೆ, ತನ್ನ ಹೇಳಿಕೆಯನ್ನು ಪುನರುಚ್ಚರಿಸಿದ ಅವರು, ವಿಮರ್ಶಕರು ನನ್ನ ಹೇಳಿಕೆಯನ್ನು ವಿರೋಧಿಸುವ ಮೊದಲು ಸಂಶೋಧನಾ ಪ್ರಬಂಧಗಳನ್ನು ಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.

ಅಮೆರಿಕ ಇನ್ನು ಮುಂದೆ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಿದೆ : ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಟ್ರಂಪ್ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...