Homeರಾಷ್ಟ್ರಹೈದರಾಬಾದ್ ನಲ್ಲಿ ಐಐಟಿ ವಿದ್ಯಾರ್ಥಿ ಆತ್ಮಹತ್ಯೆ

ಹೈದರಾಬಾದ್ ನಲ್ಲಿ ಐಐಟಿ ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

ಹೈದರಾಬಾದ್ ನಲ್ಲಿ ಐಐಟಿ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ಕಟ್ಟಡದ ಮೂರನೇ ಮಹಡಿ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಹೈದರಾಬಾದ್ ಐಐಟಿಯಲ್ಲಿ ಮೂರನೇ ವರ್ಸದ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದ ಪಿಚ್ಚಿಕಾಲ ಸಿದ್ಧಾರ್ಥ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ.

ಇಂದು ಮುಂಜಾನೆ 3.30ರ ಸುಮಾರಿನಲ್ಲಿ ಸಂಗಾರೆಡ್ಡಿ ಜಿಲ್ಲೆಯ ಕಂಡ ಸಮೀಪವಿರುವ ಹೈದರಾಬಾದ್ ಐಐಟಿ ಕ್ಯಾಂಪಸ್ ನ ಹಾಸ್ಟೆಲ್ ಕಟ್ಟಡದ ಮೇಲಿನಿಂದ ಸಿದ್ಧಾರ್ಥ ಜಿಗಿದಿದ್ದಾನೆ. ತೀವ್ರ ಗಾಯಗೊಂಡು ಅಸ್ವಸ್ತನಾಗಿದ್ದ ಆತನನ್ನು ಬಾಲಾಜಿ ಕಾಂಟಿನೆಂಟಲ್ ಆಸ್ಪತ್ರೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಟೈಪ್ ಮಾಡಿ ಅದನ್ನು ತನ್ನ ಸ್ನೇಹಿತರಿಗೆ ಇ-ಮೇಲ್ ಮಾಡಿದ್ದಾನೆ. ಡೆತ್ ನೋಟ್ ನಲ್ಲಿ ‘ಜೀವನದಲ್ಲಿ ಖಿನ್ನತೆ ಉಂಟುಮಾಡಿದೆ. ತಪ್ಪಾದ ಎಳೆಗಳನ್ನು ಎಂದಿಗೂ ಕೊನೆಗೊಳಿಸಲು ಆಗುವುದಿಲ್ಲ. ಮಾನಸಿಕವಾಗಿ ಒತ್ತಡದಲ್ಲಿದ್ದೇನೆ. ಭವಿಷ್ಯದ ದಾರಿ ಕಾಣುತ್ತಿಲ್ಲ.’
‘ಎರಡು ತಿಂಗಳಿಂದಲೂ ಈ ಬಗ್ಗೆ ಯೋಚಿಸುತ್ತಿದ್ದೇನೆ. ವಿದ್ಯಾಭ್ಯಾಸದಲ್ಲಿ ಏಕಾಗ್ರತೆಯನ್ನು ಸಾಧಿಸಲು ಆಗುತ್ತಿಲ್ಲ. ಪ್ರತಿಯೊಂದು ಹೆಜ್ಜೆಯ ಬಗ್ಗೆಯೂ ವಿಮರ್ಶೆ ಮಾಡಿಕೊಂಡಿದ್ದೇನೆ. ಹೋಗಬಾರದೆಂದು ಕೊಂಡಿದ್ದೇನೆ. ಹೌದು, ಹೋಗಬಾರದು. ನಾನು ಸ್ವಾವಿಮರ್ಶೆ ಮಾಡಿಕೊಳ್ಳುವ ವ್ಯಕ್ತಿ. ‘
‘ಎಲ್ಲಾ ಸಮಯದಲ್ಲೂ ನನ್ನ ಹಿಂದಿನವರನ್ನು ಹೋಲಿಸಿಕೊಂಡರೆ ಆ ದಾರಿಯಲ್ಲಿ ಹೋಗಬೇಕು ಎನಿಸುತ್ತಿದೆ. ಆದರೆ ನನಗೆ ಓದುವುದರಲ್ಲಿ ಆಸಕ್ತಿ ಬರುತ್ತಿಲ್ಲ.ಭವಿಷ್ಯ ಬಗ್ಗೆ ದಾರಿ ಕಾಣುತ್ತಿಲ್ಲ ‘ ಹೀಗೆ ಬರೆದಿರುವ ಪಿಚ್ಚಕಾಲ ಸಿದ್ದಾರ್ಥ ತನ್ನ ನೋವನ್ನ ಪತ್ರದ ಮೂಲಕ ತೋಡಿಕೊಂಡಿದ್ದಾನೆ.
ಇದೇ ವರ್ಸದ ಜುಲೈ ತಿಂಗಳಲ್ಲಿ ಮಾರ್ಕ್ ಆಂಡ್ರ್ಯೂ ಚಾರ್ಲೆ ಆತ್ಮಹತ್ಯೆ ಮಾಡಿಕೊಂಡಿದ್ದ. ಹೈದರಾಬಾದ್ ನ ಐಐಟಿ ಕ್ಯಾಂಪಸಲ್ಲಿರುವ ಹಾಸ್ಟೆಲ್ ರೂಂನಲ್ಲಿ ಸೀಲಿಂಗ ಫ್ಯಾನ್ ಗೆ ಬಿಗಿದುಕೊಂಡು ನೇಣಿಗೆ ಶರಣಾಗಿದ್ದ. ಅವನು ಕೂಡ ಡೆತ್ ನೋಟ್ ಬರೆದಿದ್ದ. ಹೆಚ್ಚು ಅಂಕ ಪಡೆಯಲು ಆಗಿಲ್ಲ. ಹೀಗಾಗಿ ನನಗೆ ಭವಿಷ್ಯ ಇಲ್ಲ. ನಾನು ಜಗತ್ತಿನಲ್ಲಿ ವಿಫಲನಾಗಿದ್ದೇನೆ. ನಾನು ನಿಮ್ಮೆಲ್ಲರನ್ನು ನಿರಾಸೆಗೊಳಿಸಿದ್ದೇನೆ. ಎಂದು ನಾನು ಎಂದಿಗೂ ಆಲೋಚಿಸಿರಲಿಲ್ಲ.ನಾನು ಅರ್ಹನಲ್ಲ ಹೀಗೆ…
ಫೆಬ್ರವರಿ ತಿಂಗಳಲ್ಲಿ ಅನಿರುದ್ಧ ಮುಮ್ಮನೆಲಿ ಬಿಲ್ಡಿಂಗ ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ. ಪಿಎಚ್.ಡಿ. ವಿದ್ಯಾರ್ಥಿ ರೋಹಿತ್ ವೇಮುಲ ಹೈದರಾಬಾದ್ ಉಸ್ಮಾನಿಯಾ ಯೂನಿವರ್ಸಿಟಿಯ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ.
ಈ ಎಲ್ಲಾ ಪ್ರಕರಣಗಳು ಹೈದರಾಬಾದ್ ನಲ್ಲೇ ನಡೆದ್ದರೂ ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗಲು ಕಾರಣವೇನು ಎಂಬುದನ್ನು ಸರ್ಕಾರಗಳು ಕಂಡುಕೊಂಡಿಲ್ಲ. ವಿದ್ಯಾರ್ಥಿಗಳು ಮಾನಸಿಕ ಖಿನ್ನತೆಗೆ ಹೋಗದಂತೆ ಮಾಡಲು ಕ್ರಮ ಕೈಗೊಳ್ಳಬೇಕಾದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಲಕ್ಷ್ಯದಿಂದ ವರ್ತಿಸುತ್ತಿರುವುದಕ್ಕೆ ಇದು ಸಾಕ್ಷಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...