Homeಮುಖಪುಟಕ್ಯಾಂಪಸ್ ನೇಮಕಾತಿಗಳಲ್ಲಿ ಜಾತಿ ತಾರತಮ್ಯ : ಐಐಟಿಗಳು, ಕೇಂದ್ರ ಸರ್ಕಾರಕ್ಕೆ ಎಸ್‌ಸಿ ಆಯೋಗದಿಂದ ನೋಟಿಸ್

ಕ್ಯಾಂಪಸ್ ನೇಮಕಾತಿಗಳಲ್ಲಿ ಜಾತಿ ತಾರತಮ್ಯ : ಐಐಟಿಗಳು, ಕೇಂದ್ರ ಸರ್ಕಾರಕ್ಕೆ ಎಸ್‌ಸಿ ಆಯೋಗದಿಂದ ನೋಟಿಸ್

- Advertisement -
- Advertisement -

ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಗಳಲ್ಲಿ ಜಾತಿ ತಾರತಮ್ಯ ಮಾಡಲಾಗುತ್ತಿದೆ ಎಂಬ ಆರೋಪಗಳ ಕುರಿತು ಕ್ರಮ ಕೈಗೊಂಡ ಬಗ್ಗೆ ವರದಿ ನೀಡುವಂತೆ ಸೂಚಿಸಿ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ (ಎನ್‌ಸಿಎಸ್‌ಸಿ) ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯ, ಐಐಟಿ-ದೆಹಲಿ ಮತ್ತು ಐಐಟಿ-ಬಾಂಬೆ ನಿರ್ದೇಶಕರಿಗೆ ನೋಟಿಸ್ ನೀಡಿದೆ.

ಶಿಕ್ಷಣ ಹೋರಾಟಗಾರ ಮತ್ತು ಐಐಟಿ ಬಾಂಬೆಯ ಹಳೆ ವಿದ್ಯಾರ್ಥಿ ಧೀರಜ್ ಸಿಂಗ್ ಅವರು ನವೆಂಬರ್ 2023ರಲ್ಲಿ ನೀಡಿದ್ದ ದೂರಿನಲ್ಲಿ, ಕ್ಯಾಂಪಸ್‌ ನೇಮಕಾತಿ ವೇಳೆ ಪರಿಶಿಷ್ಟ ಜಾತಿ (ಎಸ್‌ಸಿ) ವಿದ್ಯಾರ್ಥಿಗಳ ವಿರುದ್ಧ ವ್ಯವಸ್ಥಿತ ಪಕ್ಷಪಾತ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವರದಿಯಾಗುತ್ತಿರುವ ಜಾತಿ ತಾರತಮ್ಯವನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಇತ್ತೀಚೆಗೆ ಮಧ್ಯಪ್ರವೇಶಿಸಿದ ನಂತರ ಜನವರಿ 15 ರಂದು ಎನ್‌ಸಿಎಸ್‌ಸಿ ನೋಟಿಸ್ ನೀಡಿದೆ. ದೇಶದಾದ್ಯಂತದ ಉನ್ನತ ಶಿಕ್ಷಣ ಸಂಸ್ಥಗಳಲ್ಲಿ ಕೇಳಿ ಬರುತ್ತಿರುವ ಜಾತಿ ತಾರತಮ್ಯದ ದೂರುಗಳ ಕುರಿತು ಸುಪ್ರೀಂ ಕೋರ್ಟ್ ವಿಶ್ವವಿದ್ಯಾಲಯ ಅನುದಾನ ಆಯೋಗದಿಂದ (ಯುಜಿಸಿ) ವಿವರವಾದ ವರದಿಯನ್ನು ಕೋರಿದೆ.

ವರದಿಗಳ ಪ್ರಕಾರ, 2023-24ರ ಉದ್ಯೋಗ ನೇಮಕಾತಿ ವೇಳೆ 300ಕ್ಕೂ ಹೆಚ್ಚು ಎಸ್‌ಸಿ ವಿದ್ಯಾರ್ಥಿಗಳು ತಾರತಮ್ಯಕ್ಕೆ ಒಳಗಾಗಿರುವುದನ್ನು ಧೀರಜ್ ಸಿಂಗ್ ಅವರ ದೂರಿನಲ್ಲಿ ವಿವರಿಸಿದ್ದಾರೆ. ಎರಡೂ ಐಐಟಿಗಳಲ್ಲಿನ ಉದ್ಯೋಗ ಅರ್ಜಿಗಳು ವಿದ್ಯಾರ್ಥಿಗಳು ತಮ್ಮ ಜಾತಿ ವರ್ಗ ಮತ್ತು ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ರ್ಯಾಂಕ್ ತಿಳಿಸುವಂತೆ ಸೂಚಿಸಿತ್ತು. ಇದು ವಿದ್ಯಾರ್ಥಿಗಳ ಸಾಮಾಜಿಕ ಆರ್ಥಿಕ ಹಿನ್ನೆಲೆ ಬಹಿರಂಗಪಡಿಸುವ ವಿವರಗಳಾಗಿವೆ ಎಂದು ಧೀರಜ್ ಸಿಂಗ್ ದೂರಿನಲ್ಲಿ ಆರೋಪಿಸಿದ್ದಾರೆ.

ಅರ್ಜಿ ನಮೂನೆಗಳ ಸ್ಕ್ರೀನ್‌ಶಾಟ್‌ಗಳನ್ನು ಸಾಕ್ಷಿಯಾಗಿ ಧೀರಜ್ ಸಿಂಗ್ ತನ್ನ ದೂರಿನಲ್ಲಿ ಸಲ್ಲಿಸಿದ್ದಾರೆ. ಐಐಟಿ-ಬಾಂಬೆ ಮತ್ತು ಐಐಟಿ-ದೆಹಲಿಯಲ್ಲಿ ಎಸ್‌ಸಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ಘಟನೆಗಳ ಬೆನ್ನಲ್ಲೇ ಧೀರಜ್ ಸಿಂಗ್ ಈ ಆರೋಪಗಳನ್ನು ಮಾಡಿದ್ದಾರೆ.

ಹಲವಾರು ಪ್ರಕರಣಗಳನ್ನು ಹಸ್ತಚಾಲಿತವಾಗಿ ನಿರ್ವಹಿಸುವ ತಾಂತ್ರಿಕ ದೋಷಗಳನ್ನು ಉಲ್ಲೇಖಿಸಿ, ದೂರನ್ನು ಪ್ರಕ್ರಿಯೆಗೊಳಿಸುವಲ್ಲಿ ವಿಳಂಬವಾಗಿದೆ ಎಂದು ಎನ್‌ಸಿಎಸ್‌ಸಿ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಆಯೋಗದ ಸೂಚನೆಗೆ ಪ್ರತಿಕ್ರಿಯಿಸಲು ಐಐಟಿಗಳು ಮತ್ತು ಶಿಕ್ಷಣ ಸಚಿವಾಲಯಕ್ಕೆ 15 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ.

ಕೊನೆಗೂ ‘ಪಾಶ್ ಸಮಿತಿ’ ರಚಿಸಿದ ಕರ್ನಾಟಕ ಫಿಲಂ ಚೇಂಬರ್ : ಆದರೆ ಬಹುಪಾಲು ಸದಸ್ಯರು ಪುರುಷರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...