Homeಮುಖಪುಟಕ್ಯಾಂಪಸ್ ನೇಮಕಾತಿಗಳಲ್ಲಿ ಜಾತಿ ತಾರತಮ್ಯ : ಐಐಟಿಗಳು, ಕೇಂದ್ರ ಸರ್ಕಾರಕ್ಕೆ ಎಸ್‌ಸಿ ಆಯೋಗದಿಂದ ನೋಟಿಸ್

ಕ್ಯಾಂಪಸ್ ನೇಮಕಾತಿಗಳಲ್ಲಿ ಜಾತಿ ತಾರತಮ್ಯ : ಐಐಟಿಗಳು, ಕೇಂದ್ರ ಸರ್ಕಾರಕ್ಕೆ ಎಸ್‌ಸಿ ಆಯೋಗದಿಂದ ನೋಟಿಸ್

- Advertisement -
- Advertisement -

ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಗಳಲ್ಲಿ ಜಾತಿ ತಾರತಮ್ಯ ಮಾಡಲಾಗುತ್ತಿದೆ ಎಂಬ ಆರೋಪಗಳ ಕುರಿತು ಕ್ರಮ ಕೈಗೊಂಡ ಬಗ್ಗೆ ವರದಿ ನೀಡುವಂತೆ ಸೂಚಿಸಿ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ (ಎನ್‌ಸಿಎಸ್‌ಸಿ) ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯ, ಐಐಟಿ-ದೆಹಲಿ ಮತ್ತು ಐಐಟಿ-ಬಾಂಬೆ ನಿರ್ದೇಶಕರಿಗೆ ನೋಟಿಸ್ ನೀಡಿದೆ.

ಶಿಕ್ಷಣ ಹೋರಾಟಗಾರ ಮತ್ತು ಐಐಟಿ ಬಾಂಬೆಯ ಹಳೆ ವಿದ್ಯಾರ್ಥಿ ಧೀರಜ್ ಸಿಂಗ್ ಅವರು ನವೆಂಬರ್ 2023ರಲ್ಲಿ ನೀಡಿದ್ದ ದೂರಿನಲ್ಲಿ, ಕ್ಯಾಂಪಸ್‌ ನೇಮಕಾತಿ ವೇಳೆ ಪರಿಶಿಷ್ಟ ಜಾತಿ (ಎಸ್‌ಸಿ) ವಿದ್ಯಾರ್ಥಿಗಳ ವಿರುದ್ಧ ವ್ಯವಸ್ಥಿತ ಪಕ್ಷಪಾತ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವರದಿಯಾಗುತ್ತಿರುವ ಜಾತಿ ತಾರತಮ್ಯವನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಇತ್ತೀಚೆಗೆ ಮಧ್ಯಪ್ರವೇಶಿಸಿದ ನಂತರ ಜನವರಿ 15 ರಂದು ಎನ್‌ಸಿಎಸ್‌ಸಿ ನೋಟಿಸ್ ನೀಡಿದೆ. ದೇಶದಾದ್ಯಂತದ ಉನ್ನತ ಶಿಕ್ಷಣ ಸಂಸ್ಥಗಳಲ್ಲಿ ಕೇಳಿ ಬರುತ್ತಿರುವ ಜಾತಿ ತಾರತಮ್ಯದ ದೂರುಗಳ ಕುರಿತು ಸುಪ್ರೀಂ ಕೋರ್ಟ್ ವಿಶ್ವವಿದ್ಯಾಲಯ ಅನುದಾನ ಆಯೋಗದಿಂದ (ಯುಜಿಸಿ) ವಿವರವಾದ ವರದಿಯನ್ನು ಕೋರಿದೆ.

ವರದಿಗಳ ಪ್ರಕಾರ, 2023-24ರ ಉದ್ಯೋಗ ನೇಮಕಾತಿ ವೇಳೆ 300ಕ್ಕೂ ಹೆಚ್ಚು ಎಸ್‌ಸಿ ವಿದ್ಯಾರ್ಥಿಗಳು ತಾರತಮ್ಯಕ್ಕೆ ಒಳಗಾಗಿರುವುದನ್ನು ಧೀರಜ್ ಸಿಂಗ್ ಅವರ ದೂರಿನಲ್ಲಿ ವಿವರಿಸಿದ್ದಾರೆ. ಎರಡೂ ಐಐಟಿಗಳಲ್ಲಿನ ಉದ್ಯೋಗ ಅರ್ಜಿಗಳು ವಿದ್ಯಾರ್ಥಿಗಳು ತಮ್ಮ ಜಾತಿ ವರ್ಗ ಮತ್ತು ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ರ್ಯಾಂಕ್ ತಿಳಿಸುವಂತೆ ಸೂಚಿಸಿತ್ತು. ಇದು ವಿದ್ಯಾರ್ಥಿಗಳ ಸಾಮಾಜಿಕ ಆರ್ಥಿಕ ಹಿನ್ನೆಲೆ ಬಹಿರಂಗಪಡಿಸುವ ವಿವರಗಳಾಗಿವೆ ಎಂದು ಧೀರಜ್ ಸಿಂಗ್ ದೂರಿನಲ್ಲಿ ಆರೋಪಿಸಿದ್ದಾರೆ.

ಅರ್ಜಿ ನಮೂನೆಗಳ ಸ್ಕ್ರೀನ್‌ಶಾಟ್‌ಗಳನ್ನು ಸಾಕ್ಷಿಯಾಗಿ ಧೀರಜ್ ಸಿಂಗ್ ತನ್ನ ದೂರಿನಲ್ಲಿ ಸಲ್ಲಿಸಿದ್ದಾರೆ. ಐಐಟಿ-ಬಾಂಬೆ ಮತ್ತು ಐಐಟಿ-ದೆಹಲಿಯಲ್ಲಿ ಎಸ್‌ಸಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ಘಟನೆಗಳ ಬೆನ್ನಲ್ಲೇ ಧೀರಜ್ ಸಿಂಗ್ ಈ ಆರೋಪಗಳನ್ನು ಮಾಡಿದ್ದಾರೆ.

ಹಲವಾರು ಪ್ರಕರಣಗಳನ್ನು ಹಸ್ತಚಾಲಿತವಾಗಿ ನಿರ್ವಹಿಸುವ ತಾಂತ್ರಿಕ ದೋಷಗಳನ್ನು ಉಲ್ಲೇಖಿಸಿ, ದೂರನ್ನು ಪ್ರಕ್ರಿಯೆಗೊಳಿಸುವಲ್ಲಿ ವಿಳಂಬವಾಗಿದೆ ಎಂದು ಎನ್‌ಸಿಎಸ್‌ಸಿ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಆಯೋಗದ ಸೂಚನೆಗೆ ಪ್ರತಿಕ್ರಿಯಿಸಲು ಐಐಟಿಗಳು ಮತ್ತು ಶಿಕ್ಷಣ ಸಚಿವಾಲಯಕ್ಕೆ 15 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ.

ಕೊನೆಗೂ ‘ಪಾಶ್ ಸಮಿತಿ’ ರಚಿಸಿದ ಕರ್ನಾಟಕ ಫಿಲಂ ಚೇಂಬರ್ : ಆದರೆ ಬಹುಪಾಲು ಸದಸ್ಯರು ಪುರುಷರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...