Homeಕರ್ನಾಟಕನಿಮ್ಮ ಗುಲಾಮರಾಗಿ ಇರ್ತೇವೆ: ಬೊಮ್ಮಾಯಿ ಮೆಚ್ಚಿಸುವ ಭರದಲ್ಲಿ ರಾಜುಗೌಡ ಎಡವಟ್ಟು

ನಿಮ್ಮ ಗುಲಾಮರಾಗಿ ಇರ್ತೇವೆ: ಬೊಮ್ಮಾಯಿ ಮೆಚ್ಚಿಸುವ ಭರದಲ್ಲಿ ರಾಜುಗೌಡ ಎಡವಟ್ಟು

- Advertisement -
- Advertisement -

‘ನಾವು ನಿಮ್ಮ ಗುಲಾಮರಾಗಿ ಇರ್ತೀವಿ…’ ಎಂದು ಸುರಪುರದ ಬಿಜೆಪಿ ಶಾಸಕ ರಾಜುಗೌಡ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ವಿಧಾನಸೌಧದ ಮುಂಭಾಗ ನಡೆದ ವಾಲ್ಮೀಕಿ ಜಯಂತಿ ದಿನಾಚರಣೆಯಲ್ಲಿ ರಾಜುಗೌಡ ಅವರು ಸಿಎಂ ಬೊಮ್ಮಾಯಿಗೆ ಹೀಗೆ ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ನಿವೃತ್ತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ದಾಸ್ ಅವರ ಸಮಿತಿ ಸಾಕಷ್ಟು ಶ್ರಮ ವಹಿಸಿ, ತಿಂಗಳಾನುಗಟ್ಟಲೆ ಅಧ್ಯಯನಗಳನ್ನು ನಡೆಸಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕೆಂದು ಸರ್ಕಾರಕ್ಕೆ ವರದಿ ನೀಡಿತ್ತು. ನಾಗಮೋಹನ್ ದಾಸ್ ವರದಿಯಲ್ಲಿ ಸತ್ಯಾಂಶ ಇದ್ದಿದ್ದರಿಂದ ರಾಜ್ಯ ಸರ್ಕಾರ ಎರಡೂ ಸಮುದಾಯಕ್ಕೆ ಶೇ.6ರಷ್ಟು ಮೀಸಲಾತಿ ಪ್ರಮಾಣ ಹೆಚ್ಚಿಸಿದೆ. ಇದನ್ನೆಲ್ಲ ಗಮನಿಸದ ಸುರಪುರ ಬಿಜೆಪಿ ಶಾಸಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಹೊಗಳುವ ಭರದಲ್ಲಿ ‘ನಾವು ನಿಮ್ಮ ಗುಲಾಮರಾಗಿ ಇರ್ತೀವಿ’ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಮೀಸಲಾತಿ ಎಂಬುದು ಭಿಕ್ಷೆಯಲ್ಲ, ಅದು ಸಾಂವಿಧಾನಿಕ ಹಕ್ಕು’, ‘ಮೀಸಲಾತಿ ಎಂಬುದು ಬಡತನ ನಿರ್ಮೂಲನಾ ಕಾರ್ಯಕ್ರಮವಲ್ಲ, ಸಾಮಾಜಿಕ ನ್ಯಾಯ ಜಾರಿಗೆ ಇರುವ ಅಸ್ತ್ರ’ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಸೇರಿದಂತೆ ಹಲವು ಮಹನೀಯರು ಪ್ರತಿಪಾದಿಸಿದ್ದಾರೆ. ಆದರೆ, ರಾಜುಗೌಡ ಈ ರೀತಿ ನೀಡಿರುವ ಹೇಳಿಕೆ ಈಗ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.

ರಾಜುಗೌಡ ಹೇಳಿದ್ದೇನು?

ವಿಧಾನಸೌಧದ ಮುಂಭಾಗ ನಡೆದ ವಾಲ್ಮೀಕಿ ಜಯಂತಿ ದಿನಾಚರಣೆಯಲ್ಲಿ ಮಾತನಾಡಿದ ಶಾಸಕರು “ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜೇನುಗೂಡಿಗೆ ಕೈ ಹಾಕಿ ಕಚ್ಚಿಸಿಕೊಂಡು ನಮಗೆ ಜೇನು ತಿನ್ನಿಸುವ ಕೆಲಸ ಮಾಡಿದ್ದಾರೆ. ಈ ಜೀವ ಇರುವವರೆಗೆ ನಿಮಗೆ ಗುಲಾಮರಾಗಿ ಇರ್ತಿವಿ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

“ಜೀವನದಲ್ಲಿ ಮರೆಯಲಾದ ದಿನ ಇದು, ಇಂತಹ ಕೆಲಸ ಆಗಬೇಕು ಅಂದರೆ ಎರಡು ಗುಂಡಿಗೆ ಇರಬೇಕು. ಆ ಗುಂಡಿಗೆ ನಮ್ಮ ಬಸಪ್ಪಣ್ಣನಿಗೆ ಇದೆ. ಅವರು ನಿಜವಾದ ಗಂಡುಗಲಿ” ಎಂದು ಬಣ್ಣಿಸಿದ್ದಾರೆ.

“ರಾಜುಗೌಡ ಅವರೇ ಮೀಸಲಾತಿ ಎಂಬುದು ಭಿಕ್ಷೆಯಲ್ಲ, ಅದು ನಮ್ಮ ಸಾಂವಿಧಾನಿಕ ಹಕ್ಕು. ಜಮೀನ್ದಾರರ ಗುಲಾಮಗಿರಿಯಿಂದ ಮುಕ್ತಿ ಪಡೆಯುವುದಕ್ಕಾಗಿಯೇ ಬಾಬಾ ಸಾಹೇಬರು ನಮಗೆ ರಾಜಕೀಯ, ಆರ್ಥಿಕ, ಶೈಕ್ಷಣಿಕ ಮತ್ತು ಔದ್ಯೋಗಿಕ ಮೀಸಲಾತಿ ನೀಡಿದ್ದಾರೆ. ನಿಮ್ಮ ಅಧಿಕಾರದ ಹಪಹಪಿಗೆ ಗುಲಾಮಗಿರಿ ಮಾತುಗಳನ್ನಾಡಬೇಡಿ, ‘ಗುಲಾಮರಾಗಿ ಇರ್ತೀವಿ’ ಅನ್ನೋ ನಿಮ್ಮ ಮಾತನ್ನು ವಾಪಸ್ ಪಡೆದುಕೊಳ್ಳಿ; ಬಹಿರಂಗವಾಗಿ ಕ್ಷಮೆ ಕೇಳಿ” ಎಂದು ರವಿಕುಮಾರ್‌ ಗಂಗಪ್ಪ ಎಂಬವರು ಆಗ್ರಹಿಸಿದ್ದಾರೆ.

ರಾಜುಗೌಡ ಮಾತಿಗೆ ಮುಖ್ಯಮಂತ್ರಿಯಿಂದಲೇ ಆಕ್ಷೇಪಣೆ!

ಗುಲಾಮರಾಗಿ ಇರ್ತೀವಿ ಅನ್ನೋ ರಾಜುಗೌಡ ಮಾತಿಗೆ ವೇದಿಕೆ ಮೇಲೆಯೇ ಆಕ್ಷೇಪ ವ್ಯಕ್ತಪಡಿಸಿದ ಮುಖ್ಯಮಂತ್ರಿ ಬೊಮ್ಮಾಯಿ, “ನೀನು ತಪ್ಪು ಮಾತಾಡಿದ್ಯಲೇ ರಾಜೂಗೌಡ. ನೀನು ಯಾರಿಗೂ ಗುಲಾಮ ಆಗಬೇಕಿಲ್ಲ. ಬದುಕು ಕೊಟ್ಟ ದೈವಕ್ಕೆ ಮಾತ್ರ ಗುಲಾಮನಾಗಬೇಕು. ಅಪ್ಪಿತಪ್ಪಿ ಇನ್ನೊಮ್ಮೆ ಆ ಶಬ್ದ ಬಂದರೆ ನಿನ್ನ ನಾನು ಬಿಡಲ್ಲ” ಎಂದು ಗದರಿದರು.

ಇದನ್ನೂ ಓದಿರಿ: ವಿಶ್ಲೇಷಣೆ: ಭಾರತ್‌ ಜೋಡೋ ನಂತರ ಕರ್ನಾಟಕ ಬಿಜೆಪಿಯ ಪ್ರತಿಕ್ರಿಯೆಗಳು

“ಪರಿಶಿಷ್ಟ ಸಮುದಾಯಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಾಗಲು ನ್ಯಾಯಮೂರ್ತಿ ನಾಗಮೋಹನ್ ದಾಸ್ ಹಾಗೂ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಅವರ ಶ್ರಮ ದೊಡ್ಡದು” ಎಂದು ಬೊಮ್ಮಾಯಿ ಶ್ಲಾಘಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Raajakiiya laabhakkaagi gulaamaragava manastiti raajaakaaranigalige hosadenu alla, aadare miisalaati hechchala yaaru saha kaiyetti Dana niiduvudalla, samvidhanadalli ruupisiruvantaha mulabhoota hakku.

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...