Homeಕರ್ನಾಟಕನಿಮ್ಮ ಗುಲಾಮರಾಗಿ ಇರ್ತೇವೆ: ಬೊಮ್ಮಾಯಿ ಮೆಚ್ಚಿಸುವ ಭರದಲ್ಲಿ ರಾಜುಗೌಡ ಎಡವಟ್ಟು

ನಿಮ್ಮ ಗುಲಾಮರಾಗಿ ಇರ್ತೇವೆ: ಬೊಮ್ಮಾಯಿ ಮೆಚ್ಚಿಸುವ ಭರದಲ್ಲಿ ರಾಜುಗೌಡ ಎಡವಟ್ಟು

- Advertisement -
- Advertisement -

‘ನಾವು ನಿಮ್ಮ ಗುಲಾಮರಾಗಿ ಇರ್ತೀವಿ…’ ಎಂದು ಸುರಪುರದ ಬಿಜೆಪಿ ಶಾಸಕ ರಾಜುಗೌಡ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ವಿಧಾನಸೌಧದ ಮುಂಭಾಗ ನಡೆದ ವಾಲ್ಮೀಕಿ ಜಯಂತಿ ದಿನಾಚರಣೆಯಲ್ಲಿ ರಾಜುಗೌಡ ಅವರು ಸಿಎಂ ಬೊಮ್ಮಾಯಿಗೆ ಹೀಗೆ ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ನಿವೃತ್ತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ದಾಸ್ ಅವರ ಸಮಿತಿ ಸಾಕಷ್ಟು ಶ್ರಮ ವಹಿಸಿ, ತಿಂಗಳಾನುಗಟ್ಟಲೆ ಅಧ್ಯಯನಗಳನ್ನು ನಡೆಸಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕೆಂದು ಸರ್ಕಾರಕ್ಕೆ ವರದಿ ನೀಡಿತ್ತು. ನಾಗಮೋಹನ್ ದಾಸ್ ವರದಿಯಲ್ಲಿ ಸತ್ಯಾಂಶ ಇದ್ದಿದ್ದರಿಂದ ರಾಜ್ಯ ಸರ್ಕಾರ ಎರಡೂ ಸಮುದಾಯಕ್ಕೆ ಶೇ.6ರಷ್ಟು ಮೀಸಲಾತಿ ಪ್ರಮಾಣ ಹೆಚ್ಚಿಸಿದೆ. ಇದನ್ನೆಲ್ಲ ಗಮನಿಸದ ಸುರಪುರ ಬಿಜೆಪಿ ಶಾಸಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಹೊಗಳುವ ಭರದಲ್ಲಿ ‘ನಾವು ನಿಮ್ಮ ಗುಲಾಮರಾಗಿ ಇರ್ತೀವಿ’ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಮೀಸಲಾತಿ ಎಂಬುದು ಭಿಕ್ಷೆಯಲ್ಲ, ಅದು ಸಾಂವಿಧಾನಿಕ ಹಕ್ಕು’, ‘ಮೀಸಲಾತಿ ಎಂಬುದು ಬಡತನ ನಿರ್ಮೂಲನಾ ಕಾರ್ಯಕ್ರಮವಲ್ಲ, ಸಾಮಾಜಿಕ ನ್ಯಾಯ ಜಾರಿಗೆ ಇರುವ ಅಸ್ತ್ರ’ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಸೇರಿದಂತೆ ಹಲವು ಮಹನೀಯರು ಪ್ರತಿಪಾದಿಸಿದ್ದಾರೆ. ಆದರೆ, ರಾಜುಗೌಡ ಈ ರೀತಿ ನೀಡಿರುವ ಹೇಳಿಕೆ ಈಗ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.

ರಾಜುಗೌಡ ಹೇಳಿದ್ದೇನು?

ವಿಧಾನಸೌಧದ ಮುಂಭಾಗ ನಡೆದ ವಾಲ್ಮೀಕಿ ಜಯಂತಿ ದಿನಾಚರಣೆಯಲ್ಲಿ ಮಾತನಾಡಿದ ಶಾಸಕರು “ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜೇನುಗೂಡಿಗೆ ಕೈ ಹಾಕಿ ಕಚ್ಚಿಸಿಕೊಂಡು ನಮಗೆ ಜೇನು ತಿನ್ನಿಸುವ ಕೆಲಸ ಮಾಡಿದ್ದಾರೆ. ಈ ಜೀವ ಇರುವವರೆಗೆ ನಿಮಗೆ ಗುಲಾಮರಾಗಿ ಇರ್ತಿವಿ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

“ಜೀವನದಲ್ಲಿ ಮರೆಯಲಾದ ದಿನ ಇದು, ಇಂತಹ ಕೆಲಸ ಆಗಬೇಕು ಅಂದರೆ ಎರಡು ಗುಂಡಿಗೆ ಇರಬೇಕು. ಆ ಗುಂಡಿಗೆ ನಮ್ಮ ಬಸಪ್ಪಣ್ಣನಿಗೆ ಇದೆ. ಅವರು ನಿಜವಾದ ಗಂಡುಗಲಿ” ಎಂದು ಬಣ್ಣಿಸಿದ್ದಾರೆ.

“ರಾಜುಗೌಡ ಅವರೇ ಮೀಸಲಾತಿ ಎಂಬುದು ಭಿಕ್ಷೆಯಲ್ಲ, ಅದು ನಮ್ಮ ಸಾಂವಿಧಾನಿಕ ಹಕ್ಕು. ಜಮೀನ್ದಾರರ ಗುಲಾಮಗಿರಿಯಿಂದ ಮುಕ್ತಿ ಪಡೆಯುವುದಕ್ಕಾಗಿಯೇ ಬಾಬಾ ಸಾಹೇಬರು ನಮಗೆ ರಾಜಕೀಯ, ಆರ್ಥಿಕ, ಶೈಕ್ಷಣಿಕ ಮತ್ತು ಔದ್ಯೋಗಿಕ ಮೀಸಲಾತಿ ನೀಡಿದ್ದಾರೆ. ನಿಮ್ಮ ಅಧಿಕಾರದ ಹಪಹಪಿಗೆ ಗುಲಾಮಗಿರಿ ಮಾತುಗಳನ್ನಾಡಬೇಡಿ, ‘ಗುಲಾಮರಾಗಿ ಇರ್ತೀವಿ’ ಅನ್ನೋ ನಿಮ್ಮ ಮಾತನ್ನು ವಾಪಸ್ ಪಡೆದುಕೊಳ್ಳಿ; ಬಹಿರಂಗವಾಗಿ ಕ್ಷಮೆ ಕೇಳಿ” ಎಂದು ರವಿಕುಮಾರ್‌ ಗಂಗಪ್ಪ ಎಂಬವರು ಆಗ್ರಹಿಸಿದ್ದಾರೆ.

ರಾಜುಗೌಡ ಮಾತಿಗೆ ಮುಖ್ಯಮಂತ್ರಿಯಿಂದಲೇ ಆಕ್ಷೇಪಣೆ!

ಗುಲಾಮರಾಗಿ ಇರ್ತೀವಿ ಅನ್ನೋ ರಾಜುಗೌಡ ಮಾತಿಗೆ ವೇದಿಕೆ ಮೇಲೆಯೇ ಆಕ್ಷೇಪ ವ್ಯಕ್ತಪಡಿಸಿದ ಮುಖ್ಯಮಂತ್ರಿ ಬೊಮ್ಮಾಯಿ, “ನೀನು ತಪ್ಪು ಮಾತಾಡಿದ್ಯಲೇ ರಾಜೂಗೌಡ. ನೀನು ಯಾರಿಗೂ ಗುಲಾಮ ಆಗಬೇಕಿಲ್ಲ. ಬದುಕು ಕೊಟ್ಟ ದೈವಕ್ಕೆ ಮಾತ್ರ ಗುಲಾಮನಾಗಬೇಕು. ಅಪ್ಪಿತಪ್ಪಿ ಇನ್ನೊಮ್ಮೆ ಆ ಶಬ್ದ ಬಂದರೆ ನಿನ್ನ ನಾನು ಬಿಡಲ್ಲ” ಎಂದು ಗದರಿದರು.

ಇದನ್ನೂ ಓದಿರಿ: ವಿಶ್ಲೇಷಣೆ: ಭಾರತ್‌ ಜೋಡೋ ನಂತರ ಕರ್ನಾಟಕ ಬಿಜೆಪಿಯ ಪ್ರತಿಕ್ರಿಯೆಗಳು

“ಪರಿಶಿಷ್ಟ ಸಮುದಾಯಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಾಗಲು ನ್ಯಾಯಮೂರ್ತಿ ನಾಗಮೋಹನ್ ದಾಸ್ ಹಾಗೂ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಅವರ ಶ್ರಮ ದೊಡ್ಡದು” ಎಂದು ಬೊಮ್ಮಾಯಿ ಶ್ಲಾಘಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Raajakiiya laabhakkaagi gulaamaragava manastiti raajaakaaranigalige hosadenu alla, aadare miisalaati hechchala yaaru saha kaiyetti Dana niiduvudalla, samvidhanadalli ruupisiruvantaha mulabhoota hakku.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...