Homeಕರ್ನಾಟಕನಿಮ್ಮ ಗುಲಾಮರಾಗಿ ಇರ್ತೇವೆ: ಬೊಮ್ಮಾಯಿ ಮೆಚ್ಚಿಸುವ ಭರದಲ್ಲಿ ರಾಜುಗೌಡ ಎಡವಟ್ಟು

ನಿಮ್ಮ ಗುಲಾಮರಾಗಿ ಇರ್ತೇವೆ: ಬೊಮ್ಮಾಯಿ ಮೆಚ್ಚಿಸುವ ಭರದಲ್ಲಿ ರಾಜುಗೌಡ ಎಡವಟ್ಟು

- Advertisement -
- Advertisement -

‘ನಾವು ನಿಮ್ಮ ಗುಲಾಮರಾಗಿ ಇರ್ತೀವಿ…’ ಎಂದು ಸುರಪುರದ ಬಿಜೆಪಿ ಶಾಸಕ ರಾಜುಗೌಡ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ವಿಧಾನಸೌಧದ ಮುಂಭಾಗ ನಡೆದ ವಾಲ್ಮೀಕಿ ಜಯಂತಿ ದಿನಾಚರಣೆಯಲ್ಲಿ ರಾಜುಗೌಡ ಅವರು ಸಿಎಂ ಬೊಮ್ಮಾಯಿಗೆ ಹೀಗೆ ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ನಿವೃತ್ತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ದಾಸ್ ಅವರ ಸಮಿತಿ ಸಾಕಷ್ಟು ಶ್ರಮ ವಹಿಸಿ, ತಿಂಗಳಾನುಗಟ್ಟಲೆ ಅಧ್ಯಯನಗಳನ್ನು ನಡೆಸಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕೆಂದು ಸರ್ಕಾರಕ್ಕೆ ವರದಿ ನೀಡಿತ್ತು. ನಾಗಮೋಹನ್ ದಾಸ್ ವರದಿಯಲ್ಲಿ ಸತ್ಯಾಂಶ ಇದ್ದಿದ್ದರಿಂದ ರಾಜ್ಯ ಸರ್ಕಾರ ಎರಡೂ ಸಮುದಾಯಕ್ಕೆ ಶೇ.6ರಷ್ಟು ಮೀಸಲಾತಿ ಪ್ರಮಾಣ ಹೆಚ್ಚಿಸಿದೆ. ಇದನ್ನೆಲ್ಲ ಗಮನಿಸದ ಸುರಪುರ ಬಿಜೆಪಿ ಶಾಸಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಹೊಗಳುವ ಭರದಲ್ಲಿ ‘ನಾವು ನಿಮ್ಮ ಗುಲಾಮರಾಗಿ ಇರ್ತೀವಿ’ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಮೀಸಲಾತಿ ಎಂಬುದು ಭಿಕ್ಷೆಯಲ್ಲ, ಅದು ಸಾಂವಿಧಾನಿಕ ಹಕ್ಕು’, ‘ಮೀಸಲಾತಿ ಎಂಬುದು ಬಡತನ ನಿರ್ಮೂಲನಾ ಕಾರ್ಯಕ್ರಮವಲ್ಲ, ಸಾಮಾಜಿಕ ನ್ಯಾಯ ಜಾರಿಗೆ ಇರುವ ಅಸ್ತ್ರ’ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಸೇರಿದಂತೆ ಹಲವು ಮಹನೀಯರು ಪ್ರತಿಪಾದಿಸಿದ್ದಾರೆ. ಆದರೆ, ರಾಜುಗೌಡ ಈ ರೀತಿ ನೀಡಿರುವ ಹೇಳಿಕೆ ಈಗ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.

ರಾಜುಗೌಡ ಹೇಳಿದ್ದೇನು?

ವಿಧಾನಸೌಧದ ಮುಂಭಾಗ ನಡೆದ ವಾಲ್ಮೀಕಿ ಜಯಂತಿ ದಿನಾಚರಣೆಯಲ್ಲಿ ಮಾತನಾಡಿದ ಶಾಸಕರು “ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜೇನುಗೂಡಿಗೆ ಕೈ ಹಾಕಿ ಕಚ್ಚಿಸಿಕೊಂಡು ನಮಗೆ ಜೇನು ತಿನ್ನಿಸುವ ಕೆಲಸ ಮಾಡಿದ್ದಾರೆ. ಈ ಜೀವ ಇರುವವರೆಗೆ ನಿಮಗೆ ಗುಲಾಮರಾಗಿ ಇರ್ತಿವಿ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

“ಜೀವನದಲ್ಲಿ ಮರೆಯಲಾದ ದಿನ ಇದು, ಇಂತಹ ಕೆಲಸ ಆಗಬೇಕು ಅಂದರೆ ಎರಡು ಗುಂಡಿಗೆ ಇರಬೇಕು. ಆ ಗುಂಡಿಗೆ ನಮ್ಮ ಬಸಪ್ಪಣ್ಣನಿಗೆ ಇದೆ. ಅವರು ನಿಜವಾದ ಗಂಡುಗಲಿ” ಎಂದು ಬಣ್ಣಿಸಿದ್ದಾರೆ.

“ರಾಜುಗೌಡ ಅವರೇ ಮೀಸಲಾತಿ ಎಂಬುದು ಭಿಕ್ಷೆಯಲ್ಲ, ಅದು ನಮ್ಮ ಸಾಂವಿಧಾನಿಕ ಹಕ್ಕು. ಜಮೀನ್ದಾರರ ಗುಲಾಮಗಿರಿಯಿಂದ ಮುಕ್ತಿ ಪಡೆಯುವುದಕ್ಕಾಗಿಯೇ ಬಾಬಾ ಸಾಹೇಬರು ನಮಗೆ ರಾಜಕೀಯ, ಆರ್ಥಿಕ, ಶೈಕ್ಷಣಿಕ ಮತ್ತು ಔದ್ಯೋಗಿಕ ಮೀಸಲಾತಿ ನೀಡಿದ್ದಾರೆ. ನಿಮ್ಮ ಅಧಿಕಾರದ ಹಪಹಪಿಗೆ ಗುಲಾಮಗಿರಿ ಮಾತುಗಳನ್ನಾಡಬೇಡಿ, ‘ಗುಲಾಮರಾಗಿ ಇರ್ತೀವಿ’ ಅನ್ನೋ ನಿಮ್ಮ ಮಾತನ್ನು ವಾಪಸ್ ಪಡೆದುಕೊಳ್ಳಿ; ಬಹಿರಂಗವಾಗಿ ಕ್ಷಮೆ ಕೇಳಿ” ಎಂದು ರವಿಕುಮಾರ್‌ ಗಂಗಪ್ಪ ಎಂಬವರು ಆಗ್ರಹಿಸಿದ್ದಾರೆ.

ರಾಜುಗೌಡ ಮಾತಿಗೆ ಮುಖ್ಯಮಂತ್ರಿಯಿಂದಲೇ ಆಕ್ಷೇಪಣೆ!

ಗುಲಾಮರಾಗಿ ಇರ್ತೀವಿ ಅನ್ನೋ ರಾಜುಗೌಡ ಮಾತಿಗೆ ವೇದಿಕೆ ಮೇಲೆಯೇ ಆಕ್ಷೇಪ ವ್ಯಕ್ತಪಡಿಸಿದ ಮುಖ್ಯಮಂತ್ರಿ ಬೊಮ್ಮಾಯಿ, “ನೀನು ತಪ್ಪು ಮಾತಾಡಿದ್ಯಲೇ ರಾಜೂಗೌಡ. ನೀನು ಯಾರಿಗೂ ಗುಲಾಮ ಆಗಬೇಕಿಲ್ಲ. ಬದುಕು ಕೊಟ್ಟ ದೈವಕ್ಕೆ ಮಾತ್ರ ಗುಲಾಮನಾಗಬೇಕು. ಅಪ್ಪಿತಪ್ಪಿ ಇನ್ನೊಮ್ಮೆ ಆ ಶಬ್ದ ಬಂದರೆ ನಿನ್ನ ನಾನು ಬಿಡಲ್ಲ” ಎಂದು ಗದರಿದರು.

ಇದನ್ನೂ ಓದಿರಿ: ವಿಶ್ಲೇಷಣೆ: ಭಾರತ್‌ ಜೋಡೋ ನಂತರ ಕರ್ನಾಟಕ ಬಿಜೆಪಿಯ ಪ್ರತಿಕ್ರಿಯೆಗಳು

“ಪರಿಶಿಷ್ಟ ಸಮುದಾಯಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಾಗಲು ನ್ಯಾಯಮೂರ್ತಿ ನಾಗಮೋಹನ್ ದಾಸ್ ಹಾಗೂ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಅವರ ಶ್ರಮ ದೊಡ್ಡದು” ಎಂದು ಬೊಮ್ಮಾಯಿ ಶ್ಲಾಘಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Raajakiiya laabhakkaagi gulaamaragava manastiti raajaakaaranigalige hosadenu alla, aadare miisalaati hechchala yaaru saha kaiyetti Dana niiduvudalla, samvidhanadalli ruupisiruvantaha mulabhoota hakku.

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...