Homeಮುಖಪುಟಹಿಂದಿನ ಬಿಜೆಪಿ ಸರ್ಕಾರದಿಂದ ಆರ್‌ಎಸ್‌ಎಸ್‌ ಸಂಸ್ಥೆಗೆ ನೂರಾರು ಎಕರೆ ಅಕ್ರಮ ಭೂ ಹಂಚಿಕೆ: ದಿನೇಶ್ ಗುಂಡೂರಾವ್

ಹಿಂದಿನ ಬಿಜೆಪಿ ಸರ್ಕಾರದಿಂದ ಆರ್‌ಎಸ್‌ಎಸ್‌ ಸಂಸ್ಥೆಗೆ ನೂರಾರು ಎಕರೆ ಅಕ್ರಮ ಭೂ ಹಂಚಿಕೆ: ದಿನೇಶ್ ಗುಂಡೂರಾವ್

- Advertisement -
- Advertisement -

ಹಿಂದಿನ ಬಿಜೆಪಿ ಸರ್ಕಾರವು ಆರ್‌ಎಸ್‌ಎಸ್‌ ಸಂಸ್ಥೆಗೆ ನೂರಾರು ಎಕರೆ ಅಕ್ರಮ ಭೂ ಹಂಚಿಕೆ ಮಾಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಈ ಕುರಿತು ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ತಮ್ಮ ಪಕ್ಷ ಹಾಗೂ ಪಕ್ಷದ ಸಿದ್ಧಾಂತ ಬೆಳವಣಿಗೆಯ ಸಲುವಾಗಿ ಹಿಂದಿದ್ದ ಬಿಜೆಪಿ ಸರ್ಕಾರ ಕಾನೂನು ಉಲ್ಲಂಘಿಸಿ ಆರ್‌ಎಸ್‌ಎಸ್‌ ಸಂಸ್ಥೆಗೆ ಅಕ್ರಮ ಭೂ ಹಂಚಿಕೆ ಮಾಡಿರುವುದು ನಿಜ. ಈ ಸಂಬಂಧ ದಾಖಲೆಗಳು ಲಭ್ಯವಾಗಿವೆ” ಎಂದಿದ್ದಾರೆ.

ಬಿಜೆಪಿ ಸರ್ಕಾರದ ಈ ಅಕ್ರಮ ಪರಭಾರೆ ವಿಚಾರವನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ. ಈ ಸಂಬಂಧ ಕಂದಾಯ ಸಚಿವರು ಹಾಗೂ ಮುಖ್ಯಮಂತ್ರಿಗಳು ಚರ್ಚಿಸಿ ಮುಂದಿನ ಕ್ರಮ ಜರುಗಿಸಲಿದ್ದಾರೆ ಎಂದು ಅವರು ಹೇಳಿದರು.

ಬಿಜೆಪಿಯವರು ಇತಿಹಾಸ ತಿರುಚುವ ಕೆಲಸ ಮಾಡಿದ್ದಾರೆ, ತಮ್ಮ ಅಧಿಕಾರದಲ್ಲಿ ದ್ವೇಷವನ್ನ ಬಿತ್ತುವ ಕೆಲಸ ಮಾಡುತ್ತಿದ್ದರು, ಪಠ್ಯಗಳಲ್ಲಿ ಬದಲಾವಣೆ ಮಾಡಿದ್ದೂ ಕೂಡ ಇದೇ ಕಾರಣಕ್ಕೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಹಿಂದಿನ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಅಕ್ರಮಗಳಾಗಿದ್ದವು. ಹೀಗಾಗಿ ಈಗಾಗಲೇ ಕೆಲ ಟೆಂಡರ್ ಗಳನ್ನ ರದ್ದುಪಡಿಸಿದ್ದೇವೆ, ಇದರಲ್ಲಿ ಜಿಕೆವಿಕೆ ಸಂಸ್ಥೆಗೆ ನೀಡಿದ್ದ 108 ಗುತ್ತಿಗೆಯನ್ನ ರದ್ದುಪಡಿಸಿದ್ದೇವೆ ಎಂದು ಅವರು ತಿಳಿಸಿದರು.

ಇದಿಷ್ಟೇ ಅಲ್ಲದೆ, ರಾಜ್ಯದ ಡಯಾಲಿಸಿಸ್ ಕೇಂದ್ರಗಳಲ್ಲಿ ಅವ್ಯವಸ್ಥೆ ಇದೆ, ಹಾಗಾಗಿ ಡಯಾಲಿಸಿಸ್ ಟೆಂಡರ್ ಅನ್ನೂ ರದ್ದುಪಡಿಸಲಾಗಿದೆ, ಈಗ ಜರೂರಾಗಿರುವ ಕೆಲಸಗಳನ್ನ ಮಾಡುತ್ತಿದ್ದೇವೆ, ಇಲಾಖೆಯ ಕಾರ್ಯನಿರ್ವಹಣೆ ಬದಲಾವಣೆ ಕೆಲಸ ನಡೆಯುತ್ತಿದೆ, ಅಧಿಕಾರಿಗಳು, ವೈದ್ಯರ ಕಾರ್ಯನಿರ್ವಹಣೆ ಸರಿಪಡಿಸಬೇಕಿದೆ, ಪಾಲಿಸಿ ವಿಚಾರಗಳನ್ನ ಬದಲಾಯಿಸಬೇಕಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಇದನ್ನೂ ಓದಿ: ಹಜ್ ಭವನಕ್ಕೆ 5000 ಕೋಟಿ ರೂ. ಬಿಡುಗಡೆ ವಿಚಾರ: ಸುಳ್ಳು ಸುದ್ದಿ ಹರಡದಂತೆ ಮಾಧ್ಯಮಗಳಿಗೆ ಕಾಂಗ್ರೆಸ್ ಕಿವಿಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...