Homeಮುಖಪುಟಅಂತರ್ಧರ್ಮೀಯ ದಂಪತಿಯ ಅಕ್ರಮ ಬಂಧನ : ಪೊಲೀಸರಿಗೆ ಛೀಮಾರಿ ಹಾಕಿದ ಹೈಕೋರ್ಟ್, ತಕ್ಷಣ ಬಿಡುಗಡೆಗೆ ಆದೇಶ

ಅಂತರ್ಧರ್ಮೀಯ ದಂಪತಿಯ ಅಕ್ರಮ ಬಂಧನ : ಪೊಲೀಸರಿಗೆ ಛೀಮಾರಿ ಹಾಕಿದ ಹೈಕೋರ್ಟ್, ತಕ್ಷಣ ಬಿಡುಗಡೆಗೆ ಆದೇಶ

ಸಾಮಾಜಿಕ ಒತ್ತಡಕ್ಕೆ ಬಂಧಿಸಿದ್ದೇವೆ ಎಂದ ಪೊಲೀಸರಿಗೆ ಹೈಕೋರ್ಟ್ ತರಾಟೆ

- Advertisement -
- Advertisement -

ಹಿಂದೂ-ಮುಸ್ಲಿಂ ದಂಪತಿಯನ್ನು ಅಕ್ರಮವಾಗಿ ಬಂಧಿಸಿದ ಪೊಲೀಸರಿಗೆ ಶನಿವಾರ (ಅ.19) ಛೀಮಾರಿ ಹಾಕಿದ ಅಲಹಾಬಾದ್ ಹೈಕೋರ್ಟ್, ಪೊಲೀಸರ ನಡೆ ಕಾನೂನುಬಾಹಿರ ಮತ್ತು ಸಂವಿಧಾನದ 21ನೇ ವಿಧಿಯಡಿ ಖಾತ್ರಿ ಪಡಿಸಲಾದ ದಂಪತಿಯ ಮೂಲಭೂತ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ಎಂದು ಹೇಳಿದೆ.

ದಂಪತಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಹೈಕೋರ್ಟ್ ಪೊಲೀಸರಿಗೆ ಆದೇಶಿಸಿದ್ದು, ಅವರಿಗೆ ಯಾವುದೇ ಕಿರುಕುಳ ನೀಡದೆ ಅಲೀಗಢ ತಲುಪುವವರೆಗೆ ರಕ್ಷಣೆ ಒದಗಿಸುವಂತೆ ಸೂಚಿಸಿದೆ.

ಶೇನ್ ಅಲೀ ಮತ್ತು ರಶ್ಮಿ ಈ ಪ್ರಕರಣದ ದಂಪತಿ. ನನ್ನ ಮಗಳನ್ನು ಶೇನ್ ಅಲೀ ಅಪಹರಿಸಿದ್ದಾನೆ ಎಂದು ಸೆಪ್ಟೆಂಬರ್ 27ರಂದು ಅಲೀಗಢದ ಅಕ್ರಬಾದ್ ಪೊಲೀಸ್ ಠಾಣೆಯಲ್ಲಿ ರಶ್ಮಿಯ ತಂದೆ ದೂರು ದಾಖಲಿಸಿದ್ದರು.

ಅಕ್ಟೋಬರ್ 15ರಂದು ಹೈಕೋರ್ಟ್‌ ಮುಂದೆ ಹಾಜರಾದ ದಂಪತಿ, ನಾವು ಇಬ್ಬರೂ ವಯಸ್ಕರು, ಪರಸ್ಪರ ಇಷ್ಟಪಟ್ಟು ಮದುವೆ ಮಾಡಿಕೊಂಡಿದ್ದೇವೆ ಎಂದಿದ್ದರು. ತನ್ನ ವಿರುದ್ದ ರಶ್ಮಿಯ ತಂದೆ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಶೇನ್ ಅಲೀ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ದಂಪತಿ ಹೈಕೋರ್ಟ್‌ನಿಂದ ಹೊರ ಬಂದ ಕೂಡಲೇ ರಶ್ಮಿಯ ತಂದೆ ಸ್ಥಳೀಯ ಪೊಲೀಸರ ಸಹಾಯದಿಂದ ಇಬ್ಬರನ್ನೂ ಅಪಹರಿಸಿದ್ದರು. ಅವರನ್ನು ಅಲೀಗಢಕ್ಕೆ ಕರೆದೊಯ್ದು, ರಶ್ಮಿಯನ್ನು ‘ಒನ್ ಸ್ಟಾಪ್ ಸೆಂಟರ್’ ಅಥವಾ ಸಾಂತ್ವನ ಕೇಂದ್ರದಲ್ಲಿ ಇರಿಸಿದ್ದರು. ಶೇನ್ ಅಲೀಯನ್ನು ಪೊಲೀಸರು ಬಂಧಿಸಿ ಲಾಕ್‌ ಅಪ್‌ನಲ್ಲಿ ಇಟ್ಟಿದ್ದರು.

ಅಕ್ಟೋಬರ್ 17ರಂದು ದಂಪತಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ಸೆಕ್ಷನ್ 183ರ ಅಡಿ ರಶ್ಮಿ ಹೇಳಿಕೆ ನೀಡಿದ್ದರು.

ಈ ನಡುವೆ ಶೇನ್ ಅಲೀಯ ಸಹೋದರ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಶನಿವಾರ ರಜಾ ದಿನವಾದರೂ ನ್ಯಾಯಮೂರ್ತಿಗಳಾದ ಸಲೀಲ್ ಕುಮಾರ್ ರೈ ಮತ್ತು ದಿವೇಶ್ ಚಂದ್ರ ಸಮಂತ್ ಅವರ ವಿಭಾಗೀಯ ಪೀಠವು ಅರ್ಜಿಯ ವಿಚಾರಣೆ ನಡೆಸಿದೆ.

ವಿಚಾರಣೆ ವೇಳೆ, “ಅಕ್ಟೋಬರ್ 17 ರಂದು ರಶ್ಮಿಯನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ. ಅಲ್ಲಿ ಆಕೆ ವಯಸ್ಕಳೆಂದು ಕಂಡುಬಂದಿದೆ. ಅಲ್ಲದೆ, ಶೇನ್ ಅಲೀಯನ್ನು ಸ್ವಇಚ್ಛೆಯಿಂದ ಮದುವೆಯಾಗಿರುವುದಾಗಿ ಸ್ಪಷ್ಟವಾಗಿ ಹೇಳಿದ್ದಾರೆ” ಎಂದು ಸರ್ಕಾರಿ ವಕೀಲರು ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

“ವಿಡಿಯೋ ಕಾನ್ಫರೆನ್ಸ್‌ನಲ್ಲಿ ನ್ಯಾಯಾಧೀಶರ ಮುಂದೆ ಹಾಜರಾದ ರಶ್ಮಿ, “ತನಗೆ 21 ವರ್ಷ ವಯಸ್ಸಾಗಿದ್ದು, ಶೇನ್ ಅಲಿಯನ್ನು ಸ್ವಇಚ್ಛೆಯಿಂದ ಮದುವೆಯಾಗಿದ್ದೇನೆ. ಆತನೊಂದಿಗೆ ಜೀವಿಸಲು ಬಯಸಿದ್ದೇನೆ ಎಂದಿದ್ದಾರೆ. ತನ್ನ ಹಿಂದಿನ ಹೇಳಿಕೆಯನ್ನು ಯಾವುದೇ ಒತ್ತಡವಿಲ್ಲದೆ ನೀಡಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಮಹಿಳೆ ಮೇಜರ್ ಆಗಿರುವುದರಿಂದ ಆಕೆ ಬಯಸಿದ ಯಾರೊಂದಿಗಾದರೂ ಹೋಗಿ ಜೀವಿಸಲು ಸ್ವತಂತ್ರಳು ಎಂದಿರುವ ಹೈಕೋರ್ಟ್ ಪೀಠ, ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ನಿರ್ಧರಿಸಲು ಅವರ ವಿವಾಹದ ಸಿಂಧುತ್ವವು ಪ್ರಸ್ತುತವಲ್ಲ ಎಂದಿದೆ.

ಅಕ್ಟೋಬರ್ 15ರಂದು ಹೈಕೋರ್ಟ್ ಆವರಣದಿಂದ ಅಪಹರಿಸಿ ಅಲಿಗಢಕ್ಕೆ ಕರೆದೊಯ್ದಿದ್ದಾರೆ ಎಂಬ ದಂಪತಿಯ ಹೇಳಿಕೆಯನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ.

“ಅಕ್ರಬಾದ್ ಠಾಣೆಯಲ್ಲಿ ರಶ್ಮಿಯ ತಂದೆ ದಾಖಲಿಸಿರುವ ಎಫ್‌ಐಆರ್‌ನ ತನಿಖಾಧಿಕಾರಿ, ದಂಪತಿಯ ಧಾರ್ಮಿಕ ಭಿನ್ನಾಭಿಪ್ರಾಯಗಳು ಮತ್ತು ಅವರ ವಿವಾಹದ ಕಾನೂನುಬದ್ಧತೆಯ ಬಗ್ಗೆ ತನಿಖೆ ಮುಂದುವರೆಸಿದ್ದಾರೆ. ಅಂತಹ ಯಾವುದೇ ತನಿಖೆಯ ಅಗತ್ಯವಿರಲಿಲ್ಲ. ಮ್ಯಾಜಿಸ್ಟ್ರೇಟ್ ಆಕೆಯನ್ನು ಬಿಡುಗಡೆ ಮಾಡಿದ ನಂತರ ಪೊಲೀಸರ ಏಕೈಕ ಕೆಲಸವೆಂದರೆ ದಂಪತಿ ಹೇಳಿದ ಜಾಗಕ್ಕೆ ಸೂಕ್ತ ರಕ್ಷಣೆಯೊಂದಿಗೆ ಅವರನ್ನು ಕಳುಹಿಸಿ ಕೊಡುವುದಾಗಿದೆ ಹೈಕೋರ್ಟ್ ತಿಳಿಸಿದೆ.

ವಿಚಾರಣೆ ವೇಳೆ ಅಂತರ್ಧರ್ಮೀಯ ವಿವಾಹ ಹಿನ್ನೆಲೆ ಸಾಮಾಜಿಕ ಒತ್ತಡದಿಂದ ದಂಪತಿಯನ್ನು ಬಂಧಿಸಲಾಗಿದೆ ಎಂಬ ಪೊಲೀಸರ ಅಥವಾ ಸರ್ಕಾರದ ಸಮರ್ಥನೆಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಒಬ್ಬರು ವ್ಯಕ್ತಿಯನ್ನು ಸೂಕ್ತ ಕಾನೂನಿನಡಿ ಮಾತ್ರ ಬಂಧಿಸಬಹುದು, ಸಾಮಾಜಿಕ ಒತ್ತಡ ಹಿನ್ನೆಲೆ ಬಂಧಿಸಲು ಸಾಧ್ಯವಿಲ್ಲ ಎಂದಿದೆ.

ಪೊಲೀಸರ ಕ್ರಮ ವಿಧಿ 21 ರ ಉಲ್ಲಂಘನೆ ಎಂದು ಹೇಳಿದ ನ್ಯಾಯಪೀಠ, ಸರ್ಕಾರದ ಕರ್ತವ್ಯ ನಾಗರಿಕರ ಸ್ವಾತಂತ್ರ್ಯವನ್ನು ರಕ್ಷಿಸುವುದು, ಸಾಮಾಜಿಕ ಒತ್ತಡಕ್ಕೆ ಶರಣಾಗುವುದು ಅಲ್ಲ ಎಂದು ಸ್ಪಷ್ಟಪಡಿಸಿದೆ.

ದಂಪತಿಗೆ ರಕ್ಷಣೆ ಒದಗಿಸಲು ಮತ್ತು ಅವರ ಸ್ವತಂತ್ರ ಜೀವನಕ್ಕೆ ಯಾರೂ ಅಡ್ಡಿಪಡಿಸದಂತೆ ನೋಡಿಕೊಳ್ಳಲು
ಪ್ರಯಾಗ್‌ರಾಜ್ ಪೊಲೀಸ್ ಆಯುಕ್ತರು, ಅಲಿಗಢ ಮತ್ತು ಬರೇಲಿಯ ಎಸ್‌ಎಸ್‌ಪಿಗಳಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ. ಘಟನೆಯ ಬಗ್ಗೆ ತನಿಖೆ ನಡೆಸಿ ನವೆಂಬರ್ 28, 2025ರೊಳಗೆ ವರದಿ ಸಲ್ಲಿಸುವಂತೆ ಅಲಿಗಢದ ಎಸ್‌ಎಸ್‌ಪಿಗೆ ಆದೇಶಿಸಿದೆ.

ಕೇರಳ ಹಿಜಾಬ್ ವಿವಾದ: ವರ್ಗಾವಣೆ ಪ್ರಮಾಣಪತ್ರ ಕೇಳಿದ ಇಬ್ಬರು ವಿದ್ಯಾರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...