Homeಮುಖಪುಟಅಂತರ್ಧರ್ಮೀಯ ದಂಪತಿಯ ಅಕ್ರಮ ಬಂಧನ : ಪೊಲೀಸರಿಗೆ ಛೀಮಾರಿ ಹಾಕಿದ ಹೈಕೋರ್ಟ್, ತಕ್ಷಣ ಬಿಡುಗಡೆಗೆ ಆದೇಶ

ಅಂತರ್ಧರ್ಮೀಯ ದಂಪತಿಯ ಅಕ್ರಮ ಬಂಧನ : ಪೊಲೀಸರಿಗೆ ಛೀಮಾರಿ ಹಾಕಿದ ಹೈಕೋರ್ಟ್, ತಕ್ಷಣ ಬಿಡುಗಡೆಗೆ ಆದೇಶ

ಸಾಮಾಜಿಕ ಒತ್ತಡಕ್ಕೆ ಬಂಧಿಸಿದ್ದೇವೆ ಎಂದ ಪೊಲೀಸರಿಗೆ ಹೈಕೋರ್ಟ್ ತರಾಟೆ

- Advertisement -
- Advertisement -

ಹಿಂದೂ-ಮುಸ್ಲಿಂ ದಂಪತಿಯನ್ನು ಅಕ್ರಮವಾಗಿ ಬಂಧಿಸಿದ ಪೊಲೀಸರಿಗೆ ಶನಿವಾರ (ಅ.19) ಛೀಮಾರಿ ಹಾಕಿದ ಅಲಹಾಬಾದ್ ಹೈಕೋರ್ಟ್, ಪೊಲೀಸರ ನಡೆ ಕಾನೂನುಬಾಹಿರ ಮತ್ತು ಸಂವಿಧಾನದ 21ನೇ ವಿಧಿಯಡಿ ಖಾತ್ರಿ ಪಡಿಸಲಾದ ದಂಪತಿಯ ಮೂಲಭೂತ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ಎಂದು ಹೇಳಿದೆ.

ದಂಪತಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಹೈಕೋರ್ಟ್ ಪೊಲೀಸರಿಗೆ ಆದೇಶಿಸಿದ್ದು, ಅವರಿಗೆ ಯಾವುದೇ ಕಿರುಕುಳ ನೀಡದೆ ಅಲೀಗಢ ತಲುಪುವವರೆಗೆ ರಕ್ಷಣೆ ಒದಗಿಸುವಂತೆ ಸೂಚಿಸಿದೆ.

ಶೇನ್ ಅಲೀ ಮತ್ತು ರಶ್ಮಿ ಈ ಪ್ರಕರಣದ ದಂಪತಿ. ನನ್ನ ಮಗಳನ್ನು ಶೇನ್ ಅಲೀ ಅಪಹರಿಸಿದ್ದಾನೆ ಎಂದು ಸೆಪ್ಟೆಂಬರ್ 27ರಂದು ಅಲೀಗಢದ ಅಕ್ರಬಾದ್ ಪೊಲೀಸ್ ಠಾಣೆಯಲ್ಲಿ ರಶ್ಮಿಯ ತಂದೆ ದೂರು ದಾಖಲಿಸಿದ್ದರು.

ಅಕ್ಟೋಬರ್ 15ರಂದು ಹೈಕೋರ್ಟ್‌ ಮುಂದೆ ಹಾಜರಾದ ದಂಪತಿ, ನಾವು ಇಬ್ಬರೂ ವಯಸ್ಕರು, ಪರಸ್ಪರ ಇಷ್ಟಪಟ್ಟು ಮದುವೆ ಮಾಡಿಕೊಂಡಿದ್ದೇವೆ ಎಂದಿದ್ದರು. ತನ್ನ ವಿರುದ್ದ ರಶ್ಮಿಯ ತಂದೆ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಶೇನ್ ಅಲೀ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ದಂಪತಿ ಹೈಕೋರ್ಟ್‌ನಿಂದ ಹೊರ ಬಂದ ಕೂಡಲೇ ರಶ್ಮಿಯ ತಂದೆ ಸ್ಥಳೀಯ ಪೊಲೀಸರ ಸಹಾಯದಿಂದ ಇಬ್ಬರನ್ನೂ ಅಪಹರಿಸಿದ್ದರು. ಅವರನ್ನು ಅಲೀಗಢಕ್ಕೆ ಕರೆದೊಯ್ದು, ರಶ್ಮಿಯನ್ನು ‘ಒನ್ ಸ್ಟಾಪ್ ಸೆಂಟರ್’ ಅಥವಾ ಸಾಂತ್ವನ ಕೇಂದ್ರದಲ್ಲಿ ಇರಿಸಿದ್ದರು. ಶೇನ್ ಅಲೀಯನ್ನು ಪೊಲೀಸರು ಬಂಧಿಸಿ ಲಾಕ್‌ ಅಪ್‌ನಲ್ಲಿ ಇಟ್ಟಿದ್ದರು.

ಅಕ್ಟೋಬರ್ 17ರಂದು ದಂಪತಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ಸೆಕ್ಷನ್ 183ರ ಅಡಿ ರಶ್ಮಿ ಹೇಳಿಕೆ ನೀಡಿದ್ದರು.

ಈ ನಡುವೆ ಶೇನ್ ಅಲೀಯ ಸಹೋದರ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಶನಿವಾರ ರಜಾ ದಿನವಾದರೂ ನ್ಯಾಯಮೂರ್ತಿಗಳಾದ ಸಲೀಲ್ ಕುಮಾರ್ ರೈ ಮತ್ತು ದಿವೇಶ್ ಚಂದ್ರ ಸಮಂತ್ ಅವರ ವಿಭಾಗೀಯ ಪೀಠವು ಅರ್ಜಿಯ ವಿಚಾರಣೆ ನಡೆಸಿದೆ.

ವಿಚಾರಣೆ ವೇಳೆ, “ಅಕ್ಟೋಬರ್ 17 ರಂದು ರಶ್ಮಿಯನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ. ಅಲ್ಲಿ ಆಕೆ ವಯಸ್ಕಳೆಂದು ಕಂಡುಬಂದಿದೆ. ಅಲ್ಲದೆ, ಶೇನ್ ಅಲೀಯನ್ನು ಸ್ವಇಚ್ಛೆಯಿಂದ ಮದುವೆಯಾಗಿರುವುದಾಗಿ ಸ್ಪಷ್ಟವಾಗಿ ಹೇಳಿದ್ದಾರೆ” ಎಂದು ಸರ್ಕಾರಿ ವಕೀಲರು ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

“ವಿಡಿಯೋ ಕಾನ್ಫರೆನ್ಸ್‌ನಲ್ಲಿ ನ್ಯಾಯಾಧೀಶರ ಮುಂದೆ ಹಾಜರಾದ ರಶ್ಮಿ, “ತನಗೆ 21 ವರ್ಷ ವಯಸ್ಸಾಗಿದ್ದು, ಶೇನ್ ಅಲಿಯನ್ನು ಸ್ವಇಚ್ಛೆಯಿಂದ ಮದುವೆಯಾಗಿದ್ದೇನೆ. ಆತನೊಂದಿಗೆ ಜೀವಿಸಲು ಬಯಸಿದ್ದೇನೆ ಎಂದಿದ್ದಾರೆ. ತನ್ನ ಹಿಂದಿನ ಹೇಳಿಕೆಯನ್ನು ಯಾವುದೇ ಒತ್ತಡವಿಲ್ಲದೆ ನೀಡಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಮಹಿಳೆ ಮೇಜರ್ ಆಗಿರುವುದರಿಂದ ಆಕೆ ಬಯಸಿದ ಯಾರೊಂದಿಗಾದರೂ ಹೋಗಿ ಜೀವಿಸಲು ಸ್ವತಂತ್ರಳು ಎಂದಿರುವ ಹೈಕೋರ್ಟ್ ಪೀಠ, ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ನಿರ್ಧರಿಸಲು ಅವರ ವಿವಾಹದ ಸಿಂಧುತ್ವವು ಪ್ರಸ್ತುತವಲ್ಲ ಎಂದಿದೆ.

ಅಕ್ಟೋಬರ್ 15ರಂದು ಹೈಕೋರ್ಟ್ ಆವರಣದಿಂದ ಅಪಹರಿಸಿ ಅಲಿಗಢಕ್ಕೆ ಕರೆದೊಯ್ದಿದ್ದಾರೆ ಎಂಬ ದಂಪತಿಯ ಹೇಳಿಕೆಯನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ.

“ಅಕ್ರಬಾದ್ ಠಾಣೆಯಲ್ಲಿ ರಶ್ಮಿಯ ತಂದೆ ದಾಖಲಿಸಿರುವ ಎಫ್‌ಐಆರ್‌ನ ತನಿಖಾಧಿಕಾರಿ, ದಂಪತಿಯ ಧಾರ್ಮಿಕ ಭಿನ್ನಾಭಿಪ್ರಾಯಗಳು ಮತ್ತು ಅವರ ವಿವಾಹದ ಕಾನೂನುಬದ್ಧತೆಯ ಬಗ್ಗೆ ತನಿಖೆ ಮುಂದುವರೆಸಿದ್ದಾರೆ. ಅಂತಹ ಯಾವುದೇ ತನಿಖೆಯ ಅಗತ್ಯವಿರಲಿಲ್ಲ. ಮ್ಯಾಜಿಸ್ಟ್ರೇಟ್ ಆಕೆಯನ್ನು ಬಿಡುಗಡೆ ಮಾಡಿದ ನಂತರ ಪೊಲೀಸರ ಏಕೈಕ ಕೆಲಸವೆಂದರೆ ದಂಪತಿ ಹೇಳಿದ ಜಾಗಕ್ಕೆ ಸೂಕ್ತ ರಕ್ಷಣೆಯೊಂದಿಗೆ ಅವರನ್ನು ಕಳುಹಿಸಿ ಕೊಡುವುದಾಗಿದೆ ಹೈಕೋರ್ಟ್ ತಿಳಿಸಿದೆ.

ವಿಚಾರಣೆ ವೇಳೆ ಅಂತರ್ಧರ್ಮೀಯ ವಿವಾಹ ಹಿನ್ನೆಲೆ ಸಾಮಾಜಿಕ ಒತ್ತಡದಿಂದ ದಂಪತಿಯನ್ನು ಬಂಧಿಸಲಾಗಿದೆ ಎಂಬ ಪೊಲೀಸರ ಅಥವಾ ಸರ್ಕಾರದ ಸಮರ್ಥನೆಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಒಬ್ಬರು ವ್ಯಕ್ತಿಯನ್ನು ಸೂಕ್ತ ಕಾನೂನಿನಡಿ ಮಾತ್ರ ಬಂಧಿಸಬಹುದು, ಸಾಮಾಜಿಕ ಒತ್ತಡ ಹಿನ್ನೆಲೆ ಬಂಧಿಸಲು ಸಾಧ್ಯವಿಲ್ಲ ಎಂದಿದೆ.

ಪೊಲೀಸರ ಕ್ರಮ ವಿಧಿ 21 ರ ಉಲ್ಲಂಘನೆ ಎಂದು ಹೇಳಿದ ನ್ಯಾಯಪೀಠ, ಸರ್ಕಾರದ ಕರ್ತವ್ಯ ನಾಗರಿಕರ ಸ್ವಾತಂತ್ರ್ಯವನ್ನು ರಕ್ಷಿಸುವುದು, ಸಾಮಾಜಿಕ ಒತ್ತಡಕ್ಕೆ ಶರಣಾಗುವುದು ಅಲ್ಲ ಎಂದು ಸ್ಪಷ್ಟಪಡಿಸಿದೆ.

ದಂಪತಿಗೆ ರಕ್ಷಣೆ ಒದಗಿಸಲು ಮತ್ತು ಅವರ ಸ್ವತಂತ್ರ ಜೀವನಕ್ಕೆ ಯಾರೂ ಅಡ್ಡಿಪಡಿಸದಂತೆ ನೋಡಿಕೊಳ್ಳಲು
ಪ್ರಯಾಗ್‌ರಾಜ್ ಪೊಲೀಸ್ ಆಯುಕ್ತರು, ಅಲಿಗಢ ಮತ್ತು ಬರೇಲಿಯ ಎಸ್‌ಎಸ್‌ಪಿಗಳಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ. ಘಟನೆಯ ಬಗ್ಗೆ ತನಿಖೆ ನಡೆಸಿ ನವೆಂಬರ್ 28, 2025ರೊಳಗೆ ವರದಿ ಸಲ್ಲಿಸುವಂತೆ ಅಲಿಗಢದ ಎಸ್‌ಎಸ್‌ಪಿಗೆ ಆದೇಶಿಸಿದೆ.

ಕೇರಳ ಹಿಜಾಬ್ ವಿವಾದ: ವರ್ಗಾವಣೆ ಪ್ರಮಾಣಪತ್ರ ಕೇಳಿದ ಇಬ್ಬರು ವಿದ್ಯಾರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...