Homeಮುಖಪುಟಅಂತರ್ಧರ್ಮೀಯ ದಂಪತಿಯ ಅಕ್ರಮ ಬಂಧನ : ಪೊಲೀಸರಿಗೆ ಛೀಮಾರಿ ಹಾಕಿದ ಹೈಕೋರ್ಟ್, ತಕ್ಷಣ ಬಿಡುಗಡೆಗೆ ಆದೇಶ

ಅಂತರ್ಧರ್ಮೀಯ ದಂಪತಿಯ ಅಕ್ರಮ ಬಂಧನ : ಪೊಲೀಸರಿಗೆ ಛೀಮಾರಿ ಹಾಕಿದ ಹೈಕೋರ್ಟ್, ತಕ್ಷಣ ಬಿಡುಗಡೆಗೆ ಆದೇಶ

ಸಾಮಾಜಿಕ ಒತ್ತಡಕ್ಕೆ ಬಂಧಿಸಿದ್ದೇವೆ ಎಂದ ಪೊಲೀಸರಿಗೆ ಹೈಕೋರ್ಟ್ ತರಾಟೆ

- Advertisement -
- Advertisement -

ಹಿಂದೂ-ಮುಸ್ಲಿಂ ದಂಪತಿಯನ್ನು ಅಕ್ರಮವಾಗಿ ಬಂಧಿಸಿದ ಪೊಲೀಸರಿಗೆ ಶನಿವಾರ (ಅ.19) ಛೀಮಾರಿ ಹಾಕಿದ ಅಲಹಾಬಾದ್ ಹೈಕೋರ್ಟ್, ಪೊಲೀಸರ ನಡೆ ಕಾನೂನುಬಾಹಿರ ಮತ್ತು ಸಂವಿಧಾನದ 21ನೇ ವಿಧಿಯಡಿ ಖಾತ್ರಿ ಪಡಿಸಲಾದ ದಂಪತಿಯ ಮೂಲಭೂತ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ಎಂದು ಹೇಳಿದೆ.

ದಂಪತಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಹೈಕೋರ್ಟ್ ಪೊಲೀಸರಿಗೆ ಆದೇಶಿಸಿದ್ದು, ಅವರಿಗೆ ಯಾವುದೇ ಕಿರುಕುಳ ನೀಡದೆ ಅಲೀಗಢ ತಲುಪುವವರೆಗೆ ರಕ್ಷಣೆ ಒದಗಿಸುವಂತೆ ಸೂಚಿಸಿದೆ.

ಶೇನ್ ಅಲೀ ಮತ್ತು ರಶ್ಮಿ ಈ ಪ್ರಕರಣದ ದಂಪತಿ. ನನ್ನ ಮಗಳನ್ನು ಶೇನ್ ಅಲೀ ಅಪಹರಿಸಿದ್ದಾನೆ ಎಂದು ಸೆಪ್ಟೆಂಬರ್ 27ರಂದು ಅಲೀಗಢದ ಅಕ್ರಬಾದ್ ಪೊಲೀಸ್ ಠಾಣೆಯಲ್ಲಿ ರಶ್ಮಿಯ ತಂದೆ ದೂರು ದಾಖಲಿಸಿದ್ದರು.

ಅಕ್ಟೋಬರ್ 15ರಂದು ಹೈಕೋರ್ಟ್‌ ಮುಂದೆ ಹಾಜರಾದ ದಂಪತಿ, ನಾವು ಇಬ್ಬರೂ ವಯಸ್ಕರು, ಪರಸ್ಪರ ಇಷ್ಟಪಟ್ಟು ಮದುವೆ ಮಾಡಿಕೊಂಡಿದ್ದೇವೆ ಎಂದಿದ್ದರು. ತನ್ನ ವಿರುದ್ದ ರಶ್ಮಿಯ ತಂದೆ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಶೇನ್ ಅಲೀ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ದಂಪತಿ ಹೈಕೋರ್ಟ್‌ನಿಂದ ಹೊರ ಬಂದ ಕೂಡಲೇ ರಶ್ಮಿಯ ತಂದೆ ಸ್ಥಳೀಯ ಪೊಲೀಸರ ಸಹಾಯದಿಂದ ಇಬ್ಬರನ್ನೂ ಅಪಹರಿಸಿದ್ದರು. ಅವರನ್ನು ಅಲೀಗಢಕ್ಕೆ ಕರೆದೊಯ್ದು, ರಶ್ಮಿಯನ್ನು ‘ಒನ್ ಸ್ಟಾಪ್ ಸೆಂಟರ್’ ಅಥವಾ ಸಾಂತ್ವನ ಕೇಂದ್ರದಲ್ಲಿ ಇರಿಸಿದ್ದರು. ಶೇನ್ ಅಲೀಯನ್ನು ಪೊಲೀಸರು ಬಂಧಿಸಿ ಲಾಕ್‌ ಅಪ್‌ನಲ್ಲಿ ಇಟ್ಟಿದ್ದರು.

ಅಕ್ಟೋಬರ್ 17ರಂದು ದಂಪತಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ಸೆಕ್ಷನ್ 183ರ ಅಡಿ ರಶ್ಮಿ ಹೇಳಿಕೆ ನೀಡಿದ್ದರು.

ಈ ನಡುವೆ ಶೇನ್ ಅಲೀಯ ಸಹೋದರ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಶನಿವಾರ ರಜಾ ದಿನವಾದರೂ ನ್ಯಾಯಮೂರ್ತಿಗಳಾದ ಸಲೀಲ್ ಕುಮಾರ್ ರೈ ಮತ್ತು ದಿವೇಶ್ ಚಂದ್ರ ಸಮಂತ್ ಅವರ ವಿಭಾಗೀಯ ಪೀಠವು ಅರ್ಜಿಯ ವಿಚಾರಣೆ ನಡೆಸಿದೆ.

ವಿಚಾರಣೆ ವೇಳೆ, “ಅಕ್ಟೋಬರ್ 17 ರಂದು ರಶ್ಮಿಯನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ. ಅಲ್ಲಿ ಆಕೆ ವಯಸ್ಕಳೆಂದು ಕಂಡುಬಂದಿದೆ. ಅಲ್ಲದೆ, ಶೇನ್ ಅಲೀಯನ್ನು ಸ್ವಇಚ್ಛೆಯಿಂದ ಮದುವೆಯಾಗಿರುವುದಾಗಿ ಸ್ಪಷ್ಟವಾಗಿ ಹೇಳಿದ್ದಾರೆ” ಎಂದು ಸರ್ಕಾರಿ ವಕೀಲರು ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

“ವಿಡಿಯೋ ಕಾನ್ಫರೆನ್ಸ್‌ನಲ್ಲಿ ನ್ಯಾಯಾಧೀಶರ ಮುಂದೆ ಹಾಜರಾದ ರಶ್ಮಿ, “ತನಗೆ 21 ವರ್ಷ ವಯಸ್ಸಾಗಿದ್ದು, ಶೇನ್ ಅಲಿಯನ್ನು ಸ್ವಇಚ್ಛೆಯಿಂದ ಮದುವೆಯಾಗಿದ್ದೇನೆ. ಆತನೊಂದಿಗೆ ಜೀವಿಸಲು ಬಯಸಿದ್ದೇನೆ ಎಂದಿದ್ದಾರೆ. ತನ್ನ ಹಿಂದಿನ ಹೇಳಿಕೆಯನ್ನು ಯಾವುದೇ ಒತ್ತಡವಿಲ್ಲದೆ ನೀಡಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಮಹಿಳೆ ಮೇಜರ್ ಆಗಿರುವುದರಿಂದ ಆಕೆ ಬಯಸಿದ ಯಾರೊಂದಿಗಾದರೂ ಹೋಗಿ ಜೀವಿಸಲು ಸ್ವತಂತ್ರಳು ಎಂದಿರುವ ಹೈಕೋರ್ಟ್ ಪೀಠ, ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ನಿರ್ಧರಿಸಲು ಅವರ ವಿವಾಹದ ಸಿಂಧುತ್ವವು ಪ್ರಸ್ತುತವಲ್ಲ ಎಂದಿದೆ.

ಅಕ್ಟೋಬರ್ 15ರಂದು ಹೈಕೋರ್ಟ್ ಆವರಣದಿಂದ ಅಪಹರಿಸಿ ಅಲಿಗಢಕ್ಕೆ ಕರೆದೊಯ್ದಿದ್ದಾರೆ ಎಂಬ ದಂಪತಿಯ ಹೇಳಿಕೆಯನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ.

“ಅಕ್ರಬಾದ್ ಠಾಣೆಯಲ್ಲಿ ರಶ್ಮಿಯ ತಂದೆ ದಾಖಲಿಸಿರುವ ಎಫ್‌ಐಆರ್‌ನ ತನಿಖಾಧಿಕಾರಿ, ದಂಪತಿಯ ಧಾರ್ಮಿಕ ಭಿನ್ನಾಭಿಪ್ರಾಯಗಳು ಮತ್ತು ಅವರ ವಿವಾಹದ ಕಾನೂನುಬದ್ಧತೆಯ ಬಗ್ಗೆ ತನಿಖೆ ಮುಂದುವರೆಸಿದ್ದಾರೆ. ಅಂತಹ ಯಾವುದೇ ತನಿಖೆಯ ಅಗತ್ಯವಿರಲಿಲ್ಲ. ಮ್ಯಾಜಿಸ್ಟ್ರೇಟ್ ಆಕೆಯನ್ನು ಬಿಡುಗಡೆ ಮಾಡಿದ ನಂತರ ಪೊಲೀಸರ ಏಕೈಕ ಕೆಲಸವೆಂದರೆ ದಂಪತಿ ಹೇಳಿದ ಜಾಗಕ್ಕೆ ಸೂಕ್ತ ರಕ್ಷಣೆಯೊಂದಿಗೆ ಅವರನ್ನು ಕಳುಹಿಸಿ ಕೊಡುವುದಾಗಿದೆ ಹೈಕೋರ್ಟ್ ತಿಳಿಸಿದೆ.

ವಿಚಾರಣೆ ವೇಳೆ ಅಂತರ್ಧರ್ಮೀಯ ವಿವಾಹ ಹಿನ್ನೆಲೆ ಸಾಮಾಜಿಕ ಒತ್ತಡದಿಂದ ದಂಪತಿಯನ್ನು ಬಂಧಿಸಲಾಗಿದೆ ಎಂಬ ಪೊಲೀಸರ ಅಥವಾ ಸರ್ಕಾರದ ಸಮರ್ಥನೆಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಒಬ್ಬರು ವ್ಯಕ್ತಿಯನ್ನು ಸೂಕ್ತ ಕಾನೂನಿನಡಿ ಮಾತ್ರ ಬಂಧಿಸಬಹುದು, ಸಾಮಾಜಿಕ ಒತ್ತಡ ಹಿನ್ನೆಲೆ ಬಂಧಿಸಲು ಸಾಧ್ಯವಿಲ್ಲ ಎಂದಿದೆ.

ಪೊಲೀಸರ ಕ್ರಮ ವಿಧಿ 21 ರ ಉಲ್ಲಂಘನೆ ಎಂದು ಹೇಳಿದ ನ್ಯಾಯಪೀಠ, ಸರ್ಕಾರದ ಕರ್ತವ್ಯ ನಾಗರಿಕರ ಸ್ವಾತಂತ್ರ್ಯವನ್ನು ರಕ್ಷಿಸುವುದು, ಸಾಮಾಜಿಕ ಒತ್ತಡಕ್ಕೆ ಶರಣಾಗುವುದು ಅಲ್ಲ ಎಂದು ಸ್ಪಷ್ಟಪಡಿಸಿದೆ.

ದಂಪತಿಗೆ ರಕ್ಷಣೆ ಒದಗಿಸಲು ಮತ್ತು ಅವರ ಸ್ವತಂತ್ರ ಜೀವನಕ್ಕೆ ಯಾರೂ ಅಡ್ಡಿಪಡಿಸದಂತೆ ನೋಡಿಕೊಳ್ಳಲು
ಪ್ರಯಾಗ್‌ರಾಜ್ ಪೊಲೀಸ್ ಆಯುಕ್ತರು, ಅಲಿಗಢ ಮತ್ತು ಬರೇಲಿಯ ಎಸ್‌ಎಸ್‌ಪಿಗಳಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ. ಘಟನೆಯ ಬಗ್ಗೆ ತನಿಖೆ ನಡೆಸಿ ನವೆಂಬರ್ 28, 2025ರೊಳಗೆ ವರದಿ ಸಲ್ಲಿಸುವಂತೆ ಅಲಿಗಢದ ಎಸ್‌ಎಸ್‌ಪಿಗೆ ಆದೇಶಿಸಿದೆ.

ಕೇರಳ ಹಿಜಾಬ್ ವಿವಾದ: ವರ್ಗಾವಣೆ ಪ್ರಮಾಣಪತ್ರ ಕೇಳಿದ ಇಬ್ಬರು ವಿದ್ಯಾರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...