Homeಮುಖಪುಟಅಂತರ್ಧರ್ಮೀಯ ದಂಪತಿಯ ಅಕ್ರಮ ಬಂಧನ : ಪೊಲೀಸರಿಗೆ ಛೀಮಾರಿ ಹಾಕಿದ ಹೈಕೋರ್ಟ್, ತಕ್ಷಣ ಬಿಡುಗಡೆಗೆ ಆದೇಶ

ಅಂತರ್ಧರ್ಮೀಯ ದಂಪತಿಯ ಅಕ್ರಮ ಬಂಧನ : ಪೊಲೀಸರಿಗೆ ಛೀಮಾರಿ ಹಾಕಿದ ಹೈಕೋರ್ಟ್, ತಕ್ಷಣ ಬಿಡುಗಡೆಗೆ ಆದೇಶ

ಸಾಮಾಜಿಕ ಒತ್ತಡಕ್ಕೆ ಬಂಧಿಸಿದ್ದೇವೆ ಎಂದ ಪೊಲೀಸರಿಗೆ ಹೈಕೋರ್ಟ್ ತರಾಟೆ

- Advertisement -
- Advertisement -

ಹಿಂದೂ-ಮುಸ್ಲಿಂ ದಂಪತಿಯನ್ನು ಅಕ್ರಮವಾಗಿ ಬಂಧಿಸಿದ ಪೊಲೀಸರಿಗೆ ಶನಿವಾರ (ಅ.19) ಛೀಮಾರಿ ಹಾಕಿದ ಅಲಹಾಬಾದ್ ಹೈಕೋರ್ಟ್, ಪೊಲೀಸರ ನಡೆ ಕಾನೂನುಬಾಹಿರ ಮತ್ತು ಸಂವಿಧಾನದ 21ನೇ ವಿಧಿಯಡಿ ಖಾತ್ರಿ ಪಡಿಸಲಾದ ದಂಪತಿಯ ಮೂಲಭೂತ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ಎಂದು ಹೇಳಿದೆ.

ದಂಪತಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಹೈಕೋರ್ಟ್ ಪೊಲೀಸರಿಗೆ ಆದೇಶಿಸಿದ್ದು, ಅವರಿಗೆ ಯಾವುದೇ ಕಿರುಕುಳ ನೀಡದೆ ಅಲೀಗಢ ತಲುಪುವವರೆಗೆ ರಕ್ಷಣೆ ಒದಗಿಸುವಂತೆ ಸೂಚಿಸಿದೆ.

ಶೇನ್ ಅಲೀ ಮತ್ತು ರಶ್ಮಿ ಈ ಪ್ರಕರಣದ ದಂಪತಿ. ನನ್ನ ಮಗಳನ್ನು ಶೇನ್ ಅಲೀ ಅಪಹರಿಸಿದ್ದಾನೆ ಎಂದು ಸೆಪ್ಟೆಂಬರ್ 27ರಂದು ಅಲೀಗಢದ ಅಕ್ರಬಾದ್ ಪೊಲೀಸ್ ಠಾಣೆಯಲ್ಲಿ ರಶ್ಮಿಯ ತಂದೆ ದೂರು ದಾಖಲಿಸಿದ್ದರು.

ಅಕ್ಟೋಬರ್ 15ರಂದು ಹೈಕೋರ್ಟ್‌ ಮುಂದೆ ಹಾಜರಾದ ದಂಪತಿ, ನಾವು ಇಬ್ಬರೂ ವಯಸ್ಕರು, ಪರಸ್ಪರ ಇಷ್ಟಪಟ್ಟು ಮದುವೆ ಮಾಡಿಕೊಂಡಿದ್ದೇವೆ ಎಂದಿದ್ದರು. ತನ್ನ ವಿರುದ್ದ ರಶ್ಮಿಯ ತಂದೆ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಶೇನ್ ಅಲೀ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ದಂಪತಿ ಹೈಕೋರ್ಟ್‌ನಿಂದ ಹೊರ ಬಂದ ಕೂಡಲೇ ರಶ್ಮಿಯ ತಂದೆ ಸ್ಥಳೀಯ ಪೊಲೀಸರ ಸಹಾಯದಿಂದ ಇಬ್ಬರನ್ನೂ ಅಪಹರಿಸಿದ್ದರು. ಅವರನ್ನು ಅಲೀಗಢಕ್ಕೆ ಕರೆದೊಯ್ದು, ರಶ್ಮಿಯನ್ನು ‘ಒನ್ ಸ್ಟಾಪ್ ಸೆಂಟರ್’ ಅಥವಾ ಸಾಂತ್ವನ ಕೇಂದ್ರದಲ್ಲಿ ಇರಿಸಿದ್ದರು. ಶೇನ್ ಅಲೀಯನ್ನು ಪೊಲೀಸರು ಬಂಧಿಸಿ ಲಾಕ್‌ ಅಪ್‌ನಲ್ಲಿ ಇಟ್ಟಿದ್ದರು.

ಅಕ್ಟೋಬರ್ 17ರಂದು ದಂಪತಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ಸೆಕ್ಷನ್ 183ರ ಅಡಿ ರಶ್ಮಿ ಹೇಳಿಕೆ ನೀಡಿದ್ದರು.

ಈ ನಡುವೆ ಶೇನ್ ಅಲೀಯ ಸಹೋದರ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಶನಿವಾರ ರಜಾ ದಿನವಾದರೂ ನ್ಯಾಯಮೂರ್ತಿಗಳಾದ ಸಲೀಲ್ ಕುಮಾರ್ ರೈ ಮತ್ತು ದಿವೇಶ್ ಚಂದ್ರ ಸಮಂತ್ ಅವರ ವಿಭಾಗೀಯ ಪೀಠವು ಅರ್ಜಿಯ ವಿಚಾರಣೆ ನಡೆಸಿದೆ.

ವಿಚಾರಣೆ ವೇಳೆ, “ಅಕ್ಟೋಬರ್ 17 ರಂದು ರಶ್ಮಿಯನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ. ಅಲ್ಲಿ ಆಕೆ ವಯಸ್ಕಳೆಂದು ಕಂಡುಬಂದಿದೆ. ಅಲ್ಲದೆ, ಶೇನ್ ಅಲೀಯನ್ನು ಸ್ವಇಚ್ಛೆಯಿಂದ ಮದುವೆಯಾಗಿರುವುದಾಗಿ ಸ್ಪಷ್ಟವಾಗಿ ಹೇಳಿದ್ದಾರೆ” ಎಂದು ಸರ್ಕಾರಿ ವಕೀಲರು ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

“ವಿಡಿಯೋ ಕಾನ್ಫರೆನ್ಸ್‌ನಲ್ಲಿ ನ್ಯಾಯಾಧೀಶರ ಮುಂದೆ ಹಾಜರಾದ ರಶ್ಮಿ, “ತನಗೆ 21 ವರ್ಷ ವಯಸ್ಸಾಗಿದ್ದು, ಶೇನ್ ಅಲಿಯನ್ನು ಸ್ವಇಚ್ಛೆಯಿಂದ ಮದುವೆಯಾಗಿದ್ದೇನೆ. ಆತನೊಂದಿಗೆ ಜೀವಿಸಲು ಬಯಸಿದ್ದೇನೆ ಎಂದಿದ್ದಾರೆ. ತನ್ನ ಹಿಂದಿನ ಹೇಳಿಕೆಯನ್ನು ಯಾವುದೇ ಒತ್ತಡವಿಲ್ಲದೆ ನೀಡಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಮಹಿಳೆ ಮೇಜರ್ ಆಗಿರುವುದರಿಂದ ಆಕೆ ಬಯಸಿದ ಯಾರೊಂದಿಗಾದರೂ ಹೋಗಿ ಜೀವಿಸಲು ಸ್ವತಂತ್ರಳು ಎಂದಿರುವ ಹೈಕೋರ್ಟ್ ಪೀಠ, ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ನಿರ್ಧರಿಸಲು ಅವರ ವಿವಾಹದ ಸಿಂಧುತ್ವವು ಪ್ರಸ್ತುತವಲ್ಲ ಎಂದಿದೆ.

ಅಕ್ಟೋಬರ್ 15ರಂದು ಹೈಕೋರ್ಟ್ ಆವರಣದಿಂದ ಅಪಹರಿಸಿ ಅಲಿಗಢಕ್ಕೆ ಕರೆದೊಯ್ದಿದ್ದಾರೆ ಎಂಬ ದಂಪತಿಯ ಹೇಳಿಕೆಯನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ.

“ಅಕ್ರಬಾದ್ ಠಾಣೆಯಲ್ಲಿ ರಶ್ಮಿಯ ತಂದೆ ದಾಖಲಿಸಿರುವ ಎಫ್‌ಐಆರ್‌ನ ತನಿಖಾಧಿಕಾರಿ, ದಂಪತಿಯ ಧಾರ್ಮಿಕ ಭಿನ್ನಾಭಿಪ್ರಾಯಗಳು ಮತ್ತು ಅವರ ವಿವಾಹದ ಕಾನೂನುಬದ್ಧತೆಯ ಬಗ್ಗೆ ತನಿಖೆ ಮುಂದುವರೆಸಿದ್ದಾರೆ. ಅಂತಹ ಯಾವುದೇ ತನಿಖೆಯ ಅಗತ್ಯವಿರಲಿಲ್ಲ. ಮ್ಯಾಜಿಸ್ಟ್ರೇಟ್ ಆಕೆಯನ್ನು ಬಿಡುಗಡೆ ಮಾಡಿದ ನಂತರ ಪೊಲೀಸರ ಏಕೈಕ ಕೆಲಸವೆಂದರೆ ದಂಪತಿ ಹೇಳಿದ ಜಾಗಕ್ಕೆ ಸೂಕ್ತ ರಕ್ಷಣೆಯೊಂದಿಗೆ ಅವರನ್ನು ಕಳುಹಿಸಿ ಕೊಡುವುದಾಗಿದೆ ಹೈಕೋರ್ಟ್ ತಿಳಿಸಿದೆ.

ವಿಚಾರಣೆ ವೇಳೆ ಅಂತರ್ಧರ್ಮೀಯ ವಿವಾಹ ಹಿನ್ನೆಲೆ ಸಾಮಾಜಿಕ ಒತ್ತಡದಿಂದ ದಂಪತಿಯನ್ನು ಬಂಧಿಸಲಾಗಿದೆ ಎಂಬ ಪೊಲೀಸರ ಅಥವಾ ಸರ್ಕಾರದ ಸಮರ್ಥನೆಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಒಬ್ಬರು ವ್ಯಕ್ತಿಯನ್ನು ಸೂಕ್ತ ಕಾನೂನಿನಡಿ ಮಾತ್ರ ಬಂಧಿಸಬಹುದು, ಸಾಮಾಜಿಕ ಒತ್ತಡ ಹಿನ್ನೆಲೆ ಬಂಧಿಸಲು ಸಾಧ್ಯವಿಲ್ಲ ಎಂದಿದೆ.

ಪೊಲೀಸರ ಕ್ರಮ ವಿಧಿ 21 ರ ಉಲ್ಲಂಘನೆ ಎಂದು ಹೇಳಿದ ನ್ಯಾಯಪೀಠ, ಸರ್ಕಾರದ ಕರ್ತವ್ಯ ನಾಗರಿಕರ ಸ್ವಾತಂತ್ರ್ಯವನ್ನು ರಕ್ಷಿಸುವುದು, ಸಾಮಾಜಿಕ ಒತ್ತಡಕ್ಕೆ ಶರಣಾಗುವುದು ಅಲ್ಲ ಎಂದು ಸ್ಪಷ್ಟಪಡಿಸಿದೆ.

ದಂಪತಿಗೆ ರಕ್ಷಣೆ ಒದಗಿಸಲು ಮತ್ತು ಅವರ ಸ್ವತಂತ್ರ ಜೀವನಕ್ಕೆ ಯಾರೂ ಅಡ್ಡಿಪಡಿಸದಂತೆ ನೋಡಿಕೊಳ್ಳಲು
ಪ್ರಯಾಗ್‌ರಾಜ್ ಪೊಲೀಸ್ ಆಯುಕ್ತರು, ಅಲಿಗಢ ಮತ್ತು ಬರೇಲಿಯ ಎಸ್‌ಎಸ್‌ಪಿಗಳಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ. ಘಟನೆಯ ಬಗ್ಗೆ ತನಿಖೆ ನಡೆಸಿ ನವೆಂಬರ್ 28, 2025ರೊಳಗೆ ವರದಿ ಸಲ್ಲಿಸುವಂತೆ ಅಲಿಗಢದ ಎಸ್‌ಎಸ್‌ಪಿಗೆ ಆದೇಶಿಸಿದೆ.

ಕೇರಳ ಹಿಜಾಬ್ ವಿವಾದ: ವರ್ಗಾವಣೆ ಪ್ರಮಾಣಪತ್ರ ಕೇಳಿದ ಇಬ್ಬರು ವಿದ್ಯಾರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...