Homeಮುಖಪುಟಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

₹ 25 ಲಕ್ಷ ಮಧ್ಯಂತರ ಪರಿಹಾರ ನೀಡಲು ಸೂಚನೆ

- Advertisement -
- Advertisement -

ರಸ್ತೆ ವಿಸ್ತರಣೆ ಯೋಜನೆಗಾಗಿ ಅಕ್ರಮವಾಗಿ ಮನೆಗಳನ್ನು ಕೆಡವಿದ್ದಕ್ಕಾಗಿ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಸುಪ್ರೀಂ ಕೋರ್ಟ್ ಇಂದು (ನ. 6) ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಮಹಾರಾಜ್‌ಗಂಜ್‌ನ ನಿವಾಸಿ ಮನೋಜ್ ತಿಬ್ರೆವಾಲ್ ಆಕಾಶ್ ಎಂಬವರ ಮನೆಯನ್ನು 2019ರಲ್ಲಿ ಕೆಡವಲಾಗಿತ್ತು. ಈ ಸಂಬಂಧ ಮನೋಜ್ ಅವರು ಕಳುಹಿಸಿದ ಪತ್ರ ದೂರಿನ ಆಧಾರದ ಮೇಲೆ
2020ರಲ್ಲಿ ದಾಖಲಾದ ಸ್ವಯಂ ಪ್ರೇರಿತ ರಿಟ್ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿದೆ.

ವಿಚಾರಣೆಯ ಸಂದರ್ಭದಲ್ಲಿ, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಇದು ‘ಮಿತಿ ಮೀರಿದ’ ನಡವಳಿಕೆ ಎಂದು ಬಣ್ಣಿಸಿದೆ.

ಅರ್ಜಿದಾರರು ಸಾರ್ವಜನಿಕ ಭೂಮಿಯನ್ನು ಅತಿಕ್ರಮಿಸಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಚಂದ್ರಚೂಡ್, ಅರ್ಜಿದಾರ 3.7 ಚದರ ಮೀಟರ್ ಜಾಗವನ್ನು ಅತಿಕ್ರಮಿಸಿದ್ದಾರೆ ಎಂಬುವುದು ನಿಮ್ಮ ವಾದ, ಆಯ್ತು ನಿಮ್ಮ ವಾದವನ್ನು ನಾವು ಒಪ್ಪುತ್ತೇವೆ. ಅರ್ಜಿದಾರನಿಗೆ ಕ್ಲೀನ್ ಚಿಟ್ ನೀಡುವುದಿಲ್ಲ. ಆದರೆ, ಯಾವುದೇ ನೋಟಿಸ್ ನೀಡದೆ ನೀವು ಜನರ ಮನೆಯನ್ನು ಹೇಗೆ ಕೆಡವುತ್ತೀರಿ? ಯಾರದ್ದಾದರು ಮನೆಯನ್ನು ಹಠಾತ್ ಕೆಡವಿ ಹಾಕುವುದು ಕಾನೂನುಬಾಹಿರ” ಎಂದು ಕಿಡಿಕಾರಿದ್ದಾರೆ.

‘ಮನೆ ಕೆಡವುವ ಮುನ್ನ ನೋಟಿಸ್ ನೀಡಿಲ್ಲ. ನಿಯಮಗಳನ್ನು ಅನುಸರಿಸಿಲ್ಲ’ ಎಂಬ ಅಂಶದ ಕುರಿತು ಪ್ರತಿಕ್ರಿಯಿಸಿದ ಸಿಜೆಐ, “ಇದು ಮಿತಿ ಮೀರಿದ ನಡವಳಿಕೆಯಾಗಿದೆ. ನೀವು ಎಲ್ಲಿ ನಿಯಮಗಳನ್ನು ಅನುಸರಿಸಿದ್ದೀರಿ? ನೀವು ಯಾವುದೇ ನೋಟಿಸ್ ನೀಡಿಲ್ಲ ಎಂಬ ಅಫಿಡವಿಟ್ ನಮ್ಮ ಬಳಿ ಇದೆ. ನೀವು ನೋಟಿಸ್ ಕೊಟ್ಟಿಲ್ಲ, ಜನರ ಮನೆ ಬಳಿ ಹೋಗಿ ಮೈಕ್ ಮೂಲಕ ಮನೆ ಧ್ವಂಸಗೊಳಿಸುವ ಬಗ್ಗೆ ಹೇಳಿದ್ದೀರಿ” ಎಂದಿದ್ದಾರೆ.

“ಈ ಪ್ರಕರಣದ ಅರ್ಜಿದಾರರದ್ದು ಮಾತ್ರವಲ್ಲದೆ, ಇತರ ಎರಡ್ಮೂರು ಮನೆಗಳನ್ನೂ ನೀವು ಕಡೆವಿದ್ದೀರಿ. ನಿಯಮದ ಪ್ರಕಾರ, ಯಾರಿಗೂ ಪ್ರತ್ಯೇಕ ನೋಟಿಸ್‌ಗಳನ್ನು ನೀಡಿಲ್ಲ. ಸಾರ್ವಜನಿಕ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದೀರಿ” ಎಂದು ನ್ಯಾಯ ಪೀಠ ಹೇಳಿದೆ.

“ನೀವು ರಾತ್ರೋರಾತ್ರಿ ನುಗ್ಗಿ ಮನೆಗಳನ್ನು ಕೆಡವಲು ಸಾಧ್ಯವಿಲ್ಲ. ಈ ಪ್ರಕರಣದಲ್ಲಿ ನೀವು ಜನರಿಗೆ ಮನೆ ಖಾಲಿ ಮಾಡಲು ಸಮಯ ನೀಡಿಲ್ಲ. ಹೀಗಿರುವಾಗ ಜನರು ತಮ್ಮ ಸಾಮಾಗ್ರಿಗಳನ್ನು ಏನು ಮಾಡಬೇಕು? ಮನೆ ಕೆಡವುದಾದರೆ ಸರಿಯಾದ ಪ್ರಕ್ರಿಯೆ ಅನುಸರಿಸಬೇಕು” ಎಂದು ನ್ಯಾಯಮೂರ್ತಿ ಪರ್ದಿವಾಲಾ ಕೂಡ ಹೇಳಿದ್ದಾರೆ.

ಪ್ರತಿಯೊಬ್ಬರಿಗೂ ಪ್ರತ್ಯೇಕ ನೋಟಿಸ್‌ಗಳನ್ನು ನೀಡದೆ, ಎಲ್ಲರಿಗೂ ಸೇರಿಸಿ ಸಾರ್ವಜನಿಕ ಪ್ರಕಟಣೆ ಹೊರಡಿಸುವುದು ಮತ್ತು ಡೋಲು ಬಾರಿಸುವ ಮೂಲಕ ಅಧಿಕಾರಿಗಳು ಮಾಹಿತಿ ನೀಡುವುದಕ್ಕೆ ನ್ಯಾಯಮೂರ್ತಿ ಪರ್ದಿವಾಲ ‘ಅಸಮ್ಮತಿ’ ಸೂಚಿಸಿದ್ದಾರೆ.

ಪ್ರಕರಣದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಹೆಚ್‌ಆರ್‌ಸಿ) ವರದಿಯನ್ನು ಪೀಠವು ಪರಿಗಣಿಸಿದೆ. “ಕೇವಲ 3.70 ಚದರ ಮೀಟರ್ ಜಾಗ ಅತಿಕ್ರಮಣವಾಗಿದ್ದಕ್ಕೆ ಅಧಿಕಾರಿಗಳು ಇಡೀ ಮನೆಯನ್ನೇ ಕಡೆವಿದ್ದಾರೆ. ಇಡೀ ಮನೆ ಕೆಡವುವ ಅಗತ್ಯ ಇರಲಿಲ್ಲ. ಆದ್ದರಿಂದ ಅರ್ಜಿದಾರರಿಗೆ ಮಧ್ಯಂತರ ಪರಿಹಾರ ನೀಡಬೇಕು. ಅರ್ಜಿದಾರರ ದೂರಿನ ಮೇರೆಗೆ ತಪ್ಪಿತಸ್ಥರ ವಿರುದ್ದ ಎಫ್‌ಐಆರ್ ದಾಖಲಿಸಬೇಕು ಮತ್ತು ಅಧಿಕಾರಿಗಳ ವಿರುದ್ದ ಇಲಾಖಾ ಕ್ರಮ ಕೈಗೊಳ್ಳಬೇಕು” ಎಂದು ಎನ್‌ಹೆಚ್‌ಆರ್‌ಸಿ ಶಿಫಾರಸು ಮಾಡಿದೆ.

ಅತಿಕ್ರಮಣಗಳನ್ನು ಗುರುತಿಸಲು ಅಧಿಕಾರಿಗಳು ಯಾವುದೇ ತನಿಖೆ ನಡೆಸಿಲ್ಲ.ಮನೆ ನೆಲಸಮ ಮಾಡುವ ಮೊದಲು ಭೂಮಿ ಸ್ವಾಧೀನಪಡಿಸಿಕೊಂಡಿದ್ದೇವೆ ಎಂದು ತೋರಿಸಲು ಯಾವುದೇ ದಾಖಲೆ ಅವರಲ್ಲಿ ಇರಲಿಲ್ಲ ಎಂಬುವುದನ್ನು ನ್ಯಾಯಾಲಯ ಗಮನಿಸಿದೆ.

ಅತಿಕ್ರಮಣದ ನಿಖರವಾದ ಪ್ರಮಾಣ, ಪ್ರಸ್ತುತ ರಸ್ತೆಯ ಅಗಲ, ಅಧಿಸೂಚಿತ ಹೆದ್ದಾರಿಯ ಅಗಲ, ಹೆದ್ದಾರಿಯ ಕೇಂದ್ರ ರೇಖೆಯ ಅಧಿಸೂಚಿತ ಅಗಲದ ವ್ಯಾಪ್ತಿಯಲ್ಲಿ ಬರುವ ಅರ್ಜಿದಾರರ ಆಸ್ತಿಯ ಪ್ರಮಾಣವನ್ನು ಬಹಿರಂಗಪಡಿಸಲು ಸರ್ಕಾರ ವಿಫಲವಾಗಿದೆ ಎಂದಿರುವ ನ್ಯಾಯಾಲಯ, ಆಪಾದಿತ ಅತಿಕ್ರಮಣವನ್ನು ಮೀರಿ ನೆಲಸಮವನ್ನು ಏಕೆ ನಡೆಸಲಾಗಿದೆ ಎಂಬುವುದರ ಕುರಿತು ಆಶ್ಚರ್ಯ ವ್ಯಕ್ತಪಡಿಸಿದೆ.

ಅಧಿಕಾರಿಗಳ ಅಕ್ರಮಗಳ ಬಗ್ಗೆ ಸ್ಥಳೀಯ ಪತ್ರಿಕೆಯಲ್ಲಿ ಪ್ರಕಟಿಸಿದ ವರದಿಗೆ ಪ್ರತೀಕಾರವಾಗಿ ತನ್ನ ಮನೆಯನ್ನು ಕೆಡವಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಈ ಆರೋಪದ ಬಗ್ಗೆ ನ್ಯಾಯಪೀಠ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ.

ಅರ್ಜಿದಾರರಿಗೆ 25 ಲಕ್ಷ ರೂಪಾಯಿ ದಂಡದ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ. ಈ ಪರಿಹಾರವು ಮಧ್ಯಂತರ ಸ್ವರೂಪದ್ದಾಗಿದೆ ಎಂದು ಸ್ಪಷ್ಟಪಡಿಸಿದೆ. ಅಕ್ರಮ ನೆಲಸಮಕ್ಕೆ ಕಾರಣರಾದ ಎಲ್ಲಾ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ತನಿಖೆ ನಡೆಸುವಂತೆ ಮತ್ತು ಶಿಸ್ತು ಕ್ರಮಗಳನ್ನು ಪ್ರಾರಂಭಿಸುವಂತೆ ಉತ್ತರ ಪ್ರದೇಶ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನ್ಯಾಯಾಲಯ ಸೂಚಿಸಿದೆ. ಕಾನೂನುಬಾಹಿರ ಕ್ರಮಗಳಿಗೆ ಕಾರಣರಾದ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳುವ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರ ಹೊಂದಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಒಂದು ತಿಂಗಳೊಳಗೆ ತನ್ನ ನಿರ್ದೇಶನಗಳನ್ನು ಅನುಸರಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ.

ರಸ್ತೆ ವಿಸ್ತರಣೆ ಯೋಜನೆಗಳಿಗೆ ಅತಿಕ್ರಮಣಗಳನ್ನು ತೆರವುಗೊಳಿಸುವ ಮುನ್ನ ಅಧಿಕಾರಿಗಳು ಅನುಸರಿಸಬೇಕಾದ ಕ್ರಮಗಳನ್ನು ತೀರ್ಪಿನಲ್ಲಿ ನ್ಯಾಯಾಲಯ ವಿವರಿಸಿದೆ. ಈ ತೀರ್ಪಿನ ಪ್ರತಿಯನ್ನು ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ವಿತರಿಸಲು ನಿರ್ದೇಶಿಸಿದೆ.

ಅರ್ಜಿದಾರರ ಪರ ಹಿರಿಯ ವಕೀಲ ಸಿದ್ಧಾರ್ಥ್ ಭಟ್ನಾಗರ್ ವಾದ ಮಂಡಿಸಿದರು.

ಇದನ್ನೂ ಓದಿ : ಖಾಸಗಿ ಸ್ವತ್ತು ತೀರ್ಪು : ಅಯ್ಯರ್ ಕುರಿತ ಸಿಜೆಐ ಹೇಳಿಕೆಗೆ ನ್ಯಾ. ನಾಗರತ್ನ, ಧುಲಿಯಾ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...