Homeಮುಖಪುಟಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

₹ 25 ಲಕ್ಷ ಮಧ್ಯಂತರ ಪರಿಹಾರ ನೀಡಲು ಸೂಚನೆ

- Advertisement -
- Advertisement -

ರಸ್ತೆ ವಿಸ್ತರಣೆ ಯೋಜನೆಗಾಗಿ ಅಕ್ರಮವಾಗಿ ಮನೆಗಳನ್ನು ಕೆಡವಿದ್ದಕ್ಕಾಗಿ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಸುಪ್ರೀಂ ಕೋರ್ಟ್ ಇಂದು (ನ. 6) ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಮಹಾರಾಜ್‌ಗಂಜ್‌ನ ನಿವಾಸಿ ಮನೋಜ್ ತಿಬ್ರೆವಾಲ್ ಆಕಾಶ್ ಎಂಬವರ ಮನೆಯನ್ನು 2019ರಲ್ಲಿ ಕೆಡವಲಾಗಿತ್ತು. ಈ ಸಂಬಂಧ ಮನೋಜ್ ಅವರು ಕಳುಹಿಸಿದ ಪತ್ರ ದೂರಿನ ಆಧಾರದ ಮೇಲೆ
2020ರಲ್ಲಿ ದಾಖಲಾದ ಸ್ವಯಂ ಪ್ರೇರಿತ ರಿಟ್ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿದೆ.

ವಿಚಾರಣೆಯ ಸಂದರ್ಭದಲ್ಲಿ, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಇದು ‘ಮಿತಿ ಮೀರಿದ’ ನಡವಳಿಕೆ ಎಂದು ಬಣ್ಣಿಸಿದೆ.

ಅರ್ಜಿದಾರರು ಸಾರ್ವಜನಿಕ ಭೂಮಿಯನ್ನು ಅತಿಕ್ರಮಿಸಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಚಂದ್ರಚೂಡ್, ಅರ್ಜಿದಾರ 3.7 ಚದರ ಮೀಟರ್ ಜಾಗವನ್ನು ಅತಿಕ್ರಮಿಸಿದ್ದಾರೆ ಎಂಬುವುದು ನಿಮ್ಮ ವಾದ, ಆಯ್ತು ನಿಮ್ಮ ವಾದವನ್ನು ನಾವು ಒಪ್ಪುತ್ತೇವೆ. ಅರ್ಜಿದಾರನಿಗೆ ಕ್ಲೀನ್ ಚಿಟ್ ನೀಡುವುದಿಲ್ಲ. ಆದರೆ, ಯಾವುದೇ ನೋಟಿಸ್ ನೀಡದೆ ನೀವು ಜನರ ಮನೆಯನ್ನು ಹೇಗೆ ಕೆಡವುತ್ತೀರಿ? ಯಾರದ್ದಾದರು ಮನೆಯನ್ನು ಹಠಾತ್ ಕೆಡವಿ ಹಾಕುವುದು ಕಾನೂನುಬಾಹಿರ” ಎಂದು ಕಿಡಿಕಾರಿದ್ದಾರೆ.

‘ಮನೆ ಕೆಡವುವ ಮುನ್ನ ನೋಟಿಸ್ ನೀಡಿಲ್ಲ. ನಿಯಮಗಳನ್ನು ಅನುಸರಿಸಿಲ್ಲ’ ಎಂಬ ಅಂಶದ ಕುರಿತು ಪ್ರತಿಕ್ರಿಯಿಸಿದ ಸಿಜೆಐ, “ಇದು ಮಿತಿ ಮೀರಿದ ನಡವಳಿಕೆಯಾಗಿದೆ. ನೀವು ಎಲ್ಲಿ ನಿಯಮಗಳನ್ನು ಅನುಸರಿಸಿದ್ದೀರಿ? ನೀವು ಯಾವುದೇ ನೋಟಿಸ್ ನೀಡಿಲ್ಲ ಎಂಬ ಅಫಿಡವಿಟ್ ನಮ್ಮ ಬಳಿ ಇದೆ. ನೀವು ನೋಟಿಸ್ ಕೊಟ್ಟಿಲ್ಲ, ಜನರ ಮನೆ ಬಳಿ ಹೋಗಿ ಮೈಕ್ ಮೂಲಕ ಮನೆ ಧ್ವಂಸಗೊಳಿಸುವ ಬಗ್ಗೆ ಹೇಳಿದ್ದೀರಿ” ಎಂದಿದ್ದಾರೆ.

“ಈ ಪ್ರಕರಣದ ಅರ್ಜಿದಾರರದ್ದು ಮಾತ್ರವಲ್ಲದೆ, ಇತರ ಎರಡ್ಮೂರು ಮನೆಗಳನ್ನೂ ನೀವು ಕಡೆವಿದ್ದೀರಿ. ನಿಯಮದ ಪ್ರಕಾರ, ಯಾರಿಗೂ ಪ್ರತ್ಯೇಕ ನೋಟಿಸ್‌ಗಳನ್ನು ನೀಡಿಲ್ಲ. ಸಾರ್ವಜನಿಕ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದೀರಿ” ಎಂದು ನ್ಯಾಯ ಪೀಠ ಹೇಳಿದೆ.

“ನೀವು ರಾತ್ರೋರಾತ್ರಿ ನುಗ್ಗಿ ಮನೆಗಳನ್ನು ಕೆಡವಲು ಸಾಧ್ಯವಿಲ್ಲ. ಈ ಪ್ರಕರಣದಲ್ಲಿ ನೀವು ಜನರಿಗೆ ಮನೆ ಖಾಲಿ ಮಾಡಲು ಸಮಯ ನೀಡಿಲ್ಲ. ಹೀಗಿರುವಾಗ ಜನರು ತಮ್ಮ ಸಾಮಾಗ್ರಿಗಳನ್ನು ಏನು ಮಾಡಬೇಕು? ಮನೆ ಕೆಡವುದಾದರೆ ಸರಿಯಾದ ಪ್ರಕ್ರಿಯೆ ಅನುಸರಿಸಬೇಕು” ಎಂದು ನ್ಯಾಯಮೂರ್ತಿ ಪರ್ದಿವಾಲಾ ಕೂಡ ಹೇಳಿದ್ದಾರೆ.

ಪ್ರತಿಯೊಬ್ಬರಿಗೂ ಪ್ರತ್ಯೇಕ ನೋಟಿಸ್‌ಗಳನ್ನು ನೀಡದೆ, ಎಲ್ಲರಿಗೂ ಸೇರಿಸಿ ಸಾರ್ವಜನಿಕ ಪ್ರಕಟಣೆ ಹೊರಡಿಸುವುದು ಮತ್ತು ಡೋಲು ಬಾರಿಸುವ ಮೂಲಕ ಅಧಿಕಾರಿಗಳು ಮಾಹಿತಿ ನೀಡುವುದಕ್ಕೆ ನ್ಯಾಯಮೂರ್ತಿ ಪರ್ದಿವಾಲ ‘ಅಸಮ್ಮತಿ’ ಸೂಚಿಸಿದ್ದಾರೆ.

ಪ್ರಕರಣದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಹೆಚ್‌ಆರ್‌ಸಿ) ವರದಿಯನ್ನು ಪೀಠವು ಪರಿಗಣಿಸಿದೆ. “ಕೇವಲ 3.70 ಚದರ ಮೀಟರ್ ಜಾಗ ಅತಿಕ್ರಮಣವಾಗಿದ್ದಕ್ಕೆ ಅಧಿಕಾರಿಗಳು ಇಡೀ ಮನೆಯನ್ನೇ ಕಡೆವಿದ್ದಾರೆ. ಇಡೀ ಮನೆ ಕೆಡವುವ ಅಗತ್ಯ ಇರಲಿಲ್ಲ. ಆದ್ದರಿಂದ ಅರ್ಜಿದಾರರಿಗೆ ಮಧ್ಯಂತರ ಪರಿಹಾರ ನೀಡಬೇಕು. ಅರ್ಜಿದಾರರ ದೂರಿನ ಮೇರೆಗೆ ತಪ್ಪಿತಸ್ಥರ ವಿರುದ್ದ ಎಫ್‌ಐಆರ್ ದಾಖಲಿಸಬೇಕು ಮತ್ತು ಅಧಿಕಾರಿಗಳ ವಿರುದ್ದ ಇಲಾಖಾ ಕ್ರಮ ಕೈಗೊಳ್ಳಬೇಕು” ಎಂದು ಎನ್‌ಹೆಚ್‌ಆರ್‌ಸಿ ಶಿಫಾರಸು ಮಾಡಿದೆ.

ಅತಿಕ್ರಮಣಗಳನ್ನು ಗುರುತಿಸಲು ಅಧಿಕಾರಿಗಳು ಯಾವುದೇ ತನಿಖೆ ನಡೆಸಿಲ್ಲ.ಮನೆ ನೆಲಸಮ ಮಾಡುವ ಮೊದಲು ಭೂಮಿ ಸ್ವಾಧೀನಪಡಿಸಿಕೊಂಡಿದ್ದೇವೆ ಎಂದು ತೋರಿಸಲು ಯಾವುದೇ ದಾಖಲೆ ಅವರಲ್ಲಿ ಇರಲಿಲ್ಲ ಎಂಬುವುದನ್ನು ನ್ಯಾಯಾಲಯ ಗಮನಿಸಿದೆ.

ಅತಿಕ್ರಮಣದ ನಿಖರವಾದ ಪ್ರಮಾಣ, ಪ್ರಸ್ತುತ ರಸ್ತೆಯ ಅಗಲ, ಅಧಿಸೂಚಿತ ಹೆದ್ದಾರಿಯ ಅಗಲ, ಹೆದ್ದಾರಿಯ ಕೇಂದ್ರ ರೇಖೆಯ ಅಧಿಸೂಚಿತ ಅಗಲದ ವ್ಯಾಪ್ತಿಯಲ್ಲಿ ಬರುವ ಅರ್ಜಿದಾರರ ಆಸ್ತಿಯ ಪ್ರಮಾಣವನ್ನು ಬಹಿರಂಗಪಡಿಸಲು ಸರ್ಕಾರ ವಿಫಲವಾಗಿದೆ ಎಂದಿರುವ ನ್ಯಾಯಾಲಯ, ಆಪಾದಿತ ಅತಿಕ್ರಮಣವನ್ನು ಮೀರಿ ನೆಲಸಮವನ್ನು ಏಕೆ ನಡೆಸಲಾಗಿದೆ ಎಂಬುವುದರ ಕುರಿತು ಆಶ್ಚರ್ಯ ವ್ಯಕ್ತಪಡಿಸಿದೆ.

ಅಧಿಕಾರಿಗಳ ಅಕ್ರಮಗಳ ಬಗ್ಗೆ ಸ್ಥಳೀಯ ಪತ್ರಿಕೆಯಲ್ಲಿ ಪ್ರಕಟಿಸಿದ ವರದಿಗೆ ಪ್ರತೀಕಾರವಾಗಿ ತನ್ನ ಮನೆಯನ್ನು ಕೆಡವಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಈ ಆರೋಪದ ಬಗ್ಗೆ ನ್ಯಾಯಪೀಠ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ.

ಅರ್ಜಿದಾರರಿಗೆ 25 ಲಕ್ಷ ರೂಪಾಯಿ ದಂಡದ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ. ಈ ಪರಿಹಾರವು ಮಧ್ಯಂತರ ಸ್ವರೂಪದ್ದಾಗಿದೆ ಎಂದು ಸ್ಪಷ್ಟಪಡಿಸಿದೆ. ಅಕ್ರಮ ನೆಲಸಮಕ್ಕೆ ಕಾರಣರಾದ ಎಲ್ಲಾ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ತನಿಖೆ ನಡೆಸುವಂತೆ ಮತ್ತು ಶಿಸ್ತು ಕ್ರಮಗಳನ್ನು ಪ್ರಾರಂಭಿಸುವಂತೆ ಉತ್ತರ ಪ್ರದೇಶ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನ್ಯಾಯಾಲಯ ಸೂಚಿಸಿದೆ. ಕಾನೂನುಬಾಹಿರ ಕ್ರಮಗಳಿಗೆ ಕಾರಣರಾದ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳುವ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರ ಹೊಂದಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಒಂದು ತಿಂಗಳೊಳಗೆ ತನ್ನ ನಿರ್ದೇಶನಗಳನ್ನು ಅನುಸರಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ.

ರಸ್ತೆ ವಿಸ್ತರಣೆ ಯೋಜನೆಗಳಿಗೆ ಅತಿಕ್ರಮಣಗಳನ್ನು ತೆರವುಗೊಳಿಸುವ ಮುನ್ನ ಅಧಿಕಾರಿಗಳು ಅನುಸರಿಸಬೇಕಾದ ಕ್ರಮಗಳನ್ನು ತೀರ್ಪಿನಲ್ಲಿ ನ್ಯಾಯಾಲಯ ವಿವರಿಸಿದೆ. ಈ ತೀರ್ಪಿನ ಪ್ರತಿಯನ್ನು ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ವಿತರಿಸಲು ನಿರ್ದೇಶಿಸಿದೆ.

ಅರ್ಜಿದಾರರ ಪರ ಹಿರಿಯ ವಕೀಲ ಸಿದ್ಧಾರ್ಥ್ ಭಟ್ನಾಗರ್ ವಾದ ಮಂಡಿಸಿದರು.

ಇದನ್ನೂ ಓದಿ : ಖಾಸಗಿ ಸ್ವತ್ತು ತೀರ್ಪು : ಅಯ್ಯರ್ ಕುರಿತ ಸಿಜೆಐ ಹೇಳಿಕೆಗೆ ನ್ಯಾ. ನಾಗರತ್ನ, ಧುಲಿಯಾ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...