Homeಮುಖಪುಟಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

₹ 25 ಲಕ್ಷ ಮಧ್ಯಂತರ ಪರಿಹಾರ ನೀಡಲು ಸೂಚನೆ

- Advertisement -
- Advertisement -

ರಸ್ತೆ ವಿಸ್ತರಣೆ ಯೋಜನೆಗಾಗಿ ಅಕ್ರಮವಾಗಿ ಮನೆಗಳನ್ನು ಕೆಡವಿದ್ದಕ್ಕಾಗಿ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಸುಪ್ರೀಂ ಕೋರ್ಟ್ ಇಂದು (ನ. 6) ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಮಹಾರಾಜ್‌ಗಂಜ್‌ನ ನಿವಾಸಿ ಮನೋಜ್ ತಿಬ್ರೆವಾಲ್ ಆಕಾಶ್ ಎಂಬವರ ಮನೆಯನ್ನು 2019ರಲ್ಲಿ ಕೆಡವಲಾಗಿತ್ತು. ಈ ಸಂಬಂಧ ಮನೋಜ್ ಅವರು ಕಳುಹಿಸಿದ ಪತ್ರ ದೂರಿನ ಆಧಾರದ ಮೇಲೆ
2020ರಲ್ಲಿ ದಾಖಲಾದ ಸ್ವಯಂ ಪ್ರೇರಿತ ರಿಟ್ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿದೆ.

ವಿಚಾರಣೆಯ ಸಂದರ್ಭದಲ್ಲಿ, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಇದು ‘ಮಿತಿ ಮೀರಿದ’ ನಡವಳಿಕೆ ಎಂದು ಬಣ್ಣಿಸಿದೆ.

ಅರ್ಜಿದಾರರು ಸಾರ್ವಜನಿಕ ಭೂಮಿಯನ್ನು ಅತಿಕ್ರಮಿಸಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಚಂದ್ರಚೂಡ್, ಅರ್ಜಿದಾರ 3.7 ಚದರ ಮೀಟರ್ ಜಾಗವನ್ನು ಅತಿಕ್ರಮಿಸಿದ್ದಾರೆ ಎಂಬುವುದು ನಿಮ್ಮ ವಾದ, ಆಯ್ತು ನಿಮ್ಮ ವಾದವನ್ನು ನಾವು ಒಪ್ಪುತ್ತೇವೆ. ಅರ್ಜಿದಾರನಿಗೆ ಕ್ಲೀನ್ ಚಿಟ್ ನೀಡುವುದಿಲ್ಲ. ಆದರೆ, ಯಾವುದೇ ನೋಟಿಸ್ ನೀಡದೆ ನೀವು ಜನರ ಮನೆಯನ್ನು ಹೇಗೆ ಕೆಡವುತ್ತೀರಿ? ಯಾರದ್ದಾದರು ಮನೆಯನ್ನು ಹಠಾತ್ ಕೆಡವಿ ಹಾಕುವುದು ಕಾನೂನುಬಾಹಿರ” ಎಂದು ಕಿಡಿಕಾರಿದ್ದಾರೆ.

‘ಮನೆ ಕೆಡವುವ ಮುನ್ನ ನೋಟಿಸ್ ನೀಡಿಲ್ಲ. ನಿಯಮಗಳನ್ನು ಅನುಸರಿಸಿಲ್ಲ’ ಎಂಬ ಅಂಶದ ಕುರಿತು ಪ್ರತಿಕ್ರಿಯಿಸಿದ ಸಿಜೆಐ, “ಇದು ಮಿತಿ ಮೀರಿದ ನಡವಳಿಕೆಯಾಗಿದೆ. ನೀವು ಎಲ್ಲಿ ನಿಯಮಗಳನ್ನು ಅನುಸರಿಸಿದ್ದೀರಿ? ನೀವು ಯಾವುದೇ ನೋಟಿಸ್ ನೀಡಿಲ್ಲ ಎಂಬ ಅಫಿಡವಿಟ್ ನಮ್ಮ ಬಳಿ ಇದೆ. ನೀವು ನೋಟಿಸ್ ಕೊಟ್ಟಿಲ್ಲ, ಜನರ ಮನೆ ಬಳಿ ಹೋಗಿ ಮೈಕ್ ಮೂಲಕ ಮನೆ ಧ್ವಂಸಗೊಳಿಸುವ ಬಗ್ಗೆ ಹೇಳಿದ್ದೀರಿ” ಎಂದಿದ್ದಾರೆ.

“ಈ ಪ್ರಕರಣದ ಅರ್ಜಿದಾರರದ್ದು ಮಾತ್ರವಲ್ಲದೆ, ಇತರ ಎರಡ್ಮೂರು ಮನೆಗಳನ್ನೂ ನೀವು ಕಡೆವಿದ್ದೀರಿ. ನಿಯಮದ ಪ್ರಕಾರ, ಯಾರಿಗೂ ಪ್ರತ್ಯೇಕ ನೋಟಿಸ್‌ಗಳನ್ನು ನೀಡಿಲ್ಲ. ಸಾರ್ವಜನಿಕ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದೀರಿ” ಎಂದು ನ್ಯಾಯ ಪೀಠ ಹೇಳಿದೆ.

“ನೀವು ರಾತ್ರೋರಾತ್ರಿ ನುಗ್ಗಿ ಮನೆಗಳನ್ನು ಕೆಡವಲು ಸಾಧ್ಯವಿಲ್ಲ. ಈ ಪ್ರಕರಣದಲ್ಲಿ ನೀವು ಜನರಿಗೆ ಮನೆ ಖಾಲಿ ಮಾಡಲು ಸಮಯ ನೀಡಿಲ್ಲ. ಹೀಗಿರುವಾಗ ಜನರು ತಮ್ಮ ಸಾಮಾಗ್ರಿಗಳನ್ನು ಏನು ಮಾಡಬೇಕು? ಮನೆ ಕೆಡವುದಾದರೆ ಸರಿಯಾದ ಪ್ರಕ್ರಿಯೆ ಅನುಸರಿಸಬೇಕು” ಎಂದು ನ್ಯಾಯಮೂರ್ತಿ ಪರ್ದಿವಾಲಾ ಕೂಡ ಹೇಳಿದ್ದಾರೆ.

ಪ್ರತಿಯೊಬ್ಬರಿಗೂ ಪ್ರತ್ಯೇಕ ನೋಟಿಸ್‌ಗಳನ್ನು ನೀಡದೆ, ಎಲ್ಲರಿಗೂ ಸೇರಿಸಿ ಸಾರ್ವಜನಿಕ ಪ್ರಕಟಣೆ ಹೊರಡಿಸುವುದು ಮತ್ತು ಡೋಲು ಬಾರಿಸುವ ಮೂಲಕ ಅಧಿಕಾರಿಗಳು ಮಾಹಿತಿ ನೀಡುವುದಕ್ಕೆ ನ್ಯಾಯಮೂರ್ತಿ ಪರ್ದಿವಾಲ ‘ಅಸಮ್ಮತಿ’ ಸೂಚಿಸಿದ್ದಾರೆ.

ಪ್ರಕರಣದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಹೆಚ್‌ಆರ್‌ಸಿ) ವರದಿಯನ್ನು ಪೀಠವು ಪರಿಗಣಿಸಿದೆ. “ಕೇವಲ 3.70 ಚದರ ಮೀಟರ್ ಜಾಗ ಅತಿಕ್ರಮಣವಾಗಿದ್ದಕ್ಕೆ ಅಧಿಕಾರಿಗಳು ಇಡೀ ಮನೆಯನ್ನೇ ಕಡೆವಿದ್ದಾರೆ. ಇಡೀ ಮನೆ ಕೆಡವುವ ಅಗತ್ಯ ಇರಲಿಲ್ಲ. ಆದ್ದರಿಂದ ಅರ್ಜಿದಾರರಿಗೆ ಮಧ್ಯಂತರ ಪರಿಹಾರ ನೀಡಬೇಕು. ಅರ್ಜಿದಾರರ ದೂರಿನ ಮೇರೆಗೆ ತಪ್ಪಿತಸ್ಥರ ವಿರುದ್ದ ಎಫ್‌ಐಆರ್ ದಾಖಲಿಸಬೇಕು ಮತ್ತು ಅಧಿಕಾರಿಗಳ ವಿರುದ್ದ ಇಲಾಖಾ ಕ್ರಮ ಕೈಗೊಳ್ಳಬೇಕು” ಎಂದು ಎನ್‌ಹೆಚ್‌ಆರ್‌ಸಿ ಶಿಫಾರಸು ಮಾಡಿದೆ.

ಅತಿಕ್ರಮಣಗಳನ್ನು ಗುರುತಿಸಲು ಅಧಿಕಾರಿಗಳು ಯಾವುದೇ ತನಿಖೆ ನಡೆಸಿಲ್ಲ.ಮನೆ ನೆಲಸಮ ಮಾಡುವ ಮೊದಲು ಭೂಮಿ ಸ್ವಾಧೀನಪಡಿಸಿಕೊಂಡಿದ್ದೇವೆ ಎಂದು ತೋರಿಸಲು ಯಾವುದೇ ದಾಖಲೆ ಅವರಲ್ಲಿ ಇರಲಿಲ್ಲ ಎಂಬುವುದನ್ನು ನ್ಯಾಯಾಲಯ ಗಮನಿಸಿದೆ.

ಅತಿಕ್ರಮಣದ ನಿಖರವಾದ ಪ್ರಮಾಣ, ಪ್ರಸ್ತುತ ರಸ್ತೆಯ ಅಗಲ, ಅಧಿಸೂಚಿತ ಹೆದ್ದಾರಿಯ ಅಗಲ, ಹೆದ್ದಾರಿಯ ಕೇಂದ್ರ ರೇಖೆಯ ಅಧಿಸೂಚಿತ ಅಗಲದ ವ್ಯಾಪ್ತಿಯಲ್ಲಿ ಬರುವ ಅರ್ಜಿದಾರರ ಆಸ್ತಿಯ ಪ್ರಮಾಣವನ್ನು ಬಹಿರಂಗಪಡಿಸಲು ಸರ್ಕಾರ ವಿಫಲವಾಗಿದೆ ಎಂದಿರುವ ನ್ಯಾಯಾಲಯ, ಆಪಾದಿತ ಅತಿಕ್ರಮಣವನ್ನು ಮೀರಿ ನೆಲಸಮವನ್ನು ಏಕೆ ನಡೆಸಲಾಗಿದೆ ಎಂಬುವುದರ ಕುರಿತು ಆಶ್ಚರ್ಯ ವ್ಯಕ್ತಪಡಿಸಿದೆ.

ಅಧಿಕಾರಿಗಳ ಅಕ್ರಮಗಳ ಬಗ್ಗೆ ಸ್ಥಳೀಯ ಪತ್ರಿಕೆಯಲ್ಲಿ ಪ್ರಕಟಿಸಿದ ವರದಿಗೆ ಪ್ರತೀಕಾರವಾಗಿ ತನ್ನ ಮನೆಯನ್ನು ಕೆಡವಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಈ ಆರೋಪದ ಬಗ್ಗೆ ನ್ಯಾಯಪೀಠ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ.

ಅರ್ಜಿದಾರರಿಗೆ 25 ಲಕ್ಷ ರೂಪಾಯಿ ದಂಡದ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ. ಈ ಪರಿಹಾರವು ಮಧ್ಯಂತರ ಸ್ವರೂಪದ್ದಾಗಿದೆ ಎಂದು ಸ್ಪಷ್ಟಪಡಿಸಿದೆ. ಅಕ್ರಮ ನೆಲಸಮಕ್ಕೆ ಕಾರಣರಾದ ಎಲ್ಲಾ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ತನಿಖೆ ನಡೆಸುವಂತೆ ಮತ್ತು ಶಿಸ್ತು ಕ್ರಮಗಳನ್ನು ಪ್ರಾರಂಭಿಸುವಂತೆ ಉತ್ತರ ಪ್ರದೇಶ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನ್ಯಾಯಾಲಯ ಸೂಚಿಸಿದೆ. ಕಾನೂನುಬಾಹಿರ ಕ್ರಮಗಳಿಗೆ ಕಾರಣರಾದ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳುವ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರ ಹೊಂದಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಒಂದು ತಿಂಗಳೊಳಗೆ ತನ್ನ ನಿರ್ದೇಶನಗಳನ್ನು ಅನುಸರಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ.

ರಸ್ತೆ ವಿಸ್ತರಣೆ ಯೋಜನೆಗಳಿಗೆ ಅತಿಕ್ರಮಣಗಳನ್ನು ತೆರವುಗೊಳಿಸುವ ಮುನ್ನ ಅಧಿಕಾರಿಗಳು ಅನುಸರಿಸಬೇಕಾದ ಕ್ರಮಗಳನ್ನು ತೀರ್ಪಿನಲ್ಲಿ ನ್ಯಾಯಾಲಯ ವಿವರಿಸಿದೆ. ಈ ತೀರ್ಪಿನ ಪ್ರತಿಯನ್ನು ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ವಿತರಿಸಲು ನಿರ್ದೇಶಿಸಿದೆ.

ಅರ್ಜಿದಾರರ ಪರ ಹಿರಿಯ ವಕೀಲ ಸಿದ್ಧಾರ್ಥ್ ಭಟ್ನಾಗರ್ ವಾದ ಮಂಡಿಸಿದರು.

ಇದನ್ನೂ ಓದಿ : ಖಾಸಗಿ ಸ್ವತ್ತು ತೀರ್ಪು : ಅಯ್ಯರ್ ಕುರಿತ ಸಿಜೆಐ ಹೇಳಿಕೆಗೆ ನ್ಯಾ. ನಾಗರತ್ನ, ಧುಲಿಯಾ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...