Homeಮುಖಪುಟಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

₹ 25 ಲಕ್ಷ ಮಧ್ಯಂತರ ಪರಿಹಾರ ನೀಡಲು ಸೂಚನೆ

- Advertisement -
- Advertisement -

ರಸ್ತೆ ವಿಸ್ತರಣೆ ಯೋಜನೆಗಾಗಿ ಅಕ್ರಮವಾಗಿ ಮನೆಗಳನ್ನು ಕೆಡವಿದ್ದಕ್ಕಾಗಿ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಸುಪ್ರೀಂ ಕೋರ್ಟ್ ಇಂದು (ನ. 6) ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಮಹಾರಾಜ್‌ಗಂಜ್‌ನ ನಿವಾಸಿ ಮನೋಜ್ ತಿಬ್ರೆವಾಲ್ ಆಕಾಶ್ ಎಂಬವರ ಮನೆಯನ್ನು 2019ರಲ್ಲಿ ಕೆಡವಲಾಗಿತ್ತು. ಈ ಸಂಬಂಧ ಮನೋಜ್ ಅವರು ಕಳುಹಿಸಿದ ಪತ್ರ ದೂರಿನ ಆಧಾರದ ಮೇಲೆ
2020ರಲ್ಲಿ ದಾಖಲಾದ ಸ್ವಯಂ ಪ್ರೇರಿತ ರಿಟ್ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿದೆ.

ವಿಚಾರಣೆಯ ಸಂದರ್ಭದಲ್ಲಿ, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಇದು ‘ಮಿತಿ ಮೀರಿದ’ ನಡವಳಿಕೆ ಎಂದು ಬಣ್ಣಿಸಿದೆ.

ಅರ್ಜಿದಾರರು ಸಾರ್ವಜನಿಕ ಭೂಮಿಯನ್ನು ಅತಿಕ್ರಮಿಸಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಚಂದ್ರಚೂಡ್, ಅರ್ಜಿದಾರ 3.7 ಚದರ ಮೀಟರ್ ಜಾಗವನ್ನು ಅತಿಕ್ರಮಿಸಿದ್ದಾರೆ ಎಂಬುವುದು ನಿಮ್ಮ ವಾದ, ಆಯ್ತು ನಿಮ್ಮ ವಾದವನ್ನು ನಾವು ಒಪ್ಪುತ್ತೇವೆ. ಅರ್ಜಿದಾರನಿಗೆ ಕ್ಲೀನ್ ಚಿಟ್ ನೀಡುವುದಿಲ್ಲ. ಆದರೆ, ಯಾವುದೇ ನೋಟಿಸ್ ನೀಡದೆ ನೀವು ಜನರ ಮನೆಯನ್ನು ಹೇಗೆ ಕೆಡವುತ್ತೀರಿ? ಯಾರದ್ದಾದರು ಮನೆಯನ್ನು ಹಠಾತ್ ಕೆಡವಿ ಹಾಕುವುದು ಕಾನೂನುಬಾಹಿರ” ಎಂದು ಕಿಡಿಕಾರಿದ್ದಾರೆ.

‘ಮನೆ ಕೆಡವುವ ಮುನ್ನ ನೋಟಿಸ್ ನೀಡಿಲ್ಲ. ನಿಯಮಗಳನ್ನು ಅನುಸರಿಸಿಲ್ಲ’ ಎಂಬ ಅಂಶದ ಕುರಿತು ಪ್ರತಿಕ್ರಿಯಿಸಿದ ಸಿಜೆಐ, “ಇದು ಮಿತಿ ಮೀರಿದ ನಡವಳಿಕೆಯಾಗಿದೆ. ನೀವು ಎಲ್ಲಿ ನಿಯಮಗಳನ್ನು ಅನುಸರಿಸಿದ್ದೀರಿ? ನೀವು ಯಾವುದೇ ನೋಟಿಸ್ ನೀಡಿಲ್ಲ ಎಂಬ ಅಫಿಡವಿಟ್ ನಮ್ಮ ಬಳಿ ಇದೆ. ನೀವು ನೋಟಿಸ್ ಕೊಟ್ಟಿಲ್ಲ, ಜನರ ಮನೆ ಬಳಿ ಹೋಗಿ ಮೈಕ್ ಮೂಲಕ ಮನೆ ಧ್ವಂಸಗೊಳಿಸುವ ಬಗ್ಗೆ ಹೇಳಿದ್ದೀರಿ” ಎಂದಿದ್ದಾರೆ.

“ಈ ಪ್ರಕರಣದ ಅರ್ಜಿದಾರರದ್ದು ಮಾತ್ರವಲ್ಲದೆ, ಇತರ ಎರಡ್ಮೂರು ಮನೆಗಳನ್ನೂ ನೀವು ಕಡೆವಿದ್ದೀರಿ. ನಿಯಮದ ಪ್ರಕಾರ, ಯಾರಿಗೂ ಪ್ರತ್ಯೇಕ ನೋಟಿಸ್‌ಗಳನ್ನು ನೀಡಿಲ್ಲ. ಸಾರ್ವಜನಿಕ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದೀರಿ” ಎಂದು ನ್ಯಾಯ ಪೀಠ ಹೇಳಿದೆ.

“ನೀವು ರಾತ್ರೋರಾತ್ರಿ ನುಗ್ಗಿ ಮನೆಗಳನ್ನು ಕೆಡವಲು ಸಾಧ್ಯವಿಲ್ಲ. ಈ ಪ್ರಕರಣದಲ್ಲಿ ನೀವು ಜನರಿಗೆ ಮನೆ ಖಾಲಿ ಮಾಡಲು ಸಮಯ ನೀಡಿಲ್ಲ. ಹೀಗಿರುವಾಗ ಜನರು ತಮ್ಮ ಸಾಮಾಗ್ರಿಗಳನ್ನು ಏನು ಮಾಡಬೇಕು? ಮನೆ ಕೆಡವುದಾದರೆ ಸರಿಯಾದ ಪ್ರಕ್ರಿಯೆ ಅನುಸರಿಸಬೇಕು” ಎಂದು ನ್ಯಾಯಮೂರ್ತಿ ಪರ್ದಿವಾಲಾ ಕೂಡ ಹೇಳಿದ್ದಾರೆ.

ಪ್ರತಿಯೊಬ್ಬರಿಗೂ ಪ್ರತ್ಯೇಕ ನೋಟಿಸ್‌ಗಳನ್ನು ನೀಡದೆ, ಎಲ್ಲರಿಗೂ ಸೇರಿಸಿ ಸಾರ್ವಜನಿಕ ಪ್ರಕಟಣೆ ಹೊರಡಿಸುವುದು ಮತ್ತು ಡೋಲು ಬಾರಿಸುವ ಮೂಲಕ ಅಧಿಕಾರಿಗಳು ಮಾಹಿತಿ ನೀಡುವುದಕ್ಕೆ ನ್ಯಾಯಮೂರ್ತಿ ಪರ್ದಿವಾಲ ‘ಅಸಮ್ಮತಿ’ ಸೂಚಿಸಿದ್ದಾರೆ.

ಪ್ರಕರಣದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಹೆಚ್‌ಆರ್‌ಸಿ) ವರದಿಯನ್ನು ಪೀಠವು ಪರಿಗಣಿಸಿದೆ. “ಕೇವಲ 3.70 ಚದರ ಮೀಟರ್ ಜಾಗ ಅತಿಕ್ರಮಣವಾಗಿದ್ದಕ್ಕೆ ಅಧಿಕಾರಿಗಳು ಇಡೀ ಮನೆಯನ್ನೇ ಕಡೆವಿದ್ದಾರೆ. ಇಡೀ ಮನೆ ಕೆಡವುವ ಅಗತ್ಯ ಇರಲಿಲ್ಲ. ಆದ್ದರಿಂದ ಅರ್ಜಿದಾರರಿಗೆ ಮಧ್ಯಂತರ ಪರಿಹಾರ ನೀಡಬೇಕು. ಅರ್ಜಿದಾರರ ದೂರಿನ ಮೇರೆಗೆ ತಪ್ಪಿತಸ್ಥರ ವಿರುದ್ದ ಎಫ್‌ಐಆರ್ ದಾಖಲಿಸಬೇಕು ಮತ್ತು ಅಧಿಕಾರಿಗಳ ವಿರುದ್ದ ಇಲಾಖಾ ಕ್ರಮ ಕೈಗೊಳ್ಳಬೇಕು” ಎಂದು ಎನ್‌ಹೆಚ್‌ಆರ್‌ಸಿ ಶಿಫಾರಸು ಮಾಡಿದೆ.

ಅತಿಕ್ರಮಣಗಳನ್ನು ಗುರುತಿಸಲು ಅಧಿಕಾರಿಗಳು ಯಾವುದೇ ತನಿಖೆ ನಡೆಸಿಲ್ಲ.ಮನೆ ನೆಲಸಮ ಮಾಡುವ ಮೊದಲು ಭೂಮಿ ಸ್ವಾಧೀನಪಡಿಸಿಕೊಂಡಿದ್ದೇವೆ ಎಂದು ತೋರಿಸಲು ಯಾವುದೇ ದಾಖಲೆ ಅವರಲ್ಲಿ ಇರಲಿಲ್ಲ ಎಂಬುವುದನ್ನು ನ್ಯಾಯಾಲಯ ಗಮನಿಸಿದೆ.

ಅತಿಕ್ರಮಣದ ನಿಖರವಾದ ಪ್ರಮಾಣ, ಪ್ರಸ್ತುತ ರಸ್ತೆಯ ಅಗಲ, ಅಧಿಸೂಚಿತ ಹೆದ್ದಾರಿಯ ಅಗಲ, ಹೆದ್ದಾರಿಯ ಕೇಂದ್ರ ರೇಖೆಯ ಅಧಿಸೂಚಿತ ಅಗಲದ ವ್ಯಾಪ್ತಿಯಲ್ಲಿ ಬರುವ ಅರ್ಜಿದಾರರ ಆಸ್ತಿಯ ಪ್ರಮಾಣವನ್ನು ಬಹಿರಂಗಪಡಿಸಲು ಸರ್ಕಾರ ವಿಫಲವಾಗಿದೆ ಎಂದಿರುವ ನ್ಯಾಯಾಲಯ, ಆಪಾದಿತ ಅತಿಕ್ರಮಣವನ್ನು ಮೀರಿ ನೆಲಸಮವನ್ನು ಏಕೆ ನಡೆಸಲಾಗಿದೆ ಎಂಬುವುದರ ಕುರಿತು ಆಶ್ಚರ್ಯ ವ್ಯಕ್ತಪಡಿಸಿದೆ.

ಅಧಿಕಾರಿಗಳ ಅಕ್ರಮಗಳ ಬಗ್ಗೆ ಸ್ಥಳೀಯ ಪತ್ರಿಕೆಯಲ್ಲಿ ಪ್ರಕಟಿಸಿದ ವರದಿಗೆ ಪ್ರತೀಕಾರವಾಗಿ ತನ್ನ ಮನೆಯನ್ನು ಕೆಡವಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಈ ಆರೋಪದ ಬಗ್ಗೆ ನ್ಯಾಯಪೀಠ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ.

ಅರ್ಜಿದಾರರಿಗೆ 25 ಲಕ್ಷ ರೂಪಾಯಿ ದಂಡದ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ. ಈ ಪರಿಹಾರವು ಮಧ್ಯಂತರ ಸ್ವರೂಪದ್ದಾಗಿದೆ ಎಂದು ಸ್ಪಷ್ಟಪಡಿಸಿದೆ. ಅಕ್ರಮ ನೆಲಸಮಕ್ಕೆ ಕಾರಣರಾದ ಎಲ್ಲಾ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ತನಿಖೆ ನಡೆಸುವಂತೆ ಮತ್ತು ಶಿಸ್ತು ಕ್ರಮಗಳನ್ನು ಪ್ರಾರಂಭಿಸುವಂತೆ ಉತ್ತರ ಪ್ರದೇಶ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನ್ಯಾಯಾಲಯ ಸೂಚಿಸಿದೆ. ಕಾನೂನುಬಾಹಿರ ಕ್ರಮಗಳಿಗೆ ಕಾರಣರಾದ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳುವ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರ ಹೊಂದಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಒಂದು ತಿಂಗಳೊಳಗೆ ತನ್ನ ನಿರ್ದೇಶನಗಳನ್ನು ಅನುಸರಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ.

ರಸ್ತೆ ವಿಸ್ತರಣೆ ಯೋಜನೆಗಳಿಗೆ ಅತಿಕ್ರಮಣಗಳನ್ನು ತೆರವುಗೊಳಿಸುವ ಮುನ್ನ ಅಧಿಕಾರಿಗಳು ಅನುಸರಿಸಬೇಕಾದ ಕ್ರಮಗಳನ್ನು ತೀರ್ಪಿನಲ್ಲಿ ನ್ಯಾಯಾಲಯ ವಿವರಿಸಿದೆ. ಈ ತೀರ್ಪಿನ ಪ್ರತಿಯನ್ನು ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ವಿತರಿಸಲು ನಿರ್ದೇಶಿಸಿದೆ.

ಅರ್ಜಿದಾರರ ಪರ ಹಿರಿಯ ವಕೀಲ ಸಿದ್ಧಾರ್ಥ್ ಭಟ್ನಾಗರ್ ವಾದ ಮಂಡಿಸಿದರು.

ಇದನ್ನೂ ಓದಿ : ಖಾಸಗಿ ಸ್ವತ್ತು ತೀರ್ಪು : ಅಯ್ಯರ್ ಕುರಿತ ಸಿಜೆಐ ಹೇಳಿಕೆಗೆ ನ್ಯಾ. ನಾಗರತ್ನ, ಧುಲಿಯಾ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...