Homeಮುಖಪುಟ'ಅಕ್ರಮ ವಲಸಿಗರಿಗೆ ಕೈಗೆ ಕೋಳ, ಕಾಲಿಗೆ ಸರಪಳಿ..'; ಗಡೀಪಾರು ಮಾಡುವ ವಿಡಿಯೊ ಹಂಚಿಕೊಂಡ ಅಮೆರಿಕ

‘ಅಕ್ರಮ ವಲಸಿಗರಿಗೆ ಕೈಗೆ ಕೋಳ, ಕಾಲಿಗೆ ಸರಪಳಿ..’; ಗಡೀಪಾರು ಮಾಡುವ ವಿಡಿಯೊ ಹಂಚಿಕೊಂಡ ಅಮೆರಿಕ

- Advertisement -
- Advertisement -

ಡೊನಾಲ್ಡ್ ಟ್ರಂಪ್ ಆಡಳಿತವು ಅಕ್ರಮ ವಲಸೆಯ ವಿರುದ್ಧ ಕೈಗೊಂಡ ಕ್ರಮಗಳ ಭಾಗವಾಗಿ, ಅಮೆರಿಕದಿಂದ ಗಡೀಪಾರು ವಿಮಾನ ಹತ್ತುವಾಗ ಅಕ್ರಮ ವಲಸಿಗರನ್ನು ಕೋಳ ಮತ್ತು ಸರಪಳಿಯಿಂದ ಬಂಧಿಸಿರುವುದನ್ನು ತೋರಿಸುವ ವೀಡಿಯೊವನ್ನು ಶ್ವೇತಭವನ ಮಂಗಳವಾರ ಪೋಸ್ಟ್ ಮಾಡಿದೆ.

ಗಡೀಪಾರು ವಿಮಾನಗಳಲ್ಲಿ ದಾಖಲೆರಹಿತ ವ್ಯಕ್ತಿಗಳನ್ನು ನಡೆಸಿಕೊಳ್ಳುವುದರ ಕುರಿತು ಭಾರತದಲ್ಲಿ ವಿರೋಧ ವ್ಯಕ್ತವಾಗುತ್ತಿರುವಾಗಲೇ, ಅಮೆರಿಕ ಗಡೀಪಾರು ಮಾಡುವ ವಿಮಾನಗಳಲ್ಲಿ ಅಧಿಕಾರಿಯೊಬ್ಬರು ಸಂಕೋಲೆಗಳಲ್ಲಿ ಬಂಧಿಸಲ್ಪಟ್ಟ ವ್ಯಕ್ತಿಯನ್ನು ಗಡೀಪಾರಿಗೆ ಸಿದ್ಧಪಡಿಸುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು.

ಮುಖ ತೋರಿಸದ ವಲಸಿಗರೊಬ್ಬರು ಅಧಿಕಾರಿಯ ಹಿಂದೆ ನಡೆದುಕೊಂಡು ಹೋಗುವಾಗ ಕೈಕೋಳಗಳನ್ನು ಒಟ್ಟಿಗೆ ಜೋಡಿಸಿ ಕಾಲುಗಳನ್ನು ಸರಪಳಿಯಿಂದ ಕಟ್ಟಿರುವುದನ್ನು ಕಾಣಬಹುದು. ಮತ್ತೊಂದು ದೃಶ್ಯದಲ್ಲಿ ಒಬ್ಬ ವ್ಯಕ್ತಿಯು ವಿಮಾನದ ಮೆಟ್ಟಿಲು ಹತ್ತುವಾಗ ಕೈಕೋಳಗಳಿಂದ ಒಟ್ಟಿಗೆ ಜೋಡಿಸಿರುವುದು, ವ್ಯಕ್ತಿಯ ಕಾಳುಗಳನ್ನು ಸರಪಳಿಗಳಲ್ಲಿ ಬಂಧಿಸಿರುವುದನ್ನು ಕಾಣಬಹುದು.

ಮತ್ತೋರ್ವ ವ್ಯಕ್ತಿ ಸಂಕೋಲೆಯಲ್ಲಿ ವಿಮಾನ ಹತ್ತುತ್ತಿರುವುದು ಕೂಡ ಕಂಡುಬರುತ್ತದೆ. ವೀಡಿಯೊದಲ್ಲಿ ತೋರಿಸಿರುವ ಪುರುಷರಲ್ಲಿ ಯಾರ ಮುಖವೂ ಸ್ಪಷ್ಟವಾಗಿ ಗೋಚರಿಸುತ್ತಿಲ್ಲ. ಟೆಸ್ಲಾ ಸಿಇಒ ಎಲಾನ್ ಮಸ್ಕ್ ಕೂಡ ‘ಹಹಾ ವಾವ್’ ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ರೀ ಪೋಸ್ಟ್‌ ಮಾಡಿದ್ದಾರೆ.

ಈ ತಿಂಗಳ ಆರಂಭದಲ್ಲಿ, 332 ಅಕ್ರಮ ಭಾರತೀಯ ವಲಸಿಗರನ್ನು ಹೊತ್ತ ಮೂರು ಯುಎಸ್ ಮಿಲಿಟರಿ ವಿಮಾನಗಳು ಅಮೃತಸರದಲ್ಲಿ ಬಂದಿಳಿದವು. ಎಲ್ಲ ಗಡೀಪಾರುದಾರರು ತಾವು ಸಂಕೋಲೆಯಲ್ಲಿದ್ದೇವು. ಪ್ರಯಾಣದ ಸಮಯದಲ್ಲಿ ಶೌಚಾಲಯಕ್ಕೆ ಮತ್ತು ಆಹಾರಕ್ಕೆ ಅವಕಾಶ ಇರಲಿಲ್ಲ ಎಂದು ದೂರಿದರು.

ಯುಎಸ್ ಬಾರ್ಡರ್ ಪೆಟ್ರೋಲ್ (ಯುಬಿಎಸ್‌ಪಿ) ಮುಖ್ಯಸ್ಥ ಮೈಕೆಲ್ ಡಬ್ಲ್ಯೂ ಬ್ಯಾಂಕ್ಸ್ ಈ ಹಿಂದೆ ಅಮೇರಿಕನ್ ಮಿಲಿಟರಿ ವಿಮಾನದಲ್ಲಿ ಭಾರತಕ್ಕೆ ‘ಅಕ್ರಮ ವಿದೇಶಿಯರನ್ನು’ ಗಡೀಪಾರು ಮಾಡುವುದನ್ನು ತೋರಿಸುವ ವೀಡಿಯೊವನ್ನು ಹಂಚಿಕೊಂಡಿದ್ದರು. ಈ ವೀಡಿಯೊ ಭಾರತದಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಯಿತು, ವಿರೋಧ ಪಕ್ಷಗಳು ಯುಎಸ್‌ನಿಂದ ಭಾರತೀಯ ಗಡೀಪಾರು ಮಾಡಲ್ಪಟ್ಟವರ ‘ಅಮಾನವೀಯ ವರ್ತನೆ’ಯನ್ನು ಎತ್ತಿ ತೋರಿಸಿದವು.

ಇದನ್ನೂ ಓದಿ; ಗಾಜಾ: ತುಂಬಾ ಕಠಿಣವಾಗಿರುವ 2ನೇ ಹಂತದ ಒಪ್ಪಂದದ ಕುರಿತು ಈ ವಾರ ಮಾತುಕತೆ: ಇಸ್ರೇಲ್ ವಿದೇಶಾಂಗ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...