Homeಮುಖಪುಟ'ಅಕ್ರಮ ವಲಸಿಗರಿಗೆ ಕೈಗೆ ಕೋಳ, ಕಾಲಿಗೆ ಸರಪಳಿ..'; ಗಡೀಪಾರು ಮಾಡುವ ವಿಡಿಯೊ ಹಂಚಿಕೊಂಡ ಅಮೆರಿಕ

‘ಅಕ್ರಮ ವಲಸಿಗರಿಗೆ ಕೈಗೆ ಕೋಳ, ಕಾಲಿಗೆ ಸರಪಳಿ..’; ಗಡೀಪಾರು ಮಾಡುವ ವಿಡಿಯೊ ಹಂಚಿಕೊಂಡ ಅಮೆರಿಕ

- Advertisement -
- Advertisement -

ಡೊನಾಲ್ಡ್ ಟ್ರಂಪ್ ಆಡಳಿತವು ಅಕ್ರಮ ವಲಸೆಯ ವಿರುದ್ಧ ಕೈಗೊಂಡ ಕ್ರಮಗಳ ಭಾಗವಾಗಿ, ಅಮೆರಿಕದಿಂದ ಗಡೀಪಾರು ವಿಮಾನ ಹತ್ತುವಾಗ ಅಕ್ರಮ ವಲಸಿಗರನ್ನು ಕೋಳ ಮತ್ತು ಸರಪಳಿಯಿಂದ ಬಂಧಿಸಿರುವುದನ್ನು ತೋರಿಸುವ ವೀಡಿಯೊವನ್ನು ಶ್ವೇತಭವನ ಮಂಗಳವಾರ ಪೋಸ್ಟ್ ಮಾಡಿದೆ.

ಗಡೀಪಾರು ವಿಮಾನಗಳಲ್ಲಿ ದಾಖಲೆರಹಿತ ವ್ಯಕ್ತಿಗಳನ್ನು ನಡೆಸಿಕೊಳ್ಳುವುದರ ಕುರಿತು ಭಾರತದಲ್ಲಿ ವಿರೋಧ ವ್ಯಕ್ತವಾಗುತ್ತಿರುವಾಗಲೇ, ಅಮೆರಿಕ ಗಡೀಪಾರು ಮಾಡುವ ವಿಮಾನಗಳಲ್ಲಿ ಅಧಿಕಾರಿಯೊಬ್ಬರು ಸಂಕೋಲೆಗಳಲ್ಲಿ ಬಂಧಿಸಲ್ಪಟ್ಟ ವ್ಯಕ್ತಿಯನ್ನು ಗಡೀಪಾರಿಗೆ ಸಿದ್ಧಪಡಿಸುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು.

ಮುಖ ತೋರಿಸದ ವಲಸಿಗರೊಬ್ಬರು ಅಧಿಕಾರಿಯ ಹಿಂದೆ ನಡೆದುಕೊಂಡು ಹೋಗುವಾಗ ಕೈಕೋಳಗಳನ್ನು ಒಟ್ಟಿಗೆ ಜೋಡಿಸಿ ಕಾಲುಗಳನ್ನು ಸರಪಳಿಯಿಂದ ಕಟ್ಟಿರುವುದನ್ನು ಕಾಣಬಹುದು. ಮತ್ತೊಂದು ದೃಶ್ಯದಲ್ಲಿ ಒಬ್ಬ ವ್ಯಕ್ತಿಯು ವಿಮಾನದ ಮೆಟ್ಟಿಲು ಹತ್ತುವಾಗ ಕೈಕೋಳಗಳಿಂದ ಒಟ್ಟಿಗೆ ಜೋಡಿಸಿರುವುದು, ವ್ಯಕ್ತಿಯ ಕಾಳುಗಳನ್ನು ಸರಪಳಿಗಳಲ್ಲಿ ಬಂಧಿಸಿರುವುದನ್ನು ಕಾಣಬಹುದು.

ಮತ್ತೋರ್ವ ವ್ಯಕ್ತಿ ಸಂಕೋಲೆಯಲ್ಲಿ ವಿಮಾನ ಹತ್ತುತ್ತಿರುವುದು ಕೂಡ ಕಂಡುಬರುತ್ತದೆ. ವೀಡಿಯೊದಲ್ಲಿ ತೋರಿಸಿರುವ ಪುರುಷರಲ್ಲಿ ಯಾರ ಮುಖವೂ ಸ್ಪಷ್ಟವಾಗಿ ಗೋಚರಿಸುತ್ತಿಲ್ಲ. ಟೆಸ್ಲಾ ಸಿಇಒ ಎಲಾನ್ ಮಸ್ಕ್ ಕೂಡ ‘ಹಹಾ ವಾವ್’ ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ರೀ ಪೋಸ್ಟ್‌ ಮಾಡಿದ್ದಾರೆ.

ಈ ತಿಂಗಳ ಆರಂಭದಲ್ಲಿ, 332 ಅಕ್ರಮ ಭಾರತೀಯ ವಲಸಿಗರನ್ನು ಹೊತ್ತ ಮೂರು ಯುಎಸ್ ಮಿಲಿಟರಿ ವಿಮಾನಗಳು ಅಮೃತಸರದಲ್ಲಿ ಬಂದಿಳಿದವು. ಎಲ್ಲ ಗಡೀಪಾರುದಾರರು ತಾವು ಸಂಕೋಲೆಯಲ್ಲಿದ್ದೇವು. ಪ್ರಯಾಣದ ಸಮಯದಲ್ಲಿ ಶೌಚಾಲಯಕ್ಕೆ ಮತ್ತು ಆಹಾರಕ್ಕೆ ಅವಕಾಶ ಇರಲಿಲ್ಲ ಎಂದು ದೂರಿದರು.

ಯುಎಸ್ ಬಾರ್ಡರ್ ಪೆಟ್ರೋಲ್ (ಯುಬಿಎಸ್‌ಪಿ) ಮುಖ್ಯಸ್ಥ ಮೈಕೆಲ್ ಡಬ್ಲ್ಯೂ ಬ್ಯಾಂಕ್ಸ್ ಈ ಹಿಂದೆ ಅಮೇರಿಕನ್ ಮಿಲಿಟರಿ ವಿಮಾನದಲ್ಲಿ ಭಾರತಕ್ಕೆ ‘ಅಕ್ರಮ ವಿದೇಶಿಯರನ್ನು’ ಗಡೀಪಾರು ಮಾಡುವುದನ್ನು ತೋರಿಸುವ ವೀಡಿಯೊವನ್ನು ಹಂಚಿಕೊಂಡಿದ್ದರು. ಈ ವೀಡಿಯೊ ಭಾರತದಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಯಿತು, ವಿರೋಧ ಪಕ್ಷಗಳು ಯುಎಸ್‌ನಿಂದ ಭಾರತೀಯ ಗಡೀಪಾರು ಮಾಡಲ್ಪಟ್ಟವರ ‘ಅಮಾನವೀಯ ವರ್ತನೆ’ಯನ್ನು ಎತ್ತಿ ತೋರಿಸಿದವು.

ಇದನ್ನೂ ಓದಿ; ಗಾಜಾ: ತುಂಬಾ ಕಠಿಣವಾಗಿರುವ 2ನೇ ಹಂತದ ಒಪ್ಪಂದದ ಕುರಿತು ಈ ವಾರ ಮಾತುಕತೆ: ಇಸ್ರೇಲ್ ವಿದೇಶಾಂಗ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...