Homeಮುಖಪುಟಅಕ್ರಮ ಜೈಲುವಾಸ: ಅರ್ಜಿದಾರರಿಗೆ ತಲಾ 50 ಸಾವಿರ ಪರಿಹಾರಕ್ಕೆ ಆದೇಶ!

ಅಕ್ರಮ ಜೈಲುವಾಸ: ಅರ್ಜಿದಾರರಿಗೆ ತಲಾ 50 ಸಾವಿರ ಪರಿಹಾರಕ್ಕೆ ಆದೇಶ!

- Advertisement -
- Advertisement -

ಎರಡು ಕುಟುಂಬಗಳ ನಡುವಿನ ಗಲಾಟೆ ಪ್ರಕರಣವೊಂದರಲ್ಲಿ ಆರು ದಿನಗಳ ಅಕ್ರಮ ಸೆರೆವಾಸಕ್ಕೆ ಗುರಿಯಾಗಿದ್ದ ಇಬ್ಬರು ಅರ್ಜಿದಾರರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಬಾಂಬೆ ಹೈಕೋರ್ಟ್‌ನ ಔರಂಗಬಾದ್ ದ್ವಿಸದಸ್ಯ ಪೀಠ ಮಹಾರಾಷ್ಟ್ರ ಸರ್ಕಾರಕ್ಕೆ ಆದೇಶ ನೀಡಿದೆ.

ನ್ಯಾಯಮೂರ್ತಿ ತಾನಾಜಿ ವಿ ನಲವಾಡ ಮತ್ತು ಮುಕುಂದ್ ಜಿ ಸೇವಲಿಕರ್ ಪೀಠದ ಮುಂದೆ ಅರುಣ್ ತಗಡ್ ಮತ್ತು ಶೈಲೇಂದ್ರ ತಗಡ್ ಅಕ್ರಮ ಜೈಲುವಾಸಕ್ಕೆ ಕಾರಣರಾದವರಿಂದ ತಮಗೆ 5 ಲಕ್ಷ ರೂಪಾಯಿ ಪರಿಹಾರ ಕೊಡಿಸಬೇಕೆಂದು ರಿಟ್ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಕಳಚಿಕೊಳ್ಳುತ್ತಿದೆ NDA ನ ಒಂದೊಂದೇ ಕೊಂಡಿ – BJP ಗೆ ಆಘಾತ ನೀಡಿದ ತಮಿಳುನಾಡು!

ಈ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ದ್ವಿಸದಸ್ಯ ಪೀಠ, ಈ ಪ್ರಕರಣದ ಕುರಿತು ರಾಜ್ಯ ಸರ್ಕಾರ ಸೂಕ್ತ ಸ್ಪಷ್ಟೀಕರಣ ನೀಡಬೇಕು. ಪೊಲೀಸ್ ಇಲಾಖೆಯ ಮೇಲಧಿಕಾರಿಗಳು ಕೆಳಹಂತದ ಪೊಲೀಸರಿಗೆ ಈ ಸಂಬಂಧ ಸ್ಪಷ್ಟ ಸೂಚನೆಗಳನ್ನು ಕೊಡಬೇಕೆಂದು ನಿರ್ದೇಶನ ನೀಡಿದೆ.

28 ಜನವರಿ 2013ರಂದು ಬೀಡ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ, 35 ವರ್ಷದ ಮಹಿಳೆಯೊಬ್ಬರು, “ತನಗೆ ನೀರಿನಲ್ಲಿ ಎತ್ತುಗಳು ಮತ್ತು ಗಾಡಿಯನ್ನು ಇಳಿಸಲು ಅವಕಾಶ ನೀಡದೆ, ನನ್ನ ಕುಟುಂಬದ ಸದಸ್ಯರೊಂದಿಗೆ ಜಗಳ ತೆಗೆದು ತನ್ನ ಮೇಲೆ ಹಲ್ಲೆ ನಡೆಸಿದ್ದರು. ಹೀಗಾಗಿ ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು” ಎಂದು ಅರ್ಜಿದಾರರ ವಿರುದ್ಧ ದೂರು ನೀಡಿದ್ದರು. ಪೊಲೀಸರು ಎಫ್ಐಆರ್ ಕೂಡ ದಾಖಲಿಸಿದ್ದರು.

ಇದನ್ನೂ ಓದಿ: ’ಆಝಾದಿ’ ಘೋಷಣೆ ಕೂಗಿದ್ದಾರೆಂದು 6 ವಿದ್ಯಾರ್ಥಿಗಳ ಮೇಲೆ ದೇಶದ್ರೋಹಿ ಪ್ರಕರಣ ದಾಖಲು

30 ಜನವರಿ 2013ರಂದು ಪೊಲೀಸರು ಅರ್ಜಿದಾರರ ವಿರುದ್ಧ ಐಪಿಸಿ 323, 324, 504 ಮತ್ತು 306 ಸೆಕ್ಷನ್ ಅಡಿ ಕೇಸು ದಾಖಲಿಸಿ ಬಂಧಿಸಿದ್ದರು. ನಂತರ ಆರೋಪಿಗಳನ್ನು ಪ್ರಥಮ ದರ್ಜೆ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದರು. ನ್ಯಾಯಾಧೀಶರು ಆರೋಪಿಗಳಿಂದ ವೈಯಕ್ತಿಕ ಬಾಂಡ್ ಮತ್ತು ಭದ್ರತೆ ಪಡೆದು ಬಿಡುಗಡೆ ಮಾಡಿದ್ದರು.

ಇದಾದ ಬಳಿಕ ಪೊಲೀಸರು ಎರಡನೇ ಬಾರಿಯೂ ಆರೋಪಿಗಳನ್ನು ಬಂಧಿಸಿ ಎಕ್ಸಿಕ್ಯೂಟಿವ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದರು. ಎಕ್ಸಿಕ್ಯೂಟೀವ್ ಮ್ಯಾಜಿಸ್ಟ್ರೇಟ್ ಆರೋಪಿಗಳಿಗೆ ತಲಾ 25 ಸಾವಿರ ರೂ.ಗಳ ಭದ್ರತೆ ನೀಡಬೇಕೆಂದು ಮಧ್ಯಂತರ ನಿರ್ದೇಶನ ನೀಡಿದ್ದರು.

ಇದನ್ನು ಪ್ರಶ್ನಿಸಿ ಅರ್ಜಿದಾರರು 31 ಜನವರಿ 2013ರಲ್ಲಿ ರಿಟ್ ಸಲ್ಲಿಸಿ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟರ ಮುಂದೆ ಲಿಖಿತ ಮನವಿ ಸಲ್ಲಿಸಿದ್ದರು. ಆದರೂ 30 ಜನವರಿ 2013 ರಿಂದ ಫೆಬ್ರವರಿ 5, 2013 ರವರೆಗೂ ಅರ್ಜಿದಾರರನ್ನು ಅಕ್ರಮವಾಗಿ ಜೈಲಲ್ಲಿ ಇಡಲಾಗಿತ್ತು.

ಇದನ್ನೂ ಓದಿ: ’ಕನ್ನಡ ಪ್ರಭ’ದ ಮಾಜಿ ಉದ್ಯೋಗಿಯ ಡೆತ್‌‌‌ ನೋಟ್: ತನಿಖೆಗೆ ಆಗ್ರಹಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

ಅರ್ಜಿದಾರರ ಪರ ವಾದ ಮಂಡಿಸಿದ ನ್ಯಾಯವಾದಿ ಎನ್.ಆರ್. ಥೋರಟ್, “ಪೊಲೀಸರು ಮತ್ತು ಎಕ್ಸಿಕ್ಯೂಟಿವ್ ಮ್ಯಾಜಿಸ್ಟ್ರೇಟ್ ಅವಶ್ಯಕ ಆದೇಶ ಹೊರಡಿಸುವಲ್ಲಿ ವಿಫಲವಾಗಿದ್ದಾರೆ. ಹೀಗಾಗಿ ಅರ್ಜಿದಾರರು ಅಕ್ರಮವಾಗಿ ಜೈಲಲ್ಲಿ ಇರುವಂತಾಯಿತು. ಅರ್ಜಿದಾರರು ಅಪರಾಧಿಗಳಲ್ಲ. ಶೈಲೇಂದ್ರ ತಗಡ್ ಈ ಅವಧಿಯಲ್ಲಿ ಮಿಲಿಟರಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅರುಣ್ ತಗಡ್‌ ಸ್ಥಳೀಯವಾಗಿ ಹೆಸರು ಮಾಡಿದ್ದರು ಮತ್ತು ಗೌರವಾನ್ವಿತ ವ್ಯಕ್ತಿಯಾಗಿದ್ದರು. ಇವರ ಬಂಧನ ಮತ್ತು ಅಕ್ರಮ ಸೆರೆವಾಸ ಕಾನೂನುಬಾಹಿರವಾಗಿದೆ. ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ” ಎಂದು ವಾದಿಸಿದ್ದರು.

ವಾದವನ್ನು ಆಲಿಸಿದ ದ್ವಿಸದಸ್ಯ ಪೀಠದ ನ್ಯಾಯಮೂರ್ತಿಗಳು, “ಈ ಪ್ರಕರಣದ ಬಗ್ಗೆ ಸರ್ಕಾರ ಸ್ಪಷ್ಟೀಕರಣ ನೀಡಬೇಕು. ಜವಾಬ್ದಾರಿಗಳೇನೆಂಬುದನ್ನು ತಿಳಿಸಬೇಕು. ಜೊತೆಗೆ ಪೊಲೀಸ್ ಇಲಾಖೆಯ ಮೇಲಧಿಕಾರಿಗಳು ಕೆಳಹಂತದ ಪೊಲೀಸರಿಗೆ ಆಗತ್ಯ ಸೂಚನೆಗಳನ್ನು ನೀಡಬೇಕೆಂದು” ಪೀಠ ನಿರ್ದೇಶನ ನೀಡಿದೆ ಎಂದು ದಿವೈರ್.ಇನ್ ವರದಿ ಮಾಡಿದೆ.


ಇದನ್ನೂ ಓದಿ: ಶಿವಮೊಗ್ಗ: Jio ಇಂದ Airtel ಗೆ ಸಾಮೂಹಿಕವಾಗಿ ಪೋರ್ಟ್ ಆದ ರೈತ ಹೋರಾಟಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...