Homeಮುಖಪುಟಅಕ್ರಮ ಜೈಲುವಾಸ: ಅರ್ಜಿದಾರರಿಗೆ ತಲಾ 50 ಸಾವಿರ ಪರಿಹಾರಕ್ಕೆ ಆದೇಶ!

ಅಕ್ರಮ ಜೈಲುವಾಸ: ಅರ್ಜಿದಾರರಿಗೆ ತಲಾ 50 ಸಾವಿರ ಪರಿಹಾರಕ್ಕೆ ಆದೇಶ!

- Advertisement -
- Advertisement -

ಎರಡು ಕುಟುಂಬಗಳ ನಡುವಿನ ಗಲಾಟೆ ಪ್ರಕರಣವೊಂದರಲ್ಲಿ ಆರು ದಿನಗಳ ಅಕ್ರಮ ಸೆರೆವಾಸಕ್ಕೆ ಗುರಿಯಾಗಿದ್ದ ಇಬ್ಬರು ಅರ್ಜಿದಾರರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಬಾಂಬೆ ಹೈಕೋರ್ಟ್‌ನ ಔರಂಗಬಾದ್ ದ್ವಿಸದಸ್ಯ ಪೀಠ ಮಹಾರಾಷ್ಟ್ರ ಸರ್ಕಾರಕ್ಕೆ ಆದೇಶ ನೀಡಿದೆ.

ನ್ಯಾಯಮೂರ್ತಿ ತಾನಾಜಿ ವಿ ನಲವಾಡ ಮತ್ತು ಮುಕುಂದ್ ಜಿ ಸೇವಲಿಕರ್ ಪೀಠದ ಮುಂದೆ ಅರುಣ್ ತಗಡ್ ಮತ್ತು ಶೈಲೇಂದ್ರ ತಗಡ್ ಅಕ್ರಮ ಜೈಲುವಾಸಕ್ಕೆ ಕಾರಣರಾದವರಿಂದ ತಮಗೆ 5 ಲಕ್ಷ ರೂಪಾಯಿ ಪರಿಹಾರ ಕೊಡಿಸಬೇಕೆಂದು ರಿಟ್ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಕಳಚಿಕೊಳ್ಳುತ್ತಿದೆ NDA ನ ಒಂದೊಂದೇ ಕೊಂಡಿ – BJP ಗೆ ಆಘಾತ ನೀಡಿದ ತಮಿಳುನಾಡು!

ಈ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ದ್ವಿಸದಸ್ಯ ಪೀಠ, ಈ ಪ್ರಕರಣದ ಕುರಿತು ರಾಜ್ಯ ಸರ್ಕಾರ ಸೂಕ್ತ ಸ್ಪಷ್ಟೀಕರಣ ನೀಡಬೇಕು. ಪೊಲೀಸ್ ಇಲಾಖೆಯ ಮೇಲಧಿಕಾರಿಗಳು ಕೆಳಹಂತದ ಪೊಲೀಸರಿಗೆ ಈ ಸಂಬಂಧ ಸ್ಪಷ್ಟ ಸೂಚನೆಗಳನ್ನು ಕೊಡಬೇಕೆಂದು ನಿರ್ದೇಶನ ನೀಡಿದೆ.

28 ಜನವರಿ 2013ರಂದು ಬೀಡ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ, 35 ವರ್ಷದ ಮಹಿಳೆಯೊಬ್ಬರು, “ತನಗೆ ನೀರಿನಲ್ಲಿ ಎತ್ತುಗಳು ಮತ್ತು ಗಾಡಿಯನ್ನು ಇಳಿಸಲು ಅವಕಾಶ ನೀಡದೆ, ನನ್ನ ಕುಟುಂಬದ ಸದಸ್ಯರೊಂದಿಗೆ ಜಗಳ ತೆಗೆದು ತನ್ನ ಮೇಲೆ ಹಲ್ಲೆ ನಡೆಸಿದ್ದರು. ಹೀಗಾಗಿ ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು” ಎಂದು ಅರ್ಜಿದಾರರ ವಿರುದ್ಧ ದೂರು ನೀಡಿದ್ದರು. ಪೊಲೀಸರು ಎಫ್ಐಆರ್ ಕೂಡ ದಾಖಲಿಸಿದ್ದರು.

ಇದನ್ನೂ ಓದಿ: ’ಆಝಾದಿ’ ಘೋಷಣೆ ಕೂಗಿದ್ದಾರೆಂದು 6 ವಿದ್ಯಾರ್ಥಿಗಳ ಮೇಲೆ ದೇಶದ್ರೋಹಿ ಪ್ರಕರಣ ದಾಖಲು

30 ಜನವರಿ 2013ರಂದು ಪೊಲೀಸರು ಅರ್ಜಿದಾರರ ವಿರುದ್ಧ ಐಪಿಸಿ 323, 324, 504 ಮತ್ತು 306 ಸೆಕ್ಷನ್ ಅಡಿ ಕೇಸು ದಾಖಲಿಸಿ ಬಂಧಿಸಿದ್ದರು. ನಂತರ ಆರೋಪಿಗಳನ್ನು ಪ್ರಥಮ ದರ್ಜೆ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದರು. ನ್ಯಾಯಾಧೀಶರು ಆರೋಪಿಗಳಿಂದ ವೈಯಕ್ತಿಕ ಬಾಂಡ್ ಮತ್ತು ಭದ್ರತೆ ಪಡೆದು ಬಿಡುಗಡೆ ಮಾಡಿದ್ದರು.

ಇದಾದ ಬಳಿಕ ಪೊಲೀಸರು ಎರಡನೇ ಬಾರಿಯೂ ಆರೋಪಿಗಳನ್ನು ಬಂಧಿಸಿ ಎಕ್ಸಿಕ್ಯೂಟಿವ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದರು. ಎಕ್ಸಿಕ್ಯೂಟೀವ್ ಮ್ಯಾಜಿಸ್ಟ್ರೇಟ್ ಆರೋಪಿಗಳಿಗೆ ತಲಾ 25 ಸಾವಿರ ರೂ.ಗಳ ಭದ್ರತೆ ನೀಡಬೇಕೆಂದು ಮಧ್ಯಂತರ ನಿರ್ದೇಶನ ನೀಡಿದ್ದರು.

ಇದನ್ನು ಪ್ರಶ್ನಿಸಿ ಅರ್ಜಿದಾರರು 31 ಜನವರಿ 2013ರಲ್ಲಿ ರಿಟ್ ಸಲ್ಲಿಸಿ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟರ ಮುಂದೆ ಲಿಖಿತ ಮನವಿ ಸಲ್ಲಿಸಿದ್ದರು. ಆದರೂ 30 ಜನವರಿ 2013 ರಿಂದ ಫೆಬ್ರವರಿ 5, 2013 ರವರೆಗೂ ಅರ್ಜಿದಾರರನ್ನು ಅಕ್ರಮವಾಗಿ ಜೈಲಲ್ಲಿ ಇಡಲಾಗಿತ್ತು.

ಇದನ್ನೂ ಓದಿ: ’ಕನ್ನಡ ಪ್ರಭ’ದ ಮಾಜಿ ಉದ್ಯೋಗಿಯ ಡೆತ್‌‌‌ ನೋಟ್: ತನಿಖೆಗೆ ಆಗ್ರಹಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

ಅರ್ಜಿದಾರರ ಪರ ವಾದ ಮಂಡಿಸಿದ ನ್ಯಾಯವಾದಿ ಎನ್.ಆರ್. ಥೋರಟ್, “ಪೊಲೀಸರು ಮತ್ತು ಎಕ್ಸಿಕ್ಯೂಟಿವ್ ಮ್ಯಾಜಿಸ್ಟ್ರೇಟ್ ಅವಶ್ಯಕ ಆದೇಶ ಹೊರಡಿಸುವಲ್ಲಿ ವಿಫಲವಾಗಿದ್ದಾರೆ. ಹೀಗಾಗಿ ಅರ್ಜಿದಾರರು ಅಕ್ರಮವಾಗಿ ಜೈಲಲ್ಲಿ ಇರುವಂತಾಯಿತು. ಅರ್ಜಿದಾರರು ಅಪರಾಧಿಗಳಲ್ಲ. ಶೈಲೇಂದ್ರ ತಗಡ್ ಈ ಅವಧಿಯಲ್ಲಿ ಮಿಲಿಟರಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅರುಣ್ ತಗಡ್‌ ಸ್ಥಳೀಯವಾಗಿ ಹೆಸರು ಮಾಡಿದ್ದರು ಮತ್ತು ಗೌರವಾನ್ವಿತ ವ್ಯಕ್ತಿಯಾಗಿದ್ದರು. ಇವರ ಬಂಧನ ಮತ್ತು ಅಕ್ರಮ ಸೆರೆವಾಸ ಕಾನೂನುಬಾಹಿರವಾಗಿದೆ. ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ” ಎಂದು ವಾದಿಸಿದ್ದರು.

ವಾದವನ್ನು ಆಲಿಸಿದ ದ್ವಿಸದಸ್ಯ ಪೀಠದ ನ್ಯಾಯಮೂರ್ತಿಗಳು, “ಈ ಪ್ರಕರಣದ ಬಗ್ಗೆ ಸರ್ಕಾರ ಸ್ಪಷ್ಟೀಕರಣ ನೀಡಬೇಕು. ಜವಾಬ್ದಾರಿಗಳೇನೆಂಬುದನ್ನು ತಿಳಿಸಬೇಕು. ಜೊತೆಗೆ ಪೊಲೀಸ್ ಇಲಾಖೆಯ ಮೇಲಧಿಕಾರಿಗಳು ಕೆಳಹಂತದ ಪೊಲೀಸರಿಗೆ ಆಗತ್ಯ ಸೂಚನೆಗಳನ್ನು ನೀಡಬೇಕೆಂದು” ಪೀಠ ನಿರ್ದೇಶನ ನೀಡಿದೆ ಎಂದು ದಿವೈರ್.ಇನ್ ವರದಿ ಮಾಡಿದೆ.


ಇದನ್ನೂ ಓದಿ: ಶಿವಮೊಗ್ಗ: Jio ಇಂದ Airtel ಗೆ ಸಾಮೂಹಿಕವಾಗಿ ಪೋರ್ಟ್ ಆದ ರೈತ ಹೋರಾಟಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...