Homeಮುಖಪುಟಅಕ್ರಮ ಜೈಲುವಾಸ: ಅರ್ಜಿದಾರರಿಗೆ ತಲಾ 50 ಸಾವಿರ ಪರಿಹಾರಕ್ಕೆ ಆದೇಶ!

ಅಕ್ರಮ ಜೈಲುವಾಸ: ಅರ್ಜಿದಾರರಿಗೆ ತಲಾ 50 ಸಾವಿರ ಪರಿಹಾರಕ್ಕೆ ಆದೇಶ!

- Advertisement -
- Advertisement -

ಎರಡು ಕುಟುಂಬಗಳ ನಡುವಿನ ಗಲಾಟೆ ಪ್ರಕರಣವೊಂದರಲ್ಲಿ ಆರು ದಿನಗಳ ಅಕ್ರಮ ಸೆರೆವಾಸಕ್ಕೆ ಗುರಿಯಾಗಿದ್ದ ಇಬ್ಬರು ಅರ್ಜಿದಾರರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಬಾಂಬೆ ಹೈಕೋರ್ಟ್‌ನ ಔರಂಗಬಾದ್ ದ್ವಿಸದಸ್ಯ ಪೀಠ ಮಹಾರಾಷ್ಟ್ರ ಸರ್ಕಾರಕ್ಕೆ ಆದೇಶ ನೀಡಿದೆ.

ನ್ಯಾಯಮೂರ್ತಿ ತಾನಾಜಿ ವಿ ನಲವಾಡ ಮತ್ತು ಮುಕುಂದ್ ಜಿ ಸೇವಲಿಕರ್ ಪೀಠದ ಮುಂದೆ ಅರುಣ್ ತಗಡ್ ಮತ್ತು ಶೈಲೇಂದ್ರ ತಗಡ್ ಅಕ್ರಮ ಜೈಲುವಾಸಕ್ಕೆ ಕಾರಣರಾದವರಿಂದ ತಮಗೆ 5 ಲಕ್ಷ ರೂಪಾಯಿ ಪರಿಹಾರ ಕೊಡಿಸಬೇಕೆಂದು ರಿಟ್ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಕಳಚಿಕೊಳ್ಳುತ್ತಿದೆ NDA ನ ಒಂದೊಂದೇ ಕೊಂಡಿ – BJP ಗೆ ಆಘಾತ ನೀಡಿದ ತಮಿಳುನಾಡು!

ಈ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ದ್ವಿಸದಸ್ಯ ಪೀಠ, ಈ ಪ್ರಕರಣದ ಕುರಿತು ರಾಜ್ಯ ಸರ್ಕಾರ ಸೂಕ್ತ ಸ್ಪಷ್ಟೀಕರಣ ನೀಡಬೇಕು. ಪೊಲೀಸ್ ಇಲಾಖೆಯ ಮೇಲಧಿಕಾರಿಗಳು ಕೆಳಹಂತದ ಪೊಲೀಸರಿಗೆ ಈ ಸಂಬಂಧ ಸ್ಪಷ್ಟ ಸೂಚನೆಗಳನ್ನು ಕೊಡಬೇಕೆಂದು ನಿರ್ದೇಶನ ನೀಡಿದೆ.

28 ಜನವರಿ 2013ರಂದು ಬೀಡ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ, 35 ವರ್ಷದ ಮಹಿಳೆಯೊಬ್ಬರು, “ತನಗೆ ನೀರಿನಲ್ಲಿ ಎತ್ತುಗಳು ಮತ್ತು ಗಾಡಿಯನ್ನು ಇಳಿಸಲು ಅವಕಾಶ ನೀಡದೆ, ನನ್ನ ಕುಟುಂಬದ ಸದಸ್ಯರೊಂದಿಗೆ ಜಗಳ ತೆಗೆದು ತನ್ನ ಮೇಲೆ ಹಲ್ಲೆ ನಡೆಸಿದ್ದರು. ಹೀಗಾಗಿ ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು” ಎಂದು ಅರ್ಜಿದಾರರ ವಿರುದ್ಧ ದೂರು ನೀಡಿದ್ದರು. ಪೊಲೀಸರು ಎಫ್ಐಆರ್ ಕೂಡ ದಾಖಲಿಸಿದ್ದರು.

ಇದನ್ನೂ ಓದಿ: ’ಆಝಾದಿ’ ಘೋಷಣೆ ಕೂಗಿದ್ದಾರೆಂದು 6 ವಿದ್ಯಾರ್ಥಿಗಳ ಮೇಲೆ ದೇಶದ್ರೋಹಿ ಪ್ರಕರಣ ದಾಖಲು

30 ಜನವರಿ 2013ರಂದು ಪೊಲೀಸರು ಅರ್ಜಿದಾರರ ವಿರುದ್ಧ ಐಪಿಸಿ 323, 324, 504 ಮತ್ತು 306 ಸೆಕ್ಷನ್ ಅಡಿ ಕೇಸು ದಾಖಲಿಸಿ ಬಂಧಿಸಿದ್ದರು. ನಂತರ ಆರೋಪಿಗಳನ್ನು ಪ್ರಥಮ ದರ್ಜೆ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದರು. ನ್ಯಾಯಾಧೀಶರು ಆರೋಪಿಗಳಿಂದ ವೈಯಕ್ತಿಕ ಬಾಂಡ್ ಮತ್ತು ಭದ್ರತೆ ಪಡೆದು ಬಿಡುಗಡೆ ಮಾಡಿದ್ದರು.

ಇದಾದ ಬಳಿಕ ಪೊಲೀಸರು ಎರಡನೇ ಬಾರಿಯೂ ಆರೋಪಿಗಳನ್ನು ಬಂಧಿಸಿ ಎಕ್ಸಿಕ್ಯೂಟಿವ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದರು. ಎಕ್ಸಿಕ್ಯೂಟೀವ್ ಮ್ಯಾಜಿಸ್ಟ್ರೇಟ್ ಆರೋಪಿಗಳಿಗೆ ತಲಾ 25 ಸಾವಿರ ರೂ.ಗಳ ಭದ್ರತೆ ನೀಡಬೇಕೆಂದು ಮಧ್ಯಂತರ ನಿರ್ದೇಶನ ನೀಡಿದ್ದರು.

ಇದನ್ನು ಪ್ರಶ್ನಿಸಿ ಅರ್ಜಿದಾರರು 31 ಜನವರಿ 2013ರಲ್ಲಿ ರಿಟ್ ಸಲ್ಲಿಸಿ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟರ ಮುಂದೆ ಲಿಖಿತ ಮನವಿ ಸಲ್ಲಿಸಿದ್ದರು. ಆದರೂ 30 ಜನವರಿ 2013 ರಿಂದ ಫೆಬ್ರವರಿ 5, 2013 ರವರೆಗೂ ಅರ್ಜಿದಾರರನ್ನು ಅಕ್ರಮವಾಗಿ ಜೈಲಲ್ಲಿ ಇಡಲಾಗಿತ್ತು.

ಇದನ್ನೂ ಓದಿ: ’ಕನ್ನಡ ಪ್ರಭ’ದ ಮಾಜಿ ಉದ್ಯೋಗಿಯ ಡೆತ್‌‌‌ ನೋಟ್: ತನಿಖೆಗೆ ಆಗ್ರಹಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

ಅರ್ಜಿದಾರರ ಪರ ವಾದ ಮಂಡಿಸಿದ ನ್ಯಾಯವಾದಿ ಎನ್.ಆರ್. ಥೋರಟ್, “ಪೊಲೀಸರು ಮತ್ತು ಎಕ್ಸಿಕ್ಯೂಟಿವ್ ಮ್ಯಾಜಿಸ್ಟ್ರೇಟ್ ಅವಶ್ಯಕ ಆದೇಶ ಹೊರಡಿಸುವಲ್ಲಿ ವಿಫಲವಾಗಿದ್ದಾರೆ. ಹೀಗಾಗಿ ಅರ್ಜಿದಾರರು ಅಕ್ರಮವಾಗಿ ಜೈಲಲ್ಲಿ ಇರುವಂತಾಯಿತು. ಅರ್ಜಿದಾರರು ಅಪರಾಧಿಗಳಲ್ಲ. ಶೈಲೇಂದ್ರ ತಗಡ್ ಈ ಅವಧಿಯಲ್ಲಿ ಮಿಲಿಟರಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅರುಣ್ ತಗಡ್‌ ಸ್ಥಳೀಯವಾಗಿ ಹೆಸರು ಮಾಡಿದ್ದರು ಮತ್ತು ಗೌರವಾನ್ವಿತ ವ್ಯಕ್ತಿಯಾಗಿದ್ದರು. ಇವರ ಬಂಧನ ಮತ್ತು ಅಕ್ರಮ ಸೆರೆವಾಸ ಕಾನೂನುಬಾಹಿರವಾಗಿದೆ. ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ” ಎಂದು ವಾದಿಸಿದ್ದರು.

ವಾದವನ್ನು ಆಲಿಸಿದ ದ್ವಿಸದಸ್ಯ ಪೀಠದ ನ್ಯಾಯಮೂರ್ತಿಗಳು, “ಈ ಪ್ರಕರಣದ ಬಗ್ಗೆ ಸರ್ಕಾರ ಸ್ಪಷ್ಟೀಕರಣ ನೀಡಬೇಕು. ಜವಾಬ್ದಾರಿಗಳೇನೆಂಬುದನ್ನು ತಿಳಿಸಬೇಕು. ಜೊತೆಗೆ ಪೊಲೀಸ್ ಇಲಾಖೆಯ ಮೇಲಧಿಕಾರಿಗಳು ಕೆಳಹಂತದ ಪೊಲೀಸರಿಗೆ ಆಗತ್ಯ ಸೂಚನೆಗಳನ್ನು ನೀಡಬೇಕೆಂದು” ಪೀಠ ನಿರ್ದೇಶನ ನೀಡಿದೆ ಎಂದು ದಿವೈರ್.ಇನ್ ವರದಿ ಮಾಡಿದೆ.


ಇದನ್ನೂ ಓದಿ: ಶಿವಮೊಗ್ಗ: Jio ಇಂದ Airtel ಗೆ ಸಾಮೂಹಿಕವಾಗಿ ಪೋರ್ಟ್ ಆದ ರೈತ ಹೋರಾಟಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...