Homeಮುಖಪುಟಅಕ್ರಮ ಜೈಲುವಾಸ: ಅರ್ಜಿದಾರರಿಗೆ ತಲಾ 50 ಸಾವಿರ ಪರಿಹಾರಕ್ಕೆ ಆದೇಶ!

ಅಕ್ರಮ ಜೈಲುವಾಸ: ಅರ್ಜಿದಾರರಿಗೆ ತಲಾ 50 ಸಾವಿರ ಪರಿಹಾರಕ್ಕೆ ಆದೇಶ!

- Advertisement -
- Advertisement -

ಎರಡು ಕುಟುಂಬಗಳ ನಡುವಿನ ಗಲಾಟೆ ಪ್ರಕರಣವೊಂದರಲ್ಲಿ ಆರು ದಿನಗಳ ಅಕ್ರಮ ಸೆರೆವಾಸಕ್ಕೆ ಗುರಿಯಾಗಿದ್ದ ಇಬ್ಬರು ಅರ್ಜಿದಾರರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಬಾಂಬೆ ಹೈಕೋರ್ಟ್‌ನ ಔರಂಗಬಾದ್ ದ್ವಿಸದಸ್ಯ ಪೀಠ ಮಹಾರಾಷ್ಟ್ರ ಸರ್ಕಾರಕ್ಕೆ ಆದೇಶ ನೀಡಿದೆ.

ನ್ಯಾಯಮೂರ್ತಿ ತಾನಾಜಿ ವಿ ನಲವಾಡ ಮತ್ತು ಮುಕುಂದ್ ಜಿ ಸೇವಲಿಕರ್ ಪೀಠದ ಮುಂದೆ ಅರುಣ್ ತಗಡ್ ಮತ್ತು ಶೈಲೇಂದ್ರ ತಗಡ್ ಅಕ್ರಮ ಜೈಲುವಾಸಕ್ಕೆ ಕಾರಣರಾದವರಿಂದ ತಮಗೆ 5 ಲಕ್ಷ ರೂಪಾಯಿ ಪರಿಹಾರ ಕೊಡಿಸಬೇಕೆಂದು ರಿಟ್ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಕಳಚಿಕೊಳ್ಳುತ್ತಿದೆ NDA ನ ಒಂದೊಂದೇ ಕೊಂಡಿ – BJP ಗೆ ಆಘಾತ ನೀಡಿದ ತಮಿಳುನಾಡು!

ಈ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ದ್ವಿಸದಸ್ಯ ಪೀಠ, ಈ ಪ್ರಕರಣದ ಕುರಿತು ರಾಜ್ಯ ಸರ್ಕಾರ ಸೂಕ್ತ ಸ್ಪಷ್ಟೀಕರಣ ನೀಡಬೇಕು. ಪೊಲೀಸ್ ಇಲಾಖೆಯ ಮೇಲಧಿಕಾರಿಗಳು ಕೆಳಹಂತದ ಪೊಲೀಸರಿಗೆ ಈ ಸಂಬಂಧ ಸ್ಪಷ್ಟ ಸೂಚನೆಗಳನ್ನು ಕೊಡಬೇಕೆಂದು ನಿರ್ದೇಶನ ನೀಡಿದೆ.

28 ಜನವರಿ 2013ರಂದು ಬೀಡ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ, 35 ವರ್ಷದ ಮಹಿಳೆಯೊಬ್ಬರು, “ತನಗೆ ನೀರಿನಲ್ಲಿ ಎತ್ತುಗಳು ಮತ್ತು ಗಾಡಿಯನ್ನು ಇಳಿಸಲು ಅವಕಾಶ ನೀಡದೆ, ನನ್ನ ಕುಟುಂಬದ ಸದಸ್ಯರೊಂದಿಗೆ ಜಗಳ ತೆಗೆದು ತನ್ನ ಮೇಲೆ ಹಲ್ಲೆ ನಡೆಸಿದ್ದರು. ಹೀಗಾಗಿ ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು” ಎಂದು ಅರ್ಜಿದಾರರ ವಿರುದ್ಧ ದೂರು ನೀಡಿದ್ದರು. ಪೊಲೀಸರು ಎಫ್ಐಆರ್ ಕೂಡ ದಾಖಲಿಸಿದ್ದರು.

ಇದನ್ನೂ ಓದಿ: ’ಆಝಾದಿ’ ಘೋಷಣೆ ಕೂಗಿದ್ದಾರೆಂದು 6 ವಿದ್ಯಾರ್ಥಿಗಳ ಮೇಲೆ ದೇಶದ್ರೋಹಿ ಪ್ರಕರಣ ದಾಖಲು

30 ಜನವರಿ 2013ರಂದು ಪೊಲೀಸರು ಅರ್ಜಿದಾರರ ವಿರುದ್ಧ ಐಪಿಸಿ 323, 324, 504 ಮತ್ತು 306 ಸೆಕ್ಷನ್ ಅಡಿ ಕೇಸು ದಾಖಲಿಸಿ ಬಂಧಿಸಿದ್ದರು. ನಂತರ ಆರೋಪಿಗಳನ್ನು ಪ್ರಥಮ ದರ್ಜೆ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದರು. ನ್ಯಾಯಾಧೀಶರು ಆರೋಪಿಗಳಿಂದ ವೈಯಕ್ತಿಕ ಬಾಂಡ್ ಮತ್ತು ಭದ್ರತೆ ಪಡೆದು ಬಿಡುಗಡೆ ಮಾಡಿದ್ದರು.

ಇದಾದ ಬಳಿಕ ಪೊಲೀಸರು ಎರಡನೇ ಬಾರಿಯೂ ಆರೋಪಿಗಳನ್ನು ಬಂಧಿಸಿ ಎಕ್ಸಿಕ್ಯೂಟಿವ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದರು. ಎಕ್ಸಿಕ್ಯೂಟೀವ್ ಮ್ಯಾಜಿಸ್ಟ್ರೇಟ್ ಆರೋಪಿಗಳಿಗೆ ತಲಾ 25 ಸಾವಿರ ರೂ.ಗಳ ಭದ್ರತೆ ನೀಡಬೇಕೆಂದು ಮಧ್ಯಂತರ ನಿರ್ದೇಶನ ನೀಡಿದ್ದರು.

ಇದನ್ನು ಪ್ರಶ್ನಿಸಿ ಅರ್ಜಿದಾರರು 31 ಜನವರಿ 2013ರಲ್ಲಿ ರಿಟ್ ಸಲ್ಲಿಸಿ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟರ ಮುಂದೆ ಲಿಖಿತ ಮನವಿ ಸಲ್ಲಿಸಿದ್ದರು. ಆದರೂ 30 ಜನವರಿ 2013 ರಿಂದ ಫೆಬ್ರವರಿ 5, 2013 ರವರೆಗೂ ಅರ್ಜಿದಾರರನ್ನು ಅಕ್ರಮವಾಗಿ ಜೈಲಲ್ಲಿ ಇಡಲಾಗಿತ್ತು.

ಇದನ್ನೂ ಓದಿ: ’ಕನ್ನಡ ಪ್ರಭ’ದ ಮಾಜಿ ಉದ್ಯೋಗಿಯ ಡೆತ್‌‌‌ ನೋಟ್: ತನಿಖೆಗೆ ಆಗ್ರಹಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

ಅರ್ಜಿದಾರರ ಪರ ವಾದ ಮಂಡಿಸಿದ ನ್ಯಾಯವಾದಿ ಎನ್.ಆರ್. ಥೋರಟ್, “ಪೊಲೀಸರು ಮತ್ತು ಎಕ್ಸಿಕ್ಯೂಟಿವ್ ಮ್ಯಾಜಿಸ್ಟ್ರೇಟ್ ಅವಶ್ಯಕ ಆದೇಶ ಹೊರಡಿಸುವಲ್ಲಿ ವಿಫಲವಾಗಿದ್ದಾರೆ. ಹೀಗಾಗಿ ಅರ್ಜಿದಾರರು ಅಕ್ರಮವಾಗಿ ಜೈಲಲ್ಲಿ ಇರುವಂತಾಯಿತು. ಅರ್ಜಿದಾರರು ಅಪರಾಧಿಗಳಲ್ಲ. ಶೈಲೇಂದ್ರ ತಗಡ್ ಈ ಅವಧಿಯಲ್ಲಿ ಮಿಲಿಟರಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅರುಣ್ ತಗಡ್‌ ಸ್ಥಳೀಯವಾಗಿ ಹೆಸರು ಮಾಡಿದ್ದರು ಮತ್ತು ಗೌರವಾನ್ವಿತ ವ್ಯಕ್ತಿಯಾಗಿದ್ದರು. ಇವರ ಬಂಧನ ಮತ್ತು ಅಕ್ರಮ ಸೆರೆವಾಸ ಕಾನೂನುಬಾಹಿರವಾಗಿದೆ. ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ” ಎಂದು ವಾದಿಸಿದ್ದರು.

ವಾದವನ್ನು ಆಲಿಸಿದ ದ್ವಿಸದಸ್ಯ ಪೀಠದ ನ್ಯಾಯಮೂರ್ತಿಗಳು, “ಈ ಪ್ರಕರಣದ ಬಗ್ಗೆ ಸರ್ಕಾರ ಸ್ಪಷ್ಟೀಕರಣ ನೀಡಬೇಕು. ಜವಾಬ್ದಾರಿಗಳೇನೆಂಬುದನ್ನು ತಿಳಿಸಬೇಕು. ಜೊತೆಗೆ ಪೊಲೀಸ್ ಇಲಾಖೆಯ ಮೇಲಧಿಕಾರಿಗಳು ಕೆಳಹಂತದ ಪೊಲೀಸರಿಗೆ ಆಗತ್ಯ ಸೂಚನೆಗಳನ್ನು ನೀಡಬೇಕೆಂದು” ಪೀಠ ನಿರ್ದೇಶನ ನೀಡಿದೆ ಎಂದು ದಿವೈರ್.ಇನ್ ವರದಿ ಮಾಡಿದೆ.


ಇದನ್ನೂ ಓದಿ: ಶಿವಮೊಗ್ಗ: Jio ಇಂದ Airtel ಗೆ ಸಾಮೂಹಿಕವಾಗಿ ಪೋರ್ಟ್ ಆದ ರೈತ ಹೋರಾಟಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...