Homeಕರ್ನಾಟಕಹಾಸ್ಟೆಲ್‌ ಹಾಸಿಗೆ, ದಿಂಬಿನಲ್ಲಿ ಅಕ್ರಮ; ತನಿಖೆ ನಡೆಸುವಂತೆ ಬೆಂಗಳೂರು ವಿವಿ ಕುಲಪತಿಗೆ ವಿದ್ಯಾರ್ಥಿಗಳ ಪತ್ರ

ಹಾಸ್ಟೆಲ್‌ ಹಾಸಿಗೆ, ದಿಂಬಿನಲ್ಲಿ ಅಕ್ರಮ; ತನಿಖೆ ನಡೆಸುವಂತೆ ಬೆಂಗಳೂರು ವಿವಿ ಕುಲಪತಿಗೆ ವಿದ್ಯಾರ್ಥಿಗಳ ಪತ್ರ

- Advertisement -
- Advertisement -

ಬೆಂಗಳೂರು ವಿಶ್ವವಿದ್ಯಾಲಯದ ಅಧೀನದಲ್ಲಿರುವ 9 ವಸತಿ ನಿಲಯಗಳಿಗೆ 2021-2022ನೇ ಸಾಲಿನಲ್ಲಿ ಪೂರೈಕೆ ಮಾಡಲಾಗಿರುವ ಹಾಸಿಗೆ ಮತ್ತು ತಲೆದಿಂಬುಗಳ ಖರೀದಿಯಲ್ಲಿ ಅಕ್ರಮ ನಡೆದಿದ್ದು, ಅದರ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಎಲ್ಲಾ ವಸತಿ ನಿಯಲದ ವಿದ್ಯಾರ್ಥಿಗಳು (ಪಿಜಿ, ಪಿಎಚ್‌ಡಿ) ವಿವಿಯ ಕುಲಪತಿಯವರಿಗೆ ಪತ್ರ ಬರೆದಿದ್ದಾರೆ.

“ಬೆಂಗಳೂರು ವಿಶ್ವವಿದ್ಯಾಲಯದ ಅಧೀನದಲ್ಲಿರುವ 9 ವಸತಿ ನಿಯಲಗಳಲ್ಲಿ ವಾಸವಿರುವ ಎಲ್ಲಾ ವಿದ್ಯಾರ್ಥಿಗಳಿಗೆ 2021-22ನೇ ಸಾಲಿನಲ್ಲಿ ಹಾಸಿಗೆ ಮತ್ತು ತಲೆದಿಂಬುಗಳನ್ನು ಪೂರೈಸಲು ಟೆಂಡರ್ ಕರೆಯಲಾಗಿತ್ತು. ಇದರಂತೆ 2022 ಫೆಬ್ರವರಿ 3 ರಂದು ನಡೆದ ತಾಂತ್ರಿಕ ಬಿಡ್‌ನಲ್ಲಿ ಎಲ್‌.ಆನಂದ್‌ ರೆಡ್ಡಿ (ಎಸ್‌.ವಿ.ಎಲ್‌. ಟ್ರೇಡಿಂಡ್‌ ಕಾರ್ಪೋರೇಷನ್‌, ಎಚ್‌ಬಿಆರ್‌ ಲೇಔಟ್‌, ಬೆಂಗಳೂರು) ಆಯ್ಕೆಯಾಗಿದ್ದರು. ಇವರಿಂದ ಹಾಸಿಗೆ ಮತ್ತು ತಲೆದಿಂಬುಗಳನ್ನು ಖರೀದಿಸಲಾಗಿದೆ. ಆದರೆ ಅವುಗಳು ಕಳಪೆ ಗುಣಮಟ್ಟದಿಂದ ಕೂಡಿವೆ” ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ಒಟ್ಟು 9 ವಿದ್ಯಾರ್ಥಿ ನಿಲಯಗಳಿಗೆ 1,848 ಹಾಸಿಗೆ, 2,273 ತಲೆದಿಂಬುಗಳನ್ನು ಖರೀದಿಸಲಾಗಿದೆ. ಇದರ ಒಟ್ಟು ಹಣದ ಮೊತ್ತ 1,23,80,650 ರೂಪಾಯಿ ಆಗಿದೆ. ಪ್ರತಿ ಹಾಸಿಗೆಗೆ 5,900 ರೂ. ಮತ್ತು ಪ್ರತಿ ತಲೆದಿಂಬಿಗೆ 650 ರೂ.ಗಳನ್ನು ನಿಗದಿಪಡಿಸಲಾಗಿದೆ. ಆದರೆ ಪ್ರಸ್ತುತ ವಿದ್ಯಾರ್ಥಿಗಳಿಗೆ ಪೂರೈಸಲಾಗಿರುವ ಹಾಸಿಗೆ ಮತ್ತು ತಲೆದಿಂಬುಗಳು ಅತ್ಯಂತ ಕಳಪೆ ಗುಣಮಟ್ಟದ್ದಾಗಿವೆ. ಪೂರೈಕೆ ಮಾಡಲಾಗಿರುವ ಹಾಸಿಗೆಯ ಮೇಲೆ ಆ ಕಂಪನಿಯ ಯಾವುದೇ ಲೇಬಲ್ ಅಥವಾ ಯಾವುದೇ ಹೆಸರಿನ ಬ್ರಾಂಡ್ ನೇಮ್ ಇರುವುದಿಲ್ಲ. ಇದು ವಿದ್ಯಾರ್ಥಿಗಳಿಗೆ ಅನುಮಾನವನ್ನು ಸೃಷ್ಟಿಸಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಈಗ ಪೂರೈಕೆ ಮಾಡಲಾಗಿರುವ ಹಾಸಿಗೆ ಮತ್ತು ತಲೆದಿಂಬುಗಳ ಬೆಲೆ ಮಾರುಕಟ್ಟೆಯಲ್ಲಿ 5900 ರೂ.ಗಿಂತಲೂ ಅತ್ಯಂತ ಕಡಿಮೆ ಬೆಲೆಯನ್ನು ಹೊಂದಿವೆ ಎಂದು ತಿಳಿದು ಬರುತ್ತಿದೆ. ಹಲವು ಅಂಗಡಿ ಮಾಲೀಕರ ಜೊತೆಗೆ ವಿಚಾರಿಸಲಾಗಿದೆ, ಅಂತರ್ಜಾಲದಲ್ಲಿ ಕ್ರಾಸ್‌ ಚೆಕ್ ಕೂಡ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಪೂರೈಕೆ ಮಾಡಲಾಗಿರುವ ಹಾಸಿಗೆ ಮತ್ತು ತಲೆದಿಂಬುಗಳು ಕಳಪೆ ಮಟ್ಟದಿಂದ ಕೂಡಿದ್ದು ಇದರ ಖರೀದಿಯಲ್ಲಿ ಅಕ್ರಮ ನಡೆದಿರುವುದು ಕಂಡು ಬಂದಿದೆ. ಪ್ರಸ್ತುತ ವಿದ್ಯಾರ್ಥಿಗಳಿಗೆ ನೀಡಿರುವಂತಹ ತಲೆದಿಂಬು ಮತ್ತು ಹಾಸಿಗೆಗಳು ಹರಿದು ಹೋಗಿವೆ, ಬಳಸಲು ಯೋಗ್ಯಸ್ಥಿತಿಯಲ್ಲಿ ಇರುವುದಿಲ್ಲ. ಈ ಹಾಸಿಗೆ ಮತ್ತು ತಲೆದಿಂಬುಗಳನ್ನು ಬಳಸಿ ಅನೇಕ ಆರೋಗ್ಯದ ಸಮಸ್ಯೆಗಳು ಕೂಡ ಉದ್ಭವಿಸುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಈ ಖರೀದಿಯ ಪ್ರಕ್ರಿಯೆಯಲ್ಲಿ ಭಾಗಿಯಾಗಿ, ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿ, ಅಕ್ರಮವೆಸಗಿರುವ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ವಿಭಾಗದ ಆಗಿನ ನಿರ್ದೇಶಕರು (ಸಿ.ಡಿ.ವೆಂಕಟೇಶ್‌ ಮತ್ತು ಇದಕ್ಕೆ ಸಂಬಂಧಿಸಿದ ವಿಶ್ವವಿದ್ಯಾಲಯದಲ್ಲಿನ ಅಧಿಕಾರಿ ವರ್ಗದವರು), ಹಾಸಿಗೆ ಮತ್ತು ತಲೆದಿಂಬುಗಳ ಪರಿಶೀಲನೆ ವರದಿಯನ್ನು ನೀಡಿದ ಡಾ.ಹನುಮಂತನಾಯ್ಕ ಹೆಚ್.ಎಸ್., ವೇಣುಗೋಪಾಲ್ ಎಂ, ನೇಮ್ ಬ್ರಾಂಡ್ ನೀಡದೆ ಹಾಸಿಗೆ ಮತ್ತು ತಲೆದಿಂಬುಗಳನ್ನು ಪೂರೈಕೆ ಮಾಡಿದಂತಹ ಕಂಪನಿ ಈ ವಂಚನೆಯಲ್ಲಿ ಭಾಗಿಯಾಗಿದ್ದಾರೆ. ಇವರ ವಿರುದ್ಧ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರು ವಿವಿ ವಿದ್ಯಾರ್ಥಿಗಳ ಮನವಿ ಪತ್ರ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...